Homeನಿಜವೋ ಸುಳ್ಳೋಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

ಮೋದಿ ಸಂದರ್ಶನ: ಜಮ್ಮುವಿನಿಂದ ಜಾಬ್ಸ್ ವರೆಗೆ ಬರೀ ಸುಳ್ಳುಗಳ ಮೆರವಣಿಗೆ!

- Advertisement -
- Advertisement -

| ಮಲ್ಲಿ |

ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿ ಸಾರ್ವಜನಿಕ ವೇದಿಕೆಗಳ ಮೂಲಕ ಪದೇ ಪದೇ ಸುಳ್ಳುಗಳನ್ನು ಹೇಳುತ್ತ ಬಂದಿದ್ದು, ಈಗವರು ಆಯ್ದ ಚಾನೆಲ್‍ಗಳಲ್ಲಿ ಸಂದರ್ಶನ ನೀಡುತ್ತ, ತಮ್ಮ ಸರ್ಕಾರದ ಗೃಹ ಇಲಾಖೆಯ ಅಂಕಿಅಂಶಗಳನ್ನೇ ಮರೆಮಾಚಿ ಸುಳ್ಳು ಹೇಳುತ್ತಾರೆ. ಎದುರಿಗೆ ಪ್ರಶ್ನೆ ಕೇಳಲು ಕೂತ ಭೂಪರು ಗೋಣು ಹಾಕುತ್ತಾರೆ. ಈ ಸುಳ್ಳುಗಳ ಜೊತೆಗೆ ದೇಶಭಕ್ತಿಯ ಕುರಿತಾಗಿ ಪ್ರಧಾನಿ ನಿರರ್ಗಳವಾಗಿ ಬೊಗಳೆ ಬಿಡುತ್ತಾರೆ.
ರಫೆಲ್ ಕುರಿತು ಕೇಳಿದ ಪ್ರಶ್ನೆಗಳಿಗೆ ಚಾನೆಲ್ ವಿರುದ್ಧವೇ ಸಿಟ್ಟಾದ ಪ್ರಧಾನಿ, ಇದನ್ನೇ ನೆಪ ಮಾಡಿಕೊಂಡು ರಫೆಲ್‍ಗೆ ತಾವೇ ಕ್ಲೀನ್‍ಚಿಟ್ ಕೊಟ್ಟುಕೊಂಡರು. ಇದು ಕೂಡ ನಾಟಕೀಯವಾಗಿಯೇ ಇತ್ತು. ಮತ್ತು ಪೂರ್ವಯೋಜಿತವಾಗಿತ್ತು.

ನಿನ್ನೆ ಏಪ್ರಿಲ್ 5ರಂದು ಎಬಿಪಿ ನ್ಯೂಸ್ ಚಾನೆಲ್‍ನಲ್ಲಿ ಈ ಸಂದರ್ಶನ ಪ್ರಸಾರವಾಗಿದ್ದು, ಅವರು ಮಾಡಿರುವ ಸುಳ್ಳು ಕ್ಲೈಮ್‍ಗಳನ್ನು ಮತ್ತು ವಾಸ್ತವವನ್ನು ನಿಮ್ಮ ಮುಂದಿಡುತ್ತಿದ್ದೇವೆ. 75 ನಿಮಿಷಗಳ ಈ ಸಂದರ್ಶನದಲ್ಲಿ ಸತ್ಯದ ತಲೆ ಮೇಲೆ ಹೊಡೆದಂತಿರುವ ಸುಳ್ಳುಗಳನ್ನು ಇಲ್ಲಿ ಆಯ್ದು ನೀಡಲಾಗಿದೆ.

ಮೋದಿ ಮಿಥ್ಯ: “ಈಗ ಜಮ್ಮು ಕಾಶ್ಮೀರದಲ್ಲಿ ಮೊದಲು ನಡೆಯುತ್ತಿದ್ದ ಘಟನೆಗಳು (ಉಗ್ರರ ದಾಳಿ, ಚಟುಚಟಿಕೆ) ಈಗ ತುಂಬ ಕಡಿಮೆಯಾಗಿವೆ….”
ಸತ್ಯ: ಗೃಹ ಇಲಾಖೆಯ 2017-18ರ ವಾರ್ಷಕ ವರದಿ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ 2013-17ರ ಅವಧಿಯಲ್ಲಿ ಭಯೋತ್ಪಾದನಾ ಹಿಂಸೆಯ ಪ್ರಕರಣಗಳು ಹೆಚ್ಚಿವೆ.
ಭಯೋತ್ಪಾದನಾ ಹಿಂಸೆಯ ಘಟನೆಗಳು:
2013 : 170, 2014: 222, 2015: 208, 2016: 322, 2017: 342,
ರಾಜ್ಯಸಭೆಯಲ್ಲಿ ಸರ್ಕಾರ ನೀಡಿದ ಉತ್ತರದ ಪ್ರಕಾರ, 2018 ಜನವರಿ-ಜೂನ್: 231
ಅಂದರೆ, ಪ್ರಧಾನಿ ಹೇಳಿದಂತೆ ಅಲ್ಲಿ ಹಿಂಸಾಚಾರ ಕಡಿಮೆಯಾಗಿಲ್ಲ, ಬದಲಿಗೆ ಏರುತ್ತ ಸಾಗಿದೆ.
***

ಮೋದಿ ಮಿಥ್ಯ: ‘ಜಮ್ಮು-ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಹೆಚ್ಚಿದೆ…’
ಸತ್ಯ: 2018ರ ಲೇಟೆಸ್ಟ್ ಆರ್ಥಿಕ ಸಮೀಕ್ಷೆ ವರದಿ ಪ್ರಕಾರ, 2012ರಿಂದ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆಯಲ್ಲಿ ಕ್ರಮೇಣ ಇಳಿಮುಖವಾಗುತ್ತಿದೆ.
ಪ್ರವಾಸಿಗರ ಸಂಖ್ಯೆ:
2012: 1.25 ಕೋಟಿ, 2013: 1.09 ಕೋಟಿ, 2014: 95 ಲಕ್ಷ, 2015: 92 ಲಕ್ಷ,
2016: 84 ಲಕ್ಷ, 2017: 73 ಲಕ್ಷ
ಅಂದರೆ, ಈ ಅಧಿಕೃತ ಅಂಕಿಅಂಶದ ಪ್ರಕಾರ, ಮೋದಿ ಸುಳ್ಳು ಹೇಳ್ತಾ ಇದ್ದಾರೆ.
***

ಮೋದಿ ಮಿಥ್ಯ: ‘ತಮಿಳುನಾಡಿನಲ್ಲಿ ಅಣು ವಿದ್ಯುತ್ ಘಟಕದ ವಿರುದ್ಧ ಪ್ರತಿಭಟನೆ ನಡೆದಾಗ ಕಾಂಗ್ರೆಸ್ ದೇಶದ್ರೋಹ ಅಪಾದನೆಯ ಮೇಲೆ 6 ಸಾವಿರ ಜನರನ್ನು ಜೈಲಿಗೆ ಹಾಕಿತ್ತು…’
ಸತ್ಯ: ‘ಫಸ್ಟ್ ಪೋಸ್ಟ್’ ವರದಿಯ ಪ್ರಕಾರ, ಹಿರಿಯ ಪತ್ರಕರ್ತ ಸಯಾಮ ರಾಜಪ್ಪ ನೇತೃತ್ವದ ತಂಡದ ಅಧ್ಯಯನದ ಪ್ರಕಾರ, 2011ರ ಸೆಪ್ಟೆಂಬರ್-ಡಿಸೆಂಬರ್ ಅವಧಿಯಲ್ಲಿ ತಮಿಳುನಾಡು ಪೊಲೀಸರು ದೇಶದ್ರೋಹದ ಆರೋಪದ ಮೇಲೆ ಕೂಡುಕೂಳಂ ಅಣು ಸ್ಥಾವರದ ವಿರುದ್ಧ ಪ್ರತಿಭಟಿಸುತ್ತಿದ್ದ 6 ಸಾವಿರ ಜನರನ್ನು ಜೈಲಿಗೆ ಹಾಕಿದ್ದರು.
ಆ ಸಂದರ್ಭದಲ್ಲಿ ಅಲ್ಲಿ ಆಗ ಎಐಡಿಎಂಕೆ (ಈಗ ಬಿಜೆಪಿಯ ಮಿತ್ರ) ಅಧಿಕಾರದಲ್ಲಿತ್ತು.
ಅಂದರೆ, ಆ ಸಂದರ್ಭದಲ್ಲಿ ಡಿಎಂಕೆ-ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ. ಇಲ್ಲೂ ಪ್ರಧಾನಿ ಹಸಿಸುಳ್ಳನ್ನು ಹೇಳಿದರು.
***

ಮೋದಿ ಮಿಥ್ಯ: 4.25 ಕೋಟಿ ಜನರು ಮುದ್ರಾ ಸಾಲ ಪಡೆದಿದ್ದು, ಅವರು ಉದ್ಯಮ ಆರಂಭಿಸಿ ಎಷ್ಟೋ ಜನರಿಗೆ ಉದ್ಯೋಗ ಕೊಟ್ಟರಬಹುದಲ್ಲ…ಇದು ಉದ್ಯೋಗ ಸೃಷ್ಟಿಯಲ್ಲವೇ? ಸಿಐಐ (ವಾಣಿಜ್ಯೋದ್ಯಮ ಸಂಘ) ಪ್ರಕಾರ 6 ಕೋಟಿ ಉದ್ಯೋಗಗಳು ಸೃಷ್ಟಿಯಾಗಿವೆ.
ಸತ್ಯ: ಮೊದಲಿಗೆ ಮುದ್ರಾ ಸಾಲ ಪಡೆಯುವುದನ್ನು ಉದ್ಯೋಗ ಸೃಷ್ಟಿಗೆ ತಳುಕು ಹಾಕುವುದು ಕಷ್ಟವೇ.
ಎರಡನೇದಾಗಿ, ಸಿಎಂಐಇ (ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ) ವರದಿ ಪ್ರಕಾರ, 2016-18ರ ಅವಧಿಯಲ್ಲಿ ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ ತುಂಬ ಕಡಿಮೆ ಪ್ರಮಾಣದಲ್ಲಿದೆ.


ಕಾರ್ಮಿಕ ಸಮೂಹದ ಭಾಗವಹಿಸುವಿಕೆ ದರ:
ಸೆಪ್ಟೆಂಬರ್ 2016 : 45.98, ಸೆಪ್ಟೆಂಬರ್ 2017: 44.0, ಸೆಪ್ಟೆಂಬರ್ 2018: 42.81
ಇನ್ನೊಂದು ಕಡೆ, ಸರ್ಕಾರ ಉದ್ಯೋಗ/ನಿರುದ್ಯೋಗ ಕುರಿತ ಅಂಕಿಸಂಖ್ಯೆಗಳನ್ನು ಬಿಡುಗಡೆ ಮಾಡುತ್ತಿಲ್ಲ. ಎನ್‍ಎಸ್‍ಎಸ್‍ಒ ಅಧ್ಯಯನದ ವರದಿ ( ಸೋರಿಕೆಯಾಗಿತ್ತು) ಪ್ರಕಾರ, ಈಗ ನಿರುದ್ಯೋಗ ಪ್ರಮಾಣ ಶೇ. 6.1ರಷ್ಟಿದ್ದು, ಕಳೆದ 45 ವರ್ಷಗಳಲ್ಲೇ ಇದು ಹೆಚ್ಚಿನ ಪ್ರಮಾಣದ ನಿರುದ್ಯೋಗ ಎಂದು ವಿವರಿಸಿದೆ. ಸಿಎಂಐಇ ವರದಿ ಪ್ರಕಾರ ನಿರುದ್ಯೋಗ ಪ್ರಮಾಣ ಶೇ. 6.7
ಆದರೆ ವಾಣಿಜ್ಯೋದ್ಯಮಿಗಳ ಸಂಘದ ಲೆಕ್ಕ ಹೇಳುವ ಪ್ರಧಾನಿ, ಸರ್ಕಾರದ ಅಧಿಕೃತ ಅಂಕಿಸಂಖ್ಯೆಗಳ ಬಗ್ಗೆ ಪ್ರಸ್ತಾಪಿಸುವುದಿಲ್ಲ. ಬೀದಿಯಲ್ಲಿ ನಿಂತು ನೋಡಿದರಷ್ಟೇ ನಿರುದ್ಯೋಗದ ಭೀಕರತೆ ಅರ್ಥವಾಗುತ್ತದೆ ಮಿಸ್ಟರ್ ಪಿಎಂ!
ಸ್ಕ್ರಿಪ್ಟೆಡ್ ಸಂದರ್ಶನಗಳಲ್ಲಿ ಇವೆಲ್ಲವೂ ನಡೆಯುತ್ತವೆ. ಆದರೆ ಪ್ರೆಸ್‍ಮೀಟ್‍ನಲ್ಲಿ ನಡೆಯುವುದಿಲ್ಲ. ಹೀಗಾಗಿ ಈ ದೇಶದ ಪ್ರಧಾನಿ ಇಲ್ಲಿವರೆಗೂ ಒಂದೂ ಪ್ರೆಸ್‍ಮೀಟ್ ಮಾಡಿಲ್ಲ.
(ಆಧಾರ: ದಿ ಕ್ವಿಂಟ್ ವೆಬ್ಕೂಫ್)

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...