Homeಅಂತರಾಷ್ಟ್ರೀಯಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

ಮರುಪಾವತಿಯಾಗದ ಸಾಲ: ಚೌಕಿದಾರನ ಅವಧಿಯಲ್ಲಿ 5,53,606 ಕೋಟಿ ಮನ್ನಾ!

- Advertisement -
- Advertisement -

ವಸೂಲಿ ಮಾಡಲಾಗದ ಅಂದರೆ ಕಳ್ಳ ಉದ್ಯಮಿಗಳು ಸಾಲ ಪಡೆದು, ಮರುಪಾವತಿ ಮಾಡದೇ ಹೋದಾಗ ಅದನ್ನು ಮರುಪಾವತಿಯಾಗದ ಸಾಲ ((NPA-Non performing loans) ಎಂದು ಬ್ಯಾಂಕಿಂಗ್ ಭಾಷೆಯಲ್ಲಿ ಕರೆಯುತ್ತಾರೆ. ಸಾಲ ಪಡೆದ ‘ದೊಡ್ಡವರು’ ಆಡಳಿತ ಪಕ್ಷದ ನಂಟು ಹೊಂದಿದ್ದರೆ, ಅವರ ಸಾಲ ವಸೂಲಾತಿ ಬ್ಯಾಂಕುಗಳಿಗೆ ಕಷ್ಟ. ಇಂತಹ ‘bad loans’ ಪ್ರಮಾಣವನ್ನು ಕಡಿಮೆ ತೋರಿಸಲು ಬ್ಯಾಂಕುಗಳು ‘write-off’ ಮಾಡಿ ಜನದ್ರೋಹಿ ಕೆಲಸ ಮಾಡುತ್ತವೆ. ‘write-off’ ಅಂದರೆ ಸಾಲಮನ್ನಾ ಅಷ್ಟೇ! ಕಳೆದ ಐದು ವರ್ಷಗಳಲ್ಲಿ ಚೌಕಿದಾರನ ಆಡಳಿತದಲ್ಲಿ ಇಂತಹ ಐದೂವರೆ ಲಕ್ಷ ಕೋಟಿ ರೂಪಾಯಿ ಸಾಲಮನ್ನಾ ಮಾಡಲಾಗಿದೆ….

ಇವತ್ತು ಸಾರ್ವಜನಿಕ ಬ್ಯಾಂಕುಗಳು ಸಂಕಷ್ಟ ಎದುರಿಸುತ್ತಿರುವುದಕ್ಕೆ ಮೂಲ ಕಾರಣ ಮೋದಿ-ಮಲ್ಯಗಳು ಸಾವಿರಾರು ಕೋಟಿ ಎತ್ತಿಕೊಂಡು ಓಡಿ ಹೋಗಿರುವುದು. ಹಾಗೆಯೇ ದೇಶದೊಳಗೇ ಇರುವ ನೂರಾರು ವಂಚಕ ಉದ್ಯಮಿಗಳ ಸಾಲಗಳನ್ನು ಬ್ಯಾಂಕುಗಳು ಮನ್ನಾ ಮಾಡಿರುವುದು. ಆಡಳಿತ ಪಕ್ಷ ಬಂಡವಾಳಶಾಹಿ ವ್ಯವಸ್ಥೆ ಪರ ನಿಂತಾಗ ಇದೆಲ್ಲ ಸಂಭವಿಸುತ್ತದೆ. ಬ್ಯಾಂಕುಗಳ ಈ ದುಸ್ಥಿತಿಯನ್ನು ಸರಿಪಡಿಸಲು ಮೋದಿ ಸರ್ಕಾರ ಪಿಎಫ್ ದುಡ್ಡನ್ನು ಎತ್ತಲು ಹೊಂಚು ಹಾಕಿತ್ತು, ಆರ್‍ಬಿಐನ ಮೀಸಲು ನಿಧಿಯ ಮೇಲೂ ಕಣ್ಣು ಹಾಕಿತ್ತು! ‘ಮುದ್ರಾ’ ಹೆಸರಲ್ಲಿ ನೀಡಲ್ಪಟ್ಟ ಸಾಲಗಳು ವಾಪಸ್ಸಾಗುವ ಲಕ್ಷಣಗಳೂ ಇಲ್ಲ. ಏಕೆಂದರೆ ಇದರ ಫಲಾನುಭವಿಗಳಲ್ಲಿ ಬಹತೇಕರು ಬಿಜೆಪಿ ನಾಯಕರ ಸಂಬಂಧಿಗಳು, ಕಾರ್ಯಕರ್ತರು…

ಶೇ. 80 ಸಾಲ ಮನ್ನಾ!
‘ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್’ ಪತ್ರಿಕೆಯು ಆರ್‍ಟಿಐನಲ್ಲಿ ಪಡೆದುಕೊಂಡ ಮಾಹಿತಿಯಲ್ಲಿ ಈ ಎನ್‍ಪಿಎ ವಿವರಗಳು ಲಭ್ಯವಾಗಿವೆ. 2008-18 ರ ಹತ್ತು ವರ್ಷಗಳ ಅವಧಿಯಲ್ಲಿ ಸಾರ್ವಜನಿಕ ವಲಯದ ಬ್ಯಾಂಕುಗಳು 7 ಲಕ್ಷ ಕೋಟಿ ಎನ್‍ಪಿಎ ಸಾಲಗಳನ್ನು ಮನ್ನಾ ಮಾಡಿದ್ದು, ಅದರಲ್ಲಿ ಶೇ.80ರಷ್ಟು ( ಐದೂವರೆ ಲಕ್ಷ ಕೋಟಿ) ಸಾಲ ಚೌಕಿದಾರನ ಮೂಗಿನಡಿಯೇ ಮನ್ನಾ ಆಗಿದೆ. ಈ ರೀತಿ ಮನ್ನಾ ಆದ ಮೇಲೂ, ಬ್ಯಾಂಕುಗಳು ಕಾಟಾಚಾರಕ್ಕೆ ವಸೂಲಿಗೆ ಪ್ರಯತ್ನಿಸುವ ನಾಟಕ ಆಡುತ್ತವೆ. ಅದರಲ್ಲಿ ಶೇ. 20 ಕೂಡ ವಾಪಸ್ಸು ಬಂದಿಲ್ಲ.

2016ರಿಂದ 2019: ಮನ್ನಾ ಸೀಸನ್!

ಚುನಾವಣೆ ಸಮೀಪಿಸುತ್ತಿದ್ದಂತೆ ಈ ಮನ್ನಾ ಆಟ ಚುರುಕುಗೊಂಡಿದೆ. ಇಲ್ಲಿ ಮನ್ನಾ ಭಾಗ್ಯ ಪಡೆದ ಸಾಲಗಾರರ ಹೆಸರುಗಳನ್ನು ಗೌಪ್ಯವಾಗಿಡುವ ದುಷ್ಟ ಪದ್ಧತಿಯೂ ಜಾರಿಯಲ್ಲಿದೆ. ಆರ್‍ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಅಧಿಕಾರ ಬಿಡುವಾಗ ಇಂತಹ ಸಾಲಗಾರರ ದೊಡ್ಡ ಪಟ್ಟಿಯನ್ನೇ ಸರ್ಕಾರಕ್ಕೆ ನೀಡಿದ್ದರೂ, ಇವತ್ತಿಗೂ ಸರ್ಕಾರ ಅದನ್ನು ಬಹಿರಂಗ ಮಾಡಿಲ್ಲ!

2018ರ ಏಪ್ರಿಲ್-ಡಿಸೆಂಬರ್- ಈ 9 ತಿಂಗಳ ಅವಧಿಯಲ್ಲಿ ಮನ್ನಾ ಆದ ಎನ್‍ಪಿಎ ಸಾಲ: 1,56,702 ಕೋಟಿ ರೂಪಾಯಿ. ಇದರಲ್ಲಿ ಮೊದಲ ಆರು ತಿಂಗಳಲ್ಲಿ 82,799 ಕೋಟಿ ರೂ ಮನ್ನಾ ಆಗಿದ್ದರೆ, ಕೊನೆ 3 ತಿಂಗಳಲ್ಲಿ 64 ಸಾವಿರ ಕೋಟಿ ರೂ ಮನ್ನಾ ಆಗಿದೆ.
2016-17ರಲ್ಲಿ 1,08,374 ಕೋಟಿ ರೂ, 2017-18ರಲ್ಲಿ 1,61,138 ಕೋಟಿ ರೂ ಮನ್ನಾ ಆಗಿದೆ.

ಇಲ್ಲಿ ಒಂದು ವಿಷಯ ನೆನಪಿಡಿ: ಎನ್‍ಪಿಎ ಮನ್ನಾ ಆದವರ ಹೆಸರೂ ಗೌಪ್ಯ, ಚುನಾವಣಾ ಬಾಂಡ್‍ಗಳಲ್ಲಿ ಪಾರ್ಟಿ ಫಂಡ್ ಕೊಟ್ಟವರ ಹೆಸರೂ ಗೌಪ್ಯ. ಈ 5 ವರ್ಷಗಳಲ್ಲಿ ಅದರಲ್ಲೂ ಕಳೆದ 3 ವರ್ಷಗಳಲ್ಲಿ ಮನ್ನಾ ಭಾಗ್ಯ ಪಡೆದವರು ಅದರಲ್ಲಿ ಒಂದು ದೊಡ್ಡ ಪ್ರಮಾಣವನ್ನು ಬಿಜೆಪಿಗೆ ಚುನಾವಣಾ ಬಾಂಡ್‍ಗಳ ಮೂಲಕ ಸಲ್ಲಿಸಿರುವ ಸಾಧ್ಯತೆಗಳು ದಟ್ಟವಾಗಿವೆ ಎಂಬುದು ನಮ್ಮ ಅನುಮಾನ.
(ಅಂಕಿ-ಸಂಖ್ಯೆ: ನ್ಯೂ ಇಂಡಿಯನ್ ಎಕ್ಸ್‍ಪ್ರೆಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...