Homeಮುಖಪುಟ'ಮೋದಿ ಎಂದರೆ ಭ್ರಷ್ಟಾಚಾರ': ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಬೆನ್ನಲ್ಲೇ  ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಮೋದಿ ಸರ್‌ನೇಮ್‌ನ್ನು ಭ್ರಷ್ಟಾಚಾರಕ್ಕೆ ಲಿಂಕ್ ಮಾಡಿದ ಹಳೆಯ ಟ್ವೀಟ್ ವೈರಲ್‌ ಆಗಿದೆ. ಈ ಬಗ್ಗೆ ಶನಿವಾರ ಖುಷ್ಬು ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಶುಕ್ರವಾರ, ದೋಷಾರೋಪಣೆಯ ಆಧಾರದ ಮೇಲೆ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಗಾಂಧಿ ವಿರುದ್ಧದ ಕ್ರಮ ಸೇಡಿನ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ., ಆದರೆ ಸ್ಕ್ರೋಲ್‌ ಜೊತೆ ಮಾತನಾಡುವ ಕಾನೂನು ತಜ್ಞರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಮೋದಿ ಸರ್‌ನೇಮ್ ಹೊಂದಿರುವ ಎಲ್ಲರನ್ನು ದೂಷಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖುಷ್ಬು ಸುಂದರ್ ಅವರು 2018ರಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಶನಿವಾರ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲಿ ಅವರು ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿದ್ದಾರೆ – ವಂಚನೆ ಆರೋಪದಲ್ಲಿ ಪರಾರಿಯಾಗಿರುವ ಉದ್ಯಮಿಗಳು. “ಮೋದಿ ಎಂದರೆ ಭ್ರಷ್ಟಾಚಾರ”, “ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸೋಣ … ಅದೇ ಉತ್ತಮವಾಗಿದೆ” ಎಂದು ಸುಂದರ್ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ 2019ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು, ”ನನ್ನ ಬಳಿ ಒಂದು ಪ್ರಶ್ನೆ ಇದೆ. ನೀರವ್ ಮೋದಿ ಇರಬಹುದು, ಲಲಿತ್ ಮೋದಿ ಇರಬಹುದು ಅಥವಾ ನರೇಂದ್ರ ಮೋದಿ ಇರಬಹುದು. ಎಲ್ಲ ಕಳ್ಳರ ಹೆಸರಿನಲ್ಲಿಯೂ ಮೋದಿ ಎಂದು ಏಕೆ ಇದೆ? ಎಂದು ಹೇಳಿದ್ದರು. ಖುಷ್ಬು ಅವರ ಟ್ವೀಟ್‌ನಲ್ಲೂ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಹೋಲುವ ಬರಹವಿದೆ.

ಶನಿವಾರ ಪಿಟಿಐ ಜೊತೆ ಮಾತನಾಡಿದ ಖುಷ್ಬು ಅವರು ತಮ್ಮ ಟ್ವೀಟ್‌ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ”ನಾನು ಈ ಕಾಮೆಂಟ್ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದೆ. ನಾನು ಅಲ್ಲಿಯ ನಾಯಕರನ್ನು ಅನುಸರಿಸುತ್ತಿದ್ದೆ ಮತ್ತು ಆ ಪಕ್ಷದ ಭಾಷೆಯಲ್ಲಿಯೇ ಮಾತನಾಡುತ್ತಿದ್ದೆ” ಎಂದು ಹೇಳಿದ್ದಾರೆ.

”ಈಗ ಕಾಂಗ್ರೆಸ್‌ನವರು ನನ್ನ ಹಳೆಯ ಟ್ವೀಟ್‌ಗಳನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿದರೆ ಅವರು ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡುವುದಕ್ಕೂ ಯಾರನ್ನಾದರೂ ಕಳ್ಳ ಎಂದು ಕರೆಯುವುದಕ್ಕೂ ವ್ಯತ್ಯಾಸವಿದೆ. ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ” ಎಂದು ಖುಷ್ಬು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಅವರು, ”ತಮ್ಮ ವಿರುದ್ಧದ ಕ್ರಮಗಳಿಗೆ ಹೆದರುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ಪ್ರತಿಪಾದಿಸಿದರು. ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲು ಪ್ರಧಾನಿ ಹೆದರಿದ್ದರಿಂದ, ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ವಂಚನೆ ಬಗ್ಗೆ ಹಿಂಡೆನ್‌ಬರ್ಗ್ ವರದಿ ಮಾಡಿದ ಬೆನ್ನಲ್ಲೇ ಜನವರಿಯಿಂದ ಅದಾನಿ ಸಂಸ್ಥೆಗಳ ಷೇರುಗಳು ಕುಸಿದಿವೆ. ಅದಾನಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ಮಾತನಾಡುತ್ತಿಲ್ಲ. ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...