Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...