Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...