Homeಮುಖಪುಟಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಆಪಾದಿತ ಮದ್ಯದ ಹಗರಣದ ಬಗ್ಗೆ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷವಾಗಿದೆ, ದೆಹಲಿ ಲೆಫ್ಟಿನೆಂಟ್ ಗವರ್ನರ್‌, ಬಿಜೆಪಿ ನಾಯಕರನ್ನು ಪ್ರಕರಣದಲ್ಲಿ ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.

ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನಿಂದ ಹೊರಗಿರುವ ಸಂಜಯ್ ಸಿಂಗ್, ಬಿಜೆಪಿ ಖಾತೆಯಲ್ಲಿ 55 ಕೋಟಿ ಹಣದ ಜಾಡು ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ‘ಉಪವಾಸ ದಿವಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಎಎಪಿ ನಾಯಕ ಸಂಜಯ್ ಸಿಂಗ್, ಪ್ರಕರಣದಲ್ಲಿ ಬಂಧಿತರಾಗಿರುವ ಅರಬಿಂದೋ ಫಾರ್ಮಾದ ನಿರ್ದೇಶಕ ಮತ್ತು ಪ್ರವರ್ತಕ ಶರತ್ ಚಂದ್ರ ರೆಡ್ಡಿ ಅವರು ನೀಡಿದ ದೇಣಿಗೆಯನ್ನು ಉಲ್ಲೇಖಿಸಿದ್ದಾರೆ, ನಂತರ ರೆಡ್ಡಿ ಪ್ರಕರಣದಲ್ಲಿ ಅನುಮೋದಿತರಾಗಿ ಜಾಮೀನು ಪಡೆದಿದ್ದಾರೆ. ದೆಹಲಿಯ ಲೆಪ್ಟಿನೆಂಟ್‌ ಗವರ್ನರ್‌ಗೆ ನೈತಿಕತೆ ಇದ್ದರೆ, ಪತ್ರ ಬರೆಯಿರಿ, ಬಿಜೆಪಿ ನಾಯಕರನ್ನು ಕಂಬಿ ಹಿಂದೆ ಹಾಕಿ, ಅವರು ಮದ್ಯದ ಹಗರಣವನ್ನು ಮಾಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಬಿಜೆಪಿಯನ್ನು ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ ಎಂದು ಕರೆದಿರುವ ಸಂಜಯ್‌ ಸಿಂಗ್‌, ‘ಮೋದಿ ಕಿ ಗ್ಯಾರಂಟಿ’ ಎಂಬ ಘೋಷಣೆಯನ್ನು ಲೇವಡಿ ಮಾಡಿದ್ದಾರೆ. ಎಲ್ಲಾ ಭ್ರಷ್ಟ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಭರವಸೆಯನ್ನು ಮೋದಿ ನೀಡುತ್ತಾರೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂಬ ಬಿಜೆಪಿಯ ಬೇಡಿಕೆಯನ್ನು ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್ ತಿರಸ್ಕರಿಸಿದ್ದು, ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಸುಳ್ಳು ಆರೋಪದ ಮೇಲೆ ಜೈಲಿಗೆ ಹಾಕಿದರೆ ಅವರು ರಾಜೀನಾಮೆ ಸಲ್ಲಿಸಬೇಕು ಎಂದು ಎಲ್ಲಿ ಬರೆಯಲಾಗಿದೆ ಎಂಬುದನ್ನು ನನಗೆ ತೋರಿಸಿ. ಕಳೆದ ಒಂದು ವರ್ಷದಿಂದ ಎಎಪಿ ನಾಯಕರಿಗೆ ಜಾಮೀನು ಸಿಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿಯ ಉನ್ನತ ನಾಯಕರು ಭಾನುವಾರ ಜಂತರ್ ಮಂತರ್‌ನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಇದಲ್ಲದೆ ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ಎಎಪಿ ನಾಯಕರು ತಿಳಿಸಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...