Homeರಾಜಕೀಯನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

ನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

- Advertisement -
- Advertisement -

ನಮ್ಮ ಭಾರತ ದೇಶ ಈವರೆಗೆ ಕಂಡ ಅಪರೂಪದ ಗುಣಸಂಪನ್ನ ಮೋದಿ ಮಹಾತ್ಮನಿಗೆ ಉಳಿದವರಿರಲಿ, ಬಿಜೆಪಿಗಳೇ ಹೆದರುತ್ತವೆಯಂತಲ್ಲಾ. ಮೂಲತಃ ಬಿಜೆಪಿಗಳೇ ಹುಟ್ಟು ಪುಕ್ಕಲುಗಳು, ಅದಕ್ಕೇ ಅವುಗಳ ಬಳಿ ಲಾಠಿ ಇರುವುದು! ಇರಲಿ ನಮ್ಮ ಮೋದಿ ಮಹಾತ್ಮನನ್ನು ಮುಗಿಸಲು ವಯಸ್ಸಾದ ವಿದ್ವಾಂಸರು ಅದರಲ್ಲೂ ಮಾಜಿ ನಕ್ಸಲರು ನೀಲನಕ್ಷೆ ತಯಾರಿಸುತ್ತಿದ್ದರೆಂದು ಇಂಕಿನ ವಾಸನೆಯನ್ನೆ ಹಿಡಿದುಹೋಗಿ ಪತ್ತೆಹಚ್ಚಿ ಗೃಹಬಂಧನಕ್ಕಾಗಿರುವ ಪೂನಾ ಪೊಲೀಸರು ದಾಬೊಲ್ಕರ್, ಪನ್ಸಾರೆ ಕತೆ ಮುಗಿದು ನಾಲ್ಕು ವರ್ಷಗಳಾದರೂ ಸುಮ್ಮನಿದ್ದದ್ದು ಅಷ್ಟೇನು ಸೋಜಿಗವಲ್ಲವಂತಲ್ಲಾ. ಇಂತಹ ಪೊಲೀಸರು ಕರ್ನಾಟಕದಲ್ಲೇನಾದರೂ ಇದ್ದರೆ ಇಷ್ಟರಲ್ಲಿ ಗೌರಿ ಕೇಸಿನ ಕತೆ ಮುಗಿಸಿ ಬಿ-ರಿಪೋರ್ಟಾಕುತ್ತಿದ್ದರಂತಲ್ಲಾ. ಇದನ್ನೆಲ್ಲಾ ಗಮನಿಸಿದರೆ ಕೊಲೆಗಡುಕ ಬಿಜೆಪಿಗಳು ಮತ್ತೆ ಈ ನಾಡಿನಲ್ಲಿ ವಕ್ಕರಿಸದಂತೆ ಡಿ.ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್‍ಗಳಾದಿಯಾಗಿ ಎಲ್ಲಾ ಮನುಷ್ಯರು ಮನುಷ್ಯರಲ್ಲದವರು ವಕ್ಕರಿಸದಂತೆ ಎಚ್ಚರ ವಹಿಸಬೇಕೆಂಬುದು ಕರ್ನಾಟಕದ ಮಾನವಂತರ ಇಂಗಿತವಾಗಿದೆಯಂತಲ್ಲಾ. ಥೂತ್ತೇರಿ

*******

ಮೋದಿ ತಮ್ಮ 68ನೇ ಹುಟ್ಟುಹಬ್ಬವನ್ನು ಶಾಲಾಮಕ್ಕಳ ಜೊತೆ ಆಚರಿಸಿದರಂತೆ. ಅಚರಿಸಿದ್ದು ಹಾಳುಬಿದ್ದೋಗಲಿ ಮೋದಿ ಮಕ್ಕಳಿಗೆ ಪ್ರಶ್ನೆ ಕೇಳಲು ಭಯಪಡಬೇಡಿ ಎಂಬ ಬುದ್ಧಿ ಮಾತನ್ನ ಹೇಳಿದರಂತೆ. ಏಕೆಂದರೆ ಈಚೆಗೆ ಬಿಜೆಪಿಗಳು ಮೋದಿ ಆಡಳಿತವೈಖರಿ ಬಗ್ಗೆ ಪ್ರಶ್ನೆ ಕೇಳಲು ಹೆದರುತ್ತಿವೆಯಂತೆ. ಇದನ್ನು ಮನಗಂಡ ಮೋದಿ ಪ್ರಶ್ನೆ ಕೇಳುವ ಭಯವನ್ನು ಬಾಲ್ಯದಲ್ಲೇ ನಿವಾರಿಸಲು ಪಣ ತೊಟ್ಟಿದ್ದಾರಂತಲ್ಲಾ. ಸಾಮಾನ್ಯವಾಗಿ ಬಿಜೆಪಿಗಳು ಅಂದರೆ ಆರೆಸ್ಸೆಸ್ಸಿಗರು ಬಲಿತ ಜನರ ಸನಿಹಕ್ಕೆ ಹೋಗುವುದಿಲ್ಲ. ಬದಲಿಗೆ ಎಳೆ ಮಕ್ಕಳನ್ನ ಎತ್ತಿಕೊಂಡು ಚೆಡ್ಡಿಹಾಕಿ ಲಾಠಿಕೊಟ್ಟುಬಿಡುತ್ತವೆ. ಆದ್ದರಿಂದ ಮೋದಿ ಹದಿನೇಳು ವರ್ಷ ಭಾರತದ ಪ್ರಧಾನಿಯಾಗಿದ್ದ ನೆಹರು ತಮ್ಮ ಹುಟ್ಟುಹಬ್ಬದಂದು ಪಾರ್ಕಿನಲ್ಲಿ ಮಕ್ಕಳ ಜೊತೆ ಮಗುವಾಗಿ ಆಟವಾಡಿ ಕತೆ ಹೇಳಿ-ಕೇಳಿ ಖುಷಿ ಪಡುತ್ತಿದ್ದರು. ಎಲ್ಲದರಲ್ಲೂ ನೆಹರು ಮೀರಿಸಲು ಹೋರಾಡುವ ಈ ಮೋದಿ ಎಲ್ಲೀ ಆ ನೆಹರು ಎಲ್ಲೀ ಹಳ್ಳಿ ಗಾದೆಯಂತೆ ರಂಗನ ಮುಂದೆ ಸಿಂಗನೆ ಎಂಬಂತಾಯ್ತಲ್ಲಾ ಥೂತ್ತೇರಿ.

*******

ಕುಮಾರಣ್ಣನ ಸರಕಾರ ಬುಡಭದ್ರವಿಲ್ಲದೆ ಅಲ್ಲಾಡುತ್ತಿರುವುದನ್ನ ನೋಡಿದ ಒಕ್ಕಲಿಗ ಜಗತ್ತಿನ ಗುರುವಾದ ನಿರ್ಮಲಾನಂದ ಸ್ವಾಮಿ ಈ ಸರಕಾರ ಬಿದ್ದರೆ ಅದು ದೈವಕೃಪೆಗೆ ವಿರುದ್ಧ ಎಂದರಂತಲ್ಲಾ. ಈ ನಿರ್ಮಲಾನಂದ ಚಿನ್ನದಂತಹ ಸ್ವಾಮಿ. ಏಕೆಂದರೆ ಎಂ.ಟೆಕ್‍ನಲ್ಲಿ ಇವರು ಹೊನ್ನ ಶಿಖರವೇರಿದ್ದರಂತೆ. ಆ ವಿದ್ವತ್ತಿಗೂ ಈಗ ಇವರು ಸರಕಾರದ ವಿಷಯದಲ್ಲಾಡುತ್ತಿರುವ ಮಾತಿಗೂ ಯಾವ ಸಂಬಂಧವೂ ಇಲ್ಲವಂತ¯್ಲ. ಸಂವಿಧಾನದಲ್ಲಿನ ಚುನಾವಣಾ ನಿಯಮದಂತೆ ಚುನಾವಣೆ ನಡೆದಿದ್ದೆ ಜಾತ್ಯತೀತ ಮನಸ್ಸುಗಳು 78 ಸೀಟು ಗೆಲ್ಲಿಸಿವೆ. ಧರ್ಮಾಂಧರು 104 ಸೀಟು ಗೆದ್ದಿದ್ದಾರೆ ಹಾಗೆ ಜಾತ್ಯಂಧರು 38 ಸೀಟು ಗೆಲ್ಲಿಸಿಕೊಂಡಿದ್ದಾರೆ. ಧರ್ಮಾಂಧರನ್ನ ದೂರವಿಡುವ ಸಲುವಾಗಿ ಜಾತ್ಯತೀತರು ಮತ್ತು ಜಾತಿವಾದಿಗಳು ಸೇರಿ ಸರಕಾರ ಮಾಡಿದ್ದಾರೆ. ಕುಪಿತಗೊಂಡ ಧರ್ಮಾಂಧರು ಸರಕಾರ ಕೆಡವಲು ಹಗಲುರಾತ್ರಿ ಹಾರೆಗುದ್ದಲಿಯೊಂದಿಗೆ ಡೈನಮೆಟ್‍ಗಳನ್ನ ಉಪಯೋಗಿಸುವ ಬೆದರಿಕೆಯೊಂದಿಗೆ ಕೆಲಸ ಮಾಡುತ್ತಿವೆ. ಇದು ಸಂವಿಧಾನಕ್ಕೆ ಮುಖ್ಯವಾಗಿ ಕೋರ್ಟಿಗೆ ಬಗೆಯುವ ದ್ರೋಹವಾಗಿದೆ. ಇಂತಲ್ಲಿ ಸರಕಾರ ಉರುಳಿದರೆ ಅದು ದೈವಕೃಪೆಗೆ ವಿರುದ್ಧ ಹೇಗಾಗುತ್ತದೆಂದು ಕೇಳಿದರೆ ನಿವರ್iಲಾನಂದರು ನಿರುತ್ತರ ಕುಮಾರನಂತಾದರಂತಲ್ಲಾ. ಥೂತ್ತೇರಿ

*******

ಕೇವಲ 37 ಸೀಟುಗಳನ್ನ ಹೊಂದಿದ ಜೆಡಿಎಸ್ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದು ಸರಕಾರ ನಡೆಸುತ್ತಿರುವುದು ಸಾಮಾನ್ಯ ಸಂಗತಿಯಲ್ಲ. ಇದಕ್ಕೆ ಯಜ್ಞ, ಯಾಗ, ಹೋಮ ಮತ್ತು ನೂರಾರು ಕ್ಷೇತ್ರ ದರ್ಶನದ ಪ್ರಭಾವವೇ ಸರಕಾರವನ್ನು ಮುನ್ನಡೆಸುತ್ತಿದೆ ಎಂದು ಖಚಿತವಾಗಿ ನಂಬಿರುವ ದೇವೇಗೌಡರಿಗೆ ಪ್ರಜಾಪ್ರಭುತ್ವದಲ್ಲಿನ ಚಮತ್ಕಾರವೇ ಹೊಳೆಯದಿರುವುದು ಆಶ್ಚರ್ಯ ತಂದಿದೆಯಂತ¯್ಲ. ಆದರೇನು ಅಪ್ಪನ ಮೂಢನಂಬಿಕೆ ಮಾತುಗಳನ್ನೆ ನಂಬಿದ್ದ ಕುಮಾರಣ್ಣ ಈಚೆಗೆ ಜ್ಞಾನೋದಯವಾದಂತೆ ಸಿದ್ದರಾಮಯ್ಯನ ಕೃಪೆಯಿದ್ದರೆ ಐದು ವರ್ಷ ಮುಗಿಸಿ ಮನೆಗೆ ಹೋಗುತ್ತೇವೆ ಎಂದಿದ್ದಾರಲ್ಲಾ. ಇದರಿಂದ ಸಿದ್ದುಗೆ ಬಿದ್ದ ಹೊಡೆತವೆಂದರೆ ಈವರೆಗೆ ಸರಕಾರವನ್ನು ಅಲ್ಲಾಡಿಸುತ್ತಿದ್ದ ಕೀರ್ತಿ ಸಿದ್ದುಗೆ ಸಲ್ಲುತ್ತದೆ. ಅದಷ್ಟೇ ಅಲ್ಲ ಮುಂದಿನ ಎಲ್ಲಾ ತಾರಾತಿಗಡಿಯ ರಗಳೆ ಸಿದ್ದು ಬೆನ್ನ ಬೀಳುವುದರಲ್ಲಿ ಸಂಶಯವಿಲ್ಲ. ಇದಾವುದನ್ನ ಯೋಚಿಸದ ಸಿದ್ದು ಅಂತೂ ಕುಮಾರನಿಗೆ ನನ್ನ ಕೃಪೆ ಮುಖ್ಯ ಎಂಬುದು ಈಗಲಾದರೂ ಹೊಳೆಯಿತಲ್ಲ ಎಂದು ಆಕಳಿಕೆ ತೆಗೆದು ಸೋಫಾಕ್ಕೆ ಒರಗಿದರಂತಲ್ಲಾ, ಥೂತ್ತೇರಿ.

*******

ಹಟ ಸಂಭೋಗದ ಮುದುಕನಂತೆ ಹಗಲೂರಾತ್ರಿ ಅಧಿಕಾರಕ್ಕಾಗಿ ಹೋರಾಡುತ್ತಿರುವ ಎಡೂರಪ್ಪನನ್ನು ಗಮನಿಸಿದ ಚೆಡ್ಡಿಗಳು ಎಡೂರಪ್ಪನ ಇಂತಹ ಕಾರ್ಯಾಚರಣೆಗೆ ನಮ್ಮ ವಿರೋಧವಿದೆ ಎಂಬ ಸುದ್ದಿ ಬಿತ್ತರಿಸಿವೆಯಲ್ಲಾ. ಅಂದರೆ ಆರೆಸ್ಸೆಸ್ಸಿಗರು ಶ್ರೇಷ್ಠವಾದ ಜನತಂತ್ರ ರಾಜಕಾರಣ. ಎಡೂರಪ್ಪನದಲ್ಲ ಎಂದು ಅತ್ತ ಎಡೂರಪ್ಪನನ್ನ ದೂರಿ ಇತ್ತ ತಾವು ಮಾತ್ರ ಧರ್ಮವಂತರೆಂದು ಬಿಂಬಿಸಲು ಹೊರಟಿರುವುದು ಸ್ವತಃ ಎಡೂರಪ್ಪನಿಗೇ ಸಿಟ್ಟು ತರಿಸಿದೆಯಂತಲ್ಲಾ. ಕಂಠಪೂರ್ತಿ ಭ್ರಷ್ಟ ಎಂಬುದನ್ನ ಬಿಟ್ಟರೆ, ಎಡೂರಪ್ಪ ಎಂದು ಮುಸ್ಲಿಮರನ್ನ ದೂಷಿಸಿದವರಲ್ಲಾ ಇದಕ್ಕೆ ಕಾರಣ ಅವರ ಕ್ಷೇತ್ರದ ಮುಸ್ಲಿಮರ ಬೆಂಬಲ. ಜೊತೆಗೆ ಈ ಅನಂತ, ಈಶ್ವರ, ಜೋಷಿ, ಯತ್ನಾಳ ಇಂತ ಮತಾಂಧರಾಡುವ ಮಾತನ್ನ ಯಡ್ಡಿ ಎಂದೂ ಆಡಿದವರಲ್ಲ. ಆದ್ದರಿಂದ ಚಿಡ್ಡಿಗಳು ಬಿಟ್ಟುಹೋದ ಮನೆಗೆ ಬಂದ ಯಡ್ಡಿ ಬಗ್ಗೆ ಎಚ್ಚರಿಕೆಯಿಂದಲೇ ವರ್ತಿಸುತ್ತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....