Homeಅಂಕಣಗಳುಮೋದಿ ಬುದ್ದಿವಂತನಲವಂತೆ ನಿಜವೆ! - ಚಂದ್ರೇಗೌಡರ ಕಟ್ಟೆಪುರಾಣ

ಮೋದಿ ಬುದ್ದಿವಂತನಲವಂತೆ ನಿಜವೆ! – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ.
“ಯಕ್ಕಾ, ಯಕ್ಕವ್, ಕೊರೋನಾ ವಿಷಯದಲ್ಲಿ ಒಂದಿಷ್ಟು ಹ್ವಸಾ ರೂಲ್ಸು ಬಂದವೆ ಹೇಳ್ಳ” ಎಂದ.
“ಏನು ಬ್ಯಾಡ. ನೀನು ಆ ಟಿವಿ ಸೂಳೆ ಮಕ್ಕಳಂಗೆ ಆಗಿದ್ದಿ.”
“ಯಕ್ಕವ್ ಟಿವಿ ಮುಂಡೆ ಮಕ್ಕಳಿಗೆ ಓಲುಸಬ್ಯಾಡ. ಹುಟ್ಟು ಭಯೋತ್ಪಾದಕರ ತರ ಆಗ್ಯವುರೆ ಅ ನನ್ ಮಕ್ಕಳು”.
“ಊ ಕಣೊ ವಾಟಿಸ್ಸೆ. ಆ ಮೈಸೂರು ಬಗ್ಗೆ ಒಸಿ ಸುಳ್ಳೆಳಿದರೇನೊ, ನಡುಗ್ತಾಯಿದೆ ಮೈಸೂರು ಅಂದ್ರು ಮೈಸೂರ ಮ್ಯಾಲೆ ಬರಸಿಡ್ಳು ಅಂದ್ರು. ನಾನು ಪೋನು ಮಾಡಿ ಕೇಳಿದ್ರೆ ಕರೋನಾ ಆದೊರ್ಯಲ್ಲ ಉಸರಾಗಿ ಮನಿಗೆಹೋಯ್ತಾ ಅವುರಂತೆ” ಎಂದ ಉಗ್ರಿ.
“ಅದ್ಯಾಕ್ಲ ಅಂಗೆ ಸುಳ್ಳೇಳತವೆ” ಎಂದಳು ಜುಮ್ಮಿ.
“ಅವುಕೆ ಸಂಬಳ ಕೊಡದೆ ಸುಳ್ಳೇಳಕ್ಕೆ ಕಣಕ್ಕ. ಬ್ಯಾರೆ ಟಿವಿಯೋರಿಗಿಂತ ನಾವೇ ಜಾಸ್ತಿ ಸುಳ್ಳೇಳಬೇಕು ಅಂತ ಪೈಪೋಟಿ ನ್ಯಡುಸ್ತವೆ”.
“ಅಯ್ಯೋ ಅವು ಬಾಯಿಗೆ ತನ್ನ ತೊಂಬ್ಲ ಹಾಕ ಹೋಗು”.
“ತೊಂಬಲ ಅನ್ನಬ್ಯಾಡ ಕಣಕ್ಕ. ಅದು ಸೆಕ್ಸ್ ಮ್ಯಾಟ್ರಾಯ್ತದೆ”.
“ಅದ್ಯಂಗಾಯ್ತದೊ ಎಂದ ಉಗ್ರಿ”.
“ತೊಂಬಲ ಅಂದ್ರೆ ಯಲೆ ಅಡಕೆ ಹದವಾಗಿ ಅಗದದ್ದು. ಒಂಥರ ವಳ್ಳೆ ಬೀಡಾತರ ಆಗಿರತದೆ ಅಂತದ್ನ ಟಿವಿ ಆಂಕರ್ ಬಾಯಿಗಾಕಿದ್ರೆ ಮಜವಾಗಿ ಬಾಯಾಡುಸ್ತರೆ ಬ್ಯಾರೆ ಹೇಳಕ್ಕ”.
“ಅವುರ ಬಾಯಿಗೆ ನನ್ನ ಎಂಜಲಾಕ ಅನ್ಲ”.
“ಅವುರ ಬಾಯಿಗೆ ಕೊರೋನಾ ಎಂಜಲಾಕ ಅನ್ನು”.
“ಅವುರುದು ವಟ್ಟೆ ಪಾಡು ಕಣಕ್ಕ. ನೀನೇನೊ ಮನೆವಳಗೆ ಮಜ್ಜಗೆ ಕಡಕಂಡು ತಂಪಾಗಿದ್ದಿ. ಅವು ನೋಡು ಇಡೀ ದಿನ ಕರೋನಾ, ಕರೋನಾ ಅಂತ ಗೊಬಳಿ ಮರದ ಮ್ಯಾಲೆ ಕುಂತ ಕಾಗೆತರ ಬಡಕತ್ತವೆ. ಕನಸು ಮಸನಲ್ಲೂ ಕರೋನಾ ಅಂತವೆ ಪಾಪ ಅಲವೆ”.
“ಅದ್ರು ಟಿವಿಗಳಿರದು ಕರೋನಾದಿಂದ ಆಗಿರೊ ಅನಾಹುತ ಹೇಳಕ್ಕೆ. ಸರಕಾರ ಹೊಗಳಕ್ಕಲ್ಲ ಕಣೊ” ಎಂದ ಉಗ್ರಿ.
“ಟಿವಿ ನ್ಯಡಸೊವಷ್ಟು ದುಡ್ಡು ಮೋದಿನೆ ಕೊಟ್ಟಿರುವಾಗ ಹೋಗಳಲೇಬೇಕಲ್ಲೊ ಅದ್ಕೆ ಕರೋನಾ ಸುದ್ದಿ ಹೇಳುವಾಗ ಅವುನ ಪೋಟಾ ಹಾಕದು” ಎಂದ ವಾಟಿಸ್ಸೆ.
“ಅವುನೇನೊ ಅಂತ ಬುದ್ದಿವಂತಲವಂತಲ್ಲಾ” ಎಂದಳು ಜುಮ್ಮಿ.
“ಅವುನು ಬುದ್ದಿವಂತ ಅಂತ ಯಾರಕ್ಕ ಹೇಳಿದ್ದು”.
“ಆ ಸುಳ್ಳೇಗೌಡ್ರು ಅನಂತ ಅಂಗಂದಿದ್ದ”.
“ಸುಳ್ಳೇಗೌಡರ ಅನಂತ ನಿಜ ಹೇಳಕ್ಕಾಯ್ತದೇನಕ್ಕ ಈ ಮೋದಿ ಯಾವತ್ತು ಅರ್ಧ ರಾತ್ರಿಲಿ ನೋಟ ಬ್ಯಾನು ಮಾಡಿದ್ನೋ ಅವತ್ತೆ ಇವುನೆಷ್ಟು ಮಟ್ಟಿಗೆ ಬುದ್ದಿವಂತ ಅಂತ ಇಡೀ ಜಗತ್ತಿಗೆ ಗೊತ್ತಾಯ್ತು. ದೇಸ ಅದೋಗತಿಗೆ ಹ್ಹಂಡಕ್ಕೆ ಸುರುಮಾಡಿದ್ದು ಅವತ್ತೆಯ. ಇನ್ಯಾವ ಡಿಗ್ರಿ ಸರ್ಟಿಫಿಕೇಟ್ ತೊರಿದ್ರು ಜನ ನಂಬದಿಲ್ಲ ಬುಡು”.
“ನೀನಂಗಂತಿ ಕಣೊ ಜನ ಮೋದಿ ಮೋದಿ ಅಂತವೆ”.
“ಯಾಕಗಂತರೆ ಗೊತ್ತೇನೊ ಅವುನೆದ್ರಿಗ್ಯಾರು ಇಲ್ಲ ಅದಕೆ”.
“ಅದು ನಿಜ ಬುಡು”.
“ಆ ಡೆಲ್ಲಿಗೆ ಒಂದು ಚರಿತ್ರೆ ಅದೆ. ಅಲ್ಲೊಬ್ಬ ತುಘಲಕ್ ಅಂತ ದ್ವರೆ ಇದ್ದ. ವಿಪರೀತ ಬುದ್ದಿವಂತ. ಅವುನು ಈ ಡೆಲ್ಲಿ ಇಲ್ಲಿದ್ರೆ ವೈರಿಗಾಳ ದಾಳಿ ನ್ಯಡಿತಾಯಿರತದೆ ಅಂತ ಯಲ್ಲ ದೇವಗಿರಿಗೆ ವಂಡಿ ಅಂದ. ಸರಿ ಇಡೀ ಡೆಲ್ಲಿ ದೇವಗಿರಿಗೋಯ್ತು. ಆ ಊರು ರಾಜಾದಾನಿ ಅಗಕ್ಕೆ ಸರಿಲ್ಲ ತಿರಗ ಯಲ್ಲ ಡೆಲ್ಲಿಗೆ ಹೊಂಡಿ ಅಂದ. ಆಗ ತಿರಗ ಡೆಲ್ಲಿ ಹಾದಿಲಿ ನ್ಯಡಕಂಡು ವಂಟ್ರು ಹೋಗುವಾಗ ಕಾಲುಬಾಗ ಸತ್ತಿದ್ರು. ಬರುವಾಗ ಅದ್ರ ಜನ ಸತೃ. ದೊರೆ ತಿಕ್ಕಲ ಪ್ರತಿಭಟಿಸಕ್ಕೆ ಜನಗಳೆ ಇರಲಿಲ್ಲ ಈಗ್ಲು ಕೊರೋನಾ ವಿಷಯದಲ್ಲಿ ಅಂಗೆ ಆಗ್ಯದೆ ನೋಡು”.
“ನೀನೇಳಿದ್ದು ನಿಜ ಕಣೊ ಉಗ್ರಿ ದೇಶಕಟ್ಟೊ ಜನ ಬಿದಿಲಿ, ದಾರಿಲಿ, ರೈಲ್ವೆಹಳಿ ಮ್ಯಾಲೆ ಸಾಯ್ತಾ ಅವುರೆ ಪಾಪ ಅವರಿಗೆ ನಮ್ಮನ್ನ ಕಾಪಾಡೋರು ಯಾರೂ ಇಲ್ಲ ಅನ್ನಸ್ಯದೆ ಇದು ಮೋದಿಗೆ ಗೊತ್ತಾಗದಿಲ್ಲ ಅಂದ್ರೆ ಅವುನು ದಡ್ಡನೇ ಸರಿ”.
“ಅದೇನಾರ ಆಗ್ಲಿ ಜನಗಳ್ಯಲ್ಲ ಸತ್ತೋದ್ರಲ್ಲ ಹೇಳೂ” ಅಂದಳು ಜುಮ್ಮಿ.
“ !?


ಇದನ್ನೂ ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...