Homeಕರ್ನಾಟಕಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

ಬೆಂಗಳೂರು ನಗರ: ಮ್ಯಾಜಿಕ್ ಮಾಡದ ಮೋದಿ ರೋಡ್ ಶೋ; ಯಥಾಸ್ಥಿತಿ ಉಳಿಸಿಕೊಂಡ ಬಿಜೆಪಿ

- Advertisement -
- Advertisement -

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು 2018ರ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು, 15 ಸ್ಥಾನಗಳನ್ನು ಕಾಂಗ್ರೆಸ್ ಮತ್ತು ಜೆಡಿಎಸ್ 2 ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಆದರೆ 2019ರ ಆಪರೇಷನ್ ಕಮಲದ ನಂತರ ನಾಲ್ಕು ಜನ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿ ಬಿಜೆಪಿ ಸ್ಥಾನಗಳು 15 ಸ್ಥಾನಕ್ಕೆ ಬೆಳೆದರೆ, ಕಾಂಗ್ರೆಸ್ 12, ಜೆಡಿಎಸ್ 1 ಸ್ಥಾನಕ್ಕೆ ಕುಸಿದಿತ್ತು. ಹಲವರು ಸಚಿವರು ಇರುವ ಬೆಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 2023ರ ಚುನಾವಣೆಯ ಸಮಯದಲ್ಲಿ ಎರಡು ದಿನಗಳ ರೋಡ್ ಶೋ ಮಾಡಿದ್ದರಿಂದ ಬಿಜೆಪಿ ಇನ್ನಷ್ಟು ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಂಡಿತ್ತು.

ಆದರೆ ಕಾಂಗ್ರೆಸ್ 13 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 15 ಸ್ಥಾನಗಳಲ್ಲಿ ಗೆದ್ದು ಸಮಾಧಾನಕರ ಪ್ರದರ್ಶನ ತೋರಿಸಿದೆ. ಜೆಡಿಎಸ್ ಒಂದು ಸ್ಥಾನವನ್ನೂ ಗೆದ್ದಿಲ್ಲ.

  1. ಗೋವಿಂದರಾಜನಗರ: 2018ರಲ್ಲಿ ವಿ ಸೋಮಣ್ಣ ಇಲ್ಲಿನ ಶಾಸಕರಾಗಿದ್ದರು. ಬಿಜೆಪಿ ಅವರನ್ನು ಈ ಬಾರಿ ವರುಣಾ ಮತ್ತು ಚಾಮರಾಜನಗರಕ್ಕೆ ಅಭ್ಯರ್ಥಿಯನ್ನಾಗಿಸಿತ್ತು. ಎರಡೂ ಕಡೆಗಳಲ್ಲಿ ಅವರು ಸೋತಿದ್ದಾರೆ. ಗೋವಿಂದರಾಜನಗರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಕೆ ಉಮೇಶ್ ಶೆಟ್ಟಿ ಕಾಂಗ್ರೆಸ್‌ನ ಪ್ರಿಯಾಕೃಷ್ಣ ಎದುರು ಸೋಲು ಕಂಡಿದ್ದಾರೆ.
  2. ವಿಜಯನಗರ: ಸಿದ್ದರಾಮಯ್ಯನವರ ಸರ್ಕಾರದಲ್ಲಿ ವಸತಿ ಸಚಿವರಾಗಿದ್ದ ಎಂ ಕೃಷ್ಣಪ್ಪ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅವರು ಬಿಜೆಪಿಯ ಎಚ್ ರವೀಂದ್ರ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  3. ಚಿಕ್ಕಪೇಟೆ: ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಮರು ಆಯ್ಕೆಯಾದಿದ್ದು ಕಾಂಗ್ರೆಸ್‌ನ ಆರ್ ವಿ ದೇವರಾಜ್ ಸೋಲುಕಂಡಿದ್ದಾರೆ. ಕಾಂಗ್ರೆಸ್‍ನಿಂದ ಸಿಡಿದೆದ್ದು ಪಕ್ಷೇತರನಾಗಿ ನಿಂತಿದ್ದ ಕೆಜಿಎಫ್ ಬಾಬು ಮೂರನೇ ಸ್ಥಾನದಲ್ಲಿ ಗಣನೀಯ ಮತಗಳನ್ನು ಗಳಿಸಿದ್ದಾರೆ.
  4. ಬಸವನಗುಡಿ: ಬಿಜೆಪಿಯ ರವಿ ಸುಬ್ರಮಣ್ಯ ಕಾಂಗ್ರೆಸ್‌ನ ಯು ಬಿ ವೆಂಕಟೇಶ್ ವಿರುದ್ಧ ಭಾರಿ ಅಂತರದಲ್ಲಿ ಗೆದ್ದಿದ್ದಾರೆ.
  5. ಪದ್ಮನಾಭನಗರ: ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಆರ್ ಅಶೋಕ್ ಕಾಂಗ್ರೆಸ್‌ನ ರಘುನಾಥ್ ನಾಯ್ಡು ವಿರುದ್ಧ ಗೆಲುವು ಸಾಧಿಸಿದ್ದಾರೆ.
  6. ಬಿಟಿಎಂ ಲೇಔಟ್: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿಯ ಕೆ ಆರ್ ಶ್ರೀಧರ ವಿರುದ್ಧ ಗೆಲುವು ಸಾಧಿಸಿದ್ದಾರೆ.
  7. ಜಯನಗರ: ಹಾಲಿ ಶಾಸಕಿ ಕಾಂಗ್ರೆಸ್‌ನ ಸೌಮ್ಯಾ ರೆಡ್ಡಿ ಅಲ್ಪ ಮತಗಳ (100+) ಅಂತರದಿಂದ ಬಿಜೆಪಿಯ ಸಿ ಕೆ ರಾಮಮೂರ್ತಿ ವಿರುದ್ಧ ಗೆಲುವು ಕಂಡಿದ್ದಾರೆ.
  8. ಬೊಮ್ಮನಹಳ್ಳಿ: ಬಿಜೆಪಿಯ ಹಾಲಿ ಶಾಸಕ ಸತೀಶ್ ರೆಡ್ಡಿ ಕಾಂಗ್ರೆಸ್‌ನ ಉಮಾಪತಿ ಅವರ ವಿರುದ್ಧ ಸುಲಭವಾದ ಗೆಲುವು ಕಂಡಿದ್ದಾರೆ.
  9. ಯಲಹಂಕ: ಬಿಜೆಪಿಯ ವಿಶ್ವನಾಥ್ ಕಾಂಗ್ರೆಸ್‌ನ ಕೇಶವ ರಾಜಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  10. ಬ್ಯಾಟರಾಯನಪುರ: ಮಾಜಿ ಶಾಸಕ ಕಾಂಗ್ರೆಸ್‌ನ ಕೃಷ್ಣ ಭೈರೇಗೌಡ ಬಿಜೆಪಿಯ ತಮ್ಮೇಶ್ ಗೌಡ ಎದುರು ಗೆಲುವು ಕಂಡಿದ್ದಾರೆ.
  11. ಯಶವಂತಪುರ: 2019ರ ಆಪರೇಷನ್ ಕಮಲದಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಜಿಗಿದಿದ್ದ ಎಸ್ ಟಿ ಸೋಮಶೇಕರ್ ಅವರು ಜೆಡಿಎಸ್‌ನ ಜವರಾಯ ರೆಡ್ಡಿ ವಿರುದ್ಧ ಪ್ರಯಾಸಕರವಾಗಿ ಗೆದ್ದಿದ್ದಾರೆ.
  12. ದಾಸರಹಳ್ಳಿ: ಬಿಜೆಪಿಯ ಎಸ್ ಮುನಿರಾಜು ಜೆಡಿಎಸ್‌ನ ಆರ್ ಮಂಜುನಾಥ್ ವಿರುದ್ಧ ಗೆದ್ದಿದ್ದಾರೆ.
  13. ಮಹದೇವಪುರ: ಬಿಜೆಪಿ ಹಾಲಿ ಶಾಸಕ ಅರವಿಂದ ಲಿಂಬಾಳಿ ಬದಲು ಅವರ ಪತ್ನಿ ಮಂಜುಳಾ ಅವರಿಗೆ ಟಿಕೆಟ್ ನೀಡಿತ್ತು. ಮಂಜುಳಾ ಕಾಂಗ್ರೆಸ್‌ನ ಎಚ್ ನಾಗೇಶ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  14. ಬೆಂಗಳೂರು ದಕ್ಷಿಣ: ಬಿಜೆಪಿಯ ಎಂ ಕೃಷ್ಣಪ್ಪ ಕಾಂಗ್ರೆಸ್‌ನ ರಮೇಶ್ ವಿರುದ್ಧ ಗೆದ್ದು ತಮ್ಮ ಗೆಲುವಿನ ಓಟವನ್ನು ಮುಂದುವರಿಸಿದ್ದಾರೆ.
  15. ಸರ್ವಜ್ಞ ನಗರ: ಕಾಂಗ್ರೆಸ್‌ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಎದುರಾಳಿ ಬಿಜೆಪಿಯ ಪದ್ಮನಾಭ ರೆಡ್ಡಿಯವರ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.
  16. ಸಿ. ವಿ. ರಾಮನ್ ನಗರ: ಹಾಲಿ ಶಾಸಕ ಬಿಜೆಪಿಯ ಎಸ್ ರಘು ಕಾಂಗ್ರೆಸ್‌ನ ಆನಂದ್ ಕುಮಾರ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  17. ಶಿವಾಜಿ ನಗರ: ಕಾಂಗ್ರೆಸ್ ಪಕ್ಷದ ಹಾಲಿ ಶಾಸಕ ರಿಜ್ವಾನ್ ಅರ್ಷದ್ ಬಿಜೆಪಿಯ ಎನ್ ಚಂದ್ರ ವಿರುದ್ಧ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  18. ಶಾಂತಿ ನಗರ: ಹಾಲಿ ಶಾಸಕ ಕಾಂಗ್ರೆಸ್‌ನ ಎನ್ ಎ ಹ್ಯಾರಿಸ್ ಬಿಜೆಪಿಯ ಕೆ ಶಿವಕುಮಾರ್ ವಿರುದ್ಧ ಪ್ರಯಾಸಕರ ಗೆಲುವು ಸಾಧಿಸಿದ್ದಾರೆ.
  19. ಗಾಂಧಿ ನಗರ: ಮಾಜಿ ಶಾಸಕ ಕಾಂಗ್ರೆಸ್‌ನ ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಿಂದ ಬಿಜೆಪಿಯ ಸಪ್ತಗಿರಿ ಗೌಡ ಎದುರು ಜಯ ಸಾಧಿಸಿದ್ದಾರೆ.
  20. ರಾಜಾಜಿನಗರ: ಬಿಜೆಪಿಯ ಸುರೇಶ್ ಕುಮಾರ್, ಕಾಂಗ್ರೆಸ್‌ಗೆ ಪಕ್ಷಾಂತರ ಮಾಡಿದ್ದ ಪುಟ್ಟಣ್ಣ ವಿರುದ್ಧ ಗೆಲುವು ಸಾಧಿಸಿದ್ದಾರೆ.
  21. ಚಾಮರಾಜಪೇಟೆ: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಬಿಜೆಪಿಯ ಭಾಸ್ಕರ್ ರಾವ್ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದ ಗೆಲುವು ಸಾಧಿಸಿದ್ದಾರೆ.
  22. ಹೆಬ್ಬಾಳ: ಸಿದ್ದರಾಮಯ್ಯನವರ ಆಪ್ತ ಕಾಂಗ್ರೆಸ್‌ನ ಭೈರತಿ ಸುರೇಶ್ ಬಿಜೆಪಿಯ ಕಟ್ಟ ಸುಬ್ರಮಣ್ಯ ನಾಯ್ಡು ಅವರ ಪುತ್ರ ಕಟ್ಟ ಜಗದೀಶ್ ವಿರುದ್ಧ ಗೆದ್ದಿದ್ದಾರೆ.
  23. ಆನೇಕಲ್: ಕಾಂಗ್ರೆಸ್ ಪಕ್ಷದ ಶಿವಣ್ಣ ಬಿಜೆಪಿಯ ಶ್ರೀನಿವಾಸ್ ವಿರುದ್ಧ ಗೆಲುವು ಸಾಧಿಸಿದ್ದಾರೆ.
  24. ಮಹಾಲಕ್ಷ್ಮಿ ಲೇಔಟ್: 2019ರ ಆಪರೇಷನ್ ಕಮಲ ಕಲಿ ಗೋಪಾಲಯ್ಯ ಕಾಂಗ್ರೆಸ್‌ನ ಕೇಶವಮೂರ್ತಿ ವಿರುದ್ಧ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ.
  25. ರಾಜರಾಜೇಶ್ವರಿ ನಗರ: ತೀವ್ರ ಪೈಪೋಟಿ ನೀಡಿದ್ದ ಕಾಂಗ್ರೆಸ್‌ನ ಕುಸುಮಾ 2019ರ ಆಪರೇಷನ್ ಕಮಲಕ್ಕೆ ಬಲಿಯಾಗಿದ್ದ ಮುನಿರತ್ನ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋತಿದ್ದಾರೆ.
  26. ಕೆ. ಆರ್. ಪುರ: 2019ರ ಆಪರೇಷನ್ ಕಮಲದಲ್ಲಿ ಬಿಜೆಪಿ ಪಾಲಾಗಿದ್ದ ಭೈರತಿ ಬಸವರಾಜ್ ಕಾಂಗ್ರೆಸ್‌ನ ಡಿ ಕೆ ಮೋಹನ್ ವಿರುದ್ಧ ಗೆಲುವುದು ಸಾಧಿಸಿದ್ದಾರೆ.
  27. ಮಲ್ಲೇಶ್ವರಂ: ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಸಿ ಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್‌ನ ಅನೂಪ್ ಅಯ್ಯಂಗಾರ್ ವಿರುದ್ಧ ಸುಲಭ ಗೆಲುವು ಸಾಧಿಸಿದ್ದಾರೆ.
  28. ಪುಲಿಕೇಶಿನಗರ: ಕಾಂಗ್ರೆಸ್ ಅಭ್ಯರ್ಥಿ ಎ ಸಿ ಶ್ರೀನಿವಾಸ್ ಅವರು ಪಕ್ಷೇತರ ಅಭ್ಯರ್ಥಿ ಅಖಂಡ ಶ್ರೀನಿವಾಸ್ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Road show and other gimmicks can’t earn votes. A beautiful lesson , a clear messages sent by people of Karnataka. Only proper work can fech votes. Not lies. Really a great lesson. Hats off to all the the Kannadigas.

  2. Big lesson to bjp, Modi gimik and lies will not work on matured voters.This is caution to drama people and get packup in 2024 election

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...