Homeಮುಖಪುಟ‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ ಮಾರ್ಟಿನಾ

‘ಮೋದಿ ಸರ್ವಾಧಿಕಾರಿ ಅಲ್ಲ’: ಅಮಿ‌ತ್‌‌ ಶಾ ಹೇಳಿಕೆ ಜೋಕ್ ಎಂದ ಅಮೆರಿಕಾ ಟೆನಿಸ್ ದಂತಕಥೆ ಮಾರ್ಟಿನಾ

‘ಸರ್ಕಾರ ಇದರ ವಿರುದ್ದ ನಿಮಗೆ ಕೆಲವು ಸಂದೇಶಗಳನ್ನು ನೀಡುತ್ತದೆ, ನೀವು ಅದನ್ನ ಕಾಪಿ ಪೇಸ್ಟ್‌ ಮಾಡಿ ಕೃತಾರ್ಥರಾಗಿ’ ಎಂದು ದೇಶದ ಸೆಲೆಬ್ರಿಟಿಗಳನ್ನು ಹಲವು ಮಂದಿ ಟ್ಯಾಗ್ ಮಾಡಿ ವ್ಯಂಗ್ಯವಾಗಿಡಿದ್ದಾರೆ.

- Advertisement -
- Advertisement -

ಭಾರತದ ಬಲಪಂಥೀಯರ ವಿರುದ್ದ ನಿರಂತರವಾಗಿ ದಾಳಿ ಮಾಡುತ್ತಲೆ ಬಂದಿರುವ ಅಮೆರಿಕಾದ ಟೆನಿಸ್ ದಂತಕಥೆ ಮಾರ್ಟಿನಾ ನವ್ರಾತಿಲೋವಾ ಅವರು, ಭಾನುವಾರದಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್‌ ಶಾ ಮತ್ತು ಪ್ರಧಾನಿ ಮೋದಿಯನ್ನು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ತಮ್ಮ ರಾಜಕೀಯ ಜೀವನದ 20 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್‌ ಶಾ ಅವರು ಸಂಸದ್‌ ಟಿವಿಗೆ ಸಂದರ್ಶನವೊಂದನ್ನು ನೀಡಿದ್ದರು. ಈ ಸಂದರ್ಶನದ ಸಮಯದಲ್ಲಿ, ‘‘ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ. ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ” ಎಂದು ಹೇಳಿದ್ದರು.

ಇದನ್ನೂ ಓದಿ: ಸರ್ವಾಧಿಕಾರದ ಧೋರಣೆಗೆ ವಿರುದ್ಧವಾಗಿ ಪ್ರಜಾಸತ್ತಾತ್ಮಕ ಮೌಲ್ಯಗಳ ’ಸರ್‌ಪಟ್ಟ ಪರಂಪರೈ’

ಅಮಿತ್‌ ಶಾ ಅವರ ಹೇಳಿಕೆಯನ್ನು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿತ್ತು. ಈ ವರದಿಯನ್ನು ಟ್ವೀಟ್ ಮಾಡಿದ್ದ ಹಿಂದೂಸ್ತಾನ್ ಟೈಮ್ಸ್‌, “ಪ್ರಧಾನಿ ನರೇಂದ್ರ ಮೋದಿ ‘ಸರ್ವಾಧಿಕಾರಿ’ ಅಲ್ಲ, ಬದಲಾಗಿ ಅವರು ದೇಶ ಕಂಡ ಅತ್ಯಂತ ಪ್ರಜಾಪ್ರಭುತ್ವವಾದಿ ನಾಯಕ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ” ಎಂದು ಬರೆದಿತ್ತು.

ಈ ಟ್ವೀಟ್ ಅನ್ನು ರೀಟ್ವೀಟ್ ಮಾಡಿರುವ ಮಾರ್ಟಿನಾ ಅವರು, “ಇದು ನನ್ನ ಮುಂದಿನ ಜೋಕ್‌ಗೆ…” ಎಂದು ವ್ಯಂಗ್ಯವಾಡಿದ್ದಾರೆ. ಜೊತೆಗೆ ತಮ್ಮ ಟ್ವೀಟ್‌ನೊಂದಿಗೆ ಆಶ್ಚರ್ಯ ಮತ್ತು ಭಾವೋದ್ರೇಕವನ್ನು ಬಿಂಬಿಸುವ ಇಮೋಜಿಗಳನ್ನು ಸೇರಿಸಿದ್ದಾರೆ.

ಮಾರ್ಟಿನಾ ಅವರ ಟ್ವೀಟ್ ಭಾತರದ ನೆಟ್ಟಿಗರಲ್ಲಿ ಸಂಚಲನ ಉಂಟು ಮಾಡಿದ್ದು, ಹಲವಾರು ಜನರು ಧನ್ಯವಾದ ಸಲ್ಲಿಸಿದ್ದಾರೆ. ಹಲವು ಜನರು ಭಾತರದ ಬಲಪಂಥೀಯರು ಅವರ ಮೇಲೆ ಮುಗಿಬೀಳುತ್ತಾರೆ ಎಂದು ಕೂಡಾ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ಹಿಂದೆ ರೈತ ಹೋರಾಟವನ್ನು ಬೆಂಬಲಿಸಿದ್ದ ಪಾಪ್‌ ತಾರೆ ರಿಹಾನ್ನ ಅವರ ಜೊತೆಗೆ ದೇಶದ ಬಲಪಂಥೀಯರು ನಡೆದುಕೊಂಡದ್ದನ್ನು ನೆನಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಒಕ್ಕೂಟ ಸರ್ಕಾರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ಇನ್ನೂ ಕೆಲವರು, ದೇಶದ ಸೆಲೆಬ್ರಿಟಿಗಳಾದ ಸಚಿನ್, ವಿರಾಟ್ ಕೋಯ್ಲಿ, ಸೈನಾ ನೆಹ್ವಾಲ್, ಲತಾ ಮಂಗೇಶ್ಕರ್‌, ಅಕ್ಷಯ್ ಕುಮಾರ್‌ ಕಂಗನಾ ರಣಾವತ್‌ ಸೇರಿದಂತೆ ಹಲವಾರು ಜನರನ್ನು ಟ್ಯಾಗ್ ಮಾಡಿ, “ಸರ್ಕಾರ ಇದರ ವಿರುದ್ದ ನಿಮಗೆ ಕೆಲವು ಸಂದೇಶಗಳನ್ನು ನೀಡುತ್ತದೆ, ನೀವು ಅದನ್ನ ಕಾಪಿ ಪೇಸ್ಟ್‌ ಮಾಡಿ ಕೃತಾರ್ಥರಾಗಿ” ಎಂದು ಟ್ವೀಟ್ ಮಾಡಿದ್ದಾರೆ.

ಪಾಪ್‌ ತಾರೆ ರಿಹಾನ್ನ ಅವರು ರೈತರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಾಗ, ಬಿಜೆಪಿ ಐಟಿ ಸೆಲ್‌ ನೀಡಿದ್ದ ಸಂದೇಶವನ್ನು ದೇಶದ ಹಲವಾರು ಜನಪ್ರಿಯ ವ್ಯಕ್ತಿಗಳು ಕಾಪಿ ಪೇಸ್ಟ್‌ ಮಾಡಿ, ಹೊರದೇಶದವರು ನಮ್ಮ ದೇಶದ ಆಂತರಿಕ ವಿಷಯಗಳನ್ನು ತಲೆ ಹಾಕಬಾರದು ಎಂದು ಟ್ವೀಟ್ ಮಾಡಿದ್ದರು. ನಂತರ ಈ ಟ್ವೀಟ್‌ಗಳೆಲ್ಲವೂ ಒಂದೇ ಮಾದರಿಯಲ್ಲಿ ಇದ್ದಿದ್ದನ್ನು ಗುರುತಿಸಿದ್ದ ನೆಟ್ಟಿಗರು ಅವರಿಗೆ ಛೀಮಾರಿ ಹಾಕಿದ್ದರು.

ತನ್ನ ಟ್ವಿಟರ್ ಬಯೋದಲ್ಲಿ “ಈಗ ಮಾತನಾಡುವ ಸಮಯ” ಎಂದು ಬರೆದಿರುವ ಮಾರ್ಟಿನಾ, ಭಾರತದ ಬಲಪಂಥೀಯರ ವಿರುದ್ದ ನಿರಂತರವಾಗಿ ದಾಳಿ ಮಾಡುತ್ತಲೆ ಬಂದಿದ್ದಾರೆ. 2016 ರಲ್ಲಿ, ಜೆಎನ್‌ಯು ವಿದ್ಯಾರ್ಥಿಗಳ ಮೇಲಿನ ಕುರಿತ ಲೇಖನವನ್ನು ಅವರು ಹಂಚಿಕೊಂಡಿದ್ದರು. ಈ ವೇಳೆ ಅವರ ಮೇಲೆ ಭಾರತೀಯ ಬಲಪಂಥೀಯರು ಮುಗಿಬಿದ್ದಿದ್ದರು. 2019 ರಲ್ಲಿ ಕೂಡಾ ಮೋದಿ ಮತ್ತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಅವರು ದಾಳಿ ಮಾಡಿದ್ದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಜನರ ಪ್ರತಿಕ್ರಿಯೆ ಹೇಗಿದೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಪರವಾಗಿ ಕಾಪಿ-ಪೇಸ್ಟ್ ಟ್ವೀಟ್: ಸಿಕ್ಕಿಬಿದ್ದ ಭಾರತೀಯ ಸೆಲೆಬ್ರಿಟಿಗಳು!

ಇದನ್ನೂ ಓದಿ: ‘ನಾಚಿಕೆಯಾಗ ಬೇಕು ನಿಮಗೆ’: ಅನಿಲ್ ಕುಂಬ್ಳೆ ವಿರುದ್ದ ಕನ್ನಡಿಗರು ಸಿಡಿದಿದ್ದೇಕೆ?

ಇದನ್ನೂ ಓದಿ: ಸರ್ವಾಧಿಕಾರಿ ಹಿಟ್ಲರ್ ಮತ್ತು ಆತನ ಬಗೆಗಿನ ಗಮನ ಸೆಳೆದ ವ್ಯಂಗ್ಯಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಉವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...