Homeಮುಖಪುಟಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಾಷಿಂಗ್ಟನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್‌ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ”ನರೇಂದ್ರ ಮೋದಿ ಅವರು ಭಾರತೀಯ ಸಮಾಜವನ್ನು ಧ್ರುವೀಕರಿಸುತ್ತಿದ್ದಾರೆ ಮತ್ತು ಒಡೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದರು.

”140 ಕೋಟಿ ಜನರಿರುವ, ವಿವಿಧ ನಂಬಿಕೆಗಳ, ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ” ಎಂದು ಅವರು ಆರೋಪ ಮಾಡಿದರು.

ಅವರು ಏನೇ ಮಾಡಿದರೂ ಅದೆಲ್ಲವನ್ನು ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

”ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ನೋಡುತ್ತಿರಿ, ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದ” ಎಂದು ಅವರು ಹೇಳಿದರು.

ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿದ ಅವರು, ”2004ರಲ್ಲಿ ನಾನು ರಾಜಕೀಯಕ್ಕೆ ಸೇರಿದಾಗ, ಮುಂದೆ ಯಾವತ್ತೋ ಒಂದು ದಿನ ಸಂಸತ್ತಿನಿಂದ ಅನರ್ಹಗೊಳಿಸಲಾಗುತ್ತದೆ” ಎಂದು ನಾನು ಊಹಿಸಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ದೇವರೇ ಗೊಂದಲಕ್ಕಿಡಾಗುತ್ತಾನೆ: ರಾಹುಲ್ ವ್ಯಂಗ್ಯ

ಅವರು ಹೀಗೆ ಮಾಡುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಎಂದು ಹೇಳಿದರು.

”ಮಾನನಷ್ಟಕ್ಕಾಗಿ ಕ್ರಿಮಿನಲ್ ಶಿಕ್ಷೆಗೆ ಒಳಗಾದ ಮೊದಲ ವ್ಯಕ್ತಿ ನಾನು” ಅದರಿಂದ ನನ್ನನ್ನು ವಸಂಸತ್ತಿನಿಂದ ಅಮಾನತು ಮಾಡಲಾಯಿತು. ಆದರೆ ಇದು ನನಗೆ ಒಂದು ದೊಡ್ಡ ಅವಕಾಶವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ, ಬಹುಶಃ ಸಂಸತ್ತಿನಲ್ಲಿ ನನಗೆ ಸಿಗುವ ಅವಕಾಶಕ್ಕಿಂತ ದೊಡ್ಡದಾಗಿದೆ ಎಂದು ಸಕಾರಾತ್ಮಕವಾಗಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರಿಂದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24 ರಂದು ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ರಾಹುಲ್ ಗಾಂಧಿ ಅವರ ಮೇಲಿನ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯ ಸದಸ್ಯತ್ವವನ್ನು ಮರುಸ್ಥಾಪಿಸಬಹುದು. ಮೇ 2 ರಂದು, ಗುಜರಾತ್ ಹೈಕೋರ್ಟ್ ರಾಜಕಾರಣಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತು ಮತ್ತು ಜೂನ್ 5 ರ ನಂತರ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಹೇಳಿದೆ.

ಪ್ರಧಾನಿ ಮೋದಿ ಅವರು ಜೂನ್ 22 ರಂದು ಮೋದಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ಶ್ವೇತಭವನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಇದರ ನಡುವೆಯೇ ರಾಹುಲ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...