Homeರಾಜಕೀಯಮಿತ್ರೋ... ಮಿತ್ರೋ... ಮಿತ್ರೋ...

ಮಿತ್ರೋ… ಮಿತ್ರೋ… ಮಿತ್ರೋ…

- Advertisement -
- Advertisement -

ಮಿತ್ರೊ…. ಟೆಡ್ಡಿ ಫೋನ್ ಮಾಡಿದ್ರು.. ಸಡುನ್ ಆಗಿ ಎಂಜಿಲು ಮುಖಕ್ಕೆ ಬಿತ್ತು.. `ಥೂ ಬೋ$%&@#, 2008ರಲ್ಲಿ ನೀವಿಲ್ದೆ 110 ಸೀಟ್ ಗೆದಿದ್ದೆ, ಮೋದಿ ಅಲೆ, ದೇಶಭಕ್ತಿ, ಶಾ ಅಂತ 104ಕ್ಕೆ ತಂದು ನಡುನೀರ್ನಲ್ ನಿಲ್ಸಿ ಕೈಕೊಟ್ರಲ್ಲೋ..’ ಫುಲ್ ಸಂಸ್ಕೃತ.. ಇನ್ನು ಏನೋ ಹೇಳೋಕೆ ಹೋದ್ರು, ಕೋಪ ಮಾಡಿಕೊಂಡೊವ್ರೆ ಅಂಥ ಫೋನ್ ಕಟ್ ಮಾಡಿಬಿಟ್ಟೆ..
* * * *
ಮಿತ್ರೊ…. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ಗೆ 104 ಡಾಲರ್ ಇದ್ದಾಗ uಠಿಚಿ ಸರ್ಕಾರ ಬರಿ 4.5% ಕೇಂದ್ರೀಯ ತೆರಿಗೆ ಹಾಕಿ ಭಾರತ ಅಭಿವೃದ್ಧಿ ಆಗದಂತೆ ಮಾಡಿತ್ತು.. ನಾವು ಅಧಿಕಾರಕ್ಕೆ ಬಂದಾಗಿನಿಂದ ಅದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 35 ಡಾಲರ್ ಇಂದ ಹಿಡಿದು 60 ಡಾಲರ್ ಆಗಿದೆ.. ನಾವು 4.5% ಇದ್ದ ಕೇಂದ್ರೀಯ ತೆರಿಗೆಯನ್ನು 19.5% ಹೆಚ್ಚಿಸಿ ದೇಶದ ಅಭಿವೃದ್ದಿಯ್ಯನ್ನು ಭಯಂಕರ ಹೆಚ್ಚಿಸಿದ್ದೇವೆ..!
* * * *
ಮಿತ್ರೊ…. ವೇದಾಂತ ಕಂಪನಿಯ ಅನಿಲ್ ಫೋನ್ ಮಾಡಿದ್ದ.. ಮಚ್ಚ, ಕಂಪನಿಗೆ ಬೀಗ ಹಾಕ್ಬಿಟ್ರು, ಏನಾರ ಮಾಡು ಅಂತ.. ನಾನು ಕೂಡ ಮೊನ್ನೆಯಿಂದ ಕ್ಯಾಲ್ಕುಲೇಟರ್ ಇಡ್ಕೊಂಡ್ ಲೆಕ್ಕ ಹಾಕ್ತಿದ್ದೆ. ಇವನು, ಕಾಂಗಿಗಳು ಮತ್ತು ನಮ್ಮ ಕೃಪೆಯಿಂದ, ಭಾರತೀಯ ಬ್ಯಾಂಕುಗಳಿಂದ ಪಡೆದಿರುವ ಒಟ್ಟೂ ಸಾಲ 2 ಲಕ್ಷ ಕೋಟಿಯಂತೆ. ಒಂದು ಅಂದಾಜಿನ ಮೇಲೆ ಇವನ ಕಂಪನಿಯಲ್ಲಿ ಒಟ್ಟು ಕೆಲಸಗಾರರು 60000.. ಅಂದರೆ ಪ್ರತಿ 3 ಕೋಟಿ 33 ಲಕ್ಷಕ್ಕೆ ಒಂದು ಉದ್ಯೋಗ ಶೃಸ್ಟಿ ಮಾಡುತ್ತಿದ್ದಾನಂತೆ! ಅಂದರೆ ಇವನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕೋಟ್ಯಧಿಪತಿಗಳೇ? ಇಲ್ಲ, ಇವನ ಕಂಪನಿಯಲ್ಲಿ 90% ಮೇಲೂ ಕಾರ್ಮಿಕರು, ತಿಂಗಳಿಗೆ 20,000ಕ್ಕಿಂತಲೂ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.. ಕಾಂಗಿ ಮತ್ತು ನಮಗೆ ಇವನು ಲೆಕ್ಕದಲ್ಲಿ ಕೊಟ್ಟಿರುವ ದೇಣಿಗೆ ಬರಿ 29 ಕೋಟಿ.. ಇನ್ನ ಮಿಕ್ಕ ಅಷ್ಟೊಂದು ಕಾಸಿನಲ್ಲಿ ಏನ್ ಮಾಡ್ತಾ ಇದ್ದಿಯೊ ಅಂತ ಡೌಟ್ನಲ್ಲಿ ಕೇಳ್ದೆ .. ಅವನು “ದೇಶದ್ರೋಹಿ, ಸೈನಿಕರು ಗಡಿಯಲ್ಲಿ ದೇಶಕ್ಕೋಸ್ಕರ ಸಾಯಿತಾ ಇದ್ರೆ ನಿಂಗೆ ಲೆಕ್ಕದ್ ಚಿಂತೆ” ಅಂತ ಫೋನ್ ಕಟ್ ಮಾಡ್ಬಿಡೋದ!!!
* * * *
ಮಿತ್ರೊ…. , ನನ್ನ ಗುರು ಸಾವರ್ಕರ್ ಅವರ ಬಗ್ಗೆ ನಾನು ಚಿಕ್ಕಂದಿನಿಂದಲೇ ಓದಲು ಶುರು ಮಾಡಿದ ಪುಸ್ತಕ “ಲೈಫ್ ಒಫ್ ಬ್ಯಾರಿಸ್ಟರ್ ಸಾವರ್ಕರ್”. ಇದು ಅವರು ಬ್ರಿಟಿಷರಿಂದ ಭಿಕ್ಷೆ ಬೇಡಿ, ನಾನು ಇನ್ನೆಂದಿಗೂ ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲ, ಇನ್ನು ಮುಂದೆ ನಾನು ನಿಮ್ಮ ಗುಲಾಮ ಎಂದು ಒಂದರ ಮೇಲೆ ಒಂದರಂತೆ ಹನ್ನೊಂದು ಪತ್ರಗಳನ್ನು ಬೆರೆದು 1924ರಲ್ಲಿ ಷರತ್ತಿನ ಮೇಲೆ ಬಿಡುಗಡೆಯಾಗಿ ಎರೆಡನೆ ವರ್ಷದಲ್ಲಿ(1926) ಅನಾಮಧೇಯ ಚಿತ್ರಗುಪ್ತ ಎಂಬುವವರು ಪ್ರಕಟಿಸಿದ ಪುಸ್ತಕ.. ಈ ಪುಸ್ತಕ ಎಷ್ಟು ರೋಚಕವಾಗಿತ್ತೆಂದರೆ, ಸಾವರ್ಕರ್ ಹುಟ್ಟಿನಿಂದಲೇ ಅತಿ ಬುದ್ದಿವಂತ, ಆಜನ್ಮ ಹೋರಾಟಗಾರ, ಅನ್ಯಾಯಗಳ ವಿರುದ್ಧ ಸಿಡಿದೇಳುವ ವೀರ, ಶೂರ, ಯಾವುದೇ ತಂತ್ರಕ್ಕೆ, ಮಣಿಯದೆ ಪ್ರತಿತಂತ್ರ ಹೆಣೆಯುವ ಶಕ್ತಿ ಮತ್ತು ಯುಕ್ತಿಯುಳ್ಳ ವೀರ ಎಂದು ಪುಸ್ತಕದ ಪ್ರತಿಯೊಂದು ಹಂತದಲ್ಲೂ ಬರೆಯಲಾಗಿತ್ತು.. ಯಾವುದೇ ಫಿಕ್ಷನ್ ಪುಸ್ತಕ ಓದುತ್ತಿದ್ದರೆ ಆ ಪಾತ್ರಗಳ ಒಳಗೆ ನಾವು ಹೇಗೆ ನುಸುಳಿ ಮಾರುಹೋಗುತ್ತೇವೋ ಅದೇ ರೀತಿ ಸಾವರ್ಕರರೇ ನಾನು ಎಂಬಂತೆ ಕಲ್ಪಿಸಿಕೊಳ್ಳಲು ಆರಂಭಿಸಿದೆ (ಒಂದು ರೀತಿಯ ನಾಗವಲ್ಲಿ ಟೈಪ್ಸ್). ನನ್ನ ಮೂವತ್ತೊಂದನೆ ವರ್ಷದಲ್ಲಿ, ಅದೆ 1987ರಲ್ಲಿ ತಿಳಿಯಿತು ಆ ಚಿತ್ರಗುಪ್ತ ಬೇರ್ಯಾರು ಅಲ್ಲ, ಖುದ್ದು ಸರ್ವರ್ಕರ್, ಚಿತ್ರಗುಪ್ತ ಎಂಬ ಹೆಸರಿನಲ್ಲಿ ಬರೆದ ಪುಸ್ತಕ ಎಂದು.. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು.. ನಾನು ಸಾವರ್ಕರ್ ಆಗಿಹೋಗಿದ್ದೆ.. ನಿಜಜೀವನದಲ್ಲಿ ಭಗತ್ ಸಿಂಗ್, ರಾಜ್ಗುರು, ಸುಖ್ದೇವ್ ಥರ ವೀರರಾಗದಿದ್ದರೂ ಮುಖವಾಡಗಳಲ್ಲಿ ಹೀರೊ ಅಗೋ ಖುಷಿನೆ ಬೇರೆ.. ಈಗಲೂ ಅದನ್ನೇ mಚಿiಟಿಣಚಿiಟಿ ಮಾಡ್ಕೊಂಡ್ ಹೋಗ್ತಾ ಇದ್ದೀನಿ..
* * * *
ಮಿತ್ರೊ….
ನಾನು ಕೆಲಸ ಮಾಡುವವನು ಅಲ್ಲವೇ ಅಲ್ಲ, ನಾನು ಕಲರ್‍ಪುಲ್ ಮಾತಿನ ಗಿರಾಕಿ. ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದೆ. ನನ್ನ ತುಘಲಕ್ ತೀರ್ಮಾನವಾದ ಅಮಾನ್ಯೀಕರಣದಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ಇನ್ನೂ ದೇಶದ ಆಡಳಿತ ನಡೆಸಲು ಬಾರದೆ ವಿದೇಶಿ ಪ್ರವಾಸ ಮಾಡಿಕೊಂಡು ಅಲ್ಲಿಯೂ ಭಾಷಣ ಮಾಡಿಕೊಂಡು ದಿನ ನೂಕಿದೆ. ಇನ್ನೂ ಹೀಂಗೆ ಹೇಳುತ್ತ ಹೋದರೆ ನೂರಾರು ಸಾಧನೆಗಳನ್ನು ಹೇಳಬಹುದು. ನೀವುಗಳು ನನ್ನ ಮಾತಿನಿಂದಲೇ ಹೊಟ್ಟೆ ತುಂಬಿಸಿಕೊಂಡು ದೇಶಕ್ಕಾಗಿ ಮಾಡುತ್ತಿರುವ ತ್ಯಾಗ ನೆನಸಿಕೊಂಡರೆ ಇನ್ನೂ ಅರ್ಧ ಕೆಜಿ ಅಣಬೆ ತಿನ್ನುವ ಅನ್ನಿಸುತ್ತೆ. 2019 ಕ್ಕೂ ನನ್ನ ಮಾತನ್ನೆ ರಾಷ್ಟ್ರ ನಿರ್ಮಾಣ ಎಂದು ತಿಳಿದುಕೊಂಡು ಮತ್ತೊಮ್ಮೆ ಪ್ರಧಾನಿ ಮಾಡುತ್ತಿರಿ ಅನ್ನುವ ಗ್ಯಾರಂಟಿ ನನಗೆ ಇದೆ.
* * * *
ಮಿತ್ರೊ…. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ರೆ ನಿಮ್ಗೆ ಇಷ್ಟ್ ಮಜಾ ಇರ್ತೀತ್ತ? ನಂಗೊತ್ತು ನೀವ್ ಯಾಕ್ ಬಿಜೆಪಿಗೆ ವೋಟ್ ಹಾಕುದ್ರಿ ಅಂತ.. ಗೋವಾ, ಕೇರಳ, ರೆಸಾರ್ಟ್ ರಾಜಕೀಯ, 100 ಕೋಟಿ, ಅವ್ನು ಅಲ್ಲಿಂದ ಇಲ್ಲಿಗೆ, ಇಲ್ಲಿರೋವ್ನು ಅಲ್ಲಿಗೆ.. ಇವ್ನು ಅವ್ನ ಭ್ರಷ್ಟ ಅನ್ನೋದು, ಅವ್ನು ಇವ್ನ ಭ್ರಷ್ಟ ಅನ್ನೋದು.. ಎಲ್ಲ ಮಿಸ್ ಮಾಡ್ಕೊಂಡಿದ್ರಿ ಅಂತ ಗೊತ್ತು..
* * * *
ಮಿತ್ರೊ…. ನಾನು ತೈವಾನ್ ಇಂದ ತರ್ಸಿರೋ ಇಂಪೋರ್ಟೆಡ್ ಅಣಬೆ ತಿನ್ನೋದು.. ಯಾರೋ ಕಿಡಿಗೇಡಿಗಳು ನಾನು ಭಾಷಣ ಪ್ರಾರಂಭ ಮಾಡೋಕು ಮುಂಚೆ ಕೊಡೈ ಕನಲ್ ಅಣೆಬೆ ಸೇರ್ಸಿ ಕೊಡ್ತಿದ್ದಾರೆ ಅನ್ಸುತ್ತೆ.. ಅದಕ್ಕೆ ನಾನೇನು ಮಾತಾಡ್ತಾ ಇದ್ದೀನಿ ಅಂಥ ನಂಗೆ ಗೋತೈತಿಲ್ಲ.. ಹಂಗೆ ನಮ್ಮ ಈಶ್ವರಪ್ಪ ಹೇಳ್ದಂಗೆ ಒಂದ್ ಫ್ಲೋ ನಲ್ಲಿ ಬಾಯಿಗೆ ಬಂದದ್ದು ಸುಳ್ಳೋ ಪೊಳ್ಳೋ ಜೋರಾಗಿ ಹೇಳ್ಬಿಡ್ತೀನಿ.. ಆ ಕಿಡಿಗೇಡಿಗಳನ್ನು ಹಿಡಿಯಲು ನನ್ನ ಗೆಲ್ಲಿಸಿ…
* * * *
ಮಿತ್ರೊ…. ನಾನೀಗ ನೇಪಾಳದ ಮುಕ್ತಿನಾಥ ದೇವಸ್ಥಾನದಲ್ಲಿದ್ದೀನಿ.. ಇಲ್ಲಿ ಧಾರ್ಮಿಕ ಡಿಪ್ಲೊಮಾಸಿ ಮುಗಿಸಿ ಮೌಂಟ್ ಎವರೆಸ್ಟ್ ಹತ್ತಲು ಯೋಚಿಸ್ತಿದ್ದೀನಿ.. ಕಾಂಗ್ರೆಸ್ನವರು, ಮೌಂಟ್ ಎವರೆಸ್ಟ್ ಈವರೆಗೂ ಹತ್ತದೆ ಅದನ್ನು ಅವಮಾನ ಮಾಡಿದ್ದಾರೆ..

– ಭರತ್ ಹೆಬ್ಬಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....