Homeಕರ್ನಾಟಕಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ....

ಮೋದಿಯವರ ಸಚಿವ ಸಂಪುಟದಲ್ಲಿ ‘ಸಾಮಾಜಿಕ ನ್ಯಾಯ’ದ ದನಿ ಹುಡುಕುತ್ತ….

ಇತರ ರಾಜ್ಯಗಳಲ್ಲಿ ಶೇ.50% ರಷ್ಟು ಮತ ಹಾಕಿದ ಆದಿವಾಸಿಗಳಿಗೆ ಕೇವಲ 2 ಸಚಿವ ಸ್ಥಾನ ನೀಡಿದರೆ, ಕರ್ನಾಟಕದಲ್ಲಿ ಎಲ್ಲ 7 ಮೀಸಲು ಕ್ಷೇತ್ರ ಗೆದ್ದರೂ ಒಬ್ಬರಿಗೂ ಸಚಿವಗಿರಿಯಿಲ್ಲ!

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ನಮ್ಮ ಅಧಿಕಾರ ಕೇಂದ್ರಗಳು ಎಂದಿಗೂ ಜನಪರವಲ್ಲ, ಹೀಗಾಗಿ ಇಲ್ಲಿ ಸಂಸತ್ತಿನಲ್ಲಿ ಸಾಮಾಜಿಕ ನ್ಯಾಯದ ಪ್ರಾಮಾಣಿಕ ದನಿ ಕೇಳೀತೇ ಎಂಬುದೂ ಸಂಶಯಾತ್ಮಕವೇ. ಸದ್ಯ ನಮ್ಮ ಸಂಸತ್ತಿಗೆ ಆಯ್ಕೆಯಾದವರು ಯಾವ ಯಾವ ಧರ್ಮ, ಸಮುದಾಯಕ್ಕೆ ಸೇರಿದವರು ಎಂಬ ಅಂಕಿಸಂಖ್ಯೆ ನೋಡಿದರೇನೇ ಇಲ್ಲಿ ‘ಬಹು ಸಂಖ್ಯಾತ’ರು ಪ್ರಬಲವಾಗಿ ಆವರಿಸುತ್ತಲೇ ಹೋಗುತ್ತಿರುವುದನ್ನು ಗಮನಿಸಬಹುದು…

ಈ 17ನೇ ಲೋಕಸಭೆಯಲ್ಲಿ ಶೇ, 90.4ರಷ್ಟು ಜಾತಿ- ಹಿಂದುಗಳು, ಶೇ. 5.2ರಷ್ಟು ಮುಸ್ಲಿಮರು (2014ಕ್ಕೆ ಹೋಲಿಸಿದರೆ ಈ ಸಲ ಐವರು ಮುಸ್ಲಿಂ ಎಂಪಿಗಳು ಹೆಚ್ಚಾಗಿದ್ದಾರೆ), ಶೇ. 4ರಷ್ಟು ಇತರೆ ಧಾರ್ಮಿಕ ಅಲ್ಪಸಂಖ್ಯಾತರು. ಬಿಜೆಪಿಯ ಎಂಪಿಗಳ ಪೈಕಿ ಶೇ. 99ರಷ್ಟು ಜಾತಿ-ಹಿಂದೂಗಳೇ.

ಜಾತಿ/ಸಮುದಾಯವಾರು ಲೆಕ್ಕಕ್ಕೆ ಬಂದರೆ, 542ರಲ್ಲಿ ಮೇಲ್ಜಾತಿಯವರ ಸಂಖ್ಯೆ 232, ಒಬಿಸಿ-120, ಎಸ್‍ಸಿ-86, ಎಸ್‍ಟಿ-52, ಧಾರ್ಮಿಕ ಅಲ್ಪಸಂಖ್ಯಾತರು-52.

ಕರ್ನಾಟಕದ ಉದಾಹರಣೆ ತೆಗೆದುಕೊಂಡರೆ, ಇಲ್ಲಿ 5 ಪರಿಶಿಷ್ಟ ಜಾತಿ ಮತ್ತು 2 ಪರಿಶಿಷ್ಟ ಪಂಗಡ ಮೀಸಲಿನ ಕ್ಷೇತ್ರಗಳೆಲ್ಲವೂ ಬಿಜೆಪಿಯ ಪಾಲಾಗಿವೆ. ಉಳಿದ ಸಾಮಾನ್ಯ ಕ್ಷೇತ್ರಗಳಲ್ಲಿ ಲಿಂಗಾಯತರು, ಒಕ್ಕಲಿಗರು ಮತ್ತು ಬ್ರಾಹ್ಮಣರದ್ದೇ ಪ್ರಾಬಲ್ಯ! ಈ ಸಲ 9 ಲಿಂಗಾಯತ ಸಂಸದರು, 3 ಬ್ರಾಹಣ ಸಂಸದರು (ಎಲ್ಲ ಬಿಜೆಪಿ) ಆಯ್ಕೆಯಾಗಿದ್ದಾರೆ. 6 ಒಕ್ಕಲಿಗರು (ಬಿಜೆಪಿ 4, ಕಾಂಗ್ರೆಸ್ ಜೆಡಿಎಸ್ ತಲಾ ಒಂದು) ಸಂಸತ್ ಪ್ರವೇಶಿಸಿದ್ದಾರೆ. ಅಂದರೆ 28ರಲ್ಲಿ 18 ಸಂಸದರು ಮೇಲ್ಜಾತಿಗೆ ಸೇರಿದವರೇ!

ಉತ್ತರ ಭಾರತದ ಹಿಂದು ಬೆಲ್ಟಿನಲ್ಲಿ ಬಿಜೆಪಿ ಮೇಲ್ಜಾತಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರಿಕರಿಸಿ ಚುನಾವಣಾ ತಂತ್ರ ಹೆಣೆದಿತ್ತು ಎಂದು ಲೋಕನೀತಿ-ಸಿಎಸ್‍ಡಿಎಸ್ ಸಂಸ್ಥೆಯ ಸಮೀಕ್ಷೆ ಹೇಳಿದೆ. ಇಂತಹ ಯಾವ ಪ್ಲಾನೂ ಅಲ್ಲಿನ ಕಾಂಗ್ರೆಸ್ ಮತ್ತು ಮಹಾಘಟಬಂಧನದ ಪಕ್ಷಗಳಿಗೆ ಇರಲೇ ಇಲ್ಲ. ಎಸ್‍ಪಿ-ಬಿಎಸ್‍ಪಿ ಮತ್ತು ಆರ್‍ಎಲ್‍ಡಿ ನಡುವೆ ಮತವರ್ಗಾವಣೆ ಆಗುತ್ತದೆ ಎಂಬ ದೃಢ ನಿರ್ಧಾರಕ್ಕೆ ಘಟಬಂಧನ ಜೋತು ಬಿದ್ದು ಹಿಂದಕ್ಕೆ ಚಲಿಸಿತು.

ಸಹಜವಾಗಿ ಈ ಸಲ ಮೇಲ್ಜಾತಿಯ ಮತಗಳನ್ನು ಪಕ್ಕ ಮಾಡಿಕೊಂಡಿದ್ದ ಬಿಜೆಪಿ, ಒಬಿಸಿ ಮತ್ತು ಆದಿವಾಸಿಗಳನ್ನು ಕೇಂದ್ರೀಕರಿಸಿ ತನ್ನ ಪ್ರಚಾರ ವ್ಯೂಹವನ್ನು ಹೆಣೆದಿತ್ತು.. ಡಿಸೆಂಬರ್‍ನಲ್ಲಿ ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಶೇ. 34ರಷ್ಟು ಆದಿವಾಸಿ ಮತಗಳು ಬಂದಿದ್ದರೆ ಈ ಲೊಕಸಭಾ ಚುನಾವಣೆಯಲ್ಲಿ ಅದು ಶೇ. 52ಕ್ಕೆ ಏರಿತ್ತು! ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಘಡ್, ಹಿಮಾಚಲ ಪ್ರದೇಶ, ಬಿಹಾರ್-ಹೀಗೆ ಆದಿವಾಸಿಗಳಿಂದ ಸಾಕಷ್ಟು ಮತ ಪಡೆದ ಬಿಜೆಪಿ ಈಗ ಅವರಿಗೆ ಕಾಟಾಚಾರಕ್ಕೆ ಎಂಬಂತೆ ಎರಡೇ ಎರಡು ಸಚಿವ ಸ್ಥಾನ ನೀಡಿದೆ.

ಕರ್ನಾಟಕದಲ್ಲಿ ಇಬ್ಬರು ಬ್ರಾಹ್ಮಣ ಬಿಜೆಪಿ ಸಂಸದರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಅಂದಾಜಿತ್ತು. ಕಳೆದ ಸಲ ಆರಂಭದಲ್ಲಿ ದಾವಣಗೆರೆಯ ಸಿದ್ದೇಶ್ವರ್ ಅವರಿಗೆ ಸಚಿವಗಿರಿ ಕೊಟ್ಟು ನಂತರ ಅವರನ್ನು ತೆಗೆದು ಹಾಕಲಾಗಿತ್ತು. 2018ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಅನಂತ ಹೆಗಡೆಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆಗ ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರು ಸಚಿವರಾಗಿದ್ದರೆ ಬಿಜೆಪಿಯ ಬೆಂಬಲಿಗರು ಅನಿಸಿಕೊಂಡ ಲಿಂಗಾಯತ ಸಮುದಾಯಕ್ಕೆ ಯಾವ ಸಚಿವಗಿರಿಯೂ ಇರಲಿಲ್ಲ.

ಈ ಸಲ ಬೆಂಗಳೂರು ದಕ್ಷಿಣದ ಅನಂತಕುಮಾರ್ ಸಾವಿನ ಕಾರಣದಿಂದ ಆ ಕೋಟಾ ಅವರ ಶಿಷ್ಯ ಧಾರವಾಡದ ಪ್ರಹ್ಲಾದ್ ಜೋಶಿಗೆ ಸಿಕ್ಕಿದೆ. ಮತ್ತೆ ಒಕ್ಕಲಿಗರ ಕೋಟಾದಲ್ಲಿ ನಾಲ್ವರು ಒಕ್ಕಲಿಗ ಸಂಸದರ ಪೈಕಿ ‘ಹಿರಿಯ’ ಸದಾನಂದಗೌಡರಿಗೆ ಮತ್ತೆ ಚಾನ್ಸು ಲಭಿಸಿದೆ. ಇವರಿಬ್ಬರೂ ಕ್ಯಾಬಿನೆಟ್ ಸಚಿವರು. ಬೆಳಗಾವಿಯಿಂದ 4 ಸಲ ಗೆದ್ದಿರುವ ಸುರೇಶ ಅಂಗಡಿ ಎಂಬ ಬಣಜಿಗ ಲಿಂಗಾಯತರಿಗೆ ರಾಜ್ಯ ಸಚಿವ ಸ್ಥಾನವನ್ನಷ್ಟೇ ನೀಡಲಾಗಿದೆ.

ಯಡಿಯೂರಪ್ಪ ನೀಡಿದ ಪಟ್ಟಿಯಲ್ಲಿ ಒಬ್ಬರಿಗೂ ಸ್ಥಾನವಿಲ್ಲ! ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಬಾಗಲಕೋಟೆಯ ಗದ್ದಿಗೌಡರ್, ಹಾವೇರಿ ಶಿವಕುಮಾರ್ ಉದಾಸಿ, ಕೊಪ್ಪಳದ ಕರಡಿ ಸಂಗಣ್ಣ ಮತ್ತು ತುಮಕೂರಿನ ಬಸವರಾಜು- ಇವರಲ್ಲಿ ಒಬ್ಬಿಬ್ಬರಿಗೆ ಸಚಿವ ಸ್ಥಾನ ಅಪೇಕ್ಷಿಸಿದ್ದರು!

ಎಸ್‍ಸಿ, ಎಸ್ಟಿಗೆ ಶೂನ್ಯ!
ಕಳೆದ ಸಲ 2014ರಲ್ಲಿ ಬಿಜೆಪಿ 7 ಮೀಸಲು ಕ್ಷೇತ್ರಗಳಲ್ಲಿ ಕೇವಲ ವಿಜಯಪುರ ಒಂದರಲ್ಲಿ ಮಾತ್ರ ಗೆದ್ದಿತ್ತು. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಆಗ ವಿಜಯಪುರದ ರಮೇಶ ಜಿಗಜಿಗಣಿಯವರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈ ಸಲ ಬಿಜೆಪಿ ಎಲ್ಲ 7 ಮೀಸಲು ಕ್ಷೇತ್ರಗಳಲ್ಲಿ ಗೆದ್ದಿದ್ದರೂ ಆ ಸಮುದಾಯಗಳಿಗೆ ಸೇರಿದ ಒಬ್ಬ ಸಂಸದನಿಗೂ ಸಚಿವ ಸ್ಥಾನ ನೀಡಿಲ್ಲ. ಕಲಬುರ್ಗಿ ವಿಭಾಗದಲ್ಲೇ ಅದು 3 ಮೀಸಲು ಕ್ಷೇತ್ರಗಳನ್ನು ಗೆದ್ದಿದ್ದರೂ ಆ ಭಾಗಕ್ಕೂ ಮಣೆ ಹಾಕಿಲ್ಲ.
ಒಟ್ಟು 57 ಸಚಿವ ಸ್ಥಾನದಲ್ಲಿ 21ನ್ನು ಬ್ರಾಹ್ಮಣರಿಗೆ ನೀಡಿರುವ, ಸಂಘ ಪರಿವಾರ ನಿರ್ಧರಿಸುವ ಪಟ್ಟಿಯಲ್ಲಿ ಇನ್ನೆಂತಾ ಸಾಮಾಜಿಕ ನ್ಯಾಯ ಹುಡುಕೋಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...