Homeಕರ್ನಾಟಕಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

ಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

- Advertisement -
- Advertisement -

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು 2018ರ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು, 15 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಜೆಡಿಎಸ್ 2 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2019ರ ಆಪರೇಷನ್ ಕಮಲದ ನಂತರ ನಾಲ್ಕು ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಸ್ಥಾನಗಳು 15 ಸ್ಥಾನಕ್ಕೆ ಬೆಳೆದರೆ, ಕಾಂಗ್ರೆಸ್ 12, ಜೆಡಿಎಸ್ 1 ಸ್ಥಾನಕ್ಕೆ ಕುಸಿದಿತ್ತು. ಹಲವರು ಸಚಿವರು ಇರುವ ಬೆಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2023ರ ಚುನಾವಣೆಯ ಸಮಯದಲ್ಲಿ ಎರಡು ದಿನಗಳ ರೋಡ್ ಶೋ ಮಾಡಿದ್ದರಿಂದ ಬಿಜೆಪಿ ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು.

ಆದರೆ ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 15 ಸ್ಥಾನಗಳಲ್ಲಿ ಗೆದ್ದು ಸಮಾಧಾನಕರ ಪ್ರದರ್ಶನ ತೋರಿಸಿದೆ. ಜೆಡಿಎಸ್ ಒಂದು ಸ್ಥಾನವನ್ನೂ ಗೆದ್ದಿಲ್ಲ.

  1. ಗೋವಿಂದರಾಜನಗರ: 2018ರಲ್ಲಿ ವಿ ಸೋಮಣ್ಣ ಇಲ್ಲಿನ ಶಾಸಕರಾಗಿದ್ದರು. ಬಿಜೆಪಿ ಅವರನ್ನು ಈ ಬಾರಿ ವರುಣಾ ಮತ್ತು ಚಾಮರಾಜನಗರಕ್ಕೆ ಅಭ್ಯರ್ಥಿಯನ್ನಾಗಿಸಿತ್ತು. ಎರಡೂ ಕಡೆಗಳಲ್ಲಿ ಅವರು ಸೋತಿದ್ದಾರೆ. ಗೋವಿಂದರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಉಮೇಶ್ ಶೆಟ್ಟಿ ಕಾಂಗ್ರೆಸ್‌ನ ಪ್ರಿಯಾಕೃಷ್ಣ ಎದುರು ಸೋಲು ಕಂಡಿದ್ದಾರೆ.
  2. ವಿಜಯನಗರ: ಸಿದ್ದರಾಮಯ್ಯನವರ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಎಂ ಕೃಷ್ಣಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಎಚ್ ರವೀಂದ್ರ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  3. ಚಿಕ್ಕಪೇಟೆ: ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಮರು ಆಯ್ಕೆಯಾದಿದ್ದು ಕಾಂಗ್ರೆಸ್‌ನ ಆರ್ ವಿ ದೇವರಾಜ್ ಸೋಲುಕಂಡಿದ್ದಾರೆ. ಕಾಂಗ್ರೆಸ್‍ನಿಂದ ಸಿಡಿದೆದ್ದು ಪಕ್ಷೇತರನಾಗಿ ನಿಂತಿದ್ದ ಕೆಜಿಎಫ್ ಬಾಬು ಮೂರನೇ ಸ್ಥಾನದಲ್ಲಿ ಗಣನೀಯ ಮತಗಳನ್ನು ಗಳಿಸಿದ್ದಾರೆ.
  4. ಬಸವನಗುಡಿ: ಬಿಜೆಪಿಯ ರವಿ ಸುಬ್ರಮಣ್ಯ ಕಾಂಗ್ರೆಸ್‌ನ ಯು ಬಿ ವೆಂಕಟೇಶ್ ವಿರುದ್ಧ ಭಾರಿ ಅಂತರದಲ್ಲಿ ಗೆದ್ದಿದ್ದಾರೆ.
  5. ಪದ್ಮನಾಭನಗರ: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಆರ್ ಅಶೋಕ್ ಕಾಂಗ್ರೆಸ್‌ನ ರಘುನಾಥ್ ನಾಯ್ಡು ವಿರುದ್ಧ ಗೆಲುವು ಸಾಧಿಸಿದ್ದಾರೆ.
  6. ಬಿಟಿಎಂ ಲೇಔಟ್: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯ ಕೆ ಆರ್ ಶ್ರೀಧರ ವಿರುದ್ಧ ಗೆಲುವು ಸಾಧಿಸಿದ್ದಾರೆ.
  7. ಜಯನಗರ: ಹಾಲಿ ಶಾಸಕಿ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅಲ್ಪ ಮತಗಳ (100+) ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ವಿರುದ್ಧ ಗೆಲುವು ಕಂಡಿದ್ದಾರೆ.
  8. ಬೊಮ್ಮನಹಳ್ಳಿ: ಬಿಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಕಾಂಗ್ರೆಸ್‌ನ ಉಮಾಪತಿ ಅವರ ವಿರುದ್ಧ ಸುಲಭವಾದ ಗೆಲುವು ಕಂಡಿದ್ದಾರೆ.
  9. ಯಲಹಂಕ: ಬಿಜೆಪಿಯ ವಿಶ್ವನಾಥ್ ಕಾಂಗ್ರೆಸ್‌ನ ಕೇಶವ ರಾಜಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  10. ಬ್ಯಾಟರಾಯನಪುರ: ಮಾಜಿ ಶಾಸಕ ಕಾಂಗ್ರೆಸ್‌ನ ಕೃಷ್ಣ ಭೈರೇಗೌಡ ಬಿಜೆಪಿಯ ತಮ್ಮೇಶ್ ಗೌಡ ಎದುರು ಗೆಲುವು ಕಂಡಿದ್ದಾರೆ.
  11. ಯಶವಂತಪುರ: 2019ರ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿದ್ದ ಎಸ್ ಟಿ ಸೋಮಶೇಕರ್ ಅವರು ಜೆಡಿಎಸ್‌ನ ಜವರಾಯ ರೆಡ್ಡಿ ವಿರುದ್ಧ ಪ್ರಯಾಸಕರವಾಗಿ ಗೆದ್ದಿದ್ದಾರೆ.
  12. ದಾಸರಹಳ್ಳಿ: ಬಿಜೆಪಿಯ ಎಸ್ ಮುನಿರಾಜು ಜೆಡಿಎಸ್‌ನ ಆರ್ ಮಂಜುನಾಥ್ ವಿರುದ್ಧ ಗೆದ್ದಿದ್ದಾರೆ.
  13. ಮಹದೇವಪುರ: ಬಿಜೆಪಿ ಹಾಲಿ ಶಾಸಕ ಅರವಿಂದ ಲಿಂಬಾಳಿ ಬದಲು ಅವರ ಪತ್ನಿ ಮಂಜುಳಾ ಅವರಿಗೆ ಟಿಕೆಟ್ ನೀಡಿತ್ತು. ಮಂಜುಳಾ ಕಾಂಗ್ರೆಸ್‌ನ ಎಚ್ ನಾಗೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  14. ಬೆಂಗಳೂರು ದಕ್ಷಿಣ: ಬಿಜೆಪಿಯ ಎಂ ಕೃಷ್ಣಪ್ಪ ಕಾಂಗ್ರೆಸ್‌ನ ರಮೇಶ್ ವಿರುದ್ಧ ಗೆದ್ದು ತಮ್ಮ ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ.
  15. ಸರ್ವಜ್ಞ ನಗರ: ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಎದುರಾಳಿ ಬಿಜೆಪಿಯ ಪದ್ಮನಾಭ ರೆಡ್ಡಿಯವರ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
  16. ಸಿ. ವಿ. ರಾಮನ್ ನಗರ: ಹಾಲಿ ಶಾಸಕ ಬಿಜೆಪಿಯ ಎಸ್ ರಘು ಕಾಂಗ್ರೆಸ್‌ನ ಆನಂದ್ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  17. ಶಿವಾಜಿ ನಗರ: ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಬಿಜೆಪಿಯ ಎನ್ ಚಂದ್ರ ವಿರುದ್ಧ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  18. ಶಾಂತಿ ನಗರ: ಹಾಲಿ ಶಾಸಕ ಕಾಂಗ್ರೆಸ್‌ನ ಎನ್ ಎ ಹ್ಯಾರಿಸ್ ಬಿಜೆಪಿಯ ಕೆ ಶಿವಕುಮಾರ್ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  19. ಗಾಂಧಿ ನಗರ: ಮಾಜಿ ಶಾಸಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಿಂದ ಬಿಜೆಪಿಯ ಸಪ್ತಗಿರಿ ಗೌಡ ಎದುರು ಜಯ ಸಾಧಿಸಿದ್ದಾರೆ.
  20. ರಾಜಾಜಿನಗರ: ಬಿಜೆಪಿಯ ಸುರೇಶ್ ಕುಮಾರ್, ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  21. ಚಾಮರಾಜಪೇಟೆ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಬಿಜೆಪಿಯ ಭಾಸ್ಕರ್ ರಾವ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
  22. ಹೆಬ್ಬಾಳ: ಸಿದ್ದರಾಮಯ್ಯನವರ ಆಪ್ತ ಕಾಂಗ್ರೆಸ್‌ನ ಭೈರತಿ ಸುರೇಶ್ ಬಿಜೆಪಿಯ ಕಟ್ಟ ಸುಬ್ರಮಣ್ಯ ನಾಯ್ಡು ಅವರ ಪುತ್ರ ಕಟ್ಟ ಜಗದೀಶ್ ವಿರುದ್ಧ ಗೆದ್ದಿದ್ದಾರೆ.
  23. ಆನೇಕಲ್: ಕಾಂಗ್ರೆಸ್ ಪಕ್ಷದ ಶಿವಣ್ಣ ಬಿಜೆಪಿಯ ಶ್ರೀನಿವಾಸ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  24. ಮಹಾಲಕ್ಷ್ಮಿ ಲೇಔಟ್: 2019ರ ಆಪರೇಷನ್ ಕಮಲ ಕಲಿ ಗೋಪಾಲಯ್ಯ ಕಾಂಗ್ರೆಸ್‌ನ ಕೇಶವಮೂರ್ತಿ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  25. ರಾಜರಾಜೇಶ್ವರಿ ನಗರ: ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್‌ನ ಕುಸುಮಾ 2019ರ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಮುನಿರತ್ನ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ.
  26. ಕೆ. ಆರ್. ಪುರ: 2019ರ ಆಪರೇಷನ್ ಕಮಲದಲ್ಲಿ ಬಿಜೆಪಿ ಪಾಲಾಗಿದ್ದ ಭೈರತಿ ಬಸವರಾಜ್ ಕಾಂಗ್ರೆಸ್‌ನ ಡಿ ಕೆ ಮೋಹನ್ ವಿರುದ್ಧ ಗೆಲುವುದು ಸಾಧಿಸಿದ್ದಾರೆ.
  27. ಮಲ್ಲೇಶ್ವರಂ: ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಸಿ ಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್‌ನ ಅನೂಪ್ ಅಯ್ಯಂಗಾರ್ ವಿರುದ್ಧ ಸುಲಭ ಗೆಲುವು ಸಾಧಿಸಿದ್ದಾರೆ.
  28. ಪುಲಿಕೇಶಿನಗರ: ಕಾಂಗ್ರೆಸ್ ಅಭ್ಯರ್ಥಿ ಎ ಸಿ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿ ಅಖಂಡ ಶ್ರೀನಿವಾಸ್ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Road show and other gimmicks can’t earn votes. A beautiful lesson , a clear messages sent by people of Karnataka. Only proper work can fech votes. Not lies. Really a great lesson. Hats off to all the the Kannadigas.

  2. Big lesson to bjp, Modi gimik and lies will not work on matured voters.This is caution to drama people and get packup in 2024 election

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...