Homeಮುಖಪುಟ'ಮೋದಿ ಎಂದರೆ ಭ್ರಷ್ಟಾಚಾರ': ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಬೆನ್ನಲ್ಲೇ  ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಮೋದಿ ಸರ್‌ನೇಮ್‌ನ್ನು ಭ್ರಷ್ಟಾಚಾರಕ್ಕೆ ಲಿಂಕ್ ಮಾಡಿದ ಹಳೆಯ ಟ್ವೀಟ್ ವೈರಲ್‌ ಆಗಿದೆ. ಈ ಬಗ್ಗೆ ಶನಿವಾರ ಖುಷ್ಬು ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಶುಕ್ರವಾರ, ದೋಷಾರೋಪಣೆಯ ಆಧಾರದ ಮೇಲೆ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಗಾಂಧಿ ವಿರುದ್ಧದ ಕ್ರಮ ಸೇಡಿನ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ., ಆದರೆ ಸ್ಕ್ರೋಲ್‌ ಜೊತೆ ಮಾತನಾಡುವ ಕಾನೂನು ತಜ್ಞರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಮೋದಿ ಸರ್‌ನೇಮ್ ಹೊಂದಿರುವ ಎಲ್ಲರನ್ನು ದೂಷಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖುಷ್ಬು ಸುಂದರ್ ಅವರು 2018ರಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಶನಿವಾರ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲಿ ಅವರು ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿದ್ದಾರೆ – ವಂಚನೆ ಆರೋಪದಲ್ಲಿ ಪರಾರಿಯಾಗಿರುವ ಉದ್ಯಮಿಗಳು. “ಮೋದಿ ಎಂದರೆ ಭ್ರಷ್ಟಾಚಾರ”, “ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸೋಣ … ಅದೇ ಉತ್ತಮವಾಗಿದೆ” ಎಂದು ಸುಂದರ್ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ 2019ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು, ”ನನ್ನ ಬಳಿ ಒಂದು ಪ್ರಶ್ನೆ ಇದೆ. ನೀರವ್ ಮೋದಿ ಇರಬಹುದು, ಲಲಿತ್ ಮೋದಿ ಇರಬಹುದು ಅಥವಾ ನರೇಂದ್ರ ಮೋದಿ ಇರಬಹುದು. ಎಲ್ಲ ಕಳ್ಳರ ಹೆಸರಿನಲ್ಲಿಯೂ ಮೋದಿ ಎಂದು ಏಕೆ ಇದೆ? ಎಂದು ಹೇಳಿದ್ದರು. ಖುಷ್ಬು ಅವರ ಟ್ವೀಟ್‌ನಲ್ಲೂ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಹೋಲುವ ಬರಹವಿದೆ.

ಶನಿವಾರ ಪಿಟಿಐ ಜೊತೆ ಮಾತನಾಡಿದ ಖುಷ್ಬು ಅವರು ತಮ್ಮ ಟ್ವೀಟ್‌ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ”ನಾನು ಈ ಕಾಮೆಂಟ್ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದೆ. ನಾನು ಅಲ್ಲಿಯ ನಾಯಕರನ್ನು ಅನುಸರಿಸುತ್ತಿದ್ದೆ ಮತ್ತು ಆ ಪಕ್ಷದ ಭಾಷೆಯಲ್ಲಿಯೇ ಮಾತನಾಡುತ್ತಿದ್ದೆ” ಎಂದು ಹೇಳಿದ್ದಾರೆ.

”ಈಗ ಕಾಂಗ್ರೆಸ್‌ನವರು ನನ್ನ ಹಳೆಯ ಟ್ವೀಟ್‌ಗಳನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿದರೆ ಅವರು ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡುವುದಕ್ಕೂ ಯಾರನ್ನಾದರೂ ಕಳ್ಳ ಎಂದು ಕರೆಯುವುದಕ್ಕೂ ವ್ಯತ್ಯಾಸವಿದೆ. ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ” ಎಂದು ಖುಷ್ಬು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಅವರು, ”ತಮ್ಮ ವಿರುದ್ಧದ ಕ್ರಮಗಳಿಗೆ ಹೆದರುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ಪ್ರತಿಪಾದಿಸಿದರು. ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲು ಪ್ರಧಾನಿ ಹೆದರಿದ್ದರಿಂದ, ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ವಂಚನೆ ಬಗ್ಗೆ ಹಿಂಡೆನ್‌ಬರ್ಗ್ ವರದಿ ಮಾಡಿದ ಬೆನ್ನಲ್ಲೇ ಜನವರಿಯಿಂದ ಅದಾನಿ ಸಂಸ್ಥೆಗಳ ಷೇರುಗಳು ಕುಸಿದಿವೆ. ಅದಾನಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ಮಾತನಾಡುತ್ತಿಲ್ಲ. ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...