Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...