Homeಕರ್ನಾಟಕಫ್ಯಾಕ್ಟ್ ಚೆಕ್: ಬೆಂಗಳೂರಲ್ಲಿ ‘ಮೋದಿ ಮಸೀದಿ’ ಇದೆಯೇ? ಇಲ್ಲಿದೆ ನೋಡಿ ಅಸಲಿ ಕಹಾನಿ!

ಫ್ಯಾಕ್ಟ್ ಚೆಕ್: ಬೆಂಗಳೂರಲ್ಲಿ ‘ಮೋದಿ ಮಸೀದಿ’ ಇದೆಯೇ? ಇಲ್ಲಿದೆ ನೋಡಿ ಅಸಲಿ ಕಹಾನಿ!

ಈ ಮಸೀದಿಯನ್ನು 175 ವರ್ಷಗಳಿಗೂ ಹಿಂದೆಯೇ ಕಟ್ಟಲಾಗಿದೆ. ಇತ್ತೀಚಿಗೆ ಈ ಮಸೀದಯನ್ನು ನವೀಕರಣ ಮಾಡಿದ ಕಾರಣಕ್ಕಾಗಿ ಈಗ ಅದು ಸುದ್ದಿಯಲ್ಲಿದೆ. ಈ ಮಸೀದಿ ಶಿವಾಜಿ ನಗರದಲ್ಲಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಹೀಗೊಂದು ಫೋಟೊ-ಸುದ್ದಿ ಹರಿದಾಡುತ್ತಿದೆ: ‘ಬೆಂಗಳೂರಿನ ಮುಸ್ಲಿಮರು ಮಸೀದಿಯೊಂದಕ್ಕೆ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ… ಇದನ್ನು ನೋಡಿ ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಾರೋ’ ಎಂಬುದು ಆ ಸುದ್ದಿಯ ಸಾರಾಂಶ.

ಮೇಲಿನ ಸಂದೇಶದ ಪ್ರಕಾರ, ಬೆಂಗಳೂರಿನಲ್ಲಿ ಮಸೀದಿಯೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ. ಮೋದಿಯವರು ಫಾಲೋ ಮಾಡುವ ಟ್ವೀಟ್ ಖಾತೆ( @mahesh10816 ) ಯಿಂದ ಮೇಲಿನ ಸಂದೇಶವನ್ನು ಟ್ವೀಟ್ ಮಾಡಲಾಗಿದ್ದು, ಈ ಟ್ವೀಟ್ ಜೊತೆ ಎರಡು ಫೋಟೊಗಳೂ ಇವೆ. ಜೂನ್ 20ರ ಈ ಸಂದೇಶ ಅಂದೇ 400ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ. ಪೋಸ್ಟ್‍ನ ಎಡಕ್ಕಿರುವ ಫೋಟೊದಲ್ಲಿ ‘MODI MASJID’ ಎಂಬುದನ್ನು, ಬಲಭಾಗದ ಫೋಟೊದಲ್ಲಿ ಹಿಂಬದಿಯಲ್ಲಿ ಮೋದಿಯ ಪೋಸ್ಟರ್ ಅನ್ನು ಕಾಣಬಹುದು. ವ್ಯಾಟ್ಸಾಪ್ ನಲ್ಲೂ ಈ ಸಂದೇಶ ವಿಪರೀತ ಹರಿದಾಡುತ್ತಿದೆ.

ಕನ್ನಡದ ಶೀರ್ಷಿಕೆ ಇರುವ ಫೋಟೊ ಒಂದು ಕೂಡ ಹರಿದಾಡುತ್ತಿದ್ದು, ‘ಮೋದಿ ಹೆಸರಲ್ಲಿ 12 ಕೋಟಿಯ ಮಸೀದಿ, ಮೋದಿ ಮಸೀದಿಯಲ್ಲಿ ಜಮೀರ ಖಾನ್’ ಎಂಬ ಸಾಲುಗಳಿವೆ. ಇಂಥದ್ದನ್ನು ತೋರಿಸಿ, ನೋಡಿ ಬೆಂಗಳೂರಿನ ಮುಸ್ಲಿಮರೂ ಮೋದಿ ಸಾಧನೆ ಮೆಚ್ಚಿದ್ದಾರೆ ಎಂದು ಸುಳ್ಳನ್ನು ಹರಡುವ ಕುತಂತ್ರವಿದು.

ಸತ್ಯ: ಬೆಂಗಳೂರಿನ ಯಾವ ಮಸಿದಿಗೂ ನರೆಂದ್ರ ಮೋದಿಯ ಹೆಸರನ್ನು ಇಡಲಾಗಿಲ್ಲ. ಮೇಲಿನ ಸಂದೇಶವನ್ನು ಮೋದಿ ಕೆಲವರು ಮುಸ್ಲಿಮರಲ್ಲೂ ಜನಪ್ರಿಯರು ಎಂದು ತೋರಿಸುವ ಭಾಗವಾಗಿ ಹರಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಅಮಾಯಕರು ವ್ಯಾಟ್ಸಾಪ್‍ನಲ್ಲಿ ತಮ್ಮ ಸ್ನೇಹಿತರಿಗೆ ಇದನ್ನು ಕಳಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದ ಬಳಕೆದಾರರ ಕೋರಿಕೆಯ ಮೇಲೆ ಮೇಲಿನ ಸಂದೇಶದ ಕುರಿತಾಗಿ ಆಲ್ಟ್‍ನ್ಯೂಸ್ ಫ್ಯಾಕ್ಟ್‍ಚೆಕ್ ಮಾಡಿದೆ. ಬೆಂಗಳೂರಲ್ಲಿ ಮೋದಿ ಮಸೀದಿ ಎಂಬುದು ಇದೆ ಆದರೂ, ಅದು ನರೇಂದ್ರ ಮೋದಿ ಹೆಸರಿನದ್ದಲ್ಲ. ಅದನ್ನು ‘ಮೋದಿ ಅಬ್ದುಲ್ ಗಫೂರ್’ ಎಂಬ ದಾನಿಯ ಸ್ಮರಣಾರ್ಥ ‘ಮೋದಿ ಮಸೀದಿ’ ಎಂದು ಹೆಸರಿಸಲಾಗಿದೆ. ಈ ಮಸೀದಿಯನ್ನು 175 ವರ್ಷಗಳಿಗೂ ಹಿಂದೆಯೇ ಕಟ್ಟಲಾಗಿದೆ. ಇತ್ತೀಚಿಗೆ ಈ ಮಸೀದಯನ್ನು ನವೀಕರಣ ಮಾಡಿದ ಕಾರಣಕ್ಕಾಗಿ ಈಗ ಅದು ಸುದ್ದಿಯಲ್ಲಿದೆ. ಈ ಮಸೀದಿ ಶಿವಾಜಿ ನಗರದಲ್ಲಿದೆ.

ಟ್ವೀಟ್ ಜೊತೆಗಿರುವ ಎಡಭಾಗದ ಫೋಟೊ ‘ಮೋದಿ ಮಸೀದಿ’ಯದ್ದು (ನರೇಂದ್ರ ಮೋದಿಯಲ್ಲ, ಮೋದಿ ಅಬ್ದುಲ್ ಗಫೂರ್)… ಎರಡನೇ ಫೋಟೊದ ಮೂಲ ಗೊತ್ತಾಗಿಲ್ಲವಾದರೂ, ಅದು ‘ಮೋದಿ ಮಸೀದಿ’ಯ ಫೋಟೊವಂತೂ ಅಲ್ಲ. ಮೇಲಿನ ಫೇಕ್ ಆಧರಿಸಿಯೇ ಜಮೀರ್ ನಿಂತಿರುವ ಮಸಿದಿಯ ಫೋಟೊ ಇರುವ ಕನ್ನಡ ವಿಡಿಯೊವನ್ನು ಸೃಷ್ಟಿಸಿ ಯುಟ್ಯೂಬ್‍ಗೆ ಅಪಲೋಡ್ ಮಾಡಲಾಗಿದೆ. ಕಳೆದ ವರ್ಷವಷ್ಟೇ ಈ ಮಸೀದಿ ನಿರ್ಮಸಿಲಾಗಿದೆ ಎಂದು ಸುಳ್ಳು ಬಿತ್ತರಿಸಲಾಗಿದೆ.

ಈ ಮಸೀದಿ ಬಗ್ಗೆ ಗೊತ್ತಾದರೆ ನಮ್ಮ ಚಾನೆಲ್‍ಗಳೂ ಮೋದಿ ಹೆಸರಲ್ಲಿ ಬೆಂಗಳೂರಲ್ಲಿ ಮಸೀದಿ ಎಂದು ವಿಶೇಷ ಕಾರ್ಯಕ್ರಮ ಪ್ರಸಾರ ಮಾಡಬಹುದು, ಎಚ್ಚರವಿರಲಿ…

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...