Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...

‘ಭಾರತದಲ್ಲಿ ಬಿಜೆಪಿ ದಾಳಿಯನ್ನು ಎದುರಿಸಲು ‘ದೀದಿ’ಗೆ ಮಾತ್ರ ಸಾಧ್ಯ’: ಅಖಿಲೇಶ್ ಯಾದವ್ 

ಕೋಲ್ಕತ್ತಾ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಂಗಳವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ "ಬಿಜೆಪಿಯ ದಾಳಿಯನ್ನು ಎದುರಿಸುವಲ್ಲಿನ ಧೈರ್ಯ"ಕ್ಕಾಗಿ ಟಿಎಂಸಿ ಮುಖ್ಯಸ್ಥೆಯನ್ನು ಶ್ಲಾಘಿಸಿದ್ದಾರೆ. ಉತ್ತರ ಪ್ರದೇಶದ ಮಾಜಿ...

ಬದರಿನಾಥ್-ಕೇದಾರನಾಥ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶ ನಿಷೇಧ ಸಾಧ್ಯತೆ

ಉತ್ತರಾಖಂಡದ ಹಿಮಾಲಯದ ಮಡಿಲಲ್ಲಿ ನೆಲೆಗೊಂಡಿರುವ ಶತಮಾನಗಳಷ್ಟು ಹಳೆಯದಾದ ಬದರಿನಾಥ್ ಮತ್ತು ಕೇದಾರನಾಥ ದೇವಾಲಯಗಳಿಗೆ ಶೀಘ್ರದಲ್ಲೇ ಹಿಂದೂಗಳಿಗೆ ಮಾತ್ರ ಪ್ರವೇಶ ಅನುಮತಿಸಬಹುದು. ಚಾರ್ ಧಾಮ್ ತೀರ್ಥಯಾತ್ರೆಯ ಭಾಗವಾಗಿರುವ ಎರಡು ದೇವಾಲಯಗಳಿಗೆ ಹಿಂದೂಯೇತರರನ್ನು ಪ್ರವೇಶಿಸುವುದನ್ನು ನಿಷೇಧಿಸಲಾಗುವುದು...

ವಿಬಿ-ಜಿ ರಾಮ್ ಜಿ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ: ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗಿ ನರೇಗಾ ಪುನಃಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ (ಜ.27) ಬೆಂಗಳೂರಿನ ಫ್ರೀಡಂ...

ಯುಸಿಸಿಯಲ್ಲಿ 18 ಬದಲಾವಣೆ ಮಾಡಿದ ಉತ್ತರಾಖಂಡ್ ಸರ್ಕಾರ; ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಜಾರಿಗೆ

ವಿವಾಹ, ವಿಚ್ಛೇದನ, ಲಿವ್-ಇನ್ ಸಂಬಂಧಗಳು ಮತ್ತು ಉತ್ತರಾಧಿಕಾರಕ್ಕೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸುವ ಗುರಿಯನ್ನು ಹೊಂದಿರುವ ಸುಮಾರು ಹದಿನೆಂಟು ಬದಲಾವಣೆಗಳನ್ನು ಪರಿಚಯಿಸುವ ಮೂಲಕ ಏಕರೂಪ ನಾಗರಿಕ ಸಂಹಿತೆಯ ಹಲವಾರು ನಿಬಂಧನೆಗಳನ್ನು ಮಾರ್ಪಡಿಸಲು ಉತ್ತರಾಖಂಡ ಸರ್ಕಾರ...

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮಗಾಂಧಿ ಹೆಸರು: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಮಹಾತ್ಮ ಗಾಂಧಿಯವರ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕೇಂದ್ರ ಸರ್ಕಾರ ನರೇಗಾ ಬದಲಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್‌ ಜಿ ಕಾಯ್ದೆ ವಿರುದ್ದ ಬೆಂಗಳೂರಿನ ಸ್ವಾತಂತ್ರ್ಯ...

ಜಾರ್ಖಂಡ್‌ನ ಗಿರಿದಿಹ್‌ನಲ್ಲಿ ಇಬ್ಬರು ಬುಡಕಟ್ಟು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಗಿರಿದಿಹ್: ಜಾರ್ಖಂಡ್‌ನ ಗಿರಿದಿಹ್ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿ ಪಿರ್ತಾಂಡ್ ಪೊಲೀಸ್ ಠಾಣೆ ವ್ಯಾಪ್ತಿಯ ಹರ್ಲಾದಿಹ್ ಪ್ರದೇಶದಲ್ಲಿ ಈ ಘಟನೆ...