Homeಕರ್ನಾಟಕಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ....

ಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ….

ಇತರ ರಾಜ್ಯಗಳಲ್ಲಿ ಶೇ.50% ರಷ್ಟು ಮತ ಹಾಕಿದ ಆದಿವಾಸಿಗಳಿಗೆ ಕೇವಲ 2 ಸಚಿವ ಸ್ಥಾನ ನೀಡಿದರೆ, ಕರ್ನಾಟಕದಲ್ಲಿ ಎಲ್ಲ 7 ಮೀಸಲು ಕ್ಷೇತ್ರ ಗೆದ್ದರೂ ಒಬ್ಬರಿಗೂ ಸಚಿವಗಿರಿಯಿಲ್ಲ!

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ನಮ್ಮ ಅಧಿಕಾರ ಕೇಂದ್ರಗಳು ಎಂದಿಗೂ ಜನಪರವಲ್ಲ, ಹೀಗಾಗಿ ಇಲ್ಲಿ ಸಂಸತ್ತಿನಲ್ಲಿ ಸಾಮಾಜಿಕ ನ್ಯಾಯದ ಪ್ರಾಮಾಣಿಕ ದನಿ ಕೇಳೀತೇ ಎಂಬುದೂ ಸಂಶಯಾತ್ಮಕವೇ. ಸದ್ಯ ನಮ್ಮ ಸಂಸತ್ತಿಗೆ ಆಯ್ಕೆಯಾದವರು ಯಾವ ಯಾವ ಧರ್ಮ, ಸಮುದಾಯಕ್ಕೆ ಸೇರಿದವರು ಎಂಬ ಅಂಕಿಸಂಖ್ಯೆ ನೋಡಿದರೇನೇ ಇಲ್ಲಿ ‘ಬಹು ಸಂಖ್ಯಾತ’ರು ಪ್ರಬಲವಾಗಿ ಆವರಿಸುತ್ತಲೇ ಹೋಗುತ್ತಿರುವುದನ್ನು ಗಮನಿಸಬಹುದು…

ಈ 17ನೇ ಲೋಕಸಭೆಯಲ್ಲಿ ಶೇ, 90.4ರಷ್ಟು ಜಾತಿ- ಹಿಂದುಗಳು, ಶೇ. 5.2ರಷ್ಟು ಮುಸ್ಲಿಮರು (2014ಕ್ಕೆ ಹೋಲಿಸಿದರೆ ಈ ಸಲ ಐವರು ಮುಸ್ಲಿಂ ಎಂಪಿಗಳು ಹೆಚ್ಚಾಗಿದ್ದಾರೆ), ಶೇ. 4ರಷ್ಟು ಇತರೆ ಧಾರ್ಮಿಕ ಅಲ್ಪಸಂಖ್ಯಾತರು. ಬಿಜೆಪಿಯ ಎಂಪಿಗಳ ಪೈಕಿ ಶೇ. 99ರಷ್ಟು ಜಾತಿ-ಹಿಂದೂಗಳೇ.

ಜಾತಿ/ಸಮುದಾಯವಾರು ಲೆಕ್ಕಕ್ಕೆ ಬಂದರೆ, 542ರಲ್ಲಿ ಮೇಲ್ಜಾತಿಯವರ ಸಂಖ್ಯೆ 232, ಒಬಿಸಿ-120, ಎಸ್‍ಸಿ-86, ಎಸ್‍ಟಿ-52, ಧಾರ್ಮಿಕ ಅಲ್ಪಸಂಖ್ಯಾತರು-52.

ಕರ್ನಾಟಕದ ಉದಾಹರಣೆ ತೆಗೆದುಕೊಂಡರೆ, ಇಲ್ಲಿ 5 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡ ಮೀಸಲಿನ ಕ್ಷೇತ್ರಗಳೆಲ್ಲವೂ ಬಿಜೆಪಿಯ ಪಾಲಾಗಿವೆ. ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್ ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!

ಉತ್ತರ ಭಾರತದ ಹಿಂದು ಬೆಲ್ಟಿನಲ್ಲಿ ಬಿಜೆಪಿ ಮೇಲ್ಜಾತಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರಿಕರಿಸಿ ಚುನಾವಣಾ ತಂತ್ರ ಹೆಣೆದಿತ್ತು ಎಂದು ಲೋಕನೀತಿ-ಸಿಎಸ್‍ಡಿಎಸ್ ಸಂಸ್ಥೆಯ ಸಮೀಕ್ಷೆ ಹೇಳಿದೆ. ಇಂತಹ ಯಾವ ಪ್ಲಾನೂ ಅಲ್ಲಿನ ಕಾಂಗ್ರೆಸ್ ಮತ್ತು ಮಹಾಘಟಬಂಧನದ ಪಕ್ಷಗಳಿಗೆ ಇರಲೇ ಇಲ್ಲ. ಎಸ್‍ಪಿ-ಬಿಎಸ್‍ಪಿ ಮತ್ತು ಆರ್‍ಎಲ್‍ಡಿ ನಡುವೆ ಮತವರ್ಗಾವಣೆ ಆಗುತ್ತದೆ ಎಂಬ ದೃಢ ನಿರ್ಧಾರಕ್ಕೆ ಘಟಬಂಧನ ಜೋತು ಬಿದ್ದು ಹಿಂದಕ್ಕೆ ಚಲಿಸಿತು.

ಸಹಜವಾಗಿ ಈ ಸಲ ಮೇಲ್ಜಾತಿಯ ಮತಗಳನ್ನು ಪಕ್ಕ ಮಾಡಿಕೊಂಡಿದ್ದ ಬಿಜೆಪಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರೀಕರಿಸಿ ತನ್ನ ಪ್ರಚಾರ ವ್ಯೂಹವನ್ನು ಹೆಣೆದಿತ್ತು.. ಡಿಸೆಂಬರ್‍ನಲ್ಲಿ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ. 34ರಷ್ಟು ಆದಿವಾಸಿ ಮತಗಳು ಬಂದಿದ್ದರೆ ಈ ಲೊಕಸಭಾ ಚುನಾವಣೆಯಲ್ಲಿ ಅದು ಶೇ. 52ಕ್ಕೆ ಏರಿತ್ತು! ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್, ಹಿಮಾಚಲ ಪ್ರದೇಶ, ಬಿಹಾರ್-ಹೀಗೆ ಆದಿವಾಸಿಗಳಿಂದ ಸಾಕಷ್ಟು ಮತ ಪಡೆದ ಬಿಜೆಪಿ ಈಗ ಅವರಿಗೆ ಕಾಟಾಚಾರಕ್ಕೆ ಎಂಬಂತೆ ಎರಡೇ ಎರಡು ಸಚಿವ ಸ್ಥಾನ ನೀಡಿದೆ.

ಕರ್ನಾಟಕದಲ್ಲಿ ಇಬ್ಬರು ಬ್ರಾಹ್ಮಣ ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಅಂದಾಜಿತ್ತು. ಕಳೆದ ಸಲ ಆರಂಭದಲ್ಲಿ ದಾವಣಗೆರೆಯ ಸಿದ್ದೇಶ್ವರ್ ಅವರಿಗೆ ಸಚಿವಗಿರಿ ಕೊಟ್ಟು ನಂತರ ಅವರನ್ನು ತೆಗೆದು ಹಾಕಲಾಗಿತ್ತು. 2018ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅನಂತ ಹೆಗಡೆಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆಗ ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರು ಸಚಿವರಾಗಿದ್ದರೆ ಬಿಜೆಪಿಯ ಬೆಂಬಲಿಗರು ಅನಿಸಿಕೊಂಡ ಲಿಂಗಾಯತ ಸಮುದಾಯಕ್ಕೆ ಯಾವ ಸಚಿವಗಿರಿಯೂ ಇರಲಿಲ್ಲ.

ಈ ಸಲ ಬೆಂಗಳೂರು ದಕ್ಷಿಣದ ಅನಂತಕುಮಾರ್ ಸಾವಿನ ಕಾರಣದಿಂದ ಆ ಕೋಟಾ ಅವರ ಶಿಷ್ಯ ಧಾರವಾಡದ ಪ್ರಹ್ಲಾದ್ ಜೋಶಿಗೆ ಸಿಕ್ಕಿದೆ. ಮತ್ತೆ ಒಕ್ಕಲಿಗರ ಕೋಟಾದಲ್ಲಿ ನಾಲ್ವರು ಒಕ್ಕಲಿಗ ಸಂಸದರ ಪೈಕಿ ‘ಹಿರಿಯ’ ಸದಾನಂದಗೌಡರಿಗೆ ಮತ್ತೆ ಚಾನ್ಸು ಲಭಿಸಿದೆ. ಇವರಿಬ್ಬರೂ ಕ್ಯಾಬಿನೆಟ್ ಸಚಿವರು. ಬೆಳಗಾವಿಯಿಂದ 4 ಸಲ ಗೆದ್ದಿರುವ ಸುರೇಶ ಅಂಗಡಿ ಎಂಬ ಬಣಜಿಗ ಲಿಂಗಾಯತರಿಗೆ ರಾಜ್ಯ ಸಚಿವ ಸ್ಥಾನವನ್ನಷ್ಟೇ ನೀಡಲಾಗಿದೆ.

ಯಡಿಯೂರಪ್ಪ ನೀಡಿದ ಪಟ್ಟಿಯಲ್ಲಿ ಒಬ್ಬರಿಗೂ ಸ್ಥಾನವಿಲ್ಲ! ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು!

ಎಸ್‍ಸಿ, ಎಸ್ಟಿಗೆ ಶೂನ್ಯ!
ಕಳೆದ ಸಲ 2014ರಲ್ಲಿ ಬಿಜೆಪಿ 7 ಮೀಸಲು ಕ್ಷೇತ್ರಗಳಲ್ಲಿ ಕೇವಲ ವಿಜಯಪುರ ಒಂದರಲ್ಲಿ ಮಾತ್ರ ಗೆದ್ದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಗ ವಿಜಯಪುರದ ರಮೇಶ ಜಿಗಜಿಗಣಿಯವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈ ಸಲ ಬಿಜೆಪಿ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಆ ಸಮುದಾಯಗಳಿಗೆ ಸೇರಿದ ಒಬ್ಬ ಸಂಸದನಿಗೂ ಸಚಿವ ಸ್ಥಾನ ನೀಡಿಲ್ಲ. ಕಲಬುರ್ಗಿ ವಿಭಾಗದಲ್ಲೇ ಅದು 3 ಮೀಸಲು ಕ್ಷೇತ್ರಗಳನ್ನು ಗೆದ್ದಿದ್ದರೂ ಆ ಭಾಗಕ್ಕೂ ಮಣೆ ಹಾಕಿಲ್ಲ.
ಒಟ್ಟು 57 ಸಚಿವ ಸ್ಥಾನದಲ್ಲಿ 21ನ್ನು ಬ್ರಾಹ್ಮಣರಿಗೆ ನೀಡಿರುವ, ಸಂಘ ಪರಿವಾರ ನಿರ್ಧರಿಸುವ ಪಟ್ಟಿಯಲ್ಲಿ ಇನ್ನೆಂತಾ ಸಾಮಾಜಿಕ ನ್ಯಾಯ ಹುಡುಕೋಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...