Homeಮುಖಪುಟಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ- ರಾಹುಲ್ ಗಾಂಧಿ

ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ, ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ.

- Advertisement -
- Advertisement -

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ, ದೇಶದಲ್ಲಿ ನಿರುದ್ಯೋಗ ಹೆಚ್ಚಳ, ವಲಸೆ ಕಾರ್ಮಿಕರ ಸಮಸ್ಯೆ, ಕೊರೋನಾ ವೈರಸ್​ ದಾಳಿ, ಭಾರತ-ಚೀನಾ ಸಂಘರ್ಷಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ನವಾಡಾದಲ್ಲಿ ನಡೆದ ಕಾಂಗ್ರೆಸ್​-ಆರ್​ಜೆಡಿ ಜಂಟಿ ಚುನಾವಣಾ ರ‍್ಯಾಲಿಯಾದ ‘ಬದಲಾವ್ ಸಂಕಲ್ಪ್’ ನಲ್ಲಿ ಆರ್‌‌ಜಿಡಿ ನಾಯಕ ತೇಜಸ್ವಿ ಯಾದವ್ ಜೊತೆಗೂಡಿ ಪ್ರಧಾನಿ ನರೇಂದ್ರ ಮೋದಿಯ ವೈಫಲ್ಯಗಳನ್ನು ಜನರ ಮುಂದಿಟ್ಟು ಮತಯಾಚಿಸಿದ್ದಾರೆ

ಲಾಕ್​ಡೌನ್​, ಚೀನಾ ಗಡಿ ಸಂಘರ್ಷ, ವಲಸೆ ಕಾರ್ಮಿಕರ ಬಿಕ್ಕಟ್ಟಿನ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕಾಗಿ ಏನೂ ಮಾಡಿಲ್ಲ. ಬಿಹಾರಕ್ಕೂ ಅವರಿಂದ ಯಾವ ಕೊಡುಗೆಯೂ ಇಲ್ಲ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

“ಮೋದಿಯವರೇ, ಬಿಹಾರದ ಜನರಿಗೆ ಸುಳ್ಳು ಹೇಳಬೇಡಿ. ನೀವು ಬಿಹಾರಿಗಳಿಗೆ ಉದ್ಯೋಗ ನೀಡಿದ್ದೀರಾ? ಕಳೆದ ಚುನಾವಣೆಯಲ್ಲಿ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದೀರಿ, ಆದರೆ ಯಾರಿಗೂ ಉದ್ಯೋಗ ಸಿಗಲಿಲ್ಲ. ಸಾರ್ವಜನಿಕವಾಗಿ ತಾನು ಸೈನ್ಯ, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳಿಗೆ ತಲೆ ಬಾಗುತ್ತೇನೆ ಎಂದು ಹೇಳುತ್ತೀರ, ಆದರೆ ಅಂಬಾನಿ ಮತ್ತು ಅದಾನಿಗಾಗಿ ಮಾತ್ರ ಕೆಲಸ ಮಾಡುತ್ತೀರಿ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಉಚಿತ ಕೊರೊನಾ ಲಸಿಕೆ ಪ್ರಸ್ತಾಪ; ಟ್ರೋಲ್‌ ಆದ ಬಿಜೆಪಿ ಪ್ರಣಾಳಿಕೆ!

ಕೊರೊನಾ ಸೋಂಕು ಮತ್ತು ಲಾಕ್‌ಡೌನ್‌, ವಲಸೆ ಬಿಕ್ಕಟ್ಟಿನ ಬಗ್ಗೆ ಮಾತನಾಡಿದ ರಾಹುಲ್, “ಎಲ್ಲಾ ವಲಸೆ ಕಾರ್ಮಿಕರನ್ನು ಮತ್ತೆ ಬಿಹಾರಕ್ಕೆ ವಾಪಸ್ ಕಳುಹಿಸಲಾಯಿತು. ಆ ಸಮಯದಲ್ಲಿ ವಲಸೆ ಕಾರ್ಮಿಕರು ಮೈಲುಗಟ್ಟಲೇ ನಡೆದುಕೊಂಡು ಹೋಗುತ್ತಿದ್ದಾಗ ಪ್ರಧಾನಿ ಮೋದಿ ಏನು ಮಾಡುತ್ತಿದ್ದರು? ಅವರು ನಿಮಗೆ ಸಾರಿಗೆ ಸಂಪರ್ಕಕ್ಕಾಗಿ  ರೈಲುಗಳನ್ನು ಒದಗಿಸಿದ್ದಾರೆಯೇ? ” ಎಂದು ಪ್ರಶ್ನಿಸಿದ್ದಾರೆ.

ನೋಟು ಅಮಾನ್ಯೀಕರಣದ ಬಗ್ಗೆ ಪ್ರಸ್ತಾಪಿಸಿದ ರಾಹುಲ್ ಗಾಂಧಿ, ಅಂಬಾನಿ, ಅದಾನಿ ಸರತಿ ಸಾಲಿನಲ್ಲಿ ನಿಂತಿರುವುದನ್ನು ನೀವು ನೋಡಿದ್ದೀರಾ? ಇವರೆಲ್ಲರೂ ಎಸಿ ಕೋಣೆಗಳಲ್ಲಿರುತ್ತಾರೆ. ಮೋದಿ ಶ್ರೀಮಂತರ ಪರವಾಗಿದ್ದಾರೆ. ರೈತರು ಮತ್ತು ಸಣ್ಣ ಉದ್ಯಮಿಗಳನ್ನು ಕಡೆಗಣಿಸುತ್ತಿದ್ದಾರೆ ಎಂದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಕೃಷಿ ಮಸೂದೆಗಳ ಕುರಿತು ರಾಹುಲ್ ಗಾಂಧಿ ಕಿಡಿಕಾರಿದ್ದು, ಚೀನಾ ನಮ್ಮ ಗಡಿಯೊಳಗೆ ನುಗ್ಗಿದರೂ ಯಾರೊಬ್ಬರೂ ಒಳಗೆ ಬಂದಿಲ್ಲ ಎಂದು ಹೇಳಿ ಪ್ರಧಾನಿ ನಮ್ಮ ಯೋಧರನ್ನು ಅವಮಾನಿಸಿದ್ದಾರೆ ಎಂದಿದ್ದಾರೆ.

ರ‍್ಯಾಲಿ ವೇಳೆ ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ವಿರುದ್ಧ ಕಿಡಿಕಾರಿರುವ ತೇಜಸ್ವಿ ಯಾದವ್, “ಎನ್​ಡಿಎ ಮೈತ್ರಿ ಕೂಟದ ವಿರುದ್ಧ ಮತ ಚಲಾಯಿಸಿ, ನಿತೀಶ್​ ಕುಮಾರ್​ ಅವರನ್ನು ಮನೆಯಲ್ಲಿಯೇ ಇರಿಸಿ. ಅವರು ಕೊರೊನಾ ಸಂದರ್ಭದಲ್ಲಿ 144 ದಿನಗಳ ಕಾಲ ಮನೆಯಲ್ಲಿಯೇ ಕಳೆದಿದ್ದರು. ಆದರೆ, ಚುನಾವಣಾ ವೇಳೆಯಲ್ಲಿ  ಮಾತ್ರ ಅವರು ತಮ್ಮ ಮನೆಯಿಂದ ಹೊರ ಬಂದಿದ್ದಾರೆ ಎಂದು ಆಕ್ರೊಶ ಹೊರಹಾಕಿದ್ದಾರೆ.

ಬಿಹಾರದ ವಿಧಾನಸಭೆಗೆ ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ನಿತೀಶ್​ ಕುಮಾರ್​ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ ಆರ್​​ಜೆಡಿ ನೇತೃತ್ವದ ಮೈತ್ರಿಕೂಟ ಈ ಭಾರಿ ಪ್ರಬಲ ಪೈಪೋಟಿ ಒಡ್ಡುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ.


ಇದನ್ನೂ ಓದಿ:  ಬಿಹಾರ: ನಿಯಮಗಳ ಉಲ್ಲಂಘನೆ, ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...