Homeಮುಖಪುಟ'ಮೋದಿ ಎಂದರೆ ಭ್ರಷ್ಟಾಚಾರ': ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಬೆನ್ನಲ್ಲೇ  ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಮೋದಿ ಸರ್‌ನೇಮ್‌ನ್ನು ಭ್ರಷ್ಟಾಚಾರಕ್ಕೆ ಲಿಂಕ್ ಮಾಡಿದ ಹಳೆಯ ಟ್ವೀಟ್ ವೈರಲ್‌ ಆಗಿದೆ. ಈ ಬಗ್ಗೆ ಶನಿವಾರ ಖುಷ್ಬು ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಶುಕ್ರವಾರ, ದೋಷಾರೋಪಣೆಯ ಆಧಾರದ ಮೇಲೆ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಗಾಂಧಿ ವಿರುದ್ಧದ ಕ್ರಮ ಸೇಡಿನ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ., ಆದರೆ ಸ್ಕ್ರೋಲ್‌ ಜೊತೆ ಮಾತನಾಡುವ ಕಾನೂನು ತಜ್ಞರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಮೋದಿ ಸರ್‌ನೇಮ್ ಹೊಂದಿರುವ ಎಲ್ಲರನ್ನು ದೂಷಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖುಷ್ಬು ಸುಂದರ್ ಅವರು 2018ರಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಶನಿವಾರ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲಿ ಅವರು ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿದ್ದಾರೆ – ವಂಚನೆ ಆರೋಪದಲ್ಲಿ ಪರಾರಿಯಾಗಿರುವ ಉದ್ಯಮಿಗಳು. “ಮೋದಿ ಎಂದರೆ ಭ್ರಷ್ಟಾಚಾರ”, “ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸೋಣ … ಅದೇ ಉತ್ತಮವಾಗಿದೆ” ಎಂದು ಸುಂದರ್ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ 2019ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು, ”ನನ್ನ ಬಳಿ ಒಂದು ಪ್ರಶ್ನೆ ಇದೆ. ನೀರವ್ ಮೋದಿ ಇರಬಹುದು, ಲಲಿತ್ ಮೋದಿ ಇರಬಹುದು ಅಥವಾ ನರೇಂದ್ರ ಮೋದಿ ಇರಬಹುದು. ಎಲ್ಲ ಕಳ್ಳರ ಹೆಸರಿನಲ್ಲಿಯೂ ಮೋದಿ ಎಂದು ಏಕೆ ಇದೆ? ಎಂದು ಹೇಳಿದ್ದರು. ಖುಷ್ಬು ಅವರ ಟ್ವೀಟ್‌ನಲ್ಲೂ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಹೋಲುವ ಬರಹವಿದೆ.

ಶನಿವಾರ ಪಿಟಿಐ ಜೊತೆ ಮಾತನಾಡಿದ ಖುಷ್ಬು ಅವರು ತಮ್ಮ ಟ್ವೀಟ್‌ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ”ನಾನು ಈ ಕಾಮೆಂಟ್ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದೆ. ನಾನು ಅಲ್ಲಿಯ ನಾಯಕರನ್ನು ಅನುಸರಿಸುತ್ತಿದ್ದೆ ಮತ್ತು ಆ ಪಕ್ಷದ ಭಾಷೆಯಲ್ಲಿಯೇ ಮಾತನಾಡುತ್ತಿದ್ದೆ” ಎಂದು ಹೇಳಿದ್ದಾರೆ.

”ಈಗ ಕಾಂಗ್ರೆಸ್‌ನವರು ನನ್ನ ಹಳೆಯ ಟ್ವೀಟ್‌ಗಳನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿದರೆ ಅವರು ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡುವುದಕ್ಕೂ ಯಾರನ್ನಾದರೂ ಕಳ್ಳ ಎಂದು ಕರೆಯುವುದಕ್ಕೂ ವ್ಯತ್ಯಾಸವಿದೆ. ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ” ಎಂದು ಖುಷ್ಬು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಅವರು, ”ತಮ್ಮ ವಿರುದ್ಧದ ಕ್ರಮಗಳಿಗೆ ಹೆದರುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ಪ್ರತಿಪಾದಿಸಿದರು. ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲು ಪ್ರಧಾನಿ ಹೆದರಿದ್ದರಿಂದ, ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ವಂಚನೆ ಬಗ್ಗೆ ಹಿಂಡೆನ್‌ಬರ್ಗ್ ವರದಿ ಮಾಡಿದ ಬೆನ್ನಲ್ಲೇ ಜನವರಿಯಿಂದ ಅದಾನಿ ಸಂಸ್ಥೆಗಳ ಷೇರುಗಳು ಕುಸಿದಿವೆ. ಅದಾನಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ಮಾತನಾಡುತ್ತಿಲ್ಲ. ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...