Homeಮುಖಪುಟಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಾಷಿಂಗ್ಟನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್‌ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ”ನರೇಂದ್ರ ಮೋದಿ ಅವರು ಭಾರತೀಯ ಸಮಾಜವನ್ನು ಧ್ರುವೀಕರಿಸುತ್ತಿದ್ದಾರೆ ಮತ್ತು ಒಡೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದರು.

”140 ಕೋಟಿ ಜನರಿರುವ, ವಿವಿಧ ನಂಬಿಕೆಗಳ, ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ” ಎಂದು ಅವರು ಆರೋಪ ಮಾಡಿದರು.

ಅವರು ಏನೇ ಮಾಡಿದರೂ ಅದೆಲ್ಲವನ್ನು ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

”ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ನೋಡುತ್ತಿರಿ, ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದ” ಎಂದು ಅವರು ಹೇಳಿದರು.

ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿದ ಅವರು, ”2004ರಲ್ಲಿ ನಾನು ರಾಜಕೀಯಕ್ಕೆ ಸೇರಿದಾಗ, ಮುಂದೆ ಯಾವತ್ತೋ ಒಂದು ದಿನ ಸಂಸತ್ತಿನಿಂದ ಅನರ್ಹಗೊಳಿಸಲಾಗುತ್ತದೆ” ಎಂದು ನಾನು ಊಹಿಸಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ದೇವರೇ ಗೊಂದಲಕ್ಕಿಡಾಗುತ್ತಾನೆ: ರಾಹುಲ್ ವ್ಯಂಗ್ಯ

ಅವರು ಹೀಗೆ ಮಾಡುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಎಂದು ಹೇಳಿದರು.

”ಮಾನನಷ್ಟಕ್ಕಾಗಿ ಕ್ರಿಮಿನಲ್ ಶಿಕ್ಷೆಗೆ ಒಳಗಾದ ಮೊದಲ ವ್ಯಕ್ತಿ ನಾನು” ಅದರಿಂದ ನನ್ನನ್ನು ವಸಂಸತ್ತಿನಿಂದ ಅಮಾನತು ಮಾಡಲಾಯಿತು. ಆದರೆ ಇದು ನನಗೆ ಒಂದು ದೊಡ್ಡ ಅವಕಾಶವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ, ಬಹುಶಃ ಸಂಸತ್ತಿನಲ್ಲಿ ನನಗೆ ಸಿಗುವ ಅವಕಾಶಕ್ಕಿಂತ ದೊಡ್ಡದಾಗಿದೆ ಎಂದು ಸಕಾರಾತ್ಮಕವಾಗಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರಿಂದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24 ರಂದು ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ರಾಹುಲ್ ಗಾಂಧಿ ಅವರ ಮೇಲಿನ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯ ಸದಸ್ಯತ್ವವನ್ನು ಮರುಸ್ಥಾಪಿಸಬಹುದು. ಮೇ 2 ರಂದು, ಗುಜರಾತ್ ಹೈಕೋರ್ಟ್ ರಾಜಕಾರಣಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತು ಮತ್ತು ಜೂನ್ 5 ರ ನಂತರ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಹೇಳಿದೆ.

ಪ್ರಧಾನಿ ಮೋದಿ ಅವರು ಜೂನ್ 22 ರಂದು ಮೋದಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ಶ್ವೇತಭವನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಇದರ ನಡುವೆಯೇ ರಾಹುಲ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...