Homeಕರ್ನಾಟಕಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ....

ಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ….

ಇತರ ರಾಜ್ಯಗಳಲ್ಲಿ ಶೇ.50% ರಷ್ಟು ಮತ ಹಾಕಿದ ಆದಿವಾಸಿಗಳಿಗೆ ಕೇವಲ 2 ಸಚಿವ ಸ್ಥಾನ ನೀಡಿದರೆ, ಕರ್ನಾಟಕದಲ್ಲಿ ಎಲ್ಲ 7 ಮೀಸಲು ಕ್ಷೇತ್ರ ಗೆದ್ದರೂ ಒಬ್ಬರಿಗೂ ಸಚಿವಗಿರಿಯಿಲ್ಲ!

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ನಮ್ಮ ಅಧಿಕಾರ ಕೇಂದ್ರಗಳು ಎಂದಿಗೂ ಜನಪರವಲ್ಲ, ಹೀಗಾಗಿ ಇಲ್ಲಿ ಸಂಸತ್ತಿನಲ್ಲಿ ಸಾಮಾಜಿಕ ನ್ಯಾಯದ ಪ್ರಾಮಾಣಿಕ ದನಿ ಕೇಳೀತೇ ಎಂಬುದೂ ಸಂಶಯಾತ್ಮಕವೇ. ಸದ್ಯ ನಮ್ಮ ಸಂಸತ್ತಿಗೆ ಆಯ್ಕೆಯಾದವರು ಯಾವ ಯಾವ ಧರ್ಮ, ಸಮುದಾಯಕ್ಕೆ ಸೇರಿದವರು ಎಂಬ ಅಂಕಿಸಂಖ್ಯೆ ನೋಡಿದರೇನೇ ಇಲ್ಲಿ ‘ಬಹು ಸಂಖ್ಯಾತ’ರು ಪ್ರಬಲವಾಗಿ ಆವರಿಸುತ್ತಲೇ ಹೋಗುತ್ತಿರುವುದನ್ನು ಗಮನಿಸಬಹುದು…

ಈ 17ನೇ ಲೋಕಸಭೆಯಲ್ಲಿ ಶೇ, 90.4ರಷ್ಟು ಜಾತಿ- ಹಿಂದುಗಳು, ಶೇ. 5.2ರಷ್ಟು ಮುಸ್ಲಿಮರು (2014ಕ್ಕೆ ಹೋಲಿಸಿದರೆ ಈ ಸಲ ಐವರು ಮುಸ್ಲಿಂ ಎಂಪಿಗಳು ಹೆಚ್ಚಾಗಿದ್ದಾರೆ), ಶೇ. 4ರಷ್ಟು ಇತರೆ ಧಾರ್ಮಿಕ ಅಲ್ಪಸಂಖ್ಯಾತರು. ಬಿಜೆಪಿಯ ಎಂಪಿಗಳ ಪೈಕಿ ಶೇ. 99ರಷ್ಟು ಜಾತಿ-ಹಿಂದೂಗಳೇ.

ಜಾತಿ/ಸಮುದಾಯವಾರು ಲೆಕ್ಕಕ್ಕೆ ಬಂದರೆ, 542ರಲ್ಲಿ ಮೇಲ್ಜಾತಿಯವರ ಸಂಖ್ಯೆ 232, ಒಬಿಸಿ-120, ಎಸ್‍ಸಿ-86, ಎಸ್‍ಟಿ-52, ಧಾರ್ಮಿಕ ಅಲ್ಪಸಂಖ್ಯಾತರು-52.

ಕರ್ನಾಟಕದ ಉದಾಹರಣೆ ತೆಗೆದುಕೊಂಡರೆ, ಇಲ್ಲಿ 5 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡ ಮೀಸಲಿನ ಕ್ಷೇತ್ರಗಳೆಲ್ಲವೂ ಬಿಜೆಪಿಯ ಪಾಲಾಗಿವೆ. ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್ ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!

ಉತ್ತರ ಭಾರತದ ಹಿಂದು ಬೆಲ್ಟಿನಲ್ಲಿ ಬಿಜೆಪಿ ಮೇಲ್ಜಾತಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರಿಕರಿಸಿ ಚುನಾವಣಾ ತಂತ್ರ ಹೆಣೆದಿತ್ತು ಎಂದು ಲೋಕನೀತಿ-ಸಿಎಸ್‍ಡಿಎಸ್ ಸಂಸ್ಥೆಯ ಸಮೀಕ್ಷೆ ಹೇಳಿದೆ. ಇಂತಹ ಯಾವ ಪ್ಲಾನೂ ಅಲ್ಲಿನ ಕಾಂಗ್ರೆಸ್ ಮತ್ತು ಮಹಾಘಟಬಂಧನದ ಪಕ್ಷಗಳಿಗೆ ಇರಲೇ ಇಲ್ಲ. ಎಸ್‍ಪಿ-ಬಿಎಸ್‍ಪಿ ಮತ್ತು ಆರ್‍ಎಲ್‍ಡಿ ನಡುವೆ ಮತವರ್ಗಾವಣೆ ಆಗುತ್ತದೆ ಎಂಬ ದೃಢ ನಿರ್ಧಾರಕ್ಕೆ ಘಟಬಂಧನ ಜೋತು ಬಿದ್ದು ಹಿಂದಕ್ಕೆ ಚಲಿಸಿತು.

ಸಹಜವಾಗಿ ಈ ಸಲ ಮೇಲ್ಜಾತಿಯ ಮತಗಳನ್ನು ಪಕ್ಕ ಮಾಡಿಕೊಂಡಿದ್ದ ಬಿಜೆಪಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರೀಕರಿಸಿ ತನ್ನ ಪ್ರಚಾರ ವ್ಯೂಹವನ್ನು ಹೆಣೆದಿತ್ತು.. ಡಿಸೆಂಬರ್‍ನಲ್ಲಿ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ. 34ರಷ್ಟು ಆದಿವಾಸಿ ಮತಗಳು ಬಂದಿದ್ದರೆ ಈ ಲೊಕಸಭಾ ಚುನಾವಣೆಯಲ್ಲಿ ಅದು ಶೇ. 52ಕ್ಕೆ ಏರಿತ್ತು! ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್, ಹಿಮಾಚಲ ಪ್ರದೇಶ, ಬಿಹಾರ್-ಹೀಗೆ ಆದಿವಾಸಿಗಳಿಂದ ಸಾಕಷ್ಟು ಮತ ಪಡೆದ ಬಿಜೆಪಿ ಈಗ ಅವರಿಗೆ ಕಾಟಾಚಾರಕ್ಕೆ ಎಂಬಂತೆ ಎರಡೇ ಎರಡು ಸಚಿವ ಸ್ಥಾನ ನೀಡಿದೆ.

ಕರ್ನಾಟಕದಲ್ಲಿ ಇಬ್ಬರು ಬ್ರಾಹ್ಮಣ ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಅಂದಾಜಿತ್ತು. ಕಳೆದ ಸಲ ಆರಂಭದಲ್ಲಿ ದಾವಣಗೆರೆಯ ಸಿದ್ದೇಶ್ವರ್ ಅವರಿಗೆ ಸಚಿವಗಿರಿ ಕೊಟ್ಟು ನಂತರ ಅವರನ್ನು ತೆಗೆದು ಹಾಕಲಾಗಿತ್ತು. 2018ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅನಂತ ಹೆಗಡೆಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆಗ ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರು ಸಚಿವರಾಗಿದ್ದರೆ ಬಿಜೆಪಿಯ ಬೆಂಬಲಿಗರು ಅನಿಸಿಕೊಂಡ ಲಿಂಗಾಯತ ಸಮುದಾಯಕ್ಕೆ ಯಾವ ಸಚಿವಗಿರಿಯೂ ಇರಲಿಲ್ಲ.

ಈ ಸಲ ಬೆಂಗಳೂರು ದಕ್ಷಿಣದ ಅನಂತಕುಮಾರ್ ಸಾವಿನ ಕಾರಣದಿಂದ ಆ ಕೋಟಾ ಅವರ ಶಿಷ್ಯ ಧಾರವಾಡದ ಪ್ರಹ್ಲಾದ್ ಜೋಶಿಗೆ ಸಿಕ್ಕಿದೆ. ಮತ್ತೆ ಒಕ್ಕಲಿಗರ ಕೋಟಾದಲ್ಲಿ ನಾಲ್ವರು ಒಕ್ಕಲಿಗ ಸಂಸದರ ಪೈಕಿ ‘ಹಿರಿಯ’ ಸದಾನಂದಗೌಡರಿಗೆ ಮತ್ತೆ ಚಾನ್ಸು ಲಭಿಸಿದೆ. ಇವರಿಬ್ಬರೂ ಕ್ಯಾಬಿನೆಟ್ ಸಚಿವರು. ಬೆಳಗಾವಿಯಿಂದ 4 ಸಲ ಗೆದ್ದಿರುವ ಸುರೇಶ ಅಂಗಡಿ ಎಂಬ ಬಣಜಿಗ ಲಿಂಗಾಯತರಿಗೆ ರಾಜ್ಯ ಸಚಿವ ಸ್ಥಾನವನ್ನಷ್ಟೇ ನೀಡಲಾಗಿದೆ.

ಯಡಿಯೂರಪ್ಪ ನೀಡಿದ ಪಟ್ಟಿಯಲ್ಲಿ ಒಬ್ಬರಿಗೂ ಸ್ಥಾನವಿಲ್ಲ! ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು!

ಎಸ್‍ಸಿ, ಎಸ್ಟಿಗೆ ಶೂನ್ಯ!
ಕಳೆದ ಸಲ 2014ರಲ್ಲಿ ಬಿಜೆಪಿ 7 ಮೀಸಲು ಕ್ಷೇತ್ರಗಳಲ್ಲಿ ಕೇವಲ ವಿಜಯಪುರ ಒಂದರಲ್ಲಿ ಮಾತ್ರ ಗೆದ್ದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಗ ವಿಜಯಪುರದ ರಮೇಶ ಜಿಗಜಿಗಣಿಯವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈ ಸಲ ಬಿಜೆಪಿ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಆ ಸಮುದಾಯಗಳಿಗೆ ಸೇರಿದ ಒಬ್ಬ ಸಂಸದನಿಗೂ ಸಚಿವ ಸ್ಥಾನ ನೀಡಿಲ್ಲ. ಕಲಬುರ್ಗಿ ವಿಭಾಗದಲ್ಲೇ ಅದು 3 ಮೀಸಲು ಕ್ಷೇತ್ರಗಳನ್ನು ಗೆದ್ದಿದ್ದರೂ ಆ ಭಾಗಕ್ಕೂ ಮಣೆ ಹಾಕಿಲ್ಲ.
ಒಟ್ಟು 57 ಸಚಿವ ಸ್ಥಾನದಲ್ಲಿ 21ನ್ನು ಬ್ರಾಹ್ಮಣರಿಗೆ ನೀಡಿರುವ, ಸಂಘ ಪರಿವಾರ ನಿರ್ಧರಿಸುವ ಪಟ್ಟಿಯಲ್ಲಿ ಇನ್ನೆಂತಾ ಸಾಮಾಜಿಕ ನ್ಯಾಯ ಹುಡುಕೋಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಪರಿಷ್ಕೃತ ವೇತನ ನೀಡುವುದನ್ನು ತಡೆದು ವಿವಿಧ ಇಲಾಖೆಗಳು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...