Homeಮುಖಪುಟ'ಮೋದಿ ಎಂದರೆ ಭ್ರಷ್ಟಾಚಾರ': ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಬೆನ್ನಲ್ಲೇ  ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಮೋದಿ ಸರ್‌ನೇಮ್‌ನ್ನು ಭ್ರಷ್ಟಾಚಾರಕ್ಕೆ ಲಿಂಕ್ ಮಾಡಿದ ಹಳೆಯ ಟ್ವೀಟ್ ವೈರಲ್‌ ಆಗಿದೆ. ಈ ಬಗ್ಗೆ ಶನಿವಾರ ಖುಷ್ಬು ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಶುಕ್ರವಾರ, ದೋಷಾರೋಪಣೆಯ ಆಧಾರದ ಮೇಲೆ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಗಾಂಧಿ ವಿರುದ್ಧದ ಕ್ರಮ ಸೇಡಿನ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ., ಆದರೆ ಸ್ಕ್ರೋಲ್‌ ಜೊತೆ ಮಾತನಾಡುವ ಕಾನೂನು ತಜ್ಞರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಮೋದಿ ಸರ್‌ನೇಮ್ ಹೊಂದಿರುವ ಎಲ್ಲರನ್ನು ದೂಷಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖುಷ್ಬು ಸುಂದರ್ ಅವರು 2018ರಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಶನಿವಾರ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲಿ ಅವರು ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿದ್ದಾರೆ – ವಂಚನೆ ಆರೋಪದಲ್ಲಿ ಪರಾರಿಯಾಗಿರುವ ಉದ್ಯಮಿಗಳು. “ಮೋದಿ ಎಂದರೆ ಭ್ರಷ್ಟಾಚಾರ”, “ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸೋಣ … ಅದೇ ಉತ್ತಮವಾಗಿದೆ” ಎಂದು ಸುಂದರ್ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ 2019ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು, ”ನನ್ನ ಬಳಿ ಒಂದು ಪ್ರಶ್ನೆ ಇದೆ. ನೀರವ್ ಮೋದಿ ಇರಬಹುದು, ಲಲಿತ್ ಮೋದಿ ಇರಬಹುದು ಅಥವಾ ನರೇಂದ್ರ ಮೋದಿ ಇರಬಹುದು. ಎಲ್ಲ ಕಳ್ಳರ ಹೆಸರಿನಲ್ಲಿಯೂ ಮೋದಿ ಎಂದು ಏಕೆ ಇದೆ? ಎಂದು ಹೇಳಿದ್ದರು. ಖುಷ್ಬು ಅವರ ಟ್ವೀಟ್‌ನಲ್ಲೂ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಹೋಲುವ ಬರಹವಿದೆ.

ಶನಿವಾರ ಪಿಟಿಐ ಜೊತೆ ಮಾತನಾಡಿದ ಖುಷ್ಬು ಅವರು ತಮ್ಮ ಟ್ವೀಟ್‌ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ”ನಾನು ಈ ಕಾಮೆಂಟ್ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದೆ. ನಾನು ಅಲ್ಲಿಯ ನಾಯಕರನ್ನು ಅನುಸರಿಸುತ್ತಿದ್ದೆ ಮತ್ತು ಆ ಪಕ್ಷದ ಭಾಷೆಯಲ್ಲಿಯೇ ಮಾತನಾಡುತ್ತಿದ್ದೆ” ಎಂದು ಹೇಳಿದ್ದಾರೆ.

”ಈಗ ಕಾಂಗ್ರೆಸ್‌ನವರು ನನ್ನ ಹಳೆಯ ಟ್ವೀಟ್‌ಗಳನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿದರೆ ಅವರು ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡುವುದಕ್ಕೂ ಯಾರನ್ನಾದರೂ ಕಳ್ಳ ಎಂದು ಕರೆಯುವುದಕ್ಕೂ ವ್ಯತ್ಯಾಸವಿದೆ. ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ” ಎಂದು ಖುಷ್ಬು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಅವರು, ”ತಮ್ಮ ವಿರುದ್ಧದ ಕ್ರಮಗಳಿಗೆ ಹೆದರುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ಪ್ರತಿಪಾದಿಸಿದರು. ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲು ಪ್ರಧಾನಿ ಹೆದರಿದ್ದರಿಂದ, ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ವಂಚನೆ ಬಗ್ಗೆ ಹಿಂಡೆನ್‌ಬರ್ಗ್ ವರದಿ ಮಾಡಿದ ಬೆನ್ನಲ್ಲೇ ಜನವರಿಯಿಂದ ಅದಾನಿ ಸಂಸ್ಥೆಗಳ ಷೇರುಗಳು ಕುಸಿದಿವೆ. ಅದಾನಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ಮಾತನಾಡುತ್ತಿಲ್ಲ. ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...