Homeಮುಖಪುಟಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ: ಸಂಜಯ್ ಸಿಂಗ್ ವಾಗ್ಧಾಳಿ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಅವರು ಆಪಾದಿತ ಮದ್ಯದ ಹಗರಣದ ಬಗ್ಗೆ ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಬಿಜೆಪಿ ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷವಾಗಿದೆ, ದೆಹಲಿ ಲೆಫ್ಟಿನೆಂಟ್ ಗವರ್ನರ್‌, ಬಿಜೆಪಿ ನಾಯಕರನ್ನು ಪ್ರಕರಣದಲ್ಲಿ ಜೈಲಿಗಟ್ಟಬೇಕು ಎಂದು ಹೇಳಿದ್ದಾರೆ.

ಈಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನಿನಿಂದ ಹೊರಗಿರುವ ಸಂಜಯ್ ಸಿಂಗ್, ಬಿಜೆಪಿ ಖಾತೆಯಲ್ಲಿ 55 ಕೋಟಿ ಹಣದ ಜಾಡು ಪತ್ತೆಯಾಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ‘ಉಪವಾಸ ದಿವಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಎಎಪಿ ನಾಯಕ ಸಂಜಯ್ ಸಿಂಗ್, ಪ್ರಕರಣದಲ್ಲಿ ಬಂಧಿತರಾಗಿರುವ ಅರಬಿಂದೋ ಫಾರ್ಮಾದ ನಿರ್ದೇಶಕ ಮತ್ತು ಪ್ರವರ್ತಕ ಶರತ್ ಚಂದ್ರ ರೆಡ್ಡಿ ಅವರು ನೀಡಿದ ದೇಣಿಗೆಯನ್ನು ಉಲ್ಲೇಖಿಸಿದ್ದಾರೆ, ನಂತರ ರೆಡ್ಡಿ ಪ್ರಕರಣದಲ್ಲಿ ಅನುಮೋದಿತರಾಗಿ ಜಾಮೀನು ಪಡೆದಿದ್ದಾರೆ. ದೆಹಲಿಯ ಲೆಪ್ಟಿನೆಂಟ್‌ ಗವರ್ನರ್‌ಗೆ ನೈತಿಕತೆ ಇದ್ದರೆ, ಪತ್ರ ಬರೆಯಿರಿ, ಬಿಜೆಪಿ ನಾಯಕರನ್ನು ಕಂಬಿ ಹಿಂದೆ ಹಾಕಿ, ಅವರು ಮದ್ಯದ ಹಗರಣವನ್ನು ಮಾಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಬಿಜೆಪಿಯನ್ನು ಸ್ವತಂತ್ರ ಭಾರತದ ಅತ್ಯಂತ ಭ್ರಷ್ಟ ಪಕ್ಷ ಎಂದು ಕರೆದಿರುವ ಸಂಜಯ್‌ ಸಿಂಗ್‌, ‘ಮೋದಿ ಕಿ ಗ್ಯಾರಂಟಿ’ ಎಂಬ ಘೋಷಣೆಯನ್ನು ಲೇವಡಿ ಮಾಡಿದ್ದಾರೆ. ಎಲ್ಲಾ ಭ್ರಷ್ಟ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಭರವಸೆಯನ್ನು ಮೋದಿ ನೀಡುತ್ತಾರೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ನೀಡಬೇಕು ಎಂಬ ಬಿಜೆಪಿಯ ಬೇಡಿಕೆಯನ್ನು ರಾಜ್ಯಸಭಾ ಸದಸ್ಯ ಸಂಜಯ್‌ ಸಿಂಗ್ ತಿರಸ್ಕರಿಸಿದ್ದು, ಪ್ರಾಮಾಣಿಕ ಮುಖ್ಯಮಂತ್ರಿಯನ್ನು ಸುಳ್ಳು ಆರೋಪದ ಮೇಲೆ ಜೈಲಿಗೆ ಹಾಕಿದರೆ ಅವರು ರಾಜೀನಾಮೆ ಸಲ್ಲಿಸಬೇಕು ಎಂದು ಎಲ್ಲಿ ಬರೆಯಲಾಗಿದೆ ಎಂಬುದನ್ನು ನನಗೆ ತೋರಿಸಿ. ಕಳೆದ ಒಂದು ವರ್ಷದಿಂದ ಎಎಪಿ ನಾಯಕರಿಗೆ ಜಾಮೀನು ಸಿಗುತ್ತಿಲ್ಲ ಎಂದು ಸಿಂಗ್ ಹೇಳಿದ್ದಾರೆ.

ಎಎಪಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಎಎಪಿಯ ಉನ್ನತ ನಾಯಕರು ಭಾನುವಾರ ಜಂತರ್ ಮಂತರ್‌ನಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಇದಲ್ಲದೆ ಏಕಕಾಲದಲ್ಲಿ ಭಾರತದ 25 ರಾಜ್ಯಗಳಲ್ಲಿ ಮತ್ತು ನ್ಯೂಯಾರ್ಕ್, ಬೋಸ್ಟನ್, ಟೊರೊಂಟೊ, ವಾಷಿಂಗ್ಟನ್ ಡಿಸಿ, ಮೆಲ್ಬೋರ್ನ್ ಮತ್ತು ಲಂಡನ್ ಸೇರಿದಂತೆ ಪ್ರಮುಖ ಅಂತರಾಷ್ಟ್ರೀಯ ಕೇಂದ್ರಗಳಲ್ಲಿ ಎಎಪಿ ಬೆಂಬಲಿಗರು ಸಾಮೂಹಿಕ ಉಪವಾಸದ ಮೂಲಕ ಕೇಜ್ರಿವಾಲ್‌ಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಲಿದ್ದಾರೆ ಎಂದು ಎಎಪಿ ನಾಯಕರು ತಿಳಿಸಿದ್ದಾರೆ.

ಇದನ್ನು ಓದಿ: ಕೇಜ್ರಿವಾಲ್‌ ಬಂಧನ ಖಂಡಿಸಿ ಎಎಪಿಯಿಂದ ಸಾಮೂಹಿಕ ಉಪವಾಸ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...