Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...