Homeಮುಖಪುಟಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

- Advertisement -
- Advertisement -

ಈ ತಿಂಗಳ ಕೊನೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ವಿಧಾನ ಸಭಾ ಚುನಾವಣೆ ನಡೆಯಲಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ದೂರಿನಲ್ಲಿ ಪ್ರಧಾನ ಮಂತ್ರಿಯು ಪಶ್ಚಿಮ ಬಂಗಾಳದಲ್ಲಿ ಅಧಿಕಾರದ ಯಂತ್ರೋಪಕರಣಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ವಿತರಿಸಿದ ವ್ಯಾಕ್ಸಿನೇಷನ್ ಪ್ರಮಾಣ ಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಬಳಸಿರುವುದಕ್ಕೆ ತೃಣಮೂಲ ಪಕ್ಷವು ಆಕ್ರೋಶ ವ್ಯಕ್ತಪಡಿಸಿದೆ. ಈ ಮೂಲಕ ವೈದ್ಯರು, ದಾದಿಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸಲ್ಲಬೇಕಾಗಿರುವ ಹೊಗಳಿಕೆಯನ್ನು ಯಾವುದೆ ಇರುಸುಮುರುಸು ಇಲ್ಲದೆ ಕದಿಯಲಾಗಿದೆ ಎಂದು ಪಕ್ಷವು ಆರೋಪಿಸಿದೆ.

ಇದನ್ನೂ ಓದು: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ಆರೋಗ್ಯ ಸಚಿವಾಲಯ ನೀಡುವ ಪ್ರಮಾಣ ಪತ್ರದಲ್ಲಿ ಒಬ್ಬ ವ್ಯಕ್ತಿಯು ಲಸಿಕೆ ತೆಗೆದುಕೊಂಡಿದ್ದಾನೆ ಎಂದು ದೃಡಪಡಿಸುತ್ತದೆ. ಪ್ರಮಾಣ ಪತ್ರದಲ್ಲಿ ಪ್ರಧಾನಮಂತ್ರಿಯವರ ಫೋಟೋ ಮಾತ್ರವಲ್ಲದೆ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಅವರ ಸಂದೇಶವನ್ನು ಮುದ್ರಿಸಲಾಗಿದೆ.

“ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ತಾತ್ಕಾಲಿಕ ಪ್ರಮಾಣಪತ್ರಗಳಲ್ಲಿ ಪ್ರಧಾನಿಯ ಛಾಯಾಚಿತ್ರ, ಹೆಸರು ಮತ್ತು ಸಂದೇಶವನ್ನು ಮುದ್ರಿಸುವ ಮೂಲಕ, ಅವರು ತಮ್ಮ ಹುದ್ದೆ ಮತ್ತು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದಲ್ಲದೆ, ಕೊರೊನಾ ಲಸಿಕೆಗಳ ಉತ್ಪಾದಕರಿಗೆ ಸಲ್ಲಬೇಕಾಗಿರುವ ಶ್ಲಾಘನೆಯನ್ನು ಕೂಡಾ ಕದಿಯುತ್ತಿದ್ದಾರೆ. ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯರು, ದಾದಿಯರು ಮತ್ತು ಆರೋಗ್ಯ ಸೇವಾ ಕಾರ್ಯಕರ್ತರ ಪಡೆಗಳಿಗೆ ಹೋಗಬೇಕಾಗಿರುವ ಪ್ರಶಂಸೆ ಮತ್ತು ಹೊಗಳಿಕೆಯನ್ನು ಯಾವುದೆ ಇರುಸುಮುರುಸು ಇಲ್ಲದೆ ಇವರು ಪಡೆಯುತ್ತಿದ್ದಾರೆ”ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ’ಬ್ರಿಯೆನ್ ಕೇಂದ್ರ ಚುನಾವಣ ಆಯೋಗಕ್ಕೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಪ್ರಧಾನಿಯ ಈ ನಡೆಯು ಚುನಾವಣಾ ಸಂಹಿತೆಯ ಉಲ್ಲಂಘನೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆಯ ಸಮಯದಲ್ಲಿ ತೆರಿಗೆದಾರರ ವೆಚ್ಚದಲ್ಲಿ ಅನಗತ್ಯ ಪ್ರಚಾರ ಪಡೆಯುವುದನ್ನು ಚುನಾವಣಾ ಆಯೋಗವು ತಡೆಯಬೇಕು. ಪ್ರಕರಣದಲ್ಲಿ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯು ಸ್ಪಷ್ಟವಾಗಿದ್ದು, ತಕ್ಷಣವೆ ಇದನ್ನು ನಿಲ್ಲಿಸಬೇಕು ಎಂದು ತೃಣಮೂಲ ಸಂಸದ ಒತ್ತಾಯಿಸಿದ್ದಾರೆ.

ಇದನ್ನೂ ಓದು: ಅಸ್ಸಾಂನಲ್ಲಿ ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ತಿಂಗಳಿಗೆ ₹ 2,000 ಸಹಾಯ ಧನ- ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...