Homeಕರ್ನಾಟಕಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

ಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

- Advertisement -
- Advertisement -

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು 2018ರ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು, 15 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಜೆಡಿಎಸ್ 2 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2019ರ ಆಪರೇಷನ್ ಕಮಲದ ನಂತರ ನಾಲ್ಕು ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಸ್ಥಾನಗಳು 15 ಸ್ಥಾನಕ್ಕೆ ಬೆಳೆದರೆ, ಕಾಂಗ್ರೆಸ್ 12, ಜೆಡಿಎಸ್ 1 ಸ್ಥಾನಕ್ಕೆ ಕುಸಿದಿತ್ತು. ಹಲವರು ಸಚಿವರು ಇರುವ ಬೆಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2023ರ ಚುನಾವಣೆಯ ಸಮಯದಲ್ಲಿ ಎರಡು ದಿನಗಳ ರೋಡ್ ಶೋ ಮಾಡಿದ್ದರಿಂದ ಬಿಜೆಪಿ ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು.

ಆದರೆ ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 15 ಸ್ಥಾನಗಳಲ್ಲಿ ಗೆದ್ದು ಸಮಾಧಾನಕರ ಪ್ರದರ್ಶನ ತೋರಿಸಿದೆ. ಜೆಡಿಎಸ್ ಒಂದು ಸ್ಥಾನವನ್ನೂ ಗೆದ್ದಿಲ್ಲ.

  1. ಗೋವಿಂದರಾಜನಗರ: 2018ರಲ್ಲಿ ವಿ ಸೋಮಣ್ಣ ಇಲ್ಲಿನ ಶಾಸಕರಾಗಿದ್ದರು. ಬಿಜೆಪಿ ಅವರನ್ನು ಈ ಬಾರಿ ವರುಣಾ ಮತ್ತು ಚಾಮರಾಜನಗರಕ್ಕೆ ಅಭ್ಯರ್ಥಿಯನ್ನಾಗಿಸಿತ್ತು. ಎರಡೂ ಕಡೆಗಳಲ್ಲಿ ಅವರು ಸೋತಿದ್ದಾರೆ. ಗೋವಿಂದರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಉಮೇಶ್ ಶೆಟ್ಟಿ ಕಾಂಗ್ರೆಸ್‌ನ ಪ್ರಿಯಾಕೃಷ್ಣ ಎದುರು ಸೋಲು ಕಂಡಿದ್ದಾರೆ.
  2. ವಿಜಯನಗರ: ಸಿದ್ದರಾಮಯ್ಯನವರ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಎಂ ಕೃಷ್ಣಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಎಚ್ ರವೀಂದ್ರ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  3. ಚಿಕ್ಕಪೇಟೆ: ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಮರು ಆಯ್ಕೆಯಾದಿದ್ದು ಕಾಂಗ್ರೆಸ್‌ನ ಆರ್ ವಿ ದೇವರಾಜ್ ಸೋಲುಕಂಡಿದ್ದಾರೆ. ಕಾಂಗ್ರೆಸ್‍ನಿಂದ ಸಿಡಿದೆದ್ದು ಪಕ್ಷೇತರನಾಗಿ ನಿಂತಿದ್ದ ಕೆಜಿಎಫ್ ಬಾಬು ಮೂರನೇ ಸ್ಥಾನದಲ್ಲಿ ಗಣನೀಯ ಮತಗಳನ್ನು ಗಳಿಸಿದ್ದಾರೆ.
  4. ಬಸವನಗುಡಿ: ಬಿಜೆಪಿಯ ರವಿ ಸುಬ್ರಮಣ್ಯ ಕಾಂಗ್ರೆಸ್‌ನ ಯು ಬಿ ವೆಂಕಟೇಶ್ ವಿರುದ್ಧ ಭಾರಿ ಅಂತರದಲ್ಲಿ ಗೆದ್ದಿದ್ದಾರೆ.
  5. ಪದ್ಮನಾಭನಗರ: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಆರ್ ಅಶೋಕ್ ಕಾಂಗ್ರೆಸ್‌ನ ರಘುನಾಥ್ ನಾಯ್ಡು ವಿರುದ್ಧ ಗೆಲುವು ಸಾಧಿಸಿದ್ದಾರೆ.
  6. ಬಿಟಿಎಂ ಲೇಔಟ್: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯ ಕೆ ಆರ್ ಶ್ರೀಧರ ವಿರುದ್ಧ ಗೆಲುವು ಸಾಧಿಸಿದ್ದಾರೆ.
  7. ಜಯನಗರ: ಹಾಲಿ ಶಾಸಕಿ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅಲ್ಪ ಮತಗಳ (100+) ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ವಿರುದ್ಧ ಗೆಲುವು ಕಂಡಿದ್ದಾರೆ.
  8. ಬೊಮ್ಮನಹಳ್ಳಿ: ಬಿಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಕಾಂಗ್ರೆಸ್‌ನ ಉಮಾಪತಿ ಅವರ ವಿರುದ್ಧ ಸುಲಭವಾದ ಗೆಲುವು ಕಂಡಿದ್ದಾರೆ.
  9. ಯಲಹಂಕ: ಬಿಜೆಪಿಯ ವಿಶ್ವನಾಥ್ ಕಾಂಗ್ರೆಸ್‌ನ ಕೇಶವ ರಾಜಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  10. ಬ್ಯಾಟರಾಯನಪುರ: ಮಾಜಿ ಶಾಸಕ ಕಾಂಗ್ರೆಸ್‌ನ ಕೃಷ್ಣ ಭೈರೇಗೌಡ ಬಿಜೆಪಿಯ ತಮ್ಮೇಶ್ ಗೌಡ ಎದುರು ಗೆಲುವು ಕಂಡಿದ್ದಾರೆ.
  11. ಯಶವಂತಪುರ: 2019ರ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿದ್ದ ಎಸ್ ಟಿ ಸೋಮಶೇಕರ್ ಅವರು ಜೆಡಿಎಸ್‌ನ ಜವರಾಯ ರೆಡ್ಡಿ ವಿರುದ್ಧ ಪ್ರಯಾಸಕರವಾಗಿ ಗೆದ್ದಿದ್ದಾರೆ.
  12. ದಾಸರಹಳ್ಳಿ: ಬಿಜೆಪಿಯ ಎಸ್ ಮುನಿರಾಜು ಜೆಡಿಎಸ್‌ನ ಆರ್ ಮಂಜುನಾಥ್ ವಿರುದ್ಧ ಗೆದ್ದಿದ್ದಾರೆ.
  13. ಮಹದೇವಪುರ: ಬಿಜೆಪಿ ಹಾಲಿ ಶಾಸಕ ಅರವಿಂದ ಲಿಂಬಾಳಿ ಬದಲು ಅವರ ಪತ್ನಿ ಮಂಜುಳಾ ಅವರಿಗೆ ಟಿಕೆಟ್ ನೀಡಿತ್ತು. ಮಂಜುಳಾ ಕಾಂಗ್ರೆಸ್‌ನ ಎಚ್ ನಾಗೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  14. ಬೆಂಗಳೂರು ದಕ್ಷಿಣ: ಬಿಜೆಪಿಯ ಎಂ ಕೃಷ್ಣಪ್ಪ ಕಾಂಗ್ರೆಸ್‌ನ ರಮೇಶ್ ವಿರುದ್ಧ ಗೆದ್ದು ತಮ್ಮ ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ.
  15. ಸರ್ವಜ್ಞ ನಗರ: ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಎದುರಾಳಿ ಬಿಜೆಪಿಯ ಪದ್ಮನಾಭ ರೆಡ್ಡಿಯವರ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
  16. ಸಿ. ವಿ. ರಾಮನ್ ನಗರ: ಹಾಲಿ ಶಾಸಕ ಬಿಜೆಪಿಯ ಎಸ್ ರಘು ಕಾಂಗ್ರೆಸ್‌ನ ಆನಂದ್ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  17. ಶಿವಾಜಿ ನಗರ: ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಬಿಜೆಪಿಯ ಎನ್ ಚಂದ್ರ ವಿರುದ್ಧ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  18. ಶಾಂತಿ ನಗರ: ಹಾಲಿ ಶಾಸಕ ಕಾಂಗ್ರೆಸ್‌ನ ಎನ್ ಎ ಹ್ಯಾರಿಸ್ ಬಿಜೆಪಿಯ ಕೆ ಶಿವಕುಮಾರ್ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  19. ಗಾಂಧಿ ನಗರ: ಮಾಜಿ ಶಾಸಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಿಂದ ಬಿಜೆಪಿಯ ಸಪ್ತಗಿರಿ ಗೌಡ ಎದುರು ಜಯ ಸಾಧಿಸಿದ್ದಾರೆ.
  20. ರಾಜಾಜಿನಗರ: ಬಿಜೆಪಿಯ ಸುರೇಶ್ ಕುಮಾರ್, ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  21. ಚಾಮರಾಜಪೇಟೆ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಬಿಜೆಪಿಯ ಭಾಸ್ಕರ್ ರಾವ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
  22. ಹೆಬ್ಬಾಳ: ಸಿದ್ದರಾಮಯ್ಯನವರ ಆಪ್ತ ಕಾಂಗ್ರೆಸ್‌ನ ಭೈರತಿ ಸುರೇಶ್ ಬಿಜೆಪಿಯ ಕಟ್ಟ ಸುಬ್ರಮಣ್ಯ ನಾಯ್ಡು ಅವರ ಪುತ್ರ ಕಟ್ಟ ಜಗದೀಶ್ ವಿರುದ್ಧ ಗೆದ್ದಿದ್ದಾರೆ.
  23. ಆನೇಕಲ್: ಕಾಂಗ್ರೆಸ್ ಪಕ್ಷದ ಶಿವಣ್ಣ ಬಿಜೆಪಿಯ ಶ್ರೀನಿವಾಸ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  24. ಮಹಾಲಕ್ಷ್ಮಿ ಲೇಔಟ್: 2019ರ ಆಪರೇಷನ್ ಕಮಲ ಕಲಿ ಗೋಪಾಲಯ್ಯ ಕಾಂಗ್ರೆಸ್‌ನ ಕೇಶವಮೂರ್ತಿ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  25. ರಾಜರಾಜೇಶ್ವರಿ ನಗರ: ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್‌ನ ಕುಸುಮಾ 2019ರ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಮುನಿರತ್ನ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ.
  26. ಕೆ. ಆರ್. ಪುರ: 2019ರ ಆಪರೇಷನ್ ಕಮಲದಲ್ಲಿ ಬಿಜೆಪಿ ಪಾಲಾಗಿದ್ದ ಭೈರತಿ ಬಸವರಾಜ್ ಕಾಂಗ್ರೆಸ್‌ನ ಡಿ ಕೆ ಮೋಹನ್ ವಿರುದ್ಧ ಗೆಲುವುದು ಸಾಧಿಸಿದ್ದಾರೆ.
  27. ಮಲ್ಲೇಶ್ವರಂ: ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಸಿ ಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್‌ನ ಅನೂಪ್ ಅಯ್ಯಂಗಾರ್ ವಿರುದ್ಧ ಸುಲಭ ಗೆಲುವು ಸಾಧಿಸಿದ್ದಾರೆ.
  28. ಪುಲಿಕೇಶಿನಗರ: ಕಾಂಗ್ರೆಸ್ ಅಭ್ಯರ್ಥಿ ಎ ಸಿ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿ ಅಖಂಡ ಶ್ರೀನಿವಾಸ್ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Road show and other gimmicks can’t earn votes. A beautiful lesson , a clear messages sent by people of Karnataka. Only proper work can fech votes. Not lies. Really a great lesson. Hats off to all the the Kannadigas.

  2. Big lesson to bjp, Modi gimik and lies will not work on matured voters.This is caution to drama people and get packup in 2024 election

LEAVE A REPLY

Please enter your comment!
Please enter your name here

- Advertisment -

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...

ಮೋದಿ ಸರ್ಕಾರಕ್ಕೆ 12 ವರ್ಷ : 12 ರಿಂದ 4ಕ್ಕೆ ಇಳಿದ ಉಜ್ವಲ ಯೋಜನೆ ಸಿಲಿಂಡರ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸಿದೆ ಅಥವಾ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ 2026ರ ಜೂನ್ 9ಕ್ಕೆ ಎರಡು ವರ್ಷಗಳು ಪೂರ್ಣಗೊಂಡಿವೆ....

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...