Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...