Homeಕರ್ನಾಟಕಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ....

ಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ….

ಇತರ ರಾಜ್ಯಗಳಲ್ಲಿ ಶೇ.50% ರಷ್ಟು ಮತ ಹಾಕಿದ ಆದಿವಾಸಿಗಳಿಗೆ ಕೇವಲ 2 ಸಚಿವ ಸ್ಥಾನ ನೀಡಿದರೆ, ಕರ್ನಾಟಕದಲ್ಲಿ ಎಲ್ಲ 7 ಮೀಸಲು ಕ್ಷೇತ್ರ ಗೆದ್ದರೂ ಒಬ್ಬರಿಗೂ ಸಚಿವಗಿರಿಯಿಲ್ಲ!

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ನಮ್ಮ ಅಧಿಕಾರ ಕೇಂದ್ರಗಳು ಎಂದಿಗೂ ಜನಪರವಲ್ಲ, ಹೀಗಾಗಿ ಇಲ್ಲಿ ಸಂಸತ್ತಿನಲ್ಲಿ ಸಾಮಾಜಿಕ ನ್ಯಾಯದ ಪ್ರಾಮಾಣಿಕ ದನಿ ಕೇಳೀತೇ ಎಂಬುದೂ ಸಂಶಯಾತ್ಮಕವೇ. ಸದ್ಯ ನಮ್ಮ ಸಂಸತ್ತಿಗೆ ಆಯ್ಕೆಯಾದವರು ಯಾವ ಯಾವ ಧರ್ಮ, ಸಮುದಾಯಕ್ಕೆ ಸೇರಿದವರು ಎಂಬ ಅಂಕಿಸಂಖ್ಯೆ ನೋಡಿದರೇನೇ ಇಲ್ಲಿ ‘ಬಹು ಸಂಖ್ಯಾತ’ರು ಪ್ರಬಲವಾಗಿ ಆವರಿಸುತ್ತಲೇ ಹೋಗುತ್ತಿರುವುದನ್ನು ಗಮನಿಸಬಹುದು…

ಈ 17ನೇ ಲೋಕಸಭೆಯಲ್ಲಿ ಶೇ, 90.4ರಷ್ಟು ಜಾತಿ- ಹಿಂದುಗಳು, ಶೇ. 5.2ರಷ್ಟು ಮುಸ್ಲಿಮರು (2014ಕ್ಕೆ ಹೋಲಿಸಿದರೆ ಈ ಸಲ ಐವರು ಮುಸ್ಲಿಂ ಎಂಪಿಗಳು ಹೆಚ್ಚಾಗಿದ್ದಾರೆ), ಶೇ. 4ರಷ್ಟು ಇತರೆ ಧಾರ್ಮಿಕ ಅಲ್ಪಸಂಖ್ಯಾತರು. ಬಿಜೆಪಿಯ ಎಂಪಿಗಳ ಪೈಕಿ ಶೇ. 99ರಷ್ಟು ಜಾತಿ-ಹಿಂದೂಗಳೇ.

ಜಾತಿ/ಸಮುದಾಯವಾರು ಲೆಕ್ಕಕ್ಕೆ ಬಂದರೆ, 542ರಲ್ಲಿ ಮೇಲ್ಜಾತಿಯವರ ಸಂಖ್ಯೆ 232, ಒಬಿಸಿ-120, ಎಸ್‍ಸಿ-86, ಎಸ್‍ಟಿ-52, ಧಾರ್ಮಿಕ ಅಲ್ಪಸಂಖ್ಯಾತರು-52.

ಕರ್ನಾಟಕದ ಉದಾಹರಣೆ ತೆಗೆದುಕೊಂಡರೆ, ಇಲ್ಲಿ 5 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡ ಮೀಸಲಿನ ಕ್ಷೇತ್ರಗಳೆಲ್ಲವೂ ಬಿಜೆಪಿಯ ಪಾಲಾಗಿವೆ. ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್ ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!

ಉತ್ತರ ಭಾರತದ ಹಿಂದು ಬೆಲ್ಟಿನಲ್ಲಿ ಬಿಜೆಪಿ ಮೇಲ್ಜಾತಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರಿಕರಿಸಿ ಚುನಾವಣಾ ತಂತ್ರ ಹೆಣೆದಿತ್ತು ಎಂದು ಲೋಕನೀತಿ-ಸಿಎಸ್‍ಡಿಎಸ್ ಸಂಸ್ಥೆಯ ಸಮೀಕ್ಷೆ ಹೇಳಿದೆ. ಇಂತಹ ಯಾವ ಪ್ಲಾನೂ ಅಲ್ಲಿನ ಕಾಂಗ್ರೆಸ್ ಮತ್ತು ಮಹಾಘಟಬಂಧನದ ಪಕ್ಷಗಳಿಗೆ ಇರಲೇ ಇಲ್ಲ. ಎಸ್‍ಪಿ-ಬಿಎಸ್‍ಪಿ ಮತ್ತು ಆರ್‍ಎಲ್‍ಡಿ ನಡುವೆ ಮತವರ್ಗಾವಣೆ ಆಗುತ್ತದೆ ಎಂಬ ದೃಢ ನಿರ್ಧಾರಕ್ಕೆ ಘಟಬಂಧನ ಜೋತು ಬಿದ್ದು ಹಿಂದಕ್ಕೆ ಚಲಿಸಿತು.

ಸಹಜವಾಗಿ ಈ ಸಲ ಮೇಲ್ಜಾತಿಯ ಮತಗಳನ್ನು ಪಕ್ಕ ಮಾಡಿಕೊಂಡಿದ್ದ ಬಿಜೆಪಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರೀಕರಿಸಿ ತನ್ನ ಪ್ರಚಾರ ವ್ಯೂಹವನ್ನು ಹೆಣೆದಿತ್ತು.. ಡಿಸೆಂಬರ್‍ನಲ್ಲಿ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ. 34ರಷ್ಟು ಆದಿವಾಸಿ ಮತಗಳು ಬಂದಿದ್ದರೆ ಈ ಲೊಕಸಭಾ ಚುನಾವಣೆಯಲ್ಲಿ ಅದು ಶೇ. 52ಕ್ಕೆ ಏರಿತ್ತು! ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್, ಹಿಮಾಚಲ ಪ್ರದೇಶ, ಬಿಹಾರ್-ಹೀಗೆ ಆದಿವಾಸಿಗಳಿಂದ ಸಾಕಷ್ಟು ಮತ ಪಡೆದ ಬಿಜೆಪಿ ಈಗ ಅವರಿಗೆ ಕಾಟಾಚಾರಕ್ಕೆ ಎಂಬಂತೆ ಎರಡೇ ಎರಡು ಸಚಿವ ಸ್ಥಾನ ನೀಡಿದೆ.

ಕರ್ನಾಟಕದಲ್ಲಿ ಇಬ್ಬರು ಬ್ರಾಹ್ಮಣ ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಅಂದಾಜಿತ್ತು. ಕಳೆದ ಸಲ ಆರಂಭದಲ್ಲಿ ದಾವಣಗೆರೆಯ ಸಿದ್ದೇಶ್ವರ್ ಅವರಿಗೆ ಸಚಿವಗಿರಿ ಕೊಟ್ಟು ನಂತರ ಅವರನ್ನು ತೆಗೆದು ಹಾಕಲಾಗಿತ್ತು. 2018ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅನಂತ ಹೆಗಡೆಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆಗ ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರು ಸಚಿವರಾಗಿದ್ದರೆ ಬಿಜೆಪಿಯ ಬೆಂಬಲಿಗರು ಅನಿಸಿಕೊಂಡ ಲಿಂಗಾಯತ ಸಮುದಾಯಕ್ಕೆ ಯಾವ ಸಚಿವಗಿರಿಯೂ ಇರಲಿಲ್ಲ.

ಈ ಸಲ ಬೆಂಗಳೂರು ದಕ್ಷಿಣದ ಅನಂತಕುಮಾರ್ ಸಾವಿನ ಕಾರಣದಿಂದ ಆ ಕೋಟಾ ಅವರ ಶಿಷ್ಯ ಧಾರವಾಡದ ಪ್ರಹ್ಲಾದ್ ಜೋಶಿಗೆ ಸಿಕ್ಕಿದೆ. ಮತ್ತೆ ಒಕ್ಕಲಿಗರ ಕೋಟಾದಲ್ಲಿ ನಾಲ್ವರು ಒಕ್ಕಲಿಗ ಸಂಸದರ ಪೈಕಿ ‘ಹಿರಿಯ’ ಸದಾನಂದಗೌಡರಿಗೆ ಮತ್ತೆ ಚಾನ್ಸು ಲಭಿಸಿದೆ. ಇವರಿಬ್ಬರೂ ಕ್ಯಾಬಿನೆಟ್ ಸಚಿವರು. ಬೆಳಗಾವಿಯಿಂದ 4 ಸಲ ಗೆದ್ದಿರುವ ಸುರೇಶ ಅಂಗಡಿ ಎಂಬ ಬಣಜಿಗ ಲಿಂಗಾಯತರಿಗೆ ರಾಜ್ಯ ಸಚಿವ ಸ್ಥಾನವನ್ನಷ್ಟೇ ನೀಡಲಾಗಿದೆ.

ಯಡಿಯೂರಪ್ಪ ನೀಡಿದ ಪಟ್ಟಿಯಲ್ಲಿ ಒಬ್ಬರಿಗೂ ಸ್ಥಾನವಿಲ್ಲ! ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು!

ಎಸ್‍ಸಿ, ಎಸ್ಟಿಗೆ ಶೂನ್ಯ!
ಕಳೆದ ಸಲ 2014ರಲ್ಲಿ ಬಿಜೆಪಿ 7 ಮೀಸಲು ಕ್ಷೇತ್ರಗಳಲ್ಲಿ ಕೇವಲ ವಿಜಯಪುರ ಒಂದರಲ್ಲಿ ಮಾತ್ರ ಗೆದ್ದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಗ ವಿಜಯಪುರದ ರಮೇಶ ಜಿಗಜಿಗಣಿಯವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈ ಸಲ ಬಿಜೆಪಿ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಆ ಸಮುದಾಯಗಳಿಗೆ ಸೇರಿದ ಒಬ್ಬ ಸಂಸದನಿಗೂ ಸಚಿವ ಸ್ಥಾನ ನೀಡಿಲ್ಲ. ಕಲಬುರ್ಗಿ ವಿಭಾಗದಲ್ಲೇ ಅದು 3 ಮೀಸಲು ಕ್ಷೇತ್ರಗಳನ್ನು ಗೆದ್ದಿದ್ದರೂ ಆ ಭಾಗಕ್ಕೂ ಮಣೆ ಹಾಕಿಲ್ಲ.
ಒಟ್ಟು 57 ಸಚಿವ ಸ್ಥಾನದಲ್ಲಿ 21ನ್ನು ಬ್ರಾಹ್ಮಣರಿಗೆ ನೀಡಿರುವ, ಸಂಘ ಪರಿವಾರ ನಿರ್ಧರಿಸುವ ಪಟ್ಟಿಯಲ್ಲಿ ಇನ್ನೆಂತಾ ಸಾಮಾಜಿಕ ನ್ಯಾಯ ಹುಡುಕೋಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...