Homeರಾಜಕೀಯನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

ನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

- Advertisement -
- Advertisement -

ನಮ್ಮ ಭಾರತ ದೇಶ ಈವರೆಗೆ ಕಂಡ ಅಪರೂಪದ ಗುಣಸಂಪನ್ನ ಮೋದಿ ಮಹಾತ್ಮನಿಗೆ ಉಳಿದವರಿರಲಿ, ಬಿಜೆಪಿಗಳೇ ಹೆದರುತ್ತವೆಯಂತಲ್ಲಾ. ಮೂಲತಃ ಬಿಜೆಪಿಗಳೇ ಹುಟ್ಟು ಪುಕ್ಕಲುಗಳು, ಅದಕ್ಕೇ ಅವುಗಳ ಬಳಿ ಲಾಠಿ ಇರುವುದು! ಇರಲಿ ನಮ್ಮ ಮೋದಿ ಮಹಾತ್ಮನನ್ನು ಮುಗಿಸಲು ವಯಸ್ಸಾದ ವಿದ್ವಾಂಸರು ಅದರಲ್ಲೂ ಮಾಜಿ ನಕ್ಸಲರು ನೀಲನಕ್ಷೆ ತಯಾರಿಸುತ್ತಿದ್ದರೆಂದು ಇಂಕಿನ ವಾಸನೆಯನ್ನೆ ಹಿಡಿದುಹೋಗಿ ಪತ್ತೆಹಚ್ಚಿ ಗೃಹಬಂಧನಕ್ಕಾಗಿರುವ ಪೂನಾ ಪೊಲೀಸರು ದಾಬೊಲ್ಕರ್, ಪನ್ಸಾರೆ ಕತೆ ಮುಗಿದು ನಾಲ್ಕು ವರ್ಷಗಳಾದರೂ ಸುಮ್ಮನಿದ್ದದ್ದು ಅಷ್ಟೇನು ಸೋಜಿಗವಲ್ಲವಂತಲ್ಲಾ. ಇಂತಹ ಪೊಲೀಸರು ಕರ್ನಾಟಕದಲ್ಲೇನಾದರೂ ಇದ್ದರೆ ಇಷ್ಟರಲ್ಲಿ ಗೌರಿ ಕೇಸಿನ ಕತೆ ಮುಗಿಸಿ ಬಿ-ರಿಪೋರ್ಟಾಕುತ್ತಿದ್ದರಂತಲ್ಲಾ. ಇದನ್ನೆಲ್ಲಾ ಗಮನಿಸಿದರೆ ಕೊಲೆಗಡುಕ ಬಿಜೆಪಿಗಳು ಮತ್ತೆ ಈ ನಾಡಿನಲ್ಲಿ ವಕ್ಕರಿಸದಂತೆ ಡಿ.ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್‍ಗಳಾದಿಯಾಗಿ ಎಲ್ಲಾ ಮನುಷ್ಯರು ಮನುಷ್ಯರಲ್ಲದವರು ವಕ್ಕರಿಸದಂತೆ ಎಚ್ಚರ ವಹಿಸಬೇಕೆಂಬುದು ಕರ್ನಾಟಕದ ಮಾನವಂತರ ಇಂಗಿತವಾಗಿದೆಯಂತಲ್ಲಾ. ಥೂತ್ತೇರಿ

*******

ಮೋದಿ ತಮ್ಮ 68ನೇ ಹುಟ್ಟುಹಬ್ಬವನ್ನು ಶಾಲಾಮಕ್ಕಳ ಜೊತೆ ಆಚರಿಸಿದರಂತೆ. ಅಚರಿಸಿದ್ದು ಹಾಳುಬಿದ್ದೋಗಲಿ ಮೋದಿ ಮಕ್ಕಳಿಗೆ ಪ್ರಶ್ನೆ ಕೇಳಲು ಭಯಪಡಬೇಡಿ ಎಂಬ ಬುದ್ಧಿ ಮಾತನ್ನ ಹೇಳಿದರಂತೆ. ಏಕೆಂದರೆ ಈಚೆಗೆ ಬಿಜೆಪಿಗಳು ಮೋದಿ ಆಡಳಿತವೈಖರಿ ಬಗ್ಗೆ ಪ್ರಶ್ನೆ ಕೇಳಲು ಹೆದರುತ್ತಿವೆಯಂತೆ. ಇದನ್ನು ಮನಗಂಡ ಮೋದಿ ಪ್ರಶ್ನೆ ಕೇಳುವ ಭಯವನ್ನು ಬಾಲ್ಯದಲ್ಲೇ ನಿವಾರಿಸಲು ಪಣ ತೊಟ್ಟಿದ್ದಾರಂತಲ್ಲಾ. ಸಾಮಾನ್ಯವಾಗಿ ಬಿಜೆಪಿಗಳು ಅಂದರೆ ಆರೆಸ್ಸೆಸ್ಸಿಗರು ಬಲಿತ ಜನರ ಸನಿಹಕ್ಕೆ ಹೋಗುವುದಿಲ್ಲ. ಬದಲಿಗೆ ಎಳೆ ಮಕ್ಕಳನ್ನ ಎತ್ತಿಕೊಂಡು ಚೆಡ್ಡಿಹಾಕಿ ಲಾಠಿಕೊಟ್ಟುಬಿಡುತ್ತವೆ. ಆದ್ದರಿಂದ ಮೋದಿ ಹದಿನೇಳು ವರ್ಷ ಭಾರತದ ಪ್ರಧಾನಿಯಾಗಿದ್ದ ನೆಹರು ತಮ್ಮ ಹುಟ್ಟುಹಬ್ಬದಂದು ಪಾರ್ಕಿನಲ್ಲಿ ಮಕ್ಕಳ ಜೊತೆ ಮಗುವಾಗಿ ಆಟವಾಡಿ ಕತೆ ಹೇಳಿ-ಕೇಳಿ ಖುಷಿ ಪಡುತ್ತಿದ್ದರು. ಎಲ್ಲದರಲ್ಲೂ ನೆಹರು ಮೀರಿಸಲು ಹೋರಾಡುವ ಈ ಮೋದಿ ಎಲ್ಲೀ ಆ ನೆಹರು ಎಲ್ಲೀ ಹಳ್ಳಿ ಗಾದೆಯಂತೆ ರಂಗನ ಮುಂದೆ ಸಿಂಗನೆ ಎಂಬಂತಾಯ್ತಲ್ಲಾ ಥೂತ್ತೇರಿ.

*******

ಕುಮಾರಣ್ಣನ ಸರಕಾರ ಬುಡಭದ್ರವಿಲ್ಲದೆ ಅಲ್ಲಾಡುತ್ತಿರುವುದನ್ನ ನೋಡಿದ ಒಕ್ಕಲಿಗ ಜಗತ್ತಿನ ಗುರುವಾದ ನಿರ್ಮಲಾನಂದ ಸ್ವಾಮಿ ಈ ಸರಕಾರ ಬಿದ್ದರೆ ಅದು ದೈವಕೃಪೆಗೆ ವಿರುದ್ಧ ಎಂದರಂತಲ್ಲಾ. ಈ ನಿರ್ಮಲಾನಂದ ಚಿನ್ನದಂತಹ ಸ್ವಾಮಿ. ಏಕೆಂದರೆ ಎಂ.ಟೆಕ್‍ನಲ್ಲಿ ಇವರು ಹೊನ್ನ ಶಿಖರವೇರಿದ್ದರಂತೆ. ಆ ವಿದ್ವತ್ತಿಗೂ ಈಗ ಇವರು ಸರಕಾರದ ವಿಷಯದಲ್ಲಾಡುತ್ತಿರುವ ಮಾತಿಗೂ ಯಾವ ಸಂಬಂಧವೂ ಇಲ್ಲವಂತ¯್ಲ. ಸಂವಿಧಾನದಲ್ಲಿನ ಚುನಾವಣಾ ನಿಯಮದಂತೆ ಚುನಾವಣೆ ನಡೆದಿದ್ದೆ ಜಾತ್ಯತೀತ ಮನಸ್ಸುಗಳು 78 ಸೀಟು ಗೆಲ್ಲಿಸಿವೆ. ಧರ್ಮಾಂಧರು 104 ಸೀಟು ಗೆದ್ದಿದ್ದಾರೆ ಹಾಗೆ ಜಾತ್ಯಂಧರು 38 ಸೀಟು ಗೆಲ್ಲಿಸಿಕೊಂಡಿದ್ದಾರೆ. ಧರ್ಮಾಂಧರನ್ನ ದೂರವಿಡುವ ಸಲುವಾಗಿ ಜಾತ್ಯತೀತರು ಮತ್ತು ಜಾತಿವಾದಿಗಳು ಸೇರಿ ಸರಕಾರ ಮಾಡಿದ್ದಾರೆ. ಕುಪಿತಗೊಂಡ ಧರ್ಮಾಂಧರು ಸರಕಾರ ಕೆಡವಲು ಹಗಲುರಾತ್ರಿ ಹಾರೆಗುದ್ದಲಿಯೊಂದಿಗೆ ಡೈನಮೆಟ್‍ಗಳನ್ನ ಉಪಯೋಗಿಸುವ ಬೆದರಿಕೆಯೊಂದಿಗೆ ಕೆಲಸ ಮಾಡುತ್ತಿವೆ. ಇದು ಸಂವಿಧಾನಕ್ಕೆ ಮುಖ್ಯವಾಗಿ ಕೋರ್ಟಿಗೆ ಬಗೆಯುವ ದ್ರೋಹವಾಗಿದೆ. ಇಂತಲ್ಲಿ ಸರಕಾರ ಉರುಳಿದರೆ ಅದು ದೈವಕೃಪೆಗೆ ವಿರುದ್ಧ ಹೇಗಾಗುತ್ತದೆಂದು ಕೇಳಿದರೆ ನಿವರ್iಲಾನಂದರು ನಿರುತ್ತರ ಕುಮಾರನಂತಾದರಂತಲ್ಲಾ. ಥೂತ್ತೇರಿ

*******

ಕೇವಲ 37 ಸೀಟುಗಳನ್ನ ಹೊಂದಿದ ಜೆಡಿಎಸ್ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದು ಸರಕಾರ ನಡೆಸುತ್ತಿರುವುದು ಸಾಮಾನ್ಯ ಸಂಗತಿಯಲ್ಲ. ಇದಕ್ಕೆ ಯಜ್ಞ, ಯಾಗ, ಹೋಮ ಮತ್ತು ನೂರಾರು ಕ್ಷೇತ್ರ ದರ್ಶನದ ಪ್ರಭಾವವೇ ಸರಕಾರವನ್ನು ಮುನ್ನಡೆಸುತ್ತಿದೆ ಎಂದು ಖಚಿತವಾಗಿ ನಂಬಿರುವ ದೇವೇಗೌಡರಿಗೆ ಪ್ರಜಾಪ್ರಭುತ್ವದಲ್ಲಿನ ಚಮತ್ಕಾರವೇ ಹೊಳೆಯದಿರುವುದು ಆಶ್ಚರ್ಯ ತಂದಿದೆಯಂತ¯್ಲ. ಆದರೇನು ಅಪ್ಪನ ಮೂಢನಂಬಿಕೆ ಮಾತುಗಳನ್ನೆ ನಂಬಿದ್ದ ಕುಮಾರಣ್ಣ ಈಚೆಗೆ ಜ್ಞಾನೋದಯವಾದಂತೆ ಸಿದ್ದರಾಮಯ್ಯನ ಕೃಪೆಯಿದ್ದರೆ ಐದು ವರ್ಷ ಮುಗಿಸಿ ಮನೆಗೆ ಹೋಗುತ್ತೇವೆ ಎಂದಿದ್ದಾರಲ್ಲಾ. ಇದರಿಂದ ಸಿದ್ದುಗೆ ಬಿದ್ದ ಹೊಡೆತವೆಂದರೆ ಈವರೆಗೆ ಸರಕಾರವನ್ನು ಅಲ್ಲಾಡಿಸುತ್ತಿದ್ದ ಕೀರ್ತಿ ಸಿದ್ದುಗೆ ಸಲ್ಲುತ್ತದೆ. ಅದಷ್ಟೇ ಅಲ್ಲ ಮುಂದಿನ ಎಲ್ಲಾ ತಾರಾತಿಗಡಿಯ ರಗಳೆ ಸಿದ್ದು ಬೆನ್ನ ಬೀಳುವುದರಲ್ಲಿ ಸಂಶಯವಿಲ್ಲ. ಇದಾವುದನ್ನ ಯೋಚಿಸದ ಸಿದ್ದು ಅಂತೂ ಕುಮಾರನಿಗೆ ನನ್ನ ಕೃಪೆ ಮುಖ್ಯ ಎಂಬುದು ಈಗಲಾದರೂ ಹೊಳೆಯಿತಲ್ಲ ಎಂದು ಆಕಳಿಕೆ ತೆಗೆದು ಸೋಫಾಕ್ಕೆ ಒರಗಿದರಂತಲ್ಲಾ, ಥೂತ್ತೇರಿ.

*******

ಹಟ ಸಂಭೋಗದ ಮುದುಕನಂತೆ ಹಗಲೂರಾತ್ರಿ ಅಧಿಕಾರಕ್ಕಾಗಿ ಹೋರಾಡುತ್ತಿರುವ ಎಡೂರಪ್ಪನನ್ನು ಗಮನಿಸಿದ ಚೆಡ್ಡಿಗಳು ಎಡೂರಪ್ಪನ ಇಂತಹ ಕಾರ್ಯಾಚರಣೆಗೆ ನಮ್ಮ ವಿರೋಧವಿದೆ ಎಂಬ ಸುದ್ದಿ ಬಿತ್ತರಿಸಿವೆಯಲ್ಲಾ. ಅಂದರೆ ಆರೆಸ್ಸೆಸ್ಸಿಗರು ಶ್ರೇಷ್ಠವಾದ ಜನತಂತ್ರ ರಾಜಕಾರಣ. ಎಡೂರಪ್ಪನದಲ್ಲ ಎಂದು ಅತ್ತ ಎಡೂರಪ್ಪನನ್ನ ದೂರಿ ಇತ್ತ ತಾವು ಮಾತ್ರ ಧರ್ಮವಂತರೆಂದು ಬಿಂಬಿಸಲು ಹೊರಟಿರುವುದು ಸ್ವತಃ ಎಡೂರಪ್ಪನಿಗೇ ಸಿಟ್ಟು ತರಿಸಿದೆಯಂತಲ್ಲಾ. ಕಂಠಪೂರ್ತಿ ಭ್ರಷ್ಟ ಎಂಬುದನ್ನ ಬಿಟ್ಟರೆ, ಎಡೂರಪ್ಪ ಎಂದು ಮುಸ್ಲಿಮರನ್ನ ದೂಷಿಸಿದವರಲ್ಲಾ ಇದಕ್ಕೆ ಕಾರಣ ಅವರ ಕ್ಷೇತ್ರದ ಮುಸ್ಲಿಮರ ಬೆಂಬಲ. ಜೊತೆಗೆ ಈ ಅನಂತ, ಈಶ್ವರ, ಜೋಷಿ, ಯತ್ನಾಳ ಇಂತ ಮತಾಂಧರಾಡುವ ಮಾತನ್ನ ಯಡ್ಡಿ ಎಂದೂ ಆಡಿದವರಲ್ಲ. ಆದ್ದರಿಂದ ಚಿಡ್ಡಿಗಳು ಬಿಟ್ಟುಹೋದ ಮನೆಗೆ ಬಂದ ಯಡ್ಡಿ ಬಗ್ಗೆ ಎಚ್ಚರಿಕೆಯಿಂದಲೇ ವರ್ತಿಸುತ್ತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...