Homeರಾಜಕೀಯನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

ನೆಹರು ಎಲ್ಲೀ, ಮೋದಿ ಎಲ್ಲೀ, ರಂಗನ ಮುಂದೆ ಸಿಂಗನೆ?

- Advertisement -
- Advertisement -

ನಮ್ಮ ಭಾರತ ದೇಶ ಈವರೆಗೆ ಕಂಡ ಅಪರೂಪದ ಗುಣಸಂಪನ್ನ ಮೋದಿ ಮಹಾತ್ಮನಿಗೆ ಉಳಿದವರಿರಲಿ, ಬಿಜೆಪಿಗಳೇ ಹೆದರುತ್ತವೆಯಂತಲ್ಲಾ. ಮೂಲತಃ ಬಿಜೆಪಿಗಳೇ ಹುಟ್ಟು ಪುಕ್ಕಲುಗಳು, ಅದಕ್ಕೇ ಅವುಗಳ ಬಳಿ ಲಾಠಿ ಇರುವುದು! ಇರಲಿ ನಮ್ಮ ಮೋದಿ ಮಹಾತ್ಮನನ್ನು ಮುಗಿಸಲು ವಯಸ್ಸಾದ ವಿದ್ವಾಂಸರು ಅದರಲ್ಲೂ ಮಾಜಿ ನಕ್ಸಲರು ನೀಲನಕ್ಷೆ ತಯಾರಿಸುತ್ತಿದ್ದರೆಂದು ಇಂಕಿನ ವಾಸನೆಯನ್ನೆ ಹಿಡಿದುಹೋಗಿ ಪತ್ತೆಹಚ್ಚಿ ಗೃಹಬಂಧನಕ್ಕಾಗಿರುವ ಪೂನಾ ಪೊಲೀಸರು ದಾಬೊಲ್ಕರ್, ಪನ್ಸಾರೆ ಕತೆ ಮುಗಿದು ನಾಲ್ಕು ವರ್ಷಗಳಾದರೂ ಸುಮ್ಮನಿದ್ದದ್ದು ಅಷ್ಟೇನು ಸೋಜಿಗವಲ್ಲವಂತಲ್ಲಾ. ಇಂತಹ ಪೊಲೀಸರು ಕರ್ನಾಟಕದಲ್ಲೇನಾದರೂ ಇದ್ದರೆ ಇಷ್ಟರಲ್ಲಿ ಗೌರಿ ಕೇಸಿನ ಕತೆ ಮುಗಿಸಿ ಬಿ-ರಿಪೋರ್ಟಾಕುತ್ತಿದ್ದರಂತಲ್ಲಾ. ಇದನ್ನೆಲ್ಲಾ ಗಮನಿಸಿದರೆ ಕೊಲೆಗಡುಕ ಬಿಜೆಪಿಗಳು ಮತ್ತೆ ಈ ನಾಡಿನಲ್ಲಿ ವಕ್ಕರಿಸದಂತೆ ಡಿ.ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್‍ಗಳಾದಿಯಾಗಿ ಎಲ್ಲಾ ಮನುಷ್ಯರು ಮನುಷ್ಯರಲ್ಲದವರು ವಕ್ಕರಿಸದಂತೆ ಎಚ್ಚರ ವಹಿಸಬೇಕೆಂಬುದು ಕರ್ನಾಟಕದ ಮಾನವಂತರ ಇಂಗಿತವಾಗಿದೆಯಂತಲ್ಲಾ. ಥೂತ್ತೇರಿ

*******

ಮೋದಿ ತಮ್ಮ 68ನೇ ಹುಟ್ಟುಹಬ್ಬವನ್ನು ಶಾಲಾಮಕ್ಕಳ ಜೊತೆ ಆಚರಿಸಿದರಂತೆ. ಅಚರಿಸಿದ್ದು ಹಾಳುಬಿದ್ದೋಗಲಿ ಮೋದಿ ಮಕ್ಕಳಿಗೆ ಪ್ರಶ್ನೆ ಕೇಳಲು ಭಯಪಡಬೇಡಿ ಎಂಬ ಬುದ್ಧಿ ಮಾತನ್ನ ಹೇಳಿದರಂತೆ. ಏಕೆಂದರೆ ಈಚೆಗೆ ಬಿಜೆಪಿಗಳು ಮೋದಿ ಆಡಳಿತವೈಖರಿ ಬಗ್ಗೆ ಪ್ರಶ್ನೆ ಕೇಳಲು ಹೆದರುತ್ತಿವೆಯಂತೆ. ಇದನ್ನು ಮನಗಂಡ ಮೋದಿ ಪ್ರಶ್ನೆ ಕೇಳುವ ಭಯವನ್ನು ಬಾಲ್ಯದಲ್ಲೇ ನಿವಾರಿಸಲು ಪಣ ತೊಟ್ಟಿದ್ದಾರಂತಲ್ಲಾ. ಸಾಮಾನ್ಯವಾಗಿ ಬಿಜೆಪಿಗಳು ಅಂದರೆ ಆರೆಸ್ಸೆಸ್ಸಿಗರು ಬಲಿತ ಜನರ ಸನಿಹಕ್ಕೆ ಹೋಗುವುದಿಲ್ಲ. ಬದಲಿಗೆ ಎಳೆ ಮಕ್ಕಳನ್ನ ಎತ್ತಿಕೊಂಡು ಚೆಡ್ಡಿಹಾಕಿ ಲಾಠಿಕೊಟ್ಟುಬಿಡುತ್ತವೆ. ಆದ್ದರಿಂದ ಮೋದಿ ಹದಿನೇಳು ವರ್ಷ ಭಾರತದ ಪ್ರಧಾನಿಯಾಗಿದ್ದ ನೆಹರು ತಮ್ಮ ಹುಟ್ಟುಹಬ್ಬದಂದು ಪಾರ್ಕಿನಲ್ಲಿ ಮಕ್ಕಳ ಜೊತೆ ಮಗುವಾಗಿ ಆಟವಾಡಿ ಕತೆ ಹೇಳಿ-ಕೇಳಿ ಖುಷಿ ಪಡುತ್ತಿದ್ದರು. ಎಲ್ಲದರಲ್ಲೂ ನೆಹರು ಮೀರಿಸಲು ಹೋರಾಡುವ ಈ ಮೋದಿ ಎಲ್ಲೀ ಆ ನೆಹರು ಎಲ್ಲೀ ಹಳ್ಳಿ ಗಾದೆಯಂತೆ ರಂಗನ ಮುಂದೆ ಸಿಂಗನೆ ಎಂಬಂತಾಯ್ತಲ್ಲಾ ಥೂತ್ತೇರಿ.

*******

ಕುಮಾರಣ್ಣನ ಸರಕಾರ ಬುಡಭದ್ರವಿಲ್ಲದೆ ಅಲ್ಲಾಡುತ್ತಿರುವುದನ್ನ ನೋಡಿದ ಒಕ್ಕಲಿಗ ಜಗತ್ತಿನ ಗುರುವಾದ ನಿರ್ಮಲಾನಂದ ಸ್ವಾಮಿ ಈ ಸರಕಾರ ಬಿದ್ದರೆ ಅದು ದೈವಕೃಪೆಗೆ ವಿರುದ್ಧ ಎಂದರಂತಲ್ಲಾ. ಈ ನಿರ್ಮಲಾನಂದ ಚಿನ್ನದಂತಹ ಸ್ವಾಮಿ. ಏಕೆಂದರೆ ಎಂ.ಟೆಕ್‍ನಲ್ಲಿ ಇವರು ಹೊನ್ನ ಶಿಖರವೇರಿದ್ದರಂತೆ. ಆ ವಿದ್ವತ್ತಿಗೂ ಈಗ ಇವರು ಸರಕಾರದ ವಿಷಯದಲ್ಲಾಡುತ್ತಿರುವ ಮಾತಿಗೂ ಯಾವ ಸಂಬಂಧವೂ ಇಲ್ಲವಂತ¯್ಲ. ಸಂವಿಧಾನದಲ್ಲಿನ ಚುನಾವಣಾ ನಿಯಮದಂತೆ ಚುನಾವಣೆ ನಡೆದಿದ್ದೆ ಜಾತ್ಯತೀತ ಮನಸ್ಸುಗಳು 78 ಸೀಟು ಗೆಲ್ಲಿಸಿವೆ. ಧರ್ಮಾಂಧರು 104 ಸೀಟು ಗೆದ್ದಿದ್ದಾರೆ ಹಾಗೆ ಜಾತ್ಯಂಧರು 38 ಸೀಟು ಗೆಲ್ಲಿಸಿಕೊಂಡಿದ್ದಾರೆ. ಧರ್ಮಾಂಧರನ್ನ ದೂರವಿಡುವ ಸಲುವಾಗಿ ಜಾತ್ಯತೀತರು ಮತ್ತು ಜಾತಿವಾದಿಗಳು ಸೇರಿ ಸರಕಾರ ಮಾಡಿದ್ದಾರೆ. ಕುಪಿತಗೊಂಡ ಧರ್ಮಾಂಧರು ಸರಕಾರ ಕೆಡವಲು ಹಗಲುರಾತ್ರಿ ಹಾರೆಗುದ್ದಲಿಯೊಂದಿಗೆ ಡೈನಮೆಟ್‍ಗಳನ್ನ ಉಪಯೋಗಿಸುವ ಬೆದರಿಕೆಯೊಂದಿಗೆ ಕೆಲಸ ಮಾಡುತ್ತಿವೆ. ಇದು ಸಂವಿಧಾನಕ್ಕೆ ಮುಖ್ಯವಾಗಿ ಕೋರ್ಟಿಗೆ ಬಗೆಯುವ ದ್ರೋಹವಾಗಿದೆ. ಇಂತಲ್ಲಿ ಸರಕಾರ ಉರುಳಿದರೆ ಅದು ದೈವಕೃಪೆಗೆ ವಿರುದ್ಧ ಹೇಗಾಗುತ್ತದೆಂದು ಕೇಳಿದರೆ ನಿವರ್iಲಾನಂದರು ನಿರುತ್ತರ ಕುಮಾರನಂತಾದರಂತಲ್ಲಾ. ಥೂತ್ತೇರಿ

*******

ಕೇವಲ 37 ಸೀಟುಗಳನ್ನ ಹೊಂದಿದ ಜೆಡಿಎಸ್ ಪಾರ್ಟಿ ಅಧಿಕಾರದ ಚುಕ್ಕಾಣಿ ಹಿಡಿದು ಸರಕಾರ ನಡೆಸುತ್ತಿರುವುದು ಸಾಮಾನ್ಯ ಸಂಗತಿಯಲ್ಲ. ಇದಕ್ಕೆ ಯಜ್ಞ, ಯಾಗ, ಹೋಮ ಮತ್ತು ನೂರಾರು ಕ್ಷೇತ್ರ ದರ್ಶನದ ಪ್ರಭಾವವೇ ಸರಕಾರವನ್ನು ಮುನ್ನಡೆಸುತ್ತಿದೆ ಎಂದು ಖಚಿತವಾಗಿ ನಂಬಿರುವ ದೇವೇಗೌಡರಿಗೆ ಪ್ರಜಾಪ್ರಭುತ್ವದಲ್ಲಿನ ಚಮತ್ಕಾರವೇ ಹೊಳೆಯದಿರುವುದು ಆಶ್ಚರ್ಯ ತಂದಿದೆಯಂತ¯್ಲ. ಆದರೇನು ಅಪ್ಪನ ಮೂಢನಂಬಿಕೆ ಮಾತುಗಳನ್ನೆ ನಂಬಿದ್ದ ಕುಮಾರಣ್ಣ ಈಚೆಗೆ ಜ್ಞಾನೋದಯವಾದಂತೆ ಸಿದ್ದರಾಮಯ್ಯನ ಕೃಪೆಯಿದ್ದರೆ ಐದು ವರ್ಷ ಮುಗಿಸಿ ಮನೆಗೆ ಹೋಗುತ್ತೇವೆ ಎಂದಿದ್ದಾರಲ್ಲಾ. ಇದರಿಂದ ಸಿದ್ದುಗೆ ಬಿದ್ದ ಹೊಡೆತವೆಂದರೆ ಈವರೆಗೆ ಸರಕಾರವನ್ನು ಅಲ್ಲಾಡಿಸುತ್ತಿದ್ದ ಕೀರ್ತಿ ಸಿದ್ದುಗೆ ಸಲ್ಲುತ್ತದೆ. ಅದಷ್ಟೇ ಅಲ್ಲ ಮುಂದಿನ ಎಲ್ಲಾ ತಾರಾತಿಗಡಿಯ ರಗಳೆ ಸಿದ್ದು ಬೆನ್ನ ಬೀಳುವುದರಲ್ಲಿ ಸಂಶಯವಿಲ್ಲ. ಇದಾವುದನ್ನ ಯೋಚಿಸದ ಸಿದ್ದು ಅಂತೂ ಕುಮಾರನಿಗೆ ನನ್ನ ಕೃಪೆ ಮುಖ್ಯ ಎಂಬುದು ಈಗಲಾದರೂ ಹೊಳೆಯಿತಲ್ಲ ಎಂದು ಆಕಳಿಕೆ ತೆಗೆದು ಸೋಫಾಕ್ಕೆ ಒರಗಿದರಂತಲ್ಲಾ, ಥೂತ್ತೇರಿ.

*******

ಹಟ ಸಂಭೋಗದ ಮುದುಕನಂತೆ ಹಗಲೂರಾತ್ರಿ ಅಧಿಕಾರಕ್ಕಾಗಿ ಹೋರಾಡುತ್ತಿರುವ ಎಡೂರಪ್ಪನನ್ನು ಗಮನಿಸಿದ ಚೆಡ್ಡಿಗಳು ಎಡೂರಪ್ಪನ ಇಂತಹ ಕಾರ್ಯಾಚರಣೆಗೆ ನಮ್ಮ ವಿರೋಧವಿದೆ ಎಂಬ ಸುದ್ದಿ ಬಿತ್ತರಿಸಿವೆಯಲ್ಲಾ. ಅಂದರೆ ಆರೆಸ್ಸೆಸ್ಸಿಗರು ಶ್ರೇಷ್ಠವಾದ ಜನತಂತ್ರ ರಾಜಕಾರಣ. ಎಡೂರಪ್ಪನದಲ್ಲ ಎಂದು ಅತ್ತ ಎಡೂರಪ್ಪನನ್ನ ದೂರಿ ಇತ್ತ ತಾವು ಮಾತ್ರ ಧರ್ಮವಂತರೆಂದು ಬಿಂಬಿಸಲು ಹೊರಟಿರುವುದು ಸ್ವತಃ ಎಡೂರಪ್ಪನಿಗೇ ಸಿಟ್ಟು ತರಿಸಿದೆಯಂತಲ್ಲಾ. ಕಂಠಪೂರ್ತಿ ಭ್ರಷ್ಟ ಎಂಬುದನ್ನ ಬಿಟ್ಟರೆ, ಎಡೂರಪ್ಪ ಎಂದು ಮುಸ್ಲಿಮರನ್ನ ದೂಷಿಸಿದವರಲ್ಲಾ ಇದಕ್ಕೆ ಕಾರಣ ಅವರ ಕ್ಷೇತ್ರದ ಮುಸ್ಲಿಮರ ಬೆಂಬಲ. ಜೊತೆಗೆ ಈ ಅನಂತ, ಈಶ್ವರ, ಜೋಷಿ, ಯತ್ನಾಳ ಇಂತ ಮತಾಂಧರಾಡುವ ಮಾತನ್ನ ಯಡ್ಡಿ ಎಂದೂ ಆಡಿದವರಲ್ಲ. ಆದ್ದರಿಂದ ಚಿಡ್ಡಿಗಳು ಬಿಟ್ಟುಹೋದ ಮನೆಗೆ ಬಂದ ಯಡ್ಡಿ ಬಗ್ಗೆ ಎಚ್ಚರಿಕೆಯಿಂದಲೇ ವರ್ತಿಸುತ್ತಿವೆಯಂತಲ್ಲಾ, ಥೂತ್ತೇರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...