Homeರಾಜಕೀಯಮಿತ್ರೋ... ಮಿತ್ರೋ... ಮಿತ್ರೋ...

ಮಿತ್ರೋ… ಮಿತ್ರೋ… ಮಿತ್ರೋ…

- Advertisement -
- Advertisement -

ಮಿತ್ರೊ…. ಟೆಡ್ಡಿ ಫೋನ್ ಮಾಡಿದ್ರು.. ಸಡುನ್ ಆಗಿ ಎಂಜಿಲು ಮುಖಕ್ಕೆ ಬಿತ್ತು.. `ಥೂ ಬೋ$%&@#, 2008ರಲ್ಲಿ ನೀವಿಲ್ದೆ 110 ಸೀಟ್ ಗೆದಿದ್ದೆ, ಮೋದಿ ಅಲೆ, ದೇಶಭಕ್ತಿ, ಶಾ ಅಂತ 104ಕ್ಕೆ ತಂದು ನಡುನೀರ್ನಲ್ ನಿಲ್ಸಿ ಕೈಕೊಟ್ರಲ್ಲೋ..’ ಫುಲ್ ಸಂಸ್ಕೃತ.. ಇನ್ನು ಏನೋ ಹೇಳೋಕೆ ಹೋದ್ರು, ಕೋಪ ಮಾಡಿಕೊಂಡೊವ್ರೆ ಅಂಥ ಫೋನ್ ಕಟ್ ಮಾಡಿಬಿಟ್ಟೆ..
* * * *
ಮಿತ್ರೊ…. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ಗೆ 104 ಡಾಲರ್ ಇದ್ದಾಗ uಠಿಚಿ ಸರ್ಕಾರ ಬರಿ 4.5% ಕೇಂದ್ರೀಯ ತೆರಿಗೆ ಹಾಕಿ ಭಾರತ ಅಭಿವೃದ್ಧಿ ಆಗದಂತೆ ಮಾಡಿತ್ತು.. ನಾವು ಅಧಿಕಾರಕ್ಕೆ ಬಂದಾಗಿನಿಂದ ಅದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 35 ಡಾಲರ್ ಇಂದ ಹಿಡಿದು 60 ಡಾಲರ್ ಆಗಿದೆ.. ನಾವು 4.5% ಇದ್ದ ಕೇಂದ್ರೀಯ ತೆರಿಗೆಯನ್ನು 19.5% ಹೆಚ್ಚಿಸಿ ದೇಶದ ಅಭಿವೃದ್ದಿಯ್ಯನ್ನು ಭಯಂಕರ ಹೆಚ್ಚಿಸಿದ್ದೇವೆ..!
* * * *
ಮಿತ್ರೊ…. ವೇದಾಂತ ಕಂಪನಿಯ ಅನಿಲ್ ಫೋನ್ ಮಾಡಿದ್ದ.. ಮಚ್ಚ, ಕಂಪನಿಗೆ ಬೀಗ ಹಾಕ್ಬಿಟ್ರು, ಏನಾರ ಮಾಡು ಅಂತ.. ನಾನು ಕೂಡ ಮೊನ್ನೆಯಿಂದ ಕ್ಯಾಲ್ಕುಲೇಟರ್ ಇಡ್ಕೊಂಡ್ ಲೆಕ್ಕ ಹಾಕ್ತಿದ್ದೆ. ಇವನು, ಕಾಂಗಿಗಳು ಮತ್ತು ನಮ್ಮ ಕೃಪೆಯಿಂದ, ಭಾರತೀಯ ಬ್ಯಾಂಕುಗಳಿಂದ ಪಡೆದಿರುವ ಒಟ್ಟೂ ಸಾಲ 2 ಲಕ್ಷ ಕೋಟಿಯಂತೆ. ಒಂದು ಅಂದಾಜಿನ ಮೇಲೆ ಇವನ ಕಂಪನಿಯಲ್ಲಿ ಒಟ್ಟು ಕೆಲಸಗಾರರು 60000.. ಅಂದರೆ ಪ್ರತಿ 3 ಕೋಟಿ 33 ಲಕ್ಷಕ್ಕೆ ಒಂದು ಉದ್ಯೋಗ ಶೃಸ್ಟಿ ಮಾಡುತ್ತಿದ್ದಾನಂತೆ! ಅಂದರೆ ಇವನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕೋಟ್ಯಧಿಪತಿಗಳೇ? ಇಲ್ಲ, ಇವನ ಕಂಪನಿಯಲ್ಲಿ 90% ಮೇಲೂ ಕಾರ್ಮಿಕರು, ತಿಂಗಳಿಗೆ 20,000ಕ್ಕಿಂತಲೂ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.. ಕಾಂಗಿ ಮತ್ತು ನಮಗೆ ಇವನು ಲೆಕ್ಕದಲ್ಲಿ ಕೊಟ್ಟಿರುವ ದೇಣಿಗೆ ಬರಿ 29 ಕೋಟಿ.. ಇನ್ನ ಮಿಕ್ಕ ಅಷ್ಟೊಂದು ಕಾಸಿನಲ್ಲಿ ಏನ್ ಮಾಡ್ತಾ ಇದ್ದಿಯೊ ಅಂತ ಡೌಟ್ನಲ್ಲಿ ಕೇಳ್ದೆ .. ಅವನು “ದೇಶದ್ರೋಹಿ, ಸೈನಿಕರು ಗಡಿಯಲ್ಲಿ ದೇಶಕ್ಕೋಸ್ಕರ ಸಾಯಿತಾ ಇದ್ರೆ ನಿಂಗೆ ಲೆಕ್ಕದ್ ಚಿಂತೆ” ಅಂತ ಫೋನ್ ಕಟ್ ಮಾಡ್ಬಿಡೋದ!!!
* * * *
ಮಿತ್ರೊ…. , ನನ್ನ ಗುರು ಸಾವರ್ಕರ್ ಅವರ ಬಗ್ಗೆ ನಾನು ಚಿಕ್ಕಂದಿನಿಂದಲೇ ಓದಲು ಶುರು ಮಾಡಿದ ಪುಸ್ತಕ “ಲೈಫ್ ಒಫ್ ಬ್ಯಾರಿಸ್ಟರ್ ಸಾವರ್ಕರ್”. ಇದು ಅವರು ಬ್ರಿಟಿಷರಿಂದ ಭಿಕ್ಷೆ ಬೇಡಿ, ನಾನು ಇನ್ನೆಂದಿಗೂ ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲ, ಇನ್ನು ಮುಂದೆ ನಾನು ನಿಮ್ಮ ಗುಲಾಮ ಎಂದು ಒಂದರ ಮೇಲೆ ಒಂದರಂತೆ ಹನ್ನೊಂದು ಪತ್ರಗಳನ್ನು ಬೆರೆದು 1924ರಲ್ಲಿ ಷರತ್ತಿನ ಮೇಲೆ ಬಿಡುಗಡೆಯಾಗಿ ಎರೆಡನೆ ವರ್ಷದಲ್ಲಿ(1926) ಅನಾಮಧೇಯ ಚಿತ್ರಗುಪ್ತ ಎಂಬುವವರು ಪ್ರಕಟಿಸಿದ ಪುಸ್ತಕ.. ಈ ಪುಸ್ತಕ ಎಷ್ಟು ರೋಚಕವಾಗಿತ್ತೆಂದರೆ, ಸಾವರ್ಕರ್ ಹುಟ್ಟಿನಿಂದಲೇ ಅತಿ ಬುದ್ದಿವಂತ, ಆಜನ್ಮ ಹೋರಾಟಗಾರ, ಅನ್ಯಾಯಗಳ ವಿರುದ್ಧ ಸಿಡಿದೇಳುವ ವೀರ, ಶೂರ, ಯಾವುದೇ ತಂತ್ರಕ್ಕೆ, ಮಣಿಯದೆ ಪ್ರತಿತಂತ್ರ ಹೆಣೆಯುವ ಶಕ್ತಿ ಮತ್ತು ಯುಕ್ತಿಯುಳ್ಳ ವೀರ ಎಂದು ಪುಸ್ತಕದ ಪ್ರತಿಯೊಂದು ಹಂತದಲ್ಲೂ ಬರೆಯಲಾಗಿತ್ತು.. ಯಾವುದೇ ಫಿಕ್ಷನ್ ಪುಸ್ತಕ ಓದುತ್ತಿದ್ದರೆ ಆ ಪಾತ್ರಗಳ ಒಳಗೆ ನಾವು ಹೇಗೆ ನುಸುಳಿ ಮಾರುಹೋಗುತ್ತೇವೋ ಅದೇ ರೀತಿ ಸಾವರ್ಕರರೇ ನಾನು ಎಂಬಂತೆ ಕಲ್ಪಿಸಿಕೊಳ್ಳಲು ಆರಂಭಿಸಿದೆ (ಒಂದು ರೀತಿಯ ನಾಗವಲ್ಲಿ ಟೈಪ್ಸ್). ನನ್ನ ಮೂವತ್ತೊಂದನೆ ವರ್ಷದಲ್ಲಿ, ಅದೆ 1987ರಲ್ಲಿ ತಿಳಿಯಿತು ಆ ಚಿತ್ರಗುಪ್ತ ಬೇರ್ಯಾರು ಅಲ್ಲ, ಖುದ್ದು ಸರ್ವರ್ಕರ್, ಚಿತ್ರಗುಪ್ತ ಎಂಬ ಹೆಸರಿನಲ್ಲಿ ಬರೆದ ಪುಸ್ತಕ ಎಂದು.. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು.. ನಾನು ಸಾವರ್ಕರ್ ಆಗಿಹೋಗಿದ್ದೆ.. ನಿಜಜೀವನದಲ್ಲಿ ಭಗತ್ ಸಿಂಗ್, ರಾಜ್ಗುರು, ಸುಖ್ದೇವ್ ಥರ ವೀರರಾಗದಿದ್ದರೂ ಮುಖವಾಡಗಳಲ್ಲಿ ಹೀರೊ ಅಗೋ ಖುಷಿನೆ ಬೇರೆ.. ಈಗಲೂ ಅದನ್ನೇ mಚಿiಟಿಣಚಿiಟಿ ಮಾಡ್ಕೊಂಡ್ ಹೋಗ್ತಾ ಇದ್ದೀನಿ..
* * * *
ಮಿತ್ರೊ….
ನಾನು ಕೆಲಸ ಮಾಡುವವನು ಅಲ್ಲವೇ ಅಲ್ಲ, ನಾನು ಕಲರ್‍ಪುಲ್ ಮಾತಿನ ಗಿರಾಕಿ. ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದೆ. ನನ್ನ ತುಘಲಕ್ ತೀರ್ಮಾನವಾದ ಅಮಾನ್ಯೀಕರಣದಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ಇನ್ನೂ ದೇಶದ ಆಡಳಿತ ನಡೆಸಲು ಬಾರದೆ ವಿದೇಶಿ ಪ್ರವಾಸ ಮಾಡಿಕೊಂಡು ಅಲ್ಲಿಯೂ ಭಾಷಣ ಮಾಡಿಕೊಂಡು ದಿನ ನೂಕಿದೆ. ಇನ್ನೂ ಹೀಂಗೆ ಹೇಳುತ್ತ ಹೋದರೆ ನೂರಾರು ಸಾಧನೆಗಳನ್ನು ಹೇಳಬಹುದು. ನೀವುಗಳು ನನ್ನ ಮಾತಿನಿಂದಲೇ ಹೊಟ್ಟೆ ತುಂಬಿಸಿಕೊಂಡು ದೇಶಕ್ಕಾಗಿ ಮಾಡುತ್ತಿರುವ ತ್ಯಾಗ ನೆನಸಿಕೊಂಡರೆ ಇನ್ನೂ ಅರ್ಧ ಕೆಜಿ ಅಣಬೆ ತಿನ್ನುವ ಅನ್ನಿಸುತ್ತೆ. 2019 ಕ್ಕೂ ನನ್ನ ಮಾತನ್ನೆ ರಾಷ್ಟ್ರ ನಿರ್ಮಾಣ ಎಂದು ತಿಳಿದುಕೊಂಡು ಮತ್ತೊಮ್ಮೆ ಪ್ರಧಾನಿ ಮಾಡುತ್ತಿರಿ ಅನ್ನುವ ಗ್ಯಾರಂಟಿ ನನಗೆ ಇದೆ.
* * * *
ಮಿತ್ರೊ…. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ರೆ ನಿಮ್ಗೆ ಇಷ್ಟ್ ಮಜಾ ಇರ್ತೀತ್ತ? ನಂಗೊತ್ತು ನೀವ್ ಯಾಕ್ ಬಿಜೆಪಿಗೆ ವೋಟ್ ಹಾಕುದ್ರಿ ಅಂತ.. ಗೋವಾ, ಕೇರಳ, ರೆಸಾರ್ಟ್ ರಾಜಕೀಯ, 100 ಕೋಟಿ, ಅವ್ನು ಅಲ್ಲಿಂದ ಇಲ್ಲಿಗೆ, ಇಲ್ಲಿರೋವ್ನು ಅಲ್ಲಿಗೆ.. ಇವ್ನು ಅವ್ನ ಭ್ರಷ್ಟ ಅನ್ನೋದು, ಅವ್ನು ಇವ್ನ ಭ್ರಷ್ಟ ಅನ್ನೋದು.. ಎಲ್ಲ ಮಿಸ್ ಮಾಡ್ಕೊಂಡಿದ್ರಿ ಅಂತ ಗೊತ್ತು..
* * * *
ಮಿತ್ರೊ…. ನಾನು ತೈವಾನ್ ಇಂದ ತರ್ಸಿರೋ ಇಂಪೋರ್ಟೆಡ್ ಅಣಬೆ ತಿನ್ನೋದು.. ಯಾರೋ ಕಿಡಿಗೇಡಿಗಳು ನಾನು ಭಾಷಣ ಪ್ರಾರಂಭ ಮಾಡೋಕು ಮುಂಚೆ ಕೊಡೈ ಕನಲ್ ಅಣೆಬೆ ಸೇರ್ಸಿ ಕೊಡ್ತಿದ್ದಾರೆ ಅನ್ಸುತ್ತೆ.. ಅದಕ್ಕೆ ನಾನೇನು ಮಾತಾಡ್ತಾ ಇದ್ದೀನಿ ಅಂಥ ನಂಗೆ ಗೋತೈತಿಲ್ಲ.. ಹಂಗೆ ನಮ್ಮ ಈಶ್ವರಪ್ಪ ಹೇಳ್ದಂಗೆ ಒಂದ್ ಫ್ಲೋ ನಲ್ಲಿ ಬಾಯಿಗೆ ಬಂದದ್ದು ಸುಳ್ಳೋ ಪೊಳ್ಳೋ ಜೋರಾಗಿ ಹೇಳ್ಬಿಡ್ತೀನಿ.. ಆ ಕಿಡಿಗೇಡಿಗಳನ್ನು ಹಿಡಿಯಲು ನನ್ನ ಗೆಲ್ಲಿಸಿ…
* * * *
ಮಿತ್ರೊ…. ನಾನೀಗ ನೇಪಾಳದ ಮುಕ್ತಿನಾಥ ದೇವಸ್ಥಾನದಲ್ಲಿದ್ದೀನಿ.. ಇಲ್ಲಿ ಧಾರ್ಮಿಕ ಡಿಪ್ಲೊಮಾಸಿ ಮುಗಿಸಿ ಮೌಂಟ್ ಎವರೆಸ್ಟ್ ಹತ್ತಲು ಯೋಚಿಸ್ತಿದ್ದೀನಿ.. ಕಾಂಗ್ರೆಸ್ನವರು, ಮೌಂಟ್ ಎವರೆಸ್ಟ್ ಈವರೆಗೂ ಹತ್ತದೆ ಅದನ್ನು ಅವಮಾನ ಮಾಡಿದ್ದಾರೆ..

– ಭರತ್ ಹೆಬ್ಬಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...