Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...