Homeಕರ್ನಾಟಕಫ್ಯಾಕ್ಟ್ ಚೆಕ್: ಬೆಂಗಳೂರಲ್ಲಿ ‘ಮೋದಿ ಮಸೀದಿ’ ಇದೆಯೇ? ಇಲ್ಲಿದೆ ನೋಡಿ ಅಸಲಿ ಕಹಾನಿ!

ಫ್ಯಾಕ್ಟ್ ಚೆಕ್: ಬೆಂಗಳೂರಲ್ಲಿ ‘ಮೋದಿ ಮಸೀದಿ’ ಇದೆಯೇ? ಇಲ್ಲಿದೆ ನೋಡಿ ಅಸಲಿ ಕಹಾನಿ!

ಈ ಮಸೀದಿಯನ್ನು 175 ವರ್ಷಗಳಿಗೂ ಹಿಂದೆಯೇ ಕಟ್ಟಲಾಗಿದೆ. ಇತ್ತೀಚಿಗೆ ಈ ಮಸೀದಯನ್ನು ನವೀಕರಣ ಮಾಡಿದ ಕಾರಣಕ್ಕಾಗಿ ಈಗ ಅದು ಸುದ್ದಿಯಲ್ಲಿದೆ. ಈ ಮಸೀದಿ ಶಿವಾಜಿ ನಗರದಲ್ಲಿದೆ.

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಹೀಗೊಂದು ಫೋಟೊ-ಸುದ್ದಿ ಹರಿದಾಡುತ್ತಿದೆ: ‘ಬೆಂಗಳೂರಿನ ಮುಸ್ಲಿಮರು ಮಸೀದಿಯೊಂದಕ್ಕೆ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ… ಇದನ್ನು ನೋಡಿ ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಾರೋ’ ಎಂಬುದು ಆ ಸುದ್ದಿಯ ಸಾರಾಂಶ.

ಮೇಲಿನ ಸಂದೇಶದ ಪ್ರಕಾರ, ಬೆಂಗಳೂರಿನಲ್ಲಿ ಮಸೀದಿಯೊಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಹೆಸರಿಟ್ಟಿದ್ದಾರೆ. ಮೋದಿಯವರು ಫಾಲೋ ಮಾಡುವ ಟ್ವೀಟ್ ಖಾತೆ( @mahesh10816 ) ಯಿಂದ ಮೇಲಿನ ಸಂದೇಶವನ್ನು ಟ್ವೀಟ್ ಮಾಡಲಾಗಿದ್ದು, ಈ ಟ್ವೀಟ್ ಜೊತೆ ಎರಡು ಫೋಟೊಗಳೂ ಇವೆ. ಜೂನ್ 20ರ ಈ ಸಂದೇಶ ಅಂದೇ 400ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ. ಪೋಸ್ಟ್‍ನ ಎಡಕ್ಕಿರುವ ಫೋಟೊದಲ್ಲಿ ‘MODI MASJID’ ಎಂಬುದನ್ನು, ಬಲಭಾಗದ ಫೋಟೊದಲ್ಲಿ ಹಿಂಬದಿಯಲ್ಲಿ ಮೋದಿಯ ಪೋಸ್ಟರ್ ಅನ್ನು ಕಾಣಬಹುದು. ವ್ಯಾಟ್ಸಾಪ್ ನಲ್ಲೂ ಈ ಸಂದೇಶ ವಿಪರೀತ ಹರಿದಾಡುತ್ತಿದೆ.

ಕನ್ನಡದ ಶೀರ್ಷಿಕೆ ಇರುವ ಫೋಟೊ ಒಂದು ಕೂಡ ಹರಿದಾಡುತ್ತಿದ್ದು, ‘ಮೋದಿ ಹೆಸರಲ್ಲಿ 12 ಕೋಟಿಯ ಮಸೀದಿ, ಮೋದಿ ಮಸೀದಿಯಲ್ಲಿ ಜಮೀರ ಖಾನ್’ ಎಂಬ ಸಾಲುಗಳಿವೆ. ಇಂಥದ್ದನ್ನು ತೋರಿಸಿ, ನೋಡಿ ಬೆಂಗಳೂರಿನ ಮುಸ್ಲಿಮರೂ ಮೋದಿ ಸಾಧನೆ ಮೆಚ್ಚಿದ್ದಾರೆ ಎಂದು ಸುಳ್ಳನ್ನು ಹರಡುವ ಕುತಂತ್ರವಿದು.

ಸತ್ಯ: ಬೆಂಗಳೂರಿನ ಯಾವ ಮಸಿದಿಗೂ ನರೆಂದ್ರ ಮೋದಿಯ ಹೆಸರನ್ನು ಇಡಲಾಗಿಲ್ಲ. ಮೇಲಿನ ಸಂದೇಶವನ್ನು ಮೋದಿ ಕೆಲವರು ಮುಸ್ಲಿಮರಲ್ಲೂ ಜನಪ್ರಿಯರು ಎಂದು ತೋರಿಸುವ ಭಾಗವಾಗಿ ಹರಡುತ್ತಿದ್ದಾರೆ. ಇದನ್ನು ಸತ್ಯ ಎಂದು ನಂಬಿದ ಅಮಾಯಕರು ವ್ಯಾಟ್ಸಾಪ್‍ನಲ್ಲಿ ತಮ್ಮ ಸ್ನೇಹಿತರಿಗೆ ಇದನ್ನು ಕಳಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದ ಬಳಕೆದಾರರ ಕೋರಿಕೆಯ ಮೇಲೆ ಮೇಲಿನ ಸಂದೇಶದ ಕುರಿತಾಗಿ ಆಲ್ಟ್‍ನ್ಯೂಸ್ ಫ್ಯಾಕ್ಟ್‍ಚೆಕ್ ಮಾಡಿದೆ. ಬೆಂಗಳೂರಲ್ಲಿ ಮೋದಿ ಮಸೀದಿ ಎಂಬುದು ಇದೆ ಆದರೂ, ಅದು ನರೇಂದ್ರ ಮೋದಿ ಹೆಸರಿನದ್ದಲ್ಲ. ಅದನ್ನು ‘ಮೋದಿ ಅಬ್ದುಲ್ ಗಫೂರ್’ ಎಂಬ ದಾನಿಯ ಸ್ಮರಣಾರ್ಥ ‘ಮೋದಿ ಮಸೀದಿ’ ಎಂದು ಹೆಸರಿಸಲಾಗಿದೆ. ಈ ಮಸೀದಿಯನ್ನು 175 ವರ್ಷಗಳಿಗೂ ಹಿಂದೆಯೇ ಕಟ್ಟಲಾಗಿದೆ. ಇತ್ತೀಚಿಗೆ ಈ ಮಸೀದಯನ್ನು ನವೀಕರಣ ಮಾಡಿದ ಕಾರಣಕ್ಕಾಗಿ ಈಗ ಅದು ಸುದ್ದಿಯಲ್ಲಿದೆ. ಈ ಮಸೀದಿ ಶಿವಾಜಿ ನಗರದಲ್ಲಿದೆ.

ಟ್ವೀಟ್ ಜೊತೆಗಿರುವ ಎಡಭಾಗದ ಫೋಟೊ ‘ಮೋದಿ ಮಸೀದಿ’ಯದ್ದು (ನರೇಂದ್ರ ಮೋದಿಯಲ್ಲ, ಮೋದಿ ಅಬ್ದುಲ್ ಗಫೂರ್)… ಎರಡನೇ ಫೋಟೊದ ಮೂಲ ಗೊತ್ತಾಗಿಲ್ಲವಾದರೂ, ಅದು ‘ಮೋದಿ ಮಸೀದಿ’ಯ ಫೋಟೊವಂತೂ ಅಲ್ಲ. ಮೇಲಿನ ಫೇಕ್ ಆಧರಿಸಿಯೇ ಜಮೀರ್ ನಿಂತಿರುವ ಮಸಿದಿಯ ಫೋಟೊ ಇರುವ ಕನ್ನಡ ವಿಡಿಯೊವನ್ನು ಸೃಷ್ಟಿಸಿ ಯುಟ್ಯೂಬ್‍ಗೆ ಅಪಲೋಡ್ ಮಾಡಲಾಗಿದೆ. ಕಳೆದ ವರ್ಷವಷ್ಟೇ ಈ ಮಸೀದಿ ನಿರ್ಮಸಿಲಾಗಿದೆ ಎಂದು ಸುಳ್ಳು ಬಿತ್ತರಿಸಲಾಗಿದೆ.

ಈ ಮಸೀದಿ ಬಗ್ಗೆ ಗೊತ್ತಾದರೆ ನಮ್ಮ ಚಾನೆಲ್‍ಗಳೂ ಮೋದಿ ಹೆಸರಲ್ಲಿ ಬೆಂಗಳೂರಲ್ಲಿ ಮಸೀದಿ ಎಂದು ವಿಶೇಷ ಕಾರ್ಯಕ್ರಮ ಪ್ರಸಾರ ಮಾಡಬಹುದು, ಎಚ್ಚರವಿರಲಿ…

ಕೃಪೆ: ಆಲ್ಟ್ ನ್ಯೂಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...