Homeಕರ್ನಾಟಕಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

ಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

- Advertisement -
- Advertisement -

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು 2018ರ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು, 15 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಜೆಡಿಎಸ್ 2 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2019ರ ಆಪರೇಷನ್ ಕಮಲದ ನಂತರ ನಾಲ್ಕು ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಸ್ಥಾನಗಳು 15 ಸ್ಥಾನಕ್ಕೆ ಬೆಳೆದರೆ, ಕಾಂಗ್ರೆಸ್ 12, ಜೆಡಿಎಸ್ 1 ಸ್ಥಾನಕ್ಕೆ ಕುಸಿದಿತ್ತು. ಹಲವರು ಸಚಿವರು ಇರುವ ಬೆಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2023ರ ಚುನಾವಣೆಯ ಸಮಯದಲ್ಲಿ ಎರಡು ದಿನಗಳ ರೋಡ್ ಶೋ ಮಾಡಿದ್ದರಿಂದ ಬಿಜೆಪಿ ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು.

ಆದರೆ ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 15 ಸ್ಥಾನಗಳಲ್ಲಿ ಗೆದ್ದು ಸಮಾಧಾನಕರ ಪ್ರದರ್ಶನ ತೋರಿಸಿದೆ. ಜೆಡಿಎಸ್ ಒಂದು ಸ್ಥಾನವನ್ನೂ ಗೆದ್ದಿಲ್ಲ.

  1. ಗೋವಿಂದರಾಜನಗರ: 2018ರಲ್ಲಿ ವಿ ಸೋಮಣ್ಣ ಇಲ್ಲಿನ ಶಾಸಕರಾಗಿದ್ದರು. ಬಿಜೆಪಿ ಅವರನ್ನು ಈ ಬಾರಿ ವರುಣಾ ಮತ್ತು ಚಾಮರಾಜನಗರಕ್ಕೆ ಅಭ್ಯರ್ಥಿಯನ್ನಾಗಿಸಿತ್ತು. ಎರಡೂ ಕಡೆಗಳಲ್ಲಿ ಅವರು ಸೋತಿದ್ದಾರೆ. ಗೋವಿಂದರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಉಮೇಶ್ ಶೆಟ್ಟಿ ಕಾಂಗ್ರೆಸ್‌ನ ಪ್ರಿಯಾಕೃಷ್ಣ ಎದುರು ಸೋಲು ಕಂಡಿದ್ದಾರೆ.
  2. ವಿಜಯನಗರ: ಸಿದ್ದರಾಮಯ್ಯನವರ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಎಂ ಕೃಷ್ಣಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಎಚ್ ರವೀಂದ್ರ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  3. ಚಿಕ್ಕಪೇಟೆ: ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಮರು ಆಯ್ಕೆಯಾದಿದ್ದು ಕಾಂಗ್ರೆಸ್‌ನ ಆರ್ ವಿ ದೇವರಾಜ್ ಸೋಲುಕಂಡಿದ್ದಾರೆ. ಕಾಂಗ್ರೆಸ್‍ನಿಂದ ಸಿಡಿದೆದ್ದು ಪಕ್ಷೇತರನಾಗಿ ನಿಂತಿದ್ದ ಕೆಜಿಎಫ್ ಬಾಬು ಮೂರನೇ ಸ್ಥಾನದಲ್ಲಿ ಗಣನೀಯ ಮತಗಳನ್ನು ಗಳಿಸಿದ್ದಾರೆ.
  4. ಬಸವನಗುಡಿ: ಬಿಜೆಪಿಯ ರವಿ ಸುಬ್ರಮಣ್ಯ ಕಾಂಗ್ರೆಸ್‌ನ ಯು ಬಿ ವೆಂಕಟೇಶ್ ವಿರುದ್ಧ ಭಾರಿ ಅಂತರದಲ್ಲಿ ಗೆದ್ದಿದ್ದಾರೆ.
  5. ಪದ್ಮನಾಭನಗರ: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಆರ್ ಅಶೋಕ್ ಕಾಂಗ್ರೆಸ್‌ನ ರಘುನಾಥ್ ನಾಯ್ಡು ವಿರುದ್ಧ ಗೆಲುವು ಸಾಧಿಸಿದ್ದಾರೆ.
  6. ಬಿಟಿಎಂ ಲೇಔಟ್: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯ ಕೆ ಆರ್ ಶ್ರೀಧರ ವಿರುದ್ಧ ಗೆಲುವು ಸಾಧಿಸಿದ್ದಾರೆ.
  7. ಜಯನಗರ: ಹಾಲಿ ಶಾಸಕಿ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅಲ್ಪ ಮತಗಳ (100+) ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ವಿರುದ್ಧ ಗೆಲುವು ಕಂಡಿದ್ದಾರೆ.
  8. ಬೊಮ್ಮನಹಳ್ಳಿ: ಬಿಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಕಾಂಗ್ರೆಸ್‌ನ ಉಮಾಪತಿ ಅವರ ವಿರುದ್ಧ ಸುಲಭವಾದ ಗೆಲುವು ಕಂಡಿದ್ದಾರೆ.
  9. ಯಲಹಂಕ: ಬಿಜೆಪಿಯ ವಿಶ್ವನಾಥ್ ಕಾಂಗ್ರೆಸ್‌ನ ಕೇಶವ ರಾಜಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  10. ಬ್ಯಾಟರಾಯನಪುರ: ಮಾಜಿ ಶಾಸಕ ಕಾಂಗ್ರೆಸ್‌ನ ಕೃಷ್ಣ ಭೈರೇಗೌಡ ಬಿಜೆಪಿಯ ತಮ್ಮೇಶ್ ಗೌಡ ಎದುರು ಗೆಲುವು ಕಂಡಿದ್ದಾರೆ.
  11. ಯಶವಂತಪುರ: 2019ರ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿದ್ದ ಎಸ್ ಟಿ ಸೋಮಶೇಕರ್ ಅವರು ಜೆಡಿಎಸ್‌ನ ಜವರಾಯ ರೆಡ್ಡಿ ವಿರುದ್ಧ ಪ್ರಯಾಸಕರವಾಗಿ ಗೆದ್ದಿದ್ದಾರೆ.
  12. ದಾಸರಹಳ್ಳಿ: ಬಿಜೆಪಿಯ ಎಸ್ ಮುನಿರಾಜು ಜೆಡಿಎಸ್‌ನ ಆರ್ ಮಂಜುನಾಥ್ ವಿರುದ್ಧ ಗೆದ್ದಿದ್ದಾರೆ.
  13. ಮಹದೇವಪುರ: ಬಿಜೆಪಿ ಹಾಲಿ ಶಾಸಕ ಅರವಿಂದ ಲಿಂಬಾಳಿ ಬದಲು ಅವರ ಪತ್ನಿ ಮಂಜುಳಾ ಅವರಿಗೆ ಟಿಕೆಟ್ ನೀಡಿತ್ತು. ಮಂಜುಳಾ ಕಾಂಗ್ರೆಸ್‌ನ ಎಚ್ ನಾಗೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  14. ಬೆಂಗಳೂರು ದಕ್ಷಿಣ: ಬಿಜೆಪಿಯ ಎಂ ಕೃಷ್ಣಪ್ಪ ಕಾಂಗ್ರೆಸ್‌ನ ರಮೇಶ್ ವಿರುದ್ಧ ಗೆದ್ದು ತಮ್ಮ ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ.
  15. ಸರ್ವಜ್ಞ ನಗರ: ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಎದುರಾಳಿ ಬಿಜೆಪಿಯ ಪದ್ಮನಾಭ ರೆಡ್ಡಿಯವರ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
  16. ಸಿ. ವಿ. ರಾಮನ್ ನಗರ: ಹಾಲಿ ಶಾಸಕ ಬಿಜೆಪಿಯ ಎಸ್ ರಘು ಕಾಂಗ್ರೆಸ್‌ನ ಆನಂದ್ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  17. ಶಿವಾಜಿ ನಗರ: ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಬಿಜೆಪಿಯ ಎನ್ ಚಂದ್ರ ವಿರುದ್ಧ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  18. ಶಾಂತಿ ನಗರ: ಹಾಲಿ ಶಾಸಕ ಕಾಂಗ್ರೆಸ್‌ನ ಎನ್ ಎ ಹ್ಯಾರಿಸ್ ಬಿಜೆಪಿಯ ಕೆ ಶಿವಕುಮಾರ್ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  19. ಗಾಂಧಿ ನಗರ: ಮಾಜಿ ಶಾಸಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಿಂದ ಬಿಜೆಪಿಯ ಸಪ್ತಗಿರಿ ಗೌಡ ಎದುರು ಜಯ ಸಾಧಿಸಿದ್ದಾರೆ.
  20. ರಾಜಾಜಿನಗರ: ಬಿಜೆಪಿಯ ಸುರೇಶ್ ಕುಮಾರ್, ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  21. ಚಾಮರಾಜಪೇಟೆ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಬಿಜೆಪಿಯ ಭಾಸ್ಕರ್ ರಾವ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
  22. ಹೆಬ್ಬಾಳ: ಸಿದ್ದರಾಮಯ್ಯನವರ ಆಪ್ತ ಕಾಂಗ್ರೆಸ್‌ನ ಭೈರತಿ ಸುರೇಶ್ ಬಿಜೆಪಿಯ ಕಟ್ಟ ಸುಬ್ರಮಣ್ಯ ನಾಯ್ಡು ಅವರ ಪುತ್ರ ಕಟ್ಟ ಜಗದೀಶ್ ವಿರುದ್ಧ ಗೆದ್ದಿದ್ದಾರೆ.
  23. ಆನೇಕಲ್: ಕಾಂಗ್ರೆಸ್ ಪಕ್ಷದ ಶಿವಣ್ಣ ಬಿಜೆಪಿಯ ಶ್ರೀನಿವಾಸ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  24. ಮಹಾಲಕ್ಷ್ಮಿ ಲೇಔಟ್: 2019ರ ಆಪರೇಷನ್ ಕಮಲ ಕಲಿ ಗೋಪಾಲಯ್ಯ ಕಾಂಗ್ರೆಸ್‌ನ ಕೇಶವಮೂರ್ತಿ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  25. ರಾಜರಾಜೇಶ್ವರಿ ನಗರ: ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್‌ನ ಕುಸುಮಾ 2019ರ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಮುನಿರತ್ನ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ.
  26. ಕೆ. ಆರ್. ಪುರ: 2019ರ ಆಪರೇಷನ್ ಕಮಲದಲ್ಲಿ ಬಿಜೆಪಿ ಪಾಲಾಗಿದ್ದ ಭೈರತಿ ಬಸವರಾಜ್ ಕಾಂಗ್ರೆಸ್‌ನ ಡಿ ಕೆ ಮೋಹನ್ ವಿರುದ್ಧ ಗೆಲುವುದು ಸಾಧಿಸಿದ್ದಾರೆ.
  27. ಮಲ್ಲೇಶ್ವರಂ: ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಸಿ ಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್‌ನ ಅನೂಪ್ ಅಯ್ಯಂಗಾರ್ ವಿರುದ್ಧ ಸುಲಭ ಗೆಲುವು ಸಾಧಿಸಿದ್ದಾರೆ.
  28. ಪುಲಿಕೇಶಿನಗರ: ಕಾಂಗ್ರೆಸ್ ಅಭ್ಯರ್ಥಿ ಎ ಸಿ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿ ಅಖಂಡ ಶ್ರೀನಿವಾಸ್ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Road show and other gimmicks can’t earn votes. A beautiful lesson , a clear messages sent by people of Karnataka. Only proper work can fech votes. Not lies. Really a great lesson. Hats off to all the the Kannadigas.

  2. Big lesson to bjp, Modi gimik and lies will not work on matured voters.This is caution to drama people and get packup in 2024 election

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...