Homeರಾಜಕೀಯಮಿತ್ರೋ... ಮಿತ್ರೋ... ಮಿತ್ರೋ...

ಮಿತ್ರೋ… ಮಿತ್ರೋ… ಮಿತ್ರೋ…

- Advertisement -
- Advertisement -

ಮಿತ್ರೊ…. ಟೆಡ್ಡಿ ಫೋನ್ ಮಾಡಿದ್ರು.. ಸಡುನ್ ಆಗಿ ಎಂಜಿಲು ಮುಖಕ್ಕೆ ಬಿತ್ತು.. `ಥೂ ಬೋ$%&@#, 2008ರಲ್ಲಿ ನೀವಿಲ್ದೆ 110 ಸೀಟ್ ಗೆದಿದ್ದೆ, ಮೋದಿ ಅಲೆ, ದೇಶಭಕ್ತಿ, ಶಾ ಅಂತ 104ಕ್ಕೆ ತಂದು ನಡುನೀರ್ನಲ್ ನಿಲ್ಸಿ ಕೈಕೊಟ್ರಲ್ಲೋ..’ ಫುಲ್ ಸಂಸ್ಕೃತ.. ಇನ್ನು ಏನೋ ಹೇಳೋಕೆ ಹೋದ್ರು, ಕೋಪ ಮಾಡಿಕೊಂಡೊವ್ರೆ ಅಂಥ ಫೋನ್ ಕಟ್ ಮಾಡಿಬಿಟ್ಟೆ..
* * * *
ಮಿತ್ರೊ…. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರೆಲ್ಗೆ 104 ಡಾಲರ್ ಇದ್ದಾಗ uಠಿಚಿ ಸರ್ಕಾರ ಬರಿ 4.5% ಕೇಂದ್ರೀಯ ತೆರಿಗೆ ಹಾಕಿ ಭಾರತ ಅಭಿವೃದ್ಧಿ ಆಗದಂತೆ ಮಾಡಿತ್ತು.. ನಾವು ಅಧಿಕಾರಕ್ಕೆ ಬಂದಾಗಿನಿಂದ ಅದೇ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 35 ಡಾಲರ್ ಇಂದ ಹಿಡಿದು 60 ಡಾಲರ್ ಆಗಿದೆ.. ನಾವು 4.5% ಇದ್ದ ಕೇಂದ್ರೀಯ ತೆರಿಗೆಯನ್ನು 19.5% ಹೆಚ್ಚಿಸಿ ದೇಶದ ಅಭಿವೃದ್ದಿಯ್ಯನ್ನು ಭಯಂಕರ ಹೆಚ್ಚಿಸಿದ್ದೇವೆ..!
* * * *
ಮಿತ್ರೊ…. ವೇದಾಂತ ಕಂಪನಿಯ ಅನಿಲ್ ಫೋನ್ ಮಾಡಿದ್ದ.. ಮಚ್ಚ, ಕಂಪನಿಗೆ ಬೀಗ ಹಾಕ್ಬಿಟ್ರು, ಏನಾರ ಮಾಡು ಅಂತ.. ನಾನು ಕೂಡ ಮೊನ್ನೆಯಿಂದ ಕ್ಯಾಲ್ಕುಲೇಟರ್ ಇಡ್ಕೊಂಡ್ ಲೆಕ್ಕ ಹಾಕ್ತಿದ್ದೆ. ಇವನು, ಕಾಂಗಿಗಳು ಮತ್ತು ನಮ್ಮ ಕೃಪೆಯಿಂದ, ಭಾರತೀಯ ಬ್ಯಾಂಕುಗಳಿಂದ ಪಡೆದಿರುವ ಒಟ್ಟೂ ಸಾಲ 2 ಲಕ್ಷ ಕೋಟಿಯಂತೆ. ಒಂದು ಅಂದಾಜಿನ ಮೇಲೆ ಇವನ ಕಂಪನಿಯಲ್ಲಿ ಒಟ್ಟು ಕೆಲಸಗಾರರು 60000.. ಅಂದರೆ ಪ್ರತಿ 3 ಕೋಟಿ 33 ಲಕ್ಷಕ್ಕೆ ಒಂದು ಉದ್ಯೋಗ ಶೃಸ್ಟಿ ಮಾಡುತ್ತಿದ್ದಾನಂತೆ! ಅಂದರೆ ಇವನ ಕಂಪನಿಯಲ್ಲಿ ಕೆಲಸ ಮಾಡುತ್ತಿರುವವರೆಲ್ಲರೂ ಕೋಟ್ಯಧಿಪತಿಗಳೇ? ಇಲ್ಲ, ಇವನ ಕಂಪನಿಯಲ್ಲಿ 90% ಮೇಲೂ ಕಾರ್ಮಿಕರು, ತಿಂಗಳಿಗೆ 20,000ಕ್ಕಿಂತಲೂ ಕಡಿಮೆ ಸಂಬಳ ಪಡೆಯುತ್ತಿದ್ದಾರೆ.. ಕಾಂಗಿ ಮತ್ತು ನಮಗೆ ಇವನು ಲೆಕ್ಕದಲ್ಲಿ ಕೊಟ್ಟಿರುವ ದೇಣಿಗೆ ಬರಿ 29 ಕೋಟಿ.. ಇನ್ನ ಮಿಕ್ಕ ಅಷ್ಟೊಂದು ಕಾಸಿನಲ್ಲಿ ಏನ್ ಮಾಡ್ತಾ ಇದ್ದಿಯೊ ಅಂತ ಡೌಟ್ನಲ್ಲಿ ಕೇಳ್ದೆ .. ಅವನು “ದೇಶದ್ರೋಹಿ, ಸೈನಿಕರು ಗಡಿಯಲ್ಲಿ ದೇಶಕ್ಕೋಸ್ಕರ ಸಾಯಿತಾ ಇದ್ರೆ ನಿಂಗೆ ಲೆಕ್ಕದ್ ಚಿಂತೆ” ಅಂತ ಫೋನ್ ಕಟ್ ಮಾಡ್ಬಿಡೋದ!!!
* * * *
ಮಿತ್ರೊ…. , ನನ್ನ ಗುರು ಸಾವರ್ಕರ್ ಅವರ ಬಗ್ಗೆ ನಾನು ಚಿಕ್ಕಂದಿನಿಂದಲೇ ಓದಲು ಶುರು ಮಾಡಿದ ಪುಸ್ತಕ “ಲೈಫ್ ಒಫ್ ಬ್ಯಾರಿಸ್ಟರ್ ಸಾವರ್ಕರ್”. ಇದು ಅವರು ಬ್ರಿಟಿಷರಿಂದ ಭಿಕ್ಷೆ ಬೇಡಿ, ನಾನು ಇನ್ನೆಂದಿಗೂ ಬ್ರಿಟಿಷರ ವಿರುದ್ಧ ಹೋರಾಡುವುದಿಲ್ಲ, ಇನ್ನು ಮುಂದೆ ನಾನು ನಿಮ್ಮ ಗುಲಾಮ ಎಂದು ಒಂದರ ಮೇಲೆ ಒಂದರಂತೆ ಹನ್ನೊಂದು ಪತ್ರಗಳನ್ನು ಬೆರೆದು 1924ರಲ್ಲಿ ಷರತ್ತಿನ ಮೇಲೆ ಬಿಡುಗಡೆಯಾಗಿ ಎರೆಡನೆ ವರ್ಷದಲ್ಲಿ(1926) ಅನಾಮಧೇಯ ಚಿತ್ರಗುಪ್ತ ಎಂಬುವವರು ಪ್ರಕಟಿಸಿದ ಪುಸ್ತಕ.. ಈ ಪುಸ್ತಕ ಎಷ್ಟು ರೋಚಕವಾಗಿತ್ತೆಂದರೆ, ಸಾವರ್ಕರ್ ಹುಟ್ಟಿನಿಂದಲೇ ಅತಿ ಬುದ್ದಿವಂತ, ಆಜನ್ಮ ಹೋರಾಟಗಾರ, ಅನ್ಯಾಯಗಳ ವಿರುದ್ಧ ಸಿಡಿದೇಳುವ ವೀರ, ಶೂರ, ಯಾವುದೇ ತಂತ್ರಕ್ಕೆ, ಮಣಿಯದೆ ಪ್ರತಿತಂತ್ರ ಹೆಣೆಯುವ ಶಕ್ತಿ ಮತ್ತು ಯುಕ್ತಿಯುಳ್ಳ ವೀರ ಎಂದು ಪುಸ್ತಕದ ಪ್ರತಿಯೊಂದು ಹಂತದಲ್ಲೂ ಬರೆಯಲಾಗಿತ್ತು.. ಯಾವುದೇ ಫಿಕ್ಷನ್ ಪುಸ್ತಕ ಓದುತ್ತಿದ್ದರೆ ಆ ಪಾತ್ರಗಳ ಒಳಗೆ ನಾವು ಹೇಗೆ ನುಸುಳಿ ಮಾರುಹೋಗುತ್ತೇವೋ ಅದೇ ರೀತಿ ಸಾವರ್ಕರರೇ ನಾನು ಎಂಬಂತೆ ಕಲ್ಪಿಸಿಕೊಳ್ಳಲು ಆರಂಭಿಸಿದೆ (ಒಂದು ರೀತಿಯ ನಾಗವಲ್ಲಿ ಟೈಪ್ಸ್). ನನ್ನ ಮೂವತ್ತೊಂದನೆ ವರ್ಷದಲ್ಲಿ, ಅದೆ 1987ರಲ್ಲಿ ತಿಳಿಯಿತು ಆ ಚಿತ್ರಗುಪ್ತ ಬೇರ್ಯಾರು ಅಲ್ಲ, ಖುದ್ದು ಸರ್ವರ್ಕರ್, ಚಿತ್ರಗುಪ್ತ ಎಂಬ ಹೆಸರಿನಲ್ಲಿ ಬರೆದ ಪುಸ್ತಕ ಎಂದು.. ಅಷ್ಟೊತ್ತಿಗಾಗಲೇ ಕಾಲ ಮಿಂಚಿತ್ತು.. ನಾನು ಸಾವರ್ಕರ್ ಆಗಿಹೋಗಿದ್ದೆ.. ನಿಜಜೀವನದಲ್ಲಿ ಭಗತ್ ಸಿಂಗ್, ರಾಜ್ಗುರು, ಸುಖ್ದೇವ್ ಥರ ವೀರರಾಗದಿದ್ದರೂ ಮುಖವಾಡಗಳಲ್ಲಿ ಹೀರೊ ಅಗೋ ಖುಷಿನೆ ಬೇರೆ.. ಈಗಲೂ ಅದನ್ನೇ mಚಿiಟಿಣಚಿiಟಿ ಮಾಡ್ಕೊಂಡ್ ಹೋಗ್ತಾ ಇದ್ದೀನಿ..
* * * *
ಮಿತ್ರೊ….
ನಾನು ಕೆಲಸ ಮಾಡುವವನು ಅಲ್ಲವೇ ಅಲ್ಲ, ನಾನು ಕಲರ್‍ಪುಲ್ ಮಾತಿನ ಗಿರಾಕಿ. ನಾಲ್ಕು ವರ್ಷಗಳಿಂದ ದೇಶದ ಆರ್ಥಿಕತೆಯನ್ನು ಹಳ್ಳ ಹಿಡಿಸಿದೆ. ನನ್ನ ತುಘಲಕ್ ತೀರ್ಮಾನವಾದ ಅಮಾನ್ಯೀಕರಣದಿಂದ ಲಕ್ಷಾಂತರ ಜನರು ಉದ್ಯೋಗ ಕಳೆದುಕೊಂಡರು. ಇನ್ನೂ ದೇಶದ ಆಡಳಿತ ನಡೆಸಲು ಬಾರದೆ ವಿದೇಶಿ ಪ್ರವಾಸ ಮಾಡಿಕೊಂಡು ಅಲ್ಲಿಯೂ ಭಾಷಣ ಮಾಡಿಕೊಂಡು ದಿನ ನೂಕಿದೆ. ಇನ್ನೂ ಹೀಂಗೆ ಹೇಳುತ್ತ ಹೋದರೆ ನೂರಾರು ಸಾಧನೆಗಳನ್ನು ಹೇಳಬಹುದು. ನೀವುಗಳು ನನ್ನ ಮಾತಿನಿಂದಲೇ ಹೊಟ್ಟೆ ತುಂಬಿಸಿಕೊಂಡು ದೇಶಕ್ಕಾಗಿ ಮಾಡುತ್ತಿರುವ ತ್ಯಾಗ ನೆನಸಿಕೊಂಡರೆ ಇನ್ನೂ ಅರ್ಧ ಕೆಜಿ ಅಣಬೆ ತಿನ್ನುವ ಅನ್ನಿಸುತ್ತೆ. 2019 ಕ್ಕೂ ನನ್ನ ಮಾತನ್ನೆ ರಾಷ್ಟ್ರ ನಿರ್ಮಾಣ ಎಂದು ತಿಳಿದುಕೊಂಡು ಮತ್ತೊಮ್ಮೆ ಪ್ರಧಾನಿ ಮಾಡುತ್ತಿರಿ ಅನ್ನುವ ಗ್ಯಾರಂಟಿ ನನಗೆ ಇದೆ.
* * * *
ಮಿತ್ರೊ…. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ರೆ ನಿಮ್ಗೆ ಇಷ್ಟ್ ಮಜಾ ಇರ್ತೀತ್ತ? ನಂಗೊತ್ತು ನೀವ್ ಯಾಕ್ ಬಿಜೆಪಿಗೆ ವೋಟ್ ಹಾಕುದ್ರಿ ಅಂತ.. ಗೋವಾ, ಕೇರಳ, ರೆಸಾರ್ಟ್ ರಾಜಕೀಯ, 100 ಕೋಟಿ, ಅವ್ನು ಅಲ್ಲಿಂದ ಇಲ್ಲಿಗೆ, ಇಲ್ಲಿರೋವ್ನು ಅಲ್ಲಿಗೆ.. ಇವ್ನು ಅವ್ನ ಭ್ರಷ್ಟ ಅನ್ನೋದು, ಅವ್ನು ಇವ್ನ ಭ್ರಷ್ಟ ಅನ್ನೋದು.. ಎಲ್ಲ ಮಿಸ್ ಮಾಡ್ಕೊಂಡಿದ್ರಿ ಅಂತ ಗೊತ್ತು..
* * * *
ಮಿತ್ರೊ…. ನಾನು ತೈವಾನ್ ಇಂದ ತರ್ಸಿರೋ ಇಂಪೋರ್ಟೆಡ್ ಅಣಬೆ ತಿನ್ನೋದು.. ಯಾರೋ ಕಿಡಿಗೇಡಿಗಳು ನಾನು ಭಾಷಣ ಪ್ರಾರಂಭ ಮಾಡೋಕು ಮುಂಚೆ ಕೊಡೈ ಕನಲ್ ಅಣೆಬೆ ಸೇರ್ಸಿ ಕೊಡ್ತಿದ್ದಾರೆ ಅನ್ಸುತ್ತೆ.. ಅದಕ್ಕೆ ನಾನೇನು ಮಾತಾಡ್ತಾ ಇದ್ದೀನಿ ಅಂಥ ನಂಗೆ ಗೋತೈತಿಲ್ಲ.. ಹಂಗೆ ನಮ್ಮ ಈಶ್ವರಪ್ಪ ಹೇಳ್ದಂಗೆ ಒಂದ್ ಫ್ಲೋ ನಲ್ಲಿ ಬಾಯಿಗೆ ಬಂದದ್ದು ಸುಳ್ಳೋ ಪೊಳ್ಳೋ ಜೋರಾಗಿ ಹೇಳ್ಬಿಡ್ತೀನಿ.. ಆ ಕಿಡಿಗೇಡಿಗಳನ್ನು ಹಿಡಿಯಲು ನನ್ನ ಗೆಲ್ಲಿಸಿ…
* * * *
ಮಿತ್ರೊ…. ನಾನೀಗ ನೇಪಾಳದ ಮುಕ್ತಿನಾಥ ದೇವಸ್ಥಾನದಲ್ಲಿದ್ದೀನಿ.. ಇಲ್ಲಿ ಧಾರ್ಮಿಕ ಡಿಪ್ಲೊಮಾಸಿ ಮುಗಿಸಿ ಮೌಂಟ್ ಎವರೆಸ್ಟ್ ಹತ್ತಲು ಯೋಚಿಸ್ತಿದ್ದೀನಿ.. ಕಾಂಗ್ರೆಸ್ನವರು, ಮೌಂಟ್ ಎವರೆಸ್ಟ್ ಈವರೆಗೂ ಹತ್ತದೆ ಅದನ್ನು ಅವಮಾನ ಮಾಡಿದ್ದಾರೆ..

– ಭರತ್ ಹೆಬ್ಬಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...