Homeಕರ್ನಾಟಕಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ....

ಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ….

ಇತರ ರಾಜ್ಯಗಳಲ್ಲಿ ಶೇ.50% ರಷ್ಟು ಮತ ಹಾಕಿದ ಆದಿವಾಸಿಗಳಿಗೆ ಕೇವಲ 2 ಸಚಿವ ಸ್ಥಾನ ನೀಡಿದರೆ, ಕರ್ನಾಟಕದಲ್ಲಿ ಎಲ್ಲ 7 ಮೀಸಲು ಕ್ಷೇತ್ರ ಗೆದ್ದರೂ ಒಬ್ಬರಿಗೂ ಸಚಿವಗಿರಿಯಿಲ್ಲ!

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ನಮ್ಮ ಅಧಿಕಾರ ಕೇಂದ್ರಗಳು ಎಂದಿಗೂ ಜನಪರವಲ್ಲ, ಹೀಗಾಗಿ ಇಲ್ಲಿ ಸಂಸತ್ತಿನಲ್ಲಿ ಸಾಮಾಜಿಕ ನ್ಯಾಯದ ಪ್ರಾಮಾಣಿಕ ದನಿ ಕೇಳೀತೇ ಎಂಬುದೂ ಸಂಶಯಾತ್ಮಕವೇ. ಸದ್ಯ ನಮ್ಮ ಸಂಸತ್ತಿಗೆ ಆಯ್ಕೆಯಾದವರು ಯಾವ ಯಾವ ಧರ್ಮ, ಸಮುದಾಯಕ್ಕೆ ಸೇರಿದವರು ಎಂಬ ಅಂಕಿಸಂಖ್ಯೆ ನೋಡಿದರೇನೇ ಇಲ್ಲಿ ‘ಬಹು ಸಂಖ್ಯಾತ’ರು ಪ್ರಬಲವಾಗಿ ಆವರಿಸುತ್ತಲೇ ಹೋಗುತ್ತಿರುವುದನ್ನು ಗಮನಿಸಬಹುದು…

ಈ 17ನೇ ಲೋಕಸಭೆಯಲ್ಲಿ ಶೇ, 90.4ರಷ್ಟು ಜಾತಿ- ಹಿಂದುಗಳು, ಶೇ. 5.2ರಷ್ಟು ಮುಸ್ಲಿಮರು (2014ಕ್ಕೆ ಹೋಲಿಸಿದರೆ ಈ ಸಲ ಐವರು ಮುಸ್ಲಿಂ ಎಂಪಿಗಳು ಹೆಚ್ಚಾಗಿದ್ದಾರೆ), ಶೇ. 4ರಷ್ಟು ಇತರೆ ಧಾರ್ಮಿಕ ಅಲ್ಪಸಂಖ್ಯಾತರು. ಬಿಜೆಪಿಯ ಎಂಪಿಗಳ ಪೈಕಿ ಶೇ. 99ರಷ್ಟು ಜಾತಿ-ಹಿಂದೂಗಳೇ.

ಜಾತಿ/ಸಮುದಾಯವಾರು ಲೆಕ್ಕಕ್ಕೆ ಬಂದರೆ, 542ರಲ್ಲಿ ಮೇಲ್ಜಾತಿಯವರ ಸಂಖ್ಯೆ 232, ಒಬಿಸಿ-120, ಎಸ್‍ಸಿ-86, ಎಸ್‍ಟಿ-52, ಧಾರ್ಮಿಕ ಅಲ್ಪಸಂಖ್ಯಾತರು-52.

ಕರ್ನಾಟಕದ ಉದಾಹರಣೆ ತೆಗೆದುಕೊಂಡರೆ, ಇಲ್ಲಿ 5 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡ ಮೀಸಲಿನ ಕ್ಷೇತ್ರಗಳೆಲ್ಲವೂ ಬಿಜೆಪಿಯ ಪಾಲಾಗಿವೆ. ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್ ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!

ಉತ್ತರ ಭಾರತದ ಹಿಂದು ಬೆಲ್ಟಿನಲ್ಲಿ ಬಿಜೆಪಿ ಮೇಲ್ಜಾತಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರಿಕರಿಸಿ ಚುನಾವಣಾ ತಂತ್ರ ಹೆಣೆದಿತ್ತು ಎಂದು ಲೋಕನೀತಿ-ಸಿಎಸ್‍ಡಿಎಸ್ ಸಂಸ್ಥೆಯ ಸಮೀಕ್ಷೆ ಹೇಳಿದೆ. ಇಂತಹ ಯಾವ ಪ್ಲಾನೂ ಅಲ್ಲಿನ ಕಾಂಗ್ರೆಸ್ ಮತ್ತು ಮಹಾಘಟಬಂಧನದ ಪಕ್ಷಗಳಿಗೆ ಇರಲೇ ಇಲ್ಲ. ಎಸ್‍ಪಿ-ಬಿಎಸ್‍ಪಿ ಮತ್ತು ಆರ್‍ಎಲ್‍ಡಿ ನಡುವೆ ಮತವರ್ಗಾವಣೆ ಆಗುತ್ತದೆ ಎಂಬ ದೃಢ ನಿರ್ಧಾರಕ್ಕೆ ಘಟಬಂಧನ ಜೋತು ಬಿದ್ದು ಹಿಂದಕ್ಕೆ ಚಲಿಸಿತು.

ಸಹಜವಾಗಿ ಈ ಸಲ ಮೇಲ್ಜಾತಿಯ ಮತಗಳನ್ನು ಪಕ್ಕ ಮಾಡಿಕೊಂಡಿದ್ದ ಬಿಜೆಪಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರೀಕರಿಸಿ ತನ್ನ ಪ್ರಚಾರ ವ್ಯೂಹವನ್ನು ಹೆಣೆದಿತ್ತು.. ಡಿಸೆಂಬರ್‍ನಲ್ಲಿ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ. 34ರಷ್ಟು ಆದಿವಾಸಿ ಮತಗಳು ಬಂದಿದ್ದರೆ ಈ ಲೊಕಸಭಾ ಚುನಾವಣೆಯಲ್ಲಿ ಅದು ಶೇ. 52ಕ್ಕೆ ಏರಿತ್ತು! ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್, ಹಿಮಾಚಲ ಪ್ರದೇಶ, ಬಿಹಾರ್-ಹೀಗೆ ಆದಿವಾಸಿಗಳಿಂದ ಸಾಕಷ್ಟು ಮತ ಪಡೆದ ಬಿಜೆಪಿ ಈಗ ಅವರಿಗೆ ಕಾಟಾಚಾರಕ್ಕೆ ಎಂಬಂತೆ ಎರಡೇ ಎರಡು ಸಚಿವ ಸ್ಥಾನ ನೀಡಿದೆ.

ಕರ್ನಾಟಕದಲ್ಲಿ ಇಬ್ಬರು ಬ್ರಾಹ್ಮಣ ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಅಂದಾಜಿತ್ತು. ಕಳೆದ ಸಲ ಆರಂಭದಲ್ಲಿ ದಾವಣಗೆರೆಯ ಸಿದ್ದೇಶ್ವರ್ ಅವರಿಗೆ ಸಚಿವಗಿರಿ ಕೊಟ್ಟು ನಂತರ ಅವರನ್ನು ತೆಗೆದು ಹಾಕಲಾಗಿತ್ತು. 2018ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅನಂತ ಹೆಗಡೆಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆಗ ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರು ಸಚಿವರಾಗಿದ್ದರೆ ಬಿಜೆಪಿಯ ಬೆಂಬಲಿಗರು ಅನಿಸಿಕೊಂಡ ಲಿಂಗಾಯತ ಸಮುದಾಯಕ್ಕೆ ಯಾವ ಸಚಿವಗಿರಿಯೂ ಇರಲಿಲ್ಲ.

ಈ ಸಲ ಬೆಂಗಳೂರು ದಕ್ಷಿಣದ ಅನಂತಕುಮಾರ್ ಸಾವಿನ ಕಾರಣದಿಂದ ಆ ಕೋಟಾ ಅವರ ಶಿಷ್ಯ ಧಾರವಾಡದ ಪ್ರಹ್ಲಾದ್ ಜೋಶಿಗೆ ಸಿಕ್ಕಿದೆ. ಮತ್ತೆ ಒಕ್ಕಲಿಗರ ಕೋಟಾದಲ್ಲಿ ನಾಲ್ವರು ಒಕ್ಕಲಿಗ ಸಂಸದರ ಪೈಕಿ ‘ಹಿರಿಯ’ ಸದಾನಂದಗೌಡರಿಗೆ ಮತ್ತೆ ಚಾನ್ಸು ಲಭಿಸಿದೆ. ಇವರಿಬ್ಬರೂ ಕ್ಯಾಬಿನೆಟ್ ಸಚಿವರು. ಬೆಳಗಾವಿಯಿಂದ 4 ಸಲ ಗೆದ್ದಿರುವ ಸುರೇಶ ಅಂಗಡಿ ಎಂಬ ಬಣಜಿಗ ಲಿಂಗಾಯತರಿಗೆ ರಾಜ್ಯ ಸಚಿವ ಸ್ಥಾನವನ್ನಷ್ಟೇ ನೀಡಲಾಗಿದೆ.

ಯಡಿಯೂರಪ್ಪ ನೀಡಿದ ಪಟ್ಟಿಯಲ್ಲಿ ಒಬ್ಬರಿಗೂ ಸ್ಥಾನವಿಲ್ಲ! ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು!

ಎಸ್‍ಸಿ, ಎಸ್ಟಿಗೆ ಶೂನ್ಯ!
ಕಳೆದ ಸಲ 2014ರಲ್ಲಿ ಬಿಜೆಪಿ 7 ಮೀಸಲು ಕ್ಷೇತ್ರಗಳಲ್ಲಿ ಕೇವಲ ವಿಜಯಪುರ ಒಂದರಲ್ಲಿ ಮಾತ್ರ ಗೆದ್ದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಗ ವಿಜಯಪುರದ ರಮೇಶ ಜಿಗಜಿಗಣಿಯವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈ ಸಲ ಬಿಜೆಪಿ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಆ ಸಮುದಾಯಗಳಿಗೆ ಸೇರಿದ ಒಬ್ಬ ಸಂಸದನಿಗೂ ಸಚಿವ ಸ್ಥಾನ ನೀಡಿಲ್ಲ. ಕಲಬುರ್ಗಿ ವಿಭಾಗದಲ್ಲೇ ಅದು 3 ಮೀಸಲು ಕ್ಷೇತ್ರಗಳನ್ನು ಗೆದ್ದಿದ್ದರೂ ಆ ಭಾಗಕ್ಕೂ ಮಣೆ ಹಾಕಿಲ್ಲ.
ಒಟ್ಟು 57 ಸಚಿವ ಸ್ಥಾನದಲ್ಲಿ 21ನ್ನು ಬ್ರಾಹ್ಮಣರಿಗೆ ನೀಡಿರುವ, ಸಂಘ ಪರಿವಾರ ನಿರ್ಧರಿಸುವ ಪಟ್ಟಿಯಲ್ಲಿ ಇನ್ನೆಂತಾ ಸಾಮಾಜಿಕ ನ್ಯಾಯ ಹುಡುಕೋಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...