Homeಮುಖಪುಟ'ಮೋದಿ ಕಾ ಅಸಲಿ ಪರಿವಾರ್': ಪೋಸ್ಟರ್‌ ವಿರುದ್ಧ ಎಫ್‌ಐಆರ್‌

‘ಮೋದಿ ಕಾ ಅಸಲಿ ಪರಿವಾರ್’: ಪೋಸ್ಟರ್‌ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವಿರುವ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಪೋಸ್ಟರ್‌ಗಳು “ಮೋದಿ ಕಾ ಅಸಲಿ ಪರಿವಾರ್” (ಮೋದಿಯವರ ನಿಜವಾದ ಕುಟುಂಬ) ಎಂಬ ಶೀರ್ಷಿಕೆಯನ್ನು ಹೊಂದಿದ್ದು, ಕೆಳಭಾಗದಲ್ಲಿ ‘ಭಾರತೀಯ ಯುವ ಕಾಂಗ್ರೆಸ್’ ಎಂದು ಬರೆಯಲಾಗಿದೆ. ಈ ಕುರಿತು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದಿಲ್ಲಿ ಪ್ರಿವೆನ್ಶನ್‌ ಆಫ್‌ ಡಿಫೇಸ್‌ಮೆಂಟ್‌ ಆಫ್‌ ಪ್ರಾಪರ್ಟಿ ಆಕ್ಟ್‌ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಪೋಸ್ಟರ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ನವದೆಹಲಿ ಮುನ್ಸಿಪಲ್ ಕೌನ್ಸಿಲ್‌ನ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪೋಸ್ಟರ್‌ಗಳಲ್ಲಿ ಪ್ರಕಾಶಕರ ಹೆಸರು ಅಥವಾ ಅದನ್ನು ಹಾಕಿದ ವ್ಯಕ್ತಿಯ ಹೆಸರಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಟ್ನಾದಲ್ಲಿ ಕಳೆದ ರವಿವಾರ ನಡೆದ ಸಮಾವೇಶದಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಅವರು ಪ್ರಧಾನಿ ಮೋದಿಗೆ ಕುಟುಂಬವಿಲ್ಲ ಎಂದು ಹೇಳಿದ್ದಕ್ಕೆ ಪ್ರತಿಯಾಗಿ ಸೋಮವಾರ ಪ್ರತಿಕ್ರಿಯಿಸಿದ್ದ ಪ್ರಧಾನಿ, 140 ಕೋಟಿ ದೇಶವಾಸಿಗಳು ನನ್ನ ಪರಿವಾರ ಎಂದಿದ್ದರು. ಇದರ ಬೆನ್ನಲ್ಲೇ ಹಲವು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಜಾಲತಾಣ ಹ್ಯಾಂಡಲ್‌ಗಳ ಬಯೋದಲ್ಲಿ ʼಮೋದಿ ಕಾ ಪರಿವಾರ್‌ʼ ಎಂದು ಸೇರಿಸಿದ್ದರು. ಹಲವಾರು ಬಿಜೆಪಿ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಲ್ಲಿ “ಮೋದಿ ಕಾ ಪರಿವಾರ್” ಎಂದು ಸೇರಿಸಿರುವುದರಿಂದ, ಪರಾರಿಯಾಗಿರುವ ಉದ್ಯಮಿಗಳಾದ ನೀರವ್ ಮೋದಿ ಮತ್ತು ವಿಜಯ್ ಮಲ್ಯ ಕೂಡ ಅವರ ಕುಟುಂಬದಲ್ಲಿದ್ದಾರೆಯೇ ಎಂದು ಕಾಂಗ್ರೆಸ್ ಮಂಗಳವಾರ ಕೇಳಿತ್ತು.

ಈ ಮೊದಲು ‘ಮೋದಿ ಕಾ ಪರಿವಾರ್’ ಅಭಿಯಾನಕ್ಕೆ ಕಾಂಗ್ರೆಸ್‌ ತಿರುಗೇಟು ನೀಡಿತ್ತು, ‘ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸ್ಥಿರತೆಗಳು ಮತ್ತು ಧ್ರುವೀಕರಣದಿಂದ ಅವರ ಆಡಳಿತದ ಕೊನೆಯ ದಶಕವು ನಿರಂತರ ಸಮಸ್ಯೆಗಳಿಂದಾಗಿ ಅವರ ಸ್ವಂತ ಕುಟುಂಬಕ್ಕೆ (ನಾಗರಿಕರಿಗೆ) ಅನ್ಯಾಯ ಕಾಲ’ ಎಂದು ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಹೇಳಿದ್ದರು.

ನಮ್ಮ ಆದ್ಯತೆಯು ಸಹ ನಮ್ಮ ದೇಶದ ಜನರು; ನಾವು ಹಣದುಬ್ಬರ, ನಿರುದ್ಯೋಗ, ಆರ್ಥಿಕ ಅಸ್ಥಿರತೆ ಮತ್ತು ಧ್ರುವೀಕರಣದ ವಿರುದ್ಧ ಧ್ವನಿ ಎತ್ತುತ್ತಿದ್ದೇವೆ. 140 ಕೋಟಿ ಭಾರತೀಯರು ಅವರ ಕುಟುಂಬವಾಗಿದ್ದರೆ, ಅವರು ಅವರ ನಂಬಿಕೆಯನ್ನು ಏಕೆ ಮುರಿದರು? ಅವರು ಏಕೆ ಜನರಿಗೆ ಅನ್ಯಾಯ ಮಾಡಿದ್ದಾರೆ? ಕಳೆದ 10 ವರ್ಷಗಳು ಅವರ ಸ್ವಂತ ಕುಟುಂಬಕ್ಕೆ ‘ಅನ್ಯಾಯ ಕಾಲ’ ಎಂದು ಜೈರಾಮ್ ರಮೇಶ್ ವಾಗ್ದಾಳಿ ನಡೆಸಿದ್ದರು. ಪ್ರಧಾನಿಯನ್ನು ವಿಶ್ವಗುರು ಎಂದು ಘೋಷಿಸಿಕೊಳ್ಳುವ ‘ಮಾರ್ಕೆಟಿಂಗ್ ವ್ಯಕ್ತಿ’ ಎಂದು ಲೇವಡಿ ಮಾಡಿದ ರಮೇಶ್, ‘ಒಬ್ಬ ವ್ಯಕ್ತಿಯು ಗೌರವವನ್ನು ಬಯಸಿದರೆ, ಆತ ಗೌರವಯುತವಾಗಿ ವರ್ತಿಸಬೇಕು’ ಎಂದು ಹೇಳಿದ್ದರು. ಅವರು ಪ್ರಜಾಸತ್ತಾತ್ಮಕವಾಗಿ ಚುನಾಯಿತ ವ್ಯಕ್ತಿ, ಆದರೆ ಅವರ ವ್ಯಕ್ತಿತ್ವ ಮತ್ತು ಅವರ ಕೆಲಸವು ಸಂಪೂರ್ಣವಾಗಿ ಅನ್ಯಾಯವಾಗಿದೆ. ಅವರು ಮಾರ್ಕೆಟಿಂಗ್ ಮತ್ತು ಬ್ರಾಂಡಿಂಗ್‌ಗಾಗಿ ಅಲ್ಲಿ ಕುಳಿತುಕೊಂಡಿದ್ದಾರೆ; ಸ್ವಯಂ ಘೋಷಿತ ವಿಶ್ವಗುರು ಆಗಿದ್ದಾರೆ. ನಾವು ಪ್ರಧಾನಿ ಹುದ್ದೆಯನ್ನು ಗೌರವಿಸುತ್ತೇವೆ. ಆದರೆ ಒಬ್ಬ ವ್ಯಕ್ತಿ ಗೌರವವನ್ನು ಬಯಸಿದರೆ, ಅವರು ಗೌರವಯುತವಾಗಿ ವರ್ತಿಸಬೇಕು’ ಎಂದು ಅವರು ಹೇಳಿದ್ದರು.

ಇದನ್ನು ಓದಿ: ‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...