Homeಅಂಕಣಗಳುಮೋದಿ ಬುದ್ದಿವಂತನಲವಂತೆ ನಿಜವೆ! - ಚಂದ್ರೇಗೌಡರ ಕಟ್ಟೆಪುರಾಣ

ಮೋದಿ ಬುದ್ದಿವಂತನಲವಂತೆ ನಿಜವೆ! – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ.
“ಯಕ್ಕಾ, ಯಕ್ಕವ್, ಕೊರೋನಾ ವಿಷಯದಲ್ಲಿ ಒಂದಿಷ್ಟು ಹ್ವಸಾ ರೂಲ್ಸು ಬಂದವೆ ಹೇಳ್ಳ” ಎಂದ.
“ಏನು ಬ್ಯಾಡ. ನೀನು ಆ ಟಿವಿ ಸೂಳೆ ಮಕ್ಕಳಂಗೆ ಆಗಿದ್ದಿ.”
“ಯಕ್ಕವ್ ಟಿವಿ ಮುಂಡೆ ಮಕ್ಕಳಿಗೆ ಓಲುಸಬ್ಯಾಡ. ಹುಟ್ಟು ಭಯೋತ್ಪಾದಕರ ತರ ಆಗ್ಯವುರೆ ಅ ನನ್ ಮಕ್ಕಳು”.
“ಊ ಕಣೊ ವಾಟಿಸ್ಸೆ. ಆ ಮೈಸೂರು ಬಗ್ಗೆ ಒಸಿ ಸುಳ್ಳೆಳಿದರೇನೊ, ನಡುಗ್ತಾಯಿದೆ ಮೈಸೂರು ಅಂದ್ರು ಮೈಸೂರ ಮ್ಯಾಲೆ ಬರಸಿಡ್ಳು ಅಂದ್ರು. ನಾನು ಪೋನು ಮಾಡಿ ಕೇಳಿದ್ರೆ ಕರೋನಾ ಆದೊರ್ಯಲ್ಲ ಉಸರಾಗಿ ಮನಿಗೆಹೋಯ್ತಾ ಅವುರಂತೆ” ಎಂದ ಉಗ್ರಿ.
“ಅದ್ಯಾಕ್ಲ ಅಂಗೆ ಸುಳ್ಳೇಳತವೆ” ಎಂದಳು ಜುಮ್ಮಿ.
“ಅವುಕೆ ಸಂಬಳ ಕೊಡದೆ ಸುಳ್ಳೇಳಕ್ಕೆ ಕಣಕ್ಕ. ಬ್ಯಾರೆ ಟಿವಿಯೋರಿಗಿಂತ ನಾವೇ ಜಾಸ್ತಿ ಸುಳ್ಳೇಳಬೇಕು ಅಂತ ಪೈಪೋಟಿ ನ್ಯಡುಸ್ತವೆ”.
“ಅಯ್ಯೋ ಅವು ಬಾಯಿಗೆ ತನ್ನ ತೊಂಬ್ಲ ಹಾಕ ಹೋಗು”.
“ತೊಂಬಲ ಅನ್ನಬ್ಯಾಡ ಕಣಕ್ಕ. ಅದು ಸೆಕ್ಸ್ ಮ್ಯಾಟ್ರಾಯ್ತದೆ”.
“ಅದ್ಯಂಗಾಯ್ತದೊ ಎಂದ ಉಗ್ರಿ”.
“ತೊಂಬಲ ಅಂದ್ರೆ ಯಲೆ ಅಡಕೆ ಹದವಾಗಿ ಅಗದದ್ದು. ಒಂಥರ ವಳ್ಳೆ ಬೀಡಾತರ ಆಗಿರತದೆ ಅಂತದ್ನ ಟಿವಿ ಆಂಕರ್ ಬಾಯಿಗಾಕಿದ್ರೆ ಮಜವಾಗಿ ಬಾಯಾಡುಸ್ತರೆ ಬ್ಯಾರೆ ಹೇಳಕ್ಕ”.
“ಅವುರ ಬಾಯಿಗೆ ನನ್ನ ಎಂಜಲಾಕ ಅನ್ಲ”.
“ಅವುರ ಬಾಯಿಗೆ ಕೊರೋನಾ ಎಂಜಲಾಕ ಅನ್ನು”.
“ಅವುರುದು ವಟ್ಟೆ ಪಾಡು ಕಣಕ್ಕ. ನೀನೇನೊ ಮನೆವಳಗೆ ಮಜ್ಜಗೆ ಕಡಕಂಡು ತಂಪಾಗಿದ್ದಿ. ಅವು ನೋಡು ಇಡೀ ದಿನ ಕರೋನಾ, ಕರೋನಾ ಅಂತ ಗೊಬಳಿ ಮರದ ಮ್ಯಾಲೆ ಕುಂತ ಕಾಗೆತರ ಬಡಕತ್ತವೆ. ಕನಸು ಮಸನಲ್ಲೂ ಕರೋನಾ ಅಂತವೆ ಪಾಪ ಅಲವೆ”.
“ಅದ್ರು ಟಿವಿಗಳಿರದು ಕರೋನಾದಿಂದ ಆಗಿರೊ ಅನಾಹುತ ಹೇಳಕ್ಕೆ. ಸರಕಾರ ಹೊಗಳಕ್ಕಲ್ಲ ಕಣೊ” ಎಂದ ಉಗ್ರಿ.
“ಟಿವಿ ನ್ಯಡಸೊವಷ್ಟು ದುಡ್ಡು ಮೋದಿನೆ ಕೊಟ್ಟಿರುವಾಗ ಹೋಗಳಲೇಬೇಕಲ್ಲೊ ಅದ್ಕೆ ಕರೋನಾ ಸುದ್ದಿ ಹೇಳುವಾಗ ಅವುನ ಪೋಟಾ ಹಾಕದು” ಎಂದ ವಾಟಿಸ್ಸೆ.
“ಅವುನೇನೊ ಅಂತ ಬುದ್ದಿವಂತಲವಂತಲ್ಲಾ” ಎಂದಳು ಜುಮ್ಮಿ.
“ಅವುನು ಬುದ್ದಿವಂತ ಅಂತ ಯಾರಕ್ಕ ಹೇಳಿದ್ದು”.
“ಆ ಸುಳ್ಳೇಗೌಡ್ರು ಅನಂತ ಅಂಗಂದಿದ್ದ”.
“ಸುಳ್ಳೇಗೌಡರ ಅನಂತ ನಿಜ ಹೇಳಕ್ಕಾಯ್ತದೇನಕ್ಕ ಈ ಮೋದಿ ಯಾವತ್ತು ಅರ್ಧ ರಾತ್ರಿಲಿ ನೋಟ ಬ್ಯಾನು ಮಾಡಿದ್ನೋ ಅವತ್ತೆ ಇವುನೆಷ್ಟು ಮಟ್ಟಿಗೆ ಬುದ್ದಿವಂತ ಅಂತ ಇಡೀ ಜಗತ್ತಿಗೆ ಗೊತ್ತಾಯ್ತು. ದೇಸ ಅದೋಗತಿಗೆ ಹ್ಹಂಡಕ್ಕೆ ಸುರುಮಾಡಿದ್ದು ಅವತ್ತೆಯ. ಇನ್ಯಾವ ಡಿಗ್ರಿ ಸರ್ಟಿಫಿಕೇಟ್ ತೊರಿದ್ರು ಜನ ನಂಬದಿಲ್ಲ ಬುಡು”.
“ನೀನಂಗಂತಿ ಕಣೊ ಜನ ಮೋದಿ ಮೋದಿ ಅಂತವೆ”.
“ಯಾಕಗಂತರೆ ಗೊತ್ತೇನೊ ಅವುನೆದ್ರಿಗ್ಯಾರು ಇಲ್ಲ ಅದಕೆ”.
“ಅದು ನಿಜ ಬುಡು”.
“ಆ ಡೆಲ್ಲಿಗೆ ಒಂದು ಚರಿತ್ರೆ ಅದೆ. ಅಲ್ಲೊಬ್ಬ ತುಘಲಕ್ ಅಂತ ದ್ವರೆ ಇದ್ದ. ವಿಪರೀತ ಬುದ್ದಿವಂತ. ಅವುನು ಈ ಡೆಲ್ಲಿ ಇಲ್ಲಿದ್ರೆ ವೈರಿಗಾಳ ದಾಳಿ ನ್ಯಡಿತಾಯಿರತದೆ ಅಂತ ಯಲ್ಲ ದೇವಗಿರಿಗೆ ವಂಡಿ ಅಂದ. ಸರಿ ಇಡೀ ಡೆಲ್ಲಿ ದೇವಗಿರಿಗೋಯ್ತು. ಆ ಊರು ರಾಜಾದಾನಿ ಅಗಕ್ಕೆ ಸರಿಲ್ಲ ತಿರಗ ಯಲ್ಲ ಡೆಲ್ಲಿಗೆ ಹೊಂಡಿ ಅಂದ. ಆಗ ತಿರಗ ಡೆಲ್ಲಿ ಹಾದಿಲಿ ನ್ಯಡಕಂಡು ವಂಟ್ರು ಹೋಗುವಾಗ ಕಾಲುಬಾಗ ಸತ್ತಿದ್ರು. ಬರುವಾಗ ಅದ್ರ ಜನ ಸತೃ. ದೊರೆ ತಿಕ್ಕಲ ಪ್ರತಿಭಟಿಸಕ್ಕೆ ಜನಗಳೆ ಇರಲಿಲ್ಲ ಈಗ್ಲು ಕೊರೋನಾ ವಿಷಯದಲ್ಲಿ ಅಂಗೆ ಆಗ್ಯದೆ ನೋಡು”.
“ನೀನೇಳಿದ್ದು ನಿಜ ಕಣೊ ಉಗ್ರಿ ದೇಶಕಟ್ಟೊ ಜನ ಬಿದಿಲಿ, ದಾರಿಲಿ, ರೈಲ್ವೆಹಳಿ ಮ್ಯಾಲೆ ಸಾಯ್ತಾ ಅವುರೆ ಪಾಪ ಅವರಿಗೆ ನಮ್ಮನ್ನ ಕಾಪಾಡೋರು ಯಾರೂ ಇಲ್ಲ ಅನ್ನಸ್ಯದೆ ಇದು ಮೋದಿಗೆ ಗೊತ್ತಾಗದಿಲ್ಲ ಅಂದ್ರೆ ಅವುನು ದಡ್ಡನೇ ಸರಿ”.
“ಅದೇನಾರ ಆಗ್ಲಿ ಜನಗಳ್ಯಲ್ಲ ಸತ್ತೋದ್ರಲ್ಲ ಹೇಳೂ” ಅಂದಳು ಜುಮ್ಮಿ.
“ !?


ಇದನ್ನೂ ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...