Homeಮುಖಪುಟ‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ ಮಾರ್ಟಿನಾ

‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ ಮಾರ್ಟಿನಾ

‘ಸರ್ಕಾರ ಇದರ ವಿರುದ್ದ ನಿಮಗೆ ಕೆಲವು ಸಂದೇಶಗಳನ್ನು ನೀಡುತ್ತದೆ, ನೀವು ಅದನ್ನ ಕಾಪಿ ಪೇಸ್ಟ್‌ ಮಾಡಿ ಕೃತಾರ್ಥರಾಗಿ’ ಎಂದು ದೇಶದ ಸೆಲೆಬ್ರಿಟಿಗಳನ್ನು ಹಲವು ಮಂದಿ ಟ್ಯಾಗ್ ಮಾಡಿ ವ್ಯಂಗ್ಯವಾಗಿಡಿದ್ದಾರೆ.

- Advertisement -
- Advertisement -

ಭಾರತದ ಬಲಪಂಥೀಯರ ವಿರುದ್ದ ನಿರಂತರವಾಗಿ ದಾಳಿ ಮಾಡುತ್ತಲೆ ಬಂದಿರುವ ಅಮೆರಿಕಾದ ಟೆನಿಸ್ ದಂತಕಥೆ ಮಾರ್ಟಿನಾ ನವ್ರಾತಿಲೋವಾ ಅವರು, ಭಾನುವಾರದಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ಮೋದಿಯನ್ನು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ರಾಜಕೀಯ ಜೀವನದ 20 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರು ಸಂಸದ್‌ ಟಿವಿಗೆ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದ ಸಮಯದಲ್ಲಿ, ‘‘ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ. ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ” ಎಂದು ಹೇಳಿದ್ದರು.

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ಅಮಿತ್‌ ಶಾ ಅವರ ಹೇಳಿಕೆಯನ್ನು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿತ್ತು. ಈ ವರದಿಯನ್ನು ಟ್ವೀಟ್ ಮಾಡಿದ್ದ ಹಿಂದೂಸ್ತಾನ್ ಟೈಮ್ಸ್‌, “ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ, ಬದಲಾಗಿ ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ” ಎಂದು ಬರೆದಿತ್ತು.

ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಮಾರ್ಟಿನಾ ಅವರು, “ಇದು ನನ್ನ ಮುಂದಿನ ಜೋಕ್‌ಗೆ…” ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ತಮ್ಮ ಟ್ವೀಟ್‌ನೊಂದಿಗೆ ಆಶ್ಚರ್ಯ ಮತ್ತು ಭಾವೋದ್ರೇಕವನ್ನು ಬಿಂಬಿಸುವ ಇಮೋಜಿಗಳನ್ನು ಸೇರಿಸಿದ್ದಾರೆ.

ಮಾರ್ಟಿನಾ ಅವರ ಟ್ವೀಟ್ ಭಾತರದ ನೆಟ್ಟಿಗರಲ್ಲಿ ಸಂಚಲನ ಉಂಟು ಮಾಡಿದ್ದು, ಹಲವಾರು ಜನರು ಧನ್ಯವಾದ ಸಲ್ಲಿಸಿದ್ದಾರೆ. ಹಲವು ಜನರು ಭಾತರದ ಬಲಪಂಥೀಯರು ಅವರ ಮೇಲೆ ಮುಗಿಬೀಳುತ್ತಾರೆ ಎಂದು ಕೂಡಾ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ಹಿಂದೆ ರೈತ ಹೋರಾಟವನ್ನು ಬೆಂಬಲಿಸಿದ್ದ ಪಾಪ್‌ ತಾರೆ ರಿಹಾನ್ನ ಅವರ ಜೊತೆಗೆ ದೇಶದ ಬಲಪಂಥೀಯರು ನಡೆದುಕೊಂಡದ್ದನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಒಕ್ಕೂಟ ಸರ್ಕಾರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ಇನ್ನೂ ಕೆಲವರು, ದೇಶದ ಸೆಲೆಬ್ರಿಟಿಗಳಾದ ಸಚಿನ್, ವಿರಾಟ್ ಕೋಯ್ಲಿ, ಸೈನಾ ನೆಹ್ವಾಲ್, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌ ಕಂಗನಾ ರಣಾವತ್‌ ಸೇರಿದಂತೆ ಹಲವಾರು ಜನರನ್ನು ಟ್ಯಾಗ್ ಮಾಡಿ, “ಸರ್ಕಾರ ಇದರ ವಿರುದ್ದ ನಿಮಗೆ ಕೆಲವು ಸಂದೇಶಗಳನ್ನು ನೀಡುತ್ತದೆ, ನೀವು ಅದನ್ನ ಕಾಪಿ ಪೇಸ್ಟ್‌ ಮಾಡಿ ಕೃತಾರ್ಥರಾಗಿ” ಎಂದು ಟ್ವೀಟ್ ಮಾಡಿದ್ದಾರೆ.

ಪಾಪ್‌ ತಾರೆ ರಿಹಾನ್ನ ಅವರು ರೈತರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾಗ, ಬಿಜೆಪಿ ಐಟಿ ಸೆಲ್‌ ನೀಡಿದ್ದ ಸಂದೇಶವನ್ನು ದೇಶದ ಹಲವಾರು ಜನಪ್ರಿಯ ವ್ಯಕ್ತಿಗಳು ಕಾಪಿ ಪೇಸ್ಟ್‌ ಮಾಡಿ, ಹೊರದೇಶದವರು ನಮ್ಮ ದೇಶದ ಆಂತರಿಕ ವಿಷಯಗಳನ್ನು ತಲೆ ಹಾಕಬಾರದು ಎಂದು ಟ್ವೀಟ್ ಮಾಡಿದ್ದರು. ನಂತರ ಈ ಟ್ವೀಟ್‌ಗಳೆಲ್ಲವೂ ಒಂದೇ ಮಾದರಿಯಲ್ಲಿ ಇದ್ದಿದ್ದನ್ನು ಗುರುತಿಸಿದ್ದ ನೆಟ್ಟಿಗರು ಅವರಿಗೆ ಛೀಮಾರಿ ಹಾಕಿದ್ದರು.

ತನ್ನ ಟ್ವಿಟರ್ ಬಯೋದಲ್ಲಿ “ಈಗ ಮಾತನಾಡುವ ಸಮಯ” ಎಂದು ಬರೆದಿರುವ ಮಾರ್ಟಿನಾ, ಭಾರತದ ಬಲಪಂಥೀಯರ ವಿರುದ್ದ ನಿರಂತರವಾಗಿ ದಾಳಿ ಮಾಡುತ್ತಲೆ ಬಂದಿದ್ದಾರೆ. 2016 ರಲ್ಲಿ, ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕುರಿತ ಲೇಖನವನ್ನು ಅವರು ಹಂಚಿಕೊಂಡಿದ್ದರು. ಈ ವೇಳೆ ಅವರ ಮೇಲೆ ಭಾರತೀಯ ಬಲಪಂಥೀಯರು ಮುಗಿಬಿದ್ದಿದ್ದರು. 2019 ರಲ್ಲಿ ಕೂಡಾ ಮೋದಿ ಮತ್ತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಅವರು ದಾಳಿ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜನರ ಪ್ರತಿಕ್ರಿಯೆ ಹೇಗಿದೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಇದನ್ನೂ ಓದಿ: ‘ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...