Homeಮುಖಪುಟ'ಮೋದಿ ಕಾ ಅಸಲಿ ಪರಿವಾರ್': ಪೋಸ್ಟರ್‌ ವಿರುದ್ಧ ಎಫ್‌ಐಆರ್‌

‘ಮೋದಿ ಕಾ ಅಸಲಿ ಪರಿವಾರ್’: ಪೋಸ್ಟರ್‌ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟರ್‌ಗಳು “ಮೋದಿ ಕಾ ಅಸಲಿ ಪರಿವಾರ್” (ಮೋದಿಯವರ ನಿಜವಾದ ಕುಟುಂಬ) ಎಂಬ ಶೀರ್ಷಿಕೆಯನ್ನು ಹೊಂದಿದ್ದು, ಕೆಳಭಾಗದಲ್ಲಿ ‘ಭಾರತೀಯ ಯುವ ಕಾಂಗ್ರೆಸ್’ ಎಂದು ಬರೆಯಲಾಗಿದೆ. ಈ ಕುರಿತು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದಿಲ್ಲಿ ಪ್ರಿವೆನ್ಶನ್‌ ಆಫ್‌ ಡಿಫೇಸ್‌ಮೆಂಟ್‌ ಆಫ್‌ ಪ್ರಾಪರ್ಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ನವದೆಹಲಿ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪೋಸ್ಟರ್‌ಗಳಲ್ಲಿ ಪ್ರಕಾಶಕರ ಹೆಸರು ಅಥವಾ ಅದನ್ನು ಹಾಕಿದ ವ್ಯಕ್ತಿಯ ಹೆಸರಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾದಲ್ಲಿ ಕಳೆದ ರವಿವಾರ ನಡೆದ ಸಮಾವೇಶದಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಅವರು ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಸೋಮವಾರ ಪ್ರತಿಕ್ರಿಯಿಸಿದ್ದ ಪ್ರಧಾನಿ, 140 ಕೋಟಿ ದೇಶವಾಸಿಗಳು ನನ್ನ ಪರಿವಾರ ಎಂದಿದ್ದರು. ಇದರ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳ ಬಯೋದಲ್ಲಿ ʼಮೋದಿ ಕಾ ಪರಿವಾರ್‌ʼ ಎಂದು ಸೇರಿಸಿದ್ದರು. ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಲ್ಲಿ “ಮೋದಿ ಕಾ ಪರಿವಾರ್” ಎಂದು ಸೇರಿಸಿರುವುದರಿಂದ, ಪರಾರಿಯಾಗಿರುವ ಉದ್ಯಮಿಗಳಾದ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಕೂಡ ಅವರ ಕುಟುಂಬದಲ್ಲಿದ್ದಾರೆಯೇ ಎಂದು ಕಾಂಗ್ರೆಸ್ ಮಂಗಳವಾರ ಕೇಳಿತ್ತು.

ಈ ಮೊದಲು ‘ಮೋದಿ ಕಾ ಪರಿವಾರ್’ ಅಭಿಯಾನಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿತ್ತು, ‘ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸ್ಥಿರತೆಗಳು ಮತ್ತು ಧ್ರುವೀಕರಣದಿಂದ ಅವರ ಆಡಳಿತದ ಕೊನೆಯ ದಶಕವು ನಿರಂತರ ಸಮಸ್ಯೆಗಳಿಂದಾಗಿ ಅವರ ಸ್ವಂತ ಕುಟುಂಬಕ್ಕೆ (ನಾಗರಿಕರಿಗೆ) ಅನ್ಯಾಯ ಕಾಲ’ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದರು.

ನಮ್ಮ ಆದ್ಯತೆಯು ಸಹ ನಮ್ಮ ದೇಶದ ಜನರು; ನಾವು ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸ್ಥಿರತೆ ಮತ್ತು ಧ್ರುವೀಕರಣದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ. 140 ಕೋಟಿ ಭಾರತೀಯರು ಅವರ ಕುಟುಂಬವಾಗಿದ್ದರೆ, ಅವರು ಅವರ ನಂಬಿಕೆಯನ್ನು ಏಕೆ ಮುರಿದರು? ಅವರು ಏಕೆ ಜನರಿಗೆ ಅನ್ಯಾಯ ಮಾಡಿದ್ದಾರೆ? ಕಳೆದ 10 ವರ್ಷಗಳು ಅವರ ಸ್ವಂತ ಕುಟುಂಬಕ್ಕೆ ‘ಅನ್ಯಾಯ ಕಾಲ’ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದರು. ಪ್ರಧಾನಿಯನ್ನು ವಿಶ್ವಗುರು ಎಂದು ಘೋಷಿಸಿಕೊಳ್ಳುವ ‘ಮಾರ್ಕೆಟಿಂಗ್ ವ್ಯಕ್ತಿ’ ಎಂದು ಲೇವಡಿ ಮಾಡಿದ ರಮೇಶ್, ‘ಒಬ್ಬ ವ್ಯಕ್ತಿಯು ಗೌರವವನ್ನು ಬಯಸಿದರೆ, ಆತ ಗೌರವಯುತವಾಗಿ ವರ್ತಿಸಬೇಕು’ ಎಂದು ಹೇಳಿದ್ದರು. ಅವರು ಪ್ರಜಾಸತ್ತಾತ್ಮಕವಾಗಿ ಚುನಾಯಿತ ವ್ಯಕ್ತಿ, ಆದರೆ ಅವರ ವ್ಯಕ್ತಿತ್ವ ಮತ್ತು ಅವರ ಕೆಲಸವು ಸಂಪೂರ್ಣವಾಗಿ ಅನ್ಯಾಯವಾಗಿದೆ. ಅವರು ಮಾರ್ಕೆಟಿಂಗ್ ಮತ್ತು ಬ್ರಾಂಡಿಂಗ್‌ಗಾಗಿ ಅಲ್ಲಿ ಕುಳಿತುಕೊಂಡಿದ್ದಾರೆ; ಸ್ವಯಂ ಘೋಷಿತ ವಿಶ್ವಗುರು ಆಗಿದ್ದಾರೆ. ನಾವು ಪ್ರಧಾನಿ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಒಬ್ಬ ವ್ಯಕ್ತಿ ಗೌರವವನ್ನು ಬಯಸಿದರೆ, ಅವರು ಗೌರವಯುತವಾಗಿ ವರ್ತಿಸಬೇಕು’ ಎಂದು ಅವರು ಹೇಳಿದ್ದರು.

ಇದನ್ನು ಓದಿ: ‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...