Homeಮುಖಪುಟ'ಮೋದಿ ಕಾ ಅಸಲಿ ಪರಿವಾರ್': ಪೋಸ್ಟರ್‌ ವಿರುದ್ಧ ಎಫ್‌ಐಆರ್‌

‘ಮೋದಿ ಕಾ ಅಸಲಿ ಪರಿವಾರ್’: ಪೋಸ್ಟರ್‌ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟರ್‌ಗಳು “ಮೋದಿ ಕಾ ಅಸಲಿ ಪರಿವಾರ್” (ಮೋದಿಯವರ ನಿಜವಾದ ಕುಟುಂಬ) ಎಂಬ ಶೀರ್ಷಿಕೆಯನ್ನು ಹೊಂದಿದ್ದು, ಕೆಳಭಾಗದಲ್ಲಿ ‘ಭಾರತೀಯ ಯುವ ಕಾಂಗ್ರೆಸ್’ ಎಂದು ಬರೆಯಲಾಗಿದೆ. ಈ ಕುರಿತು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದಿಲ್ಲಿ ಪ್ರಿವೆನ್ಶನ್‌ ಆಫ್‌ ಡಿಫೇಸ್‌ಮೆಂಟ್‌ ಆಫ್‌ ಪ್ರಾಪರ್ಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ನವದೆಹಲಿ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪೋಸ್ಟರ್‌ಗಳಲ್ಲಿ ಪ್ರಕಾಶಕರ ಹೆಸರು ಅಥವಾ ಅದನ್ನು ಹಾಕಿದ ವ್ಯಕ್ತಿಯ ಹೆಸರಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾದಲ್ಲಿ ಕಳೆದ ರವಿವಾರ ನಡೆದ ಸಮಾವೇಶದಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಅವರು ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಸೋಮವಾರ ಪ್ರತಿಕ್ರಿಯಿಸಿದ್ದ ಪ್ರಧಾನಿ, 140 ಕೋಟಿ ದೇಶವಾಸಿಗಳು ನನ್ನ ಪರಿವಾರ ಎಂದಿದ್ದರು. ಇದರ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳ ಬಯೋದಲ್ಲಿ ʼಮೋದಿ ಕಾ ಪರಿವಾರ್‌ʼ ಎಂದು ಸೇರಿಸಿದ್ದರು. ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಲ್ಲಿ “ಮೋದಿ ಕಾ ಪರಿವಾರ್” ಎಂದು ಸೇರಿಸಿರುವುದರಿಂದ, ಪರಾರಿಯಾಗಿರುವ ಉದ್ಯಮಿಗಳಾದ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಕೂಡ ಅವರ ಕುಟುಂಬದಲ್ಲಿದ್ದಾರೆಯೇ ಎಂದು ಕಾಂಗ್ರೆಸ್ ಮಂಗಳವಾರ ಕೇಳಿತ್ತು.

ಈ ಮೊದಲು ‘ಮೋದಿ ಕಾ ಪರಿವಾರ್’ ಅಭಿಯಾನಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿತ್ತು, ‘ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸ್ಥಿರತೆಗಳು ಮತ್ತು ಧ್ರುವೀಕರಣದಿಂದ ಅವರ ಆಡಳಿತದ ಕೊನೆಯ ದಶಕವು ನಿರಂತರ ಸಮಸ್ಯೆಗಳಿಂದಾಗಿ ಅವರ ಸ್ವಂತ ಕುಟುಂಬಕ್ಕೆ (ನಾಗರಿಕರಿಗೆ) ಅನ್ಯಾಯ ಕಾಲ’ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದರು.

ನಮ್ಮ ಆದ್ಯತೆಯು ಸಹ ನಮ್ಮ ದೇಶದ ಜನರು; ನಾವು ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸ್ಥಿರತೆ ಮತ್ತು ಧ್ರುವೀಕರಣದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ. 140 ಕೋಟಿ ಭಾರತೀಯರು ಅವರ ಕುಟುಂಬವಾಗಿದ್ದರೆ, ಅವರು ಅವರ ನಂಬಿಕೆಯನ್ನು ಏಕೆ ಮುರಿದರು? ಅವರು ಏಕೆ ಜನರಿಗೆ ಅನ್ಯಾಯ ಮಾಡಿದ್ದಾರೆ? ಕಳೆದ 10 ವರ್ಷಗಳು ಅವರ ಸ್ವಂತ ಕುಟುಂಬಕ್ಕೆ ‘ಅನ್ಯಾಯ ಕಾಲ’ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದರು. ಪ್ರಧಾನಿಯನ್ನು ವಿಶ್ವಗುರು ಎಂದು ಘೋಷಿಸಿಕೊಳ್ಳುವ ‘ಮಾರ್ಕೆಟಿಂಗ್ ವ್ಯಕ್ತಿ’ ಎಂದು ಲೇವಡಿ ಮಾಡಿದ ರಮೇಶ್, ‘ಒಬ್ಬ ವ್ಯಕ್ತಿಯು ಗೌರವವನ್ನು ಬಯಸಿದರೆ, ಆತ ಗೌರವಯುತವಾಗಿ ವರ್ತಿಸಬೇಕು’ ಎಂದು ಹೇಳಿದ್ದರು. ಅವರು ಪ್ರಜಾಸತ್ತಾತ್ಮಕವಾಗಿ ಚುನಾಯಿತ ವ್ಯಕ್ತಿ, ಆದರೆ ಅವರ ವ್ಯಕ್ತಿತ್ವ ಮತ್ತು ಅವರ ಕೆಲಸವು ಸಂಪೂರ್ಣವಾಗಿ ಅನ್ಯಾಯವಾಗಿದೆ. ಅವರು ಮಾರ್ಕೆಟಿಂಗ್ ಮತ್ತು ಬ್ರಾಂಡಿಂಗ್‌ಗಾಗಿ ಅಲ್ಲಿ ಕುಳಿತುಕೊಂಡಿದ್ದಾರೆ; ಸ್ವಯಂ ಘೋಷಿತ ವಿಶ್ವಗುರು ಆಗಿದ್ದಾರೆ. ನಾವು ಪ್ರಧಾನಿ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಒಬ್ಬ ವ್ಯಕ್ತಿ ಗೌರವವನ್ನು ಬಯಸಿದರೆ, ಅವರು ಗೌರವಯುತವಾಗಿ ವರ್ತಿಸಬೇಕು’ ಎಂದು ಅವರು ಹೇಳಿದ್ದರು.

ಇದನ್ನು ಓದಿ: ‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...