Homeರಾಷ್ಟ್ರೀಯಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

- Advertisement -
- Advertisement -

ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ‘ದೇಶದ್ರೋಹ’ ಕಾನೂನು(ಸೆಕ್ಷನ್ 124 ಎ)ನ್ನು ಶನಿವಾರದಂದು ಸಮರ್ಥಿಸಿಕೊಂಡಿದ್ದು, ಅದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ವಜಾಗೊಳಿಸುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದೆ. ಬ್ರಿಟೀಷ್‌‌ ವಸಾಹತುಶಾಹಿ ಯುಗದ ಕಾನೂನಾಗಿರುವ ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ.

ಒಕ್ಕೂಟ ಸರ್ಕಾರವು ದೇಶದ್ರೋಹ ಕಾನೂನನ್ನು ಸಮರ್ಥಿಸಿ ಸುಪ್ರೀಂಕೋರ್ಟ್‌  ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠಕ್ಕೆ ಸಲ್ಲಿಸಿದ ಲಿಖಿತ ಹೇಳಿಕೆಯಲ್ಲಿ, ‘‘ದೇಶದ್ರೋಹ ಕಾನೂನನ್ನು ಎತ್ತಿಹಿಡಿಯುವ ‘ಕೇದಾರನಾಥ ಸಿಂಗ್ v/s ಬಿಹಾರ ರಾಜ್ಯ’ ಪ್ರಕರಣದಲ್ಲಿ ನೀಡಲಾದ ತೀರ್ಪು ಸರಿಯಾಗಿದೆ. ತ್ರಿಸದಸ್ಯ ಪೀಠವು ಕಾನೂನಿನ ಸಿಂಧುತ್ವವನ್ನು ಪರಿಶೀಲಿಸಲು ಸಾಧ್ಯವಿಲ್ಲ’’ ಎಂದು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಸಾಂವಿಧಾನಿಕ ಪೀಠವು ಈಗಾಗಲೇ ಸಮಾನತೆಯ ಹಕ್ಕು ಮತ್ತು ಬದುಕುವ ಹಕ್ಕಿನಂತಹ ಮೂಲಭೂತ ಹಕ್ಕುಗಳ ಸಂದರ್ಭದಲ್ಲಿ ದೇಶದ್ರೋಹ ಕಾನೂನಿನ (ಸೆಕ್ಷನ್ 124 ಎ) ಎಲ್ಲಾ ಅಂಶಗಳನ್ನು ಪರಿಶೀಲಿಸಿದೆ” ಎಂದು ಬಿಜೆಪಿ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೇಳಿದೆ.

ಇದನ್ನೂ ಓದಿ: ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ,  ನಿವೃತ್ತ ಸೇನಾ ಜನರಲ್ ಎಸ್.ಜಿ.ಒಂಬತ್ಕೆರೆ, ತೃಣಮೂಲ ಸಂಸದೆ ಮಹುವಾ ಮೊಯಿತ್ರಾ ಸೇರಿದಂತೆ ಐದು ಅರ್ಜಿಗಳು ದೇಶದ್ರೋಹ ಕಾನೂನನ್ನು ಪ್ರಶ್ನಿಸಿ ಅರ್ಜಿಗಳನ್ನು ಸಲ್ಲಿಸಿವೆ.

ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಮತ್ತು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ತ್ರಿಸದಸ್ಯ ವಿಶೇಷ ಪೀಠವು ಮಂಗಳವಾರ ದೇಶದ್ರೋಹದ ಕಾನೂನಿನ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳನ್ನು ಆಲಿಸಲಿದೆ.

ಕಳೆದ ವರ್ಷ ಜುಲೈನಲ್ಲಿ ದೇಶದ್ರೋಹ ಕಾನೂನಿನ ಭಾರಿ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿತ್ತು. “ಸ್ವಾತಂತ್ರ್ಯ ಚಳವಳಿಯನ್ನು ಹತ್ತಿಕ್ಕಲು ಬೇಕಾಗಿ ಮತ್ತು ಮಹಾತ್ಮಾ ಗಾಂಧಿಯಂತಹ ಜನರನ್ನು ಮೌನಗೊಳಿಸಲು ಬೇಕಾಗಿ ಬ್ರಿಟಿಷರು ಬಳಸಿದ ಕಾನೂನನ್ನು ಇನ್ನೂ ಯಾಕೆ ರದ್ದುಗೊಳಿಸುತ್ತಿಲ್ಲ” ಎಂದು ಕೋರ್ಟ್‌ ಒಕ್ಕೂಟ ಸರ್ಕಾರವನ್ನು ಕೇಳಿತ್ತು.

ಇದನ್ನೂ ಓದಿ: ಮಣಿಪುರ: ಹಿಂದಿ ಹೇರಿಕೆ ಖಂಡಿಸಿ ಶಾರನ್ನು ಟೀಕಿಸಿದ್ದಕ್ಕೆ ಕಾಂಗ್ರೆಸ್‌ ವಕ್ತಾರನ ಮೇಲೆ ದೇಶದ್ರೋಹ ಪ್ರಕರಣ ದಾಖಲು

“ದೇಶದ್ರೋಹ ಕಾನೂನು ವಸಾಹತುಶಾಹಿ ಕಾನೂನು. ಇದು ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಇದನ್ನು ಮಹಾತ್ಮ ಗಾಂಧಿ, ತಿಲಕ್ ವಿರುದ್ಧ ಬಳಸಲಾಗಿದೆ … ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೇ?” ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಮೌಖಿಕವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೊಂದಿಗೆ ಮೌಖಿಕವಾಗಿ ಹೇಳಿತ್ತು.

ದೇಶದ್ರೋಹ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದರು. “ದೇಶದ್ರೋಹದ ಬಳಕೆಯು ಬಡಗಿಗೆ ಮರದ ತುಂಡನ್ನು ಕತ್ತರಿಸಲು ಗರಗಸವನ್ನು ನೀಡಿದಂತೆ ಮತ್ತು ಅವನು ಅದನ್ನು ಇಡೀ ಕಾಡನ್ನೇ ಕತ್ತರಿಸಲು ಬಳಸುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ವಾಗ್ದಾಳಿ ನಡೆಸಿದ್ದರು.

“ನೀವು ಐಪಿಸಿಯ ಈ ಸೆಕ್ಷನ್ 124 ಎ ಬಳಕೆಯ ಇತಿಹಾಸವನ್ನು ನೋಡಿದರೆ, ಇದರಲ್ಲಿ ಶಿಕ್ಷೆಗೆ ಒಳಗಾಗಿರುವವರ ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ಆಡಳಿತಗಾರರು ಈ ಅಧಿಕಾರದ ದುರುಪಯೋಗದ ಸಾಧ್ಯತೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆ ಬಗ್ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲಿಸಲು ಸಮ್ಮತಿಸಿರುವ ನ್ಯಾಯಾಲಯವು, ದೇಶದ್ರೋಹ ಕಾನೂನಿನ ದುರುಪಯೋಗದಿಂದ ಪ್ರಕರಣಗಳು ಹೆಚ್ಚುತ್ತಿವೆ, ಇದು ತನ್ನ ಮುಖ್ಯ ಕಾಳಜಿಯಾಗಿದೆ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...