Homeಅಂಕಣಗಳುಮೋದಿ ಬುದ್ದಿವಂತನಲವಂತೆ ನಿಜವೆ! - ಚಂದ್ರೇಗೌಡರ ಕಟ್ಟೆಪುರಾಣ

ಮೋದಿ ಬುದ್ದಿವಂತನಲವಂತೆ ನಿಜವೆ! – ಚಂದ್ರೇಗೌಡರ ಕಟ್ಟೆಪುರಾಣ

- Advertisement -
- Advertisement -

ಜುಮ್ಮಿ ಮನೆಗೆ ಬಂದ ವಾಟಿಸ್ಸೆ.
“ಯಕ್ಕಾ, ಯಕ್ಕವ್, ಕೊರೋನಾ ವಿಷಯದಲ್ಲಿ ಒಂದಿಷ್ಟು ಹ್ವಸಾ ರೂಲ್ಸು ಬಂದವೆ ಹೇಳ್ಳ” ಎಂದ.
“ಏನು ಬ್ಯಾಡ. ನೀನು ಆ ಟಿವಿ ಸೂಳೆ ಮಕ್ಕಳಂಗೆ ಆಗಿದ್ದಿ.”
“ಯಕ್ಕವ್ ಟಿವಿ ಮುಂಡೆ ಮಕ್ಕಳಿಗೆ ಓಲುಸಬ್ಯಾಡ. ಹುಟ್ಟು ಭಯೋತ್ಪಾದಕರ ತರ ಆಗ್ಯವುರೆ ಅ ನನ್ ಮಕ್ಕಳು”.
“ಊ ಕಣೊ ವಾಟಿಸ್ಸೆ. ಆ ಮೈಸೂರು ಬಗ್ಗೆ ಒಸಿ ಸುಳ್ಳೆಳಿದರೇನೊ, ನಡುಗ್ತಾಯಿದೆ ಮೈಸೂರು ಅಂದ್ರು ಮೈಸೂರ ಮ್ಯಾಲೆ ಬರಸಿಡ್ಳು ಅಂದ್ರು. ನಾನು ಪೋನು ಮಾಡಿ ಕೇಳಿದ್ರೆ ಕರೋನಾ ಆದೊರ್ಯಲ್ಲ ಉಸರಾಗಿ ಮನಿಗೆಹೋಯ್ತಾ ಅವುರಂತೆ” ಎಂದ ಉಗ್ರಿ.
“ಅದ್ಯಾಕ್ಲ ಅಂಗೆ ಸುಳ್ಳೇಳತವೆ” ಎಂದಳು ಜುಮ್ಮಿ.
“ಅವುಕೆ ಸಂಬಳ ಕೊಡದೆ ಸುಳ್ಳೇಳಕ್ಕೆ ಕಣಕ್ಕ. ಬ್ಯಾರೆ ಟಿವಿಯೋರಿಗಿಂತ ನಾವೇ ಜಾಸ್ತಿ ಸುಳ್ಳೇಳಬೇಕು ಅಂತ ಪೈಪೋಟಿ ನ್ಯಡುಸ್ತವೆ”.
“ಅಯ್ಯೋ ಅವು ಬಾಯಿಗೆ ತನ್ನ ತೊಂಬ್ಲ ಹಾಕ ಹೋಗು”.
“ತೊಂಬಲ ಅನ್ನಬ್ಯಾಡ ಕಣಕ್ಕ. ಅದು ಸೆಕ್ಸ್ ಮ್ಯಾಟ್ರಾಯ್ತದೆ”.
“ಅದ್ಯಂಗಾಯ್ತದೊ ಎಂದ ಉಗ್ರಿ”.
“ತೊಂಬಲ ಅಂದ್ರೆ ಯಲೆ ಅಡಕೆ ಹದವಾಗಿ ಅಗದದ್ದು. ಒಂಥರ ವಳ್ಳೆ ಬೀಡಾತರ ಆಗಿರತದೆ ಅಂತದ್ನ ಟಿವಿ ಆಂಕರ್ ಬಾಯಿಗಾಕಿದ್ರೆ ಮಜವಾಗಿ ಬಾಯಾಡುಸ್ತರೆ ಬ್ಯಾರೆ ಹೇಳಕ್ಕ”.
“ಅವುರ ಬಾಯಿಗೆ ನನ್ನ ಎಂಜಲಾಕ ಅನ್ಲ”.
“ಅವುರ ಬಾಯಿಗೆ ಕೊರೋನಾ ಎಂಜಲಾಕ ಅನ್ನು”.
“ಅವುರುದು ವಟ್ಟೆ ಪಾಡು ಕಣಕ್ಕ. ನೀನೇನೊ ಮನೆವಳಗೆ ಮಜ್ಜಗೆ ಕಡಕಂಡು ತಂಪಾಗಿದ್ದಿ. ಅವು ನೋಡು ಇಡೀ ದಿನ ಕರೋನಾ, ಕರೋನಾ ಅಂತ ಗೊಬಳಿ ಮರದ ಮ್ಯಾಲೆ ಕುಂತ ಕಾಗೆತರ ಬಡಕತ್ತವೆ. ಕನಸು ಮಸನಲ್ಲೂ ಕರೋನಾ ಅಂತವೆ ಪಾಪ ಅಲವೆ”.
“ಅದ್ರು ಟಿವಿಗಳಿರದು ಕರೋನಾದಿಂದ ಆಗಿರೊ ಅನಾಹುತ ಹೇಳಕ್ಕೆ. ಸರಕಾರ ಹೊಗಳಕ್ಕಲ್ಲ ಕಣೊ” ಎಂದ ಉಗ್ರಿ.
“ಟಿವಿ ನ್ಯಡಸೊವಷ್ಟು ದುಡ್ಡು ಮೋದಿನೆ ಕೊಟ್ಟಿರುವಾಗ ಹೋಗಳಲೇಬೇಕಲ್ಲೊ ಅದ್ಕೆ ಕರೋನಾ ಸುದ್ದಿ ಹೇಳುವಾಗ ಅವುನ ಪೋಟಾ ಹಾಕದು” ಎಂದ ವಾಟಿಸ್ಸೆ.
“ಅವುನೇನೊ ಅಂತ ಬುದ್ದಿವಂತಲವಂತಲ್ಲಾ” ಎಂದಳು ಜುಮ್ಮಿ.
“ಅವುನು ಬುದ್ದಿವಂತ ಅಂತ ಯಾರಕ್ಕ ಹೇಳಿದ್ದು”.
“ಆ ಸುಳ್ಳೇಗೌಡ್ರು ಅನಂತ ಅಂಗಂದಿದ್ದ”.
“ಸುಳ್ಳೇಗೌಡರ ಅನಂತ ನಿಜ ಹೇಳಕ್ಕಾಯ್ತದೇನಕ್ಕ ಈ ಮೋದಿ ಯಾವತ್ತು ಅರ್ಧ ರಾತ್ರಿಲಿ ನೋಟ ಬ್ಯಾನು ಮಾಡಿದ್ನೋ ಅವತ್ತೆ ಇವುನೆಷ್ಟು ಮಟ್ಟಿಗೆ ಬುದ್ದಿವಂತ ಅಂತ ಇಡೀ ಜಗತ್ತಿಗೆ ಗೊತ್ತಾಯ್ತು. ದೇಸ ಅದೋಗತಿಗೆ ಹ್ಹಂಡಕ್ಕೆ ಸುರುಮಾಡಿದ್ದು ಅವತ್ತೆಯ. ಇನ್ಯಾವ ಡಿಗ್ರಿ ಸರ್ಟಿಫಿಕೇಟ್ ತೊರಿದ್ರು ಜನ ನಂಬದಿಲ್ಲ ಬುಡು”.
“ನೀನಂಗಂತಿ ಕಣೊ ಜನ ಮೋದಿ ಮೋದಿ ಅಂತವೆ”.
“ಯಾಕಗಂತರೆ ಗೊತ್ತೇನೊ ಅವುನೆದ್ರಿಗ್ಯಾರು ಇಲ್ಲ ಅದಕೆ”.
“ಅದು ನಿಜ ಬುಡು”.
“ಆ ಡೆಲ್ಲಿಗೆ ಒಂದು ಚರಿತ್ರೆ ಅದೆ. ಅಲ್ಲೊಬ್ಬ ತುಘಲಕ್ ಅಂತ ದ್ವರೆ ಇದ್ದ. ವಿಪರೀತ ಬುದ್ದಿವಂತ. ಅವುನು ಈ ಡೆಲ್ಲಿ ಇಲ್ಲಿದ್ರೆ ವೈರಿಗಾಳ ದಾಳಿ ನ್ಯಡಿತಾಯಿರತದೆ ಅಂತ ಯಲ್ಲ ದೇವಗಿರಿಗೆ ವಂಡಿ ಅಂದ. ಸರಿ ಇಡೀ ಡೆಲ್ಲಿ ದೇವಗಿರಿಗೋಯ್ತು. ಆ ಊರು ರಾಜಾದಾನಿ ಅಗಕ್ಕೆ ಸರಿಲ್ಲ ತಿರಗ ಯಲ್ಲ ಡೆಲ್ಲಿಗೆ ಹೊಂಡಿ ಅಂದ. ಆಗ ತಿರಗ ಡೆಲ್ಲಿ ಹಾದಿಲಿ ನ್ಯಡಕಂಡು ವಂಟ್ರು ಹೋಗುವಾಗ ಕಾಲುಬಾಗ ಸತ್ತಿದ್ರು. ಬರುವಾಗ ಅದ್ರ ಜನ ಸತೃ. ದೊರೆ ತಿಕ್ಕಲ ಪ್ರತಿಭಟಿಸಕ್ಕೆ ಜನಗಳೆ ಇರಲಿಲ್ಲ ಈಗ್ಲು ಕೊರೋನಾ ವಿಷಯದಲ್ಲಿ ಅಂಗೆ ಆಗ್ಯದೆ ನೋಡು”.
“ನೀನೇಳಿದ್ದು ನಿಜ ಕಣೊ ಉಗ್ರಿ ದೇಶಕಟ್ಟೊ ಜನ ಬಿದಿಲಿ, ದಾರಿಲಿ, ರೈಲ್ವೆಹಳಿ ಮ್ಯಾಲೆ ಸಾಯ್ತಾ ಅವುರೆ ಪಾಪ ಅವರಿಗೆ ನಮ್ಮನ್ನ ಕಾಪಾಡೋರು ಯಾರೂ ಇಲ್ಲ ಅನ್ನಸ್ಯದೆ ಇದು ಮೋದಿಗೆ ಗೊತ್ತಾಗದಿಲ್ಲ ಅಂದ್ರೆ ಅವುನು ದಡ್ಡನೇ ಸರಿ”.
“ಅದೇನಾರ ಆಗ್ಲಿ ಜನಗಳ್ಯಲ್ಲ ಸತ್ತೋದ್ರಲ್ಲ ಹೇಳೂ” ಅಂದಳು ಜುಮ್ಮಿ.
“ !?


ಇದನ್ನೂ ಓದಿ: ಬಿ.ಚಂದ್ರೇಗೌಡರ ಕಟ್ಟೆಪುರಾಣ: ಜುಮ್ಮಕ್ಕ ಕೆಮ್ಮು ನೆಗ್ಲೆಟ್ ಮಾಡಬ್ಯಾಡ ಕಣಕ್ಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...