Homeಮುಖಪುಟಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಆಪಾದಿತ ಮದ್ಯದ ಹಗರಣದ ಬಗ್ಗೆ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷವಾಗಿದೆ, ದೆಹಲಿ ಲೆಫ್ಟಿನೆಂಟ್ ಗವರ್ನರ್‌, ಬಿಜೆಪಿ ನಾಯಕರನ್ನು ಪ್ರಕರಣದಲ್ಲಿ ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.

ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನಿಂದ ಹೊರಗಿರುವ ಸಂಜಯ್ ಸಿಂಗ್, ಬಿಜೆಪಿ ಖಾತೆಯಲ್ಲಿ 55 ಕೋಟಿ ಹಣದ ಜಾಡು ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ‘ಉಪವಾಸ ದಿವಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಎಎಪಿ ನಾಯಕ ಸಂಜಯ್ ಸಿಂಗ್, ಪ್ರಕರಣದಲ್ಲಿ ಬಂಧಿತರಾಗಿರುವ ಅರಬಿಂದೋ ಫಾರ್ಮಾದ ನಿರ್ದೇಶಕ ಮತ್ತು ಪ್ರವರ್ತಕ ಶರತ್ ಚಂದ್ರ ರೆಡ್ಡಿ ಅವರು ನೀಡಿದ ದೇಣಿಗೆಯನ್ನು ಉಲ್ಲೇಖಿಸಿದ್ದಾರೆ, ನಂತರ ರೆಡ್ಡಿ ಪ್ರಕರಣದಲ್ಲಿ ಅನುಮೋದಿತರಾಗಿ ಜಾಮೀನು ಪಡೆದಿದ್ದಾರೆ. ದೆಹಲಿಯ ಲೆಪ್ಟಿನೆಂಟ್‌ ಗವರ್ನರ್‌ಗೆ ನೈತಿಕತೆ ಇದ್ದರೆ, ಪತ್ರ ಬರೆಯಿರಿ, ಬಿಜೆಪಿ ನಾಯಕರನ್ನು ಕಂಬಿ ಹಿಂದೆ ಹಾಕಿ, ಅವರು ಮದ್ಯದ ಹಗರಣವನ್ನು ಮಾಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಬಿಜೆಪಿಯನ್ನು ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ ಎಂದು ಕರೆದಿರುವ ಸಂಜಯ್‌ ಸಿಂಗ್‌, ‘ಮೋದಿ ಕಿ ಗ್ಯಾರಂಟಿ’ ಎಂಬ ಘೋಷಣೆಯನ್ನು ಲೇವಡಿ ಮಾಡಿದ್ದಾರೆ. ಎಲ್ಲಾ ಭ್ರಷ್ಟ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಭರವಸೆಯನ್ನು ಮೋದಿ ನೀಡುತ್ತಾರೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂಬ ಬಿಜೆಪಿಯ ಬೇಡಿಕೆಯನ್ನು ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್ ತಿರಸ್ಕರಿಸಿದ್ದು, ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಸುಳ್ಳು ಆರೋಪದ ಮೇಲೆ ಜೈಲಿಗೆ ಹಾಕಿದರೆ ಅವರು ರಾಜೀನಾಮೆ ಸಲ್ಲಿಸಬೇಕು ಎಂದು ಎಲ್ಲಿ ಬರೆಯಲಾಗಿದೆ ಎಂಬುದನ್ನು ನನಗೆ ತೋರಿಸಿ. ಕಳೆದ ಒಂದು ವರ್ಷದಿಂದ ಎಎಪಿ ನಾಯಕರಿಗೆ ಜಾಮೀನು ಸಿಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿಯ ಉನ್ನತ ನಾಯಕರು ಭಾನುವಾರ ಜಂತರ್ ಮಂತರ್‌ನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಇದಲ್ಲದೆ ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ಎಎಪಿ ನಾಯಕರು ತಿಳಿಸಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...