Homeಮುಖಪುಟ'ಮೋದಿ ಎಂದರೆ ಭ್ರಷ್ಟಾಚಾರ': ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

‘ಮೋದಿ ಎಂದರೆ ಭ್ರಷ್ಟಾಚಾರ’: ಬಿಜೆಪಿ ನಾಯಕಿ ಖುಷ್ಬು ಹಳೆಯ ಟ್ವೀಟ್ ವೈರಲ್

- Advertisement -
- Advertisement -

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹಗೊಳಿಸಲಾಗಿದೆ. ಈ ಬೆನ್ನಲ್ಲೇ  ಹಿಂದೆ ಕಾಂಗ್ರೆಸ್‌ನಲ್ಲಿದ್ದ ಬಿಜೆಪಿ ನಾಯಕಿ ಖುಷ್ಬು ಸುಂದರ್ ಅವರು ಮೋದಿ ಸರ್‌ನೇಮ್‌ನ್ನು ಭ್ರಷ್ಟಾಚಾರಕ್ಕೆ ಲಿಂಕ್ ಮಾಡಿದ ಹಳೆಯ ಟ್ವೀಟ್ ವೈರಲ್‌ ಆಗಿದೆ. ಈ ಬಗ್ಗೆ ಶನಿವಾರ ಖುಷ್ಬು ಅವರು ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಮಾಡಿದ ಹೇಳಿಕೆಗಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಈ ಟ್ವೀಟ್ ಮಹತ್ವ ಪಡೆದುಕೊಂಡಿದೆ. ಶುಕ್ರವಾರ, ದೋಷಾರೋಪಣೆಯ ಆಧಾರದ ಮೇಲೆ ಗಾಂಧಿ ಅವರನ್ನು ಲೋಕಸಭೆಯ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

ಗಾಂಧಿ ವಿರುದ್ಧದ ಕ್ರಮ ಸೇಡಿನ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ., ಆದರೆ ಸ್ಕ್ರೋಲ್‌ ಜೊತೆ ಮಾತನಾಡುವ ಕಾನೂನು ತಜ್ಞರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗಳು ಮೋದಿ ಸರ್‌ನೇಮ್ ಹೊಂದಿರುವ ಎಲ್ಲರನ್ನು ದೂಷಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಖುಷ್ಬು ಸುಂದರ್ ಅವರು 2018ರಲ್ಲಿ ಪೋಸ್ಟ್ ಮಾಡಿದ್ದ ಟ್ವೀಟ್ ಶನಿವಾರ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲಿ ಅವರು ಲಲಿತ್ ಮೋದಿ ಮತ್ತು ನೀರವ್ ಮೋದಿಯನ್ನು ಉಲ್ಲೇಖಿಸಿದ್ದಾರೆ – ವಂಚನೆ ಆರೋಪದಲ್ಲಿ ಪರಾರಿಯಾಗಿರುವ ಉದ್ಯಮಿಗಳು. “ಮೋದಿ ಎಂದರೆ ಭ್ರಷ್ಟಾಚಾರ”, “ಮೋದಿಯ ಅರ್ಥವನ್ನು ಭ್ರಷ್ಟಾಚಾರ ಎಂದು ಬದಲಾಯಿಸೋಣ … ಅದೇ ಉತ್ತಮವಾಗಿದೆ” ಎಂದು ಸುಂದರ್ ಪೋಸ್ಟ್ ಮಾಡಿದ್ದರು.

ಕರ್ನಾಟಕದಲ್ಲಿ 2019ರ ಚುನಾವಣಾ ರ್ಯಾಲಿಯಲ್ಲಿ ರಾಹುಲ್ ಗಾಂಧಿಯವರು, ”ನನ್ನ ಬಳಿ ಒಂದು ಪ್ರಶ್ನೆ ಇದೆ. ನೀರವ್ ಮೋದಿ ಇರಬಹುದು, ಲಲಿತ್ ಮೋದಿ ಇರಬಹುದು ಅಥವಾ ನರೇಂದ್ರ ಮೋದಿ ಇರಬಹುದು. ಎಲ್ಲ ಕಳ್ಳರ ಹೆಸರಿನಲ್ಲಿಯೂ ಮೋದಿ ಎಂದು ಏಕೆ ಇದೆ? ಎಂದು ಹೇಳಿದ್ದರು. ಖುಷ್ಬು ಅವರ ಟ್ವೀಟ್‌ನಲ್ಲೂ ರಾಹುಲ್‌ ಗಾಂಧಿಯವರ ಹೇಳಿಕೆಯನ್ನು ಹೋಲುವ ಬರಹವಿದೆ.

ಶನಿವಾರ ಪಿಟಿಐ ಜೊತೆ ಮಾತನಾಡಿದ ಖುಷ್ಬು ಅವರು ತಮ್ಮ ಟ್ವೀಟ್‌ಗೆ ಸಮರ್ಥನೆ ಮಾಡಿಕೊಂಡಿದ್ದಾರೆ. ”ನಾನು ಈ ಕಾಮೆಂಟ್ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್‌ನಲ್ಲಿದ್ದೆ. ನಾನು ಅಲ್ಲಿಯ ನಾಯಕರನ್ನು ಅನುಸರಿಸುತ್ತಿದ್ದೆ ಮತ್ತು ಆ ಪಕ್ಷದ ಭಾಷೆಯಲ್ಲಿಯೇ ಮಾತನಾಡುತ್ತಿದ್ದೆ” ಎಂದು ಹೇಳಿದ್ದಾರೆ.

”ಈಗ ಕಾಂಗ್ರೆಸ್‌ನವರು ನನ್ನ ಹಳೆಯ ಟ್ವೀಟ್‌ಗಳನ್ನು ತರಾಟೆಗೆ ತೆಗೆದುಕೊಂಡಿರುವುದನ್ನು ನೋಡಿದರೆ ಅವರು ಎಷ್ಟು ಹತಾಶವಾಗಿದೆ ಎಂಬುದನ್ನು ತೋರಿಸುತ್ತದೆ. ಭ್ರಷ್ಟಾಚಾರದ ಆರೋಪ ಮಾಡುವುದಕ್ಕೂ ಯಾರನ್ನಾದರೂ ಕಳ್ಳ ಎಂದು ಕರೆಯುವುದಕ್ಕೂ ವ್ಯತ್ಯಾಸವಿದೆ. ಧೈರ್ಯವಿದ್ದರೆ ನನ್ನ ವಿರುದ್ಧ ಕೇಸು ದಾಖಲಿಸಿ” ಎಂದು ಖುಷ್ಬು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಧ್ಯೆ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಗಾಂಧಿ ಅವರು, ”ತಮ್ಮ ವಿರುದ್ಧದ ಕ್ರಮಗಳಿಗೆ ಹೆದರುವುದಿಲ್ಲ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಕೇಳುವುದನ್ನು ಮುಂದುವರಿಸುತ್ತೇನೆ” ಎಂದು ಪ್ರತಿಪಾದಿಸಿದರು. ಸಂಸತ್ತಿನಲ್ಲಿ ಅದಾನಿ ಬಗ್ಗೆ ಮಾತನಾಡಲು ಪ್ರಧಾನಿ ಹೆದರಿದ್ದರಿಂದ, ತಮ್ಮನ್ನು ಅನರ್ಹಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅದಾನಿ ವಂಚನೆ ಬಗ್ಗೆ ಹಿಂಡೆನ್‌ಬರ್ಗ್ ವರದಿ ಮಾಡಿದ ಬೆನ್ನಲ್ಲೇ ಜನವರಿಯಿಂದ ಅದಾನಿ ಸಂಸ್ಥೆಗಳ ಷೇರುಗಳು ಕುಸಿದಿವೆ. ಅದಾನಿ ವಿರುದ್ಧ ತನಿಖೆಗೆ ಆದೇಶಿಸುವಂತೆ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದರೂ ಸರ್ಕಾರ ಮಾತನಾಡುತ್ತಿಲ್ಲ. ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿಗೆ ಪ್ರಧಾನಿ ಒಲವು ತೋರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...