Homeರಾಜಕೀಯನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

ನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

- Advertisement -
- Advertisement -

ನಮ್ಮ ಭಾರತ ದೇಶ ಈವರೆಗೆ ಕಂಡ ಅಪರೂಪದ ಗುಣಸಂಪನ್ನ ಮೋದಿ ಮಹಾತ್ಮನಿಗೆ ಉಳಿದವರಿರಲಿ, ಬಿಜೆಪಿಗಳೇ ಹೆದರುತ್ತವೆಯಂತಲ್ಲಾ. ಮೂಲತಃ ಬಿಜೆಪಿಗಳೇ ಹುಟ್ಟು ಪುಕ್ಕಲುಗಳು, ಅದಕ್ಕೇ ಅವುಗಳ ಬಳಿ ಲಾಠಿ ಇರುವುದು! ಇರಲಿ ನಮ್ಮ ಮೋದಿ ಮಹಾತ್ಮನನ್ನು ಮುಗಿಸಲು ವಯಸ್ಸಾದ ವಿದ್ವಾಂಸರು ಅದರಲ್ಲೂ ಮಾಜಿ ನಕ್ಸಲರು ನೀಲನಕ್ಷೆ ತಯಾರಿಸುತ್ತಿದ್ದರೆಂದು ಇಂಕಿನ ವಾಸನೆಯನ್ನೆ ಹಿಡಿದುಹೋಗಿ ಪತ್ತೆಹಚ್ಚಿ ಗೃಹಬಂಧನಕ್ಕಾಗಿರುವ ಪೂನಾ ಪೊಲೀಸರು ದಾಬೊಲ್ಕರ್, ಪನ್ಸಾರೆ ಕತೆ ಮುಗಿದು ನಾಲ್ಕು ವರ್ಷಗಳಾದರೂ ಸುಮ್ಮನಿದ್ದದ್ದು ಅಷ್ಟೇನು ಸೋಜಿಗವಲ್ಲವಂತಲ್ಲಾ. ಇಂತಹ ಪೊಲೀಸರು ಕರ್ನಾಟಕದಲ್ಲೇನಾದರೂ ಇದ್ದರೆ ಇಷ್ಟರಲ್ಲಿ ಗೌರಿ ಕೇಸಿನ ಕತೆ ಮುಗಿಸಿ ಬಿ-ರಿಪೋರ್ಟಾಕುತ್ತಿದ್ದರಂತಲ್ಲಾ. ಇದನ್ನೆಲ್ಲಾ ಗಮನಿಸಿದರೆ ಕೊಲೆಗಡುಕ ಬಿಜೆಪಿಗಳು ಮತ್ತೆ ಈ ನಾಡಿನಲ್ಲಿ ವಕ್ಕರಿಸದಂತೆ ಡಿ.ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್‍ಗಳಾದಿಯಾಗಿ ಎಲ್ಲಾ ಮನುಷ್ಯರು ಮನುಷ್ಯರಲ್ಲದವರು ವಕ್ಕರಿಸದಂತೆ ಎಚ್ಚರ ವಹಿಸಬೇಕೆಂಬುದು ಕರ್ನಾಟಕದ ಮಾನವಂತರ ಇಂಗಿತವಾಗಿದೆಯಂತಲ್ಲಾ. ಥೂತ್ತೇರಿ

*******

ಮೋದಿ ತಮ್ಮ 68ನೇ ಹುಟ್ಟುಹಬ್ಬವನ್ನು ಶಾಲಾಮಕ್ಕಳ ಜೊತೆ ಆಚರಿಸಿದರಂತೆ. ಅಚರಿಸಿದ್ದು ಹಾಳುಬಿದ್ದೋಗಲಿ ಮೋದಿ ಮಕ್ಕಳಿಗೆ ಪ್ರಶ್ನೆ ಕೇಳಲು ಭಯಪಡಬೇಡಿ ಎಂಬ ಬುದ್ಧಿ ಮಾತನ್ನ ಹೇಳಿದರಂತೆ. ಏಕೆಂದರೆ ಈಚೆಗೆ ಬಿಜೆಪಿಗಳು ಮೋದಿ ಆಡಳಿತವೈಖರಿ ಬಗ್ಗೆ ಪ್ರಶ್ನೆ ಕೇಳಲು ಹೆದರುತ್ತಿವೆಯಂತೆ. ಇದನ್ನು ಮನಗಂಡ ಮೋದಿ ಪ್ರಶ್ನೆ ಕೇಳುವ ಭಯವನ್ನು ಬಾಲ್ಯದಲ್ಲೇ ನಿವಾರಿಸಲು ಪಣ ತೊಟ್ಟಿದ್ದಾರಂತಲ್ಲಾ. ಸಾಮಾನ್ಯವಾಗಿ ಬಿಜೆಪಿಗಳು ಅಂದರೆ ಆರೆಸ್ಸೆಸ್ಸಿಗರು ಬಲಿತ ಜನರ ಸನಿಹಕ್ಕೆ ಹೋಗುವುದಿಲ್ಲ. ಬದಲಿಗೆ ಎಳೆ ಮಕ್ಕಳನ್ನ ಎತ್ತಿಕೊಂಡು ಚೆಡ್ಡಿಹಾಕಿ ಲಾಠಿಕೊಟ್ಟುಬಿಡುತ್ತವೆ. ಆದ್ದರಿಂದ ಮೋದಿ ಹದಿನೇಳು ವರ್ಷ ಭಾರತದ ಪ್ರಧಾನಿಯಾಗಿದ್ದ ನೆಹರು ತಮ್ಮ ಹುಟ್ಟುಹಬ್ಬದಂದು ಪಾರ್ಕಿನಲ್ಲಿ ಮಕ್ಕಳ ಜೊತೆ ಮಗುವಾಗಿ ಆಟವಾಡಿ ಕತೆ ಹೇಳಿ-ಕೇಳಿ ಖುಷಿ ಪಡುತ್ತಿದ್ದರು. ಎಲ್ಲದರಲ್ಲೂ ನೆಹರು ಮೀರಿಸಲು ಹೋರಾಡುವ ಈ ಮೋದಿ ಎಲ್ಲೀ ಆ ನೆಹರು ಎಲ್ಲೀ ಹಳ್ಳಿ ಗಾದೆಯಂತೆ ರಂಗನ ಮುಂದೆ ಸಿಂಗನೆ ಎಂಬಂತಾಯ್ತಲ್ಲಾ ಥೂತ್ತೇರಿ.

*******

ಕುಮಾರಣ್ಣನ ಸರಕಾರ ಬುಡಭದ್ರವಿಲ್ಲದೆ ಅಲ್ಲಾಡುತ್ತಿರುವುದನ್ನ ನೋಡಿದ ಒಕ್ಕಲಿಗ ಜಗತ್ತಿನ ಗುರುವಾದ ನಿರ್ಮಲಾನಂದ ಸ್ವಾಮಿ ಈ ಸರಕಾರ ಬಿದ್ದರೆ ಅದು ದೈವಕೃಪೆಗೆ ವಿರುದ್ಧ ಎಂದರಂತಲ್ಲಾ. ಈ ನಿರ್ಮಲಾನಂದ ಚಿನ್ನದಂತಹ ಸ್ವಾಮಿ. ಏಕೆಂದರೆ ಎಂ.ಟೆಕ್‍ನಲ್ಲಿ ಇವರು ಹೊನ್ನ ಶಿಖರವೇರಿದ್ದರಂತೆ. ಆ ವಿದ್ವತ್ತಿಗೂ ಈಗ ಇವರು ಸರಕಾರದ ವಿಷಯದಲ್ಲಾಡುತ್ತಿರುವ ಮಾತಿಗೂ ಯಾವ ಸಂಬಂಧವೂ ಇಲ್ಲವಂತ¯್ಲ. ಸಂವಿಧಾನದಲ್ಲಿನ ಚುನಾವಣಾ ನಿಯಮದಂತೆ ಚುನಾವಣೆ ನಡೆದಿದ್ದೆ ಜಾತ್ಯತೀತ ಮನಸ್ಸುಗಳು 78 ಸೀಟು ಗೆಲ್ಲಿಸಿವೆ. ಧರ್ಮಾಂಧರು 104 ಸೀಟು ಗೆದ್ದಿದ್ದಾರೆ ಹಾಗೆ ಜಾತ್ಯಂಧರು 38 ಸೀಟು ಗೆಲ್ಲಿಸಿಕೊಂಡಿದ್ದಾರೆ. ಧರ್ಮಾಂಧರನ್ನ ದೂರವಿಡುವ ಸಲುವಾಗಿ ಜಾತ್ಯತೀತರು ಮತ್ತು ಜಾತಿವಾದಿಗಳು ಸೇರಿ ಸರಕಾರ ಮಾಡಿದ್ದಾರೆ. ಕುಪಿತಗೊಂಡ ಧರ್ಮಾಂಧರು ಸರಕಾರ ಕೆಡವಲು ಹಗಲುರಾತ್ರಿ ಹಾರೆಗುದ್ದಲಿಯೊಂದಿಗೆ ಡೈನಮೆಟ್‍ಗಳನ್ನ ಉಪಯೋಗಿಸುವ ಬೆದರಿಕೆಯೊಂದಿಗೆ ಕೆಲಸ ಮಾಡುತ್ತಿವೆ. ಇದು ಸಂವಿಧಾನಕ್ಕೆ ಮುಖ್ಯವಾಗಿ ಕೋರ್ಟಿಗೆ ಬಗೆಯುವ ದ್ರೋಹವಾಗಿದೆ. ಇಂತಲ್ಲಿ ಸರಕಾರ ಉರುಳಿದರೆ ಅದು ದೈವಕೃಪೆಗೆ ವಿರುದ್ಧ ಹೇಗಾಗುತ್ತದೆಂದು ಕೇಳಿದರೆ ನಿವರ್iಲಾನಂದರು ನಿರುತ್ತರ ಕುಮಾರನಂತಾದರಂತಲ್ಲಾ. ಥೂತ್ತೇರಿ

*******

ಕೇವಲ 37 ಸೀಟುಗಳನ್ನ ಹೊಂದಿದ ಜೆಡಿಎಸ್ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದು ಸರಕಾರ ನಡೆಸುತ್ತಿರುವುದು ಸಾಮಾನ್ಯ ಸಂಗತಿಯಲ್ಲ. ಇದಕ್ಕೆ ಯಜ್ಞ, ಯಾಗ, ಹೋಮ ಮತ್ತು ನೂರಾರು ಕ್ಷೇತ್ರ ದರ್ಶನದ ಪ್ರಭಾವವೇ ಸರಕಾರವನ್ನು ಮುನ್ನಡೆಸುತ್ತಿದೆ ಎಂದು ಖಚಿತವಾಗಿ ನಂಬಿರುವ ದೇವೇಗೌಡರಿಗೆ ಪ್ರಜಾಪ್ರಭುತ್ವದಲ್ಲಿನ ಚಮತ್ಕಾರವೇ ಹೊಳೆಯದಿರುವುದು ಆಶ್ಚರ್ಯ ತಂದಿದೆಯಂತ¯್ಲ. ಆದರೇನು ಅಪ್ಪನ ಮೂಢನಂಬಿಕೆ ಮಾತುಗಳನ್ನೆ ನಂಬಿದ್ದ ಕುಮಾರಣ್ಣ ಈಚೆಗೆ ಜ್ಞಾನೋದಯವಾದಂತೆ ಸಿದ್ದರಾಮಯ್ಯನ ಕೃಪೆಯಿದ್ದರೆ ಐದು ವರ್ಷ ಮುಗಿಸಿ ಮನೆಗೆ ಹೋಗುತ್ತೇವೆ ಎಂದಿದ್ದಾರಲ್ಲಾ. ಇದರಿಂದ ಸಿದ್ದುಗೆ ಬಿದ್ದ ಹೊಡೆತವೆಂದರೆ ಈವರೆಗೆ ಸರಕಾರವನ್ನು ಅಲ್ಲಾಡಿಸುತ್ತಿದ್ದ ಕೀರ್ತಿ ಸಿದ್ದುಗೆ ಸಲ್ಲುತ್ತದೆ. ಅದಷ್ಟೇ ಅಲ್ಲ ಮುಂದಿನ ಎಲ್ಲಾ ತಾರಾತಿಗಡಿಯ ರಗಳೆ ಸಿದ್ದು ಬೆನ್ನ ಬೀಳುವುದರಲ್ಲಿ ಸಂಶಯವಿಲ್ಲ. ಇದಾವುದನ್ನ ಯೋಚಿಸದ ಸಿದ್ದು ಅಂತೂ ಕುಮಾರನಿಗೆ ನನ್ನ ಕೃಪೆ ಮುಖ್ಯ ಎಂಬುದು ಈಗಲಾದರೂ ಹೊಳೆಯಿತಲ್ಲ ಎಂದು ಆಕಳಿಕೆ ತೆಗೆದು ಸೋಫಾಕ್ಕೆ ಒರಗಿದರಂತಲ್ಲಾ, ಥೂತ್ತೇರಿ.

*******

ಹಟ ಸಂಭೋಗದ ಮುದುಕನಂತೆ ಹಗಲೂರಾತ್ರಿ ಅಧಿಕಾರಕ್ಕಾಗಿ ಹೋರಾಡುತ್ತಿರುವ ಎಡೂರಪ್ಪನನ್ನು ಗಮನಿಸಿದ ಚೆಡ್ಡಿಗಳು ಎಡೂರಪ್ಪನ ಇಂತಹ ಕಾರ್ಯಾಚರಣೆಗೆ ನಮ್ಮ ವಿರೋಧವಿದೆ ಎಂಬ ಸುದ್ದಿ ಬಿತ್ತರಿಸಿವೆಯಲ್ಲಾ. ಅಂದರೆ ಆರೆಸ್ಸೆಸ್ಸಿಗರು ಶ್ರೇಷ್ಠವಾದ ಜನತಂತ್ರ ರಾಜಕಾರಣ. ಎಡೂರಪ್ಪನದಲ್ಲ ಎಂದು ಅತ್ತ ಎಡೂರಪ್ಪನನ್ನ ದೂರಿ ಇತ್ತ ತಾವು ಮಾತ್ರ ಧರ್ಮವಂತರೆಂದು ಬಿಂಬಿಸಲು ಹೊರಟಿರುವುದು ಸ್ವತಃ ಎಡೂರಪ್ಪನಿಗೇ ಸಿಟ್ಟು ತರಿಸಿದೆಯಂತಲ್ಲಾ. ಕಂಠಪೂರ್ತಿ ಭ್ರಷ್ಟ ಎಂಬುದನ್ನ ಬಿಟ್ಟರೆ, ಎಡೂರಪ್ಪ ಎಂದು ಮುಸ್ಲಿಮರನ್ನ ದೂಷಿಸಿದವರಲ್ಲಾ ಇದಕ್ಕೆ ಕಾರಣ ಅವರ ಕ್ಷೇತ್ರದ ಮುಸ್ಲಿಮರ ಬೆಂಬಲ. ಜೊತೆಗೆ ಈ ಅನಂತ, ಈಶ್ವರ, ಜೋಷಿ, ಯತ್ನಾಳ ಇಂತ ಮತಾಂಧರಾಡುವ ಮಾತನ್ನ ಯಡ್ಡಿ ಎಂದೂ ಆಡಿದವರಲ್ಲ. ಆದ್ದರಿಂದ ಚಿಡ್ಡಿಗಳು ಬಿಟ್ಟುಹೋದ ಮನೆಗೆ ಬಂದ ಯಡ್ಡಿ ಬಗ್ಗೆ ಎಚ್ಚರಿಕೆಯಿಂದಲೇ ವರ್ತಿಸುತ್ತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...