Homeಮುಖಪುಟಕನ್ಯಾಕುಮಾರಿಯಲ್ಲಿ ಧ್ಯಾನ: ಮೋದಿಗೆ ಕಾನೂನು ಅನ್ವಯಿಸುವುದಿಲ್ಲವೇ? ದಿಗ್ವಿಜಯ್‌ ಸಿಂಗ್‌ ಪ್ರಶ್ನೆ

ಕನ್ಯಾಕುಮಾರಿಯಲ್ಲಿ ಧ್ಯಾನ: ಮೋದಿಗೆ ಕಾನೂನು ಅನ್ವಯಿಸುವುದಿಲ್ಲವೇ? ದಿಗ್ವಿಜಯ್‌ ಸಿಂಗ್‌ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಾನೂನು ಮತ್ತು ನಿಯಮಗಳ ವ್ಯಾಪ್ತಿಗೆ ಒಳಪಡುದಿಲ್ಲವೇ? ಕಾನೂನು ಅಥವಾ ನಿಯಮಗಳು ಅವರಿಗೆ ಅನ್ವಯಿಸುವುದಿಲ್ಲವೇ ಎಂದು ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಪ್ರಶ್ನಿಸಿದ್ದಾರೆ.

ಲೋಕಸಭೆಯ ಚುನಾವಣೆಯ ಕೊನೆಯ ಹಂತದ ಮೌನ ಅವಧಿ ವೇಳೆ ಮೋದಿ ಧ್ಯಾನದ ಚಿತ್ರಗಳು ವೈರಲ್‌ ಆಗಿದ್ದವು, ಈ ಬಗ್ಗೆ ಪ್ರಶ್ನೆಯನ್ನು ಎತ್ತಿರುವ  ದಿಗ್ವಿಜಯ್‌ ಸಿಂಗ್‌ ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಪಿಲ್‌ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವಿವೇಕಾನಂದ ಸ್ಮಾರಕದಲ್ಲಿ ಪೋಟೋ ತೆಗೆಯುವುದಕ್ಕೆ ಕಾನೂನಿನ ಪ್ರಕಾರ ಅನುಮತಿಯಿಲ್ಲ, ಇದೊಂದು ದಂಡನಾರ್ಹ ಅಪರಾಧವಾಗಿದೆ. ಹೀಗಿದ್ದೂ ಇದೇ ಪ್ರಥಮ ಬಾರಿಗೆ ನೀವು ವಿವೇಕಾನಂದ ಸ್ಮಾರಕದಲ್ಲಿನ ಧ್ಯಾನಮಂದಿರದ ಭಾವಚಿತ್ರಗಳನ್ನು ನೋಡುತ್ತಿದ್ದೀರಿ. ಕ್ಯಾಮೆರಾ ಇಲ್ಲದೆ ಕ್ಯಾಮೆರಾ ಜೀವಿ ಬದುಕುವುದಾದರೂ ಹೇಗೆ? ಎಂದು ಬರೆದುಕೊಂಡಿದ್ದರು. ಈ ಪೋಸ್ಟ್‌ನ್ನು ಮರು ಹಂಚಿಕೊಂಡಿರುವ ದಿಗ್ವಿಜಯ್‌ ಸಿಂಗ್‌ ಮೋದಿಗೆ ಕಾನೂನು ಮತ್ತು ನಿಯಮಗಳು ಅನ್ವಯಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರದ ಬಳಿಕ ವಿವೇಕಾನಂದ ಸ್ಮಾರಕದ ಧ್ಯಾನಮಂದಿರದಲ್ಲಿ ಪ್ರಧಾನಿ ಮೋದಿ 45 ಗಂಟೆಗಳ ಧ್ಯಾನದಲ್ಲಿದ್ದಾರೆ. ಇಂದು ಸಂಜೆ ಧ್ಯಾನ ಮುಕ್ತಾಯಗೊಳ್ಳಲಿದೆ. ಇಂದು ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನದ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಆರಂಭವಾಗಿತ್ತು. ಆದರೆ ಇದೇ ಸಮಯದಲ್ಲಿ ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಜೂನ್ 1ರ ಸಂಜೆಯಿಂದ ಪ್ರಧಾನಿ 24-48 ಗಂಟೆಗಳ ನಂತರ ತನ್ನ ಧ್ಯಾನವನ್ನು ಪ್ರಾರಂಭಿಸಬಹುದು. ಅವರು ಮೇ 30ರಿಂದ ಧ್ಯಾನ ಮಾಡಲು ಬಯಸಿದರೆ, ನಂತರ ಅದನ್ನು ಟಿವಿ ಅಥವಾ ಮುದ್ರಣ ಮಾಧ್ಯಮವು ಪ್ರಸಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕು ಎಂದು ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದವು.

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಕೂಡ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರು.

ಇದನ್ನು ಓದಿ: ‘ಧ್ಯಾನ’ಕ್ಕೆ ಹೊರಡುವ ಮೊದಲು ಕೊನೆಯ ಸಭೆಯಲ್ಲೂ ಸುಳ್ಳು ಹೇಳಿದ್ದ ಮೋದಿ: ಪ್ರಧಾನಿಯ 2024ರ ಚುನಾವಣಾ ಪ್ರಚಾರ ಹೇಗಿತ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...