Homeಮುಖಪುಟಮೋದಿಯವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಗಾಗಿದ್ದು, ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ: ಕಾಂಗ್ರೆಸ್ ಟೀಕೆ

ಮೋದಿಯವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಗಾಗಿದ್ದು, ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದೆ: ಕಾಂಗ್ರೆಸ್ ಟೀಕೆ

- Advertisement -
- Advertisement -

ಮಣಿಪುರದಲ್ಲಿ ಭಾನುವಾರ ಭುಗಿಲೆದ್ದ ಹಿಂಸಾಚಾರದಲ್ಲಿ ಪೊಲೀಸ್​ ಸೇರಿದಂತೆ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಒಂದು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರವು ಕನಿಷ್ಠ 70 ಮಂದಿಯನ್ನು ಬಲಿಪಡೆದಿದೆ. ಮತ್ತೊಂದೆಡೆ ಪ್ರಧಾನಿ ಮೋದಿ ಅವರು ನೂತನ ಸಂಸತ್ ಉದ್ಘಾಟನೆಯಲ್ಲಿ ತೊಡಗಿರುವುದನ್ನು ಕಾಂಗ್ರೆಸ್ ಟೀಕೆ ಮಾಡಿದೆ.

”ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಾಗಗಿದ್ದು, ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ” ಎಂದು ಕೇಂದ್ರ ಸರ್ಕಾರವನ್ನು ಕಾಂಗ್ರೆಸ್‌ ಟೀಕಿಸಿದೆ.

”ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತದ ಸಂಪೂರ್ಣ ಸ್ಥಗಿತವಾಗಿದೆ. ಪ್ರಧಾನಿ ತಮ್ಮ ಸ್ವಯಂ-ಪಟ್ಟಾಭಿಷೇಕದ ಬಗ್ಗೆ ಗೀಳನ್ನು ಹೊಂದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಅಲ್ಲಿನ ಜನತೆಗೆ ಅಥವಾ ಸಮುದಾಯಕ್ಕಾಗಲಿ ಒಂದು ಮನವಿಯನ್ನೂ ಸಹ ಮಾಡಿಲ್ಲ” ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವಿಟ್ ಮಾಡಿದ್ದು, ”ಮಣಿಪುರ ಹೊತ್ತಿ ಉರಿಯಲು ಪ್ರಾರಂಭಿಸಿದ 25 ದಿನಗಳ ನಂತರ, ಕೇಂದ್ರ ಗೃಹ ಸಚಿವರ ಬಹುನಿರೀಕ್ಷಿತ ಇಂಫಾಲ್ ಭೇಟಿಯ ಮುನ್ನಾದಿನದಂದು ಪರಿಸ್ಥಿತಿ ಕೆಟ್ಟದಾಗಿದೆ. 355ನೇ ವಿಧಿಯನ್ನು ವಿಧಿಸಲಾಗಿದ್ದರೂ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಪಟ್ಟಾಭಿಷೇಕದ ಗೀಳಿಗೆ ಒಳಾಗಗಿದ್ದು, ರಾಜ್ಯದಲ್ಲಿ ಹಿಂಸಾಚಾರ ಮುಂದುವರೆದಿದೆ. ಇದೊಂದು ಭೀಕರ ದುರಂತ. ಅವರು ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಅಲ್ಲಿನ ಜನತೆಗೆ ಅಥವಾ ಸಮುದಾಯಕ್ಕಾಗಲಿ ಒಂದು ಮನವಿಯನ್ನೂ ಸಹ ಮಾಡಿಲ್ಲ” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದ ನಿಯೋಗವು ಮಂಗಳವಾರ ಬೆಳಗ್ಗೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ.

ಇದನ್ನೂ ಓದಿ: ‘30 ಉಗ್ರರನ್ನು ಕೊಲ್ಲಲಾಗಿದೆ’: ಮಣಿಪುರ ಮುಖ್ಯಮಂತ್ರಿ ಬಿರೇನ್‌ ಸಿಂಗ್‌

ಹಿಂಸಾಚಾರ ಪೀಡಿತ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗೆ ಗಂಟೆಗಳ ಮೊದಲು ಇದು ಸಂಭವಿಸಿದೆ. ಗೃಹ ಸಚಿವ ಅಮಿತ್ ಶಾ ಇಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ. ಅವರು ಶಾಂತ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಮನವಿ ಮಾಡಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಕೂಡ ಶನಿವಾರ ಮಣಿಪುರಕ್ಕೆ ತೆರಳಿ ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸಿದರು.

”ಹಿಂಸಾಚಾರ ಮತ್ತಷ್ಟು ಉಲ್ಬಣಗೊಳ್ಳುವುದನ್ನು ತಡೆಯಲು ಸರ್ಕಾರವು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ಮತ್ತು ಇಂಟರ್ನೆಟ್ ನಿಷೇಧವನ್ನು ವಿಧಿಸಿದೆ. ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿರುವ ಮಣಿಪುರ ರಾಜ್ಯದ ಹಲವು ಪ್ರದೇಶಗಳಲ್ಲಿ ಎಂಟು ಗಂಟೆಗಳ ಕಾಲ ಪೊಲೀಸ್ ಕಮಾಂಡೋಗಳು ನಡೆಸಿದ ಕಾರ್ಯಾಚರಣೆಯಲ್ಲಿ 40 ಮಂದಿ ಬಂಡುಕೋರರನ್ನು ಹತ್ಯೆಮಾಡಲಾಗಿದೆ” ಎಂದು ಮನೋಜ್ ಪಾಂಡೆ ತಿಳಿಸಿದ್ದಾರೆ.

”ಭಯೋತ್ಪಾದಕರು ನಾಗರಿಕರ ವಿರುದ್ಧ M-16 ಮತ್ತು AK-47 ರೈಫಲ್‌ಗಳು ಮತ್ತು ಸ್ನೈಪರ್‌ಗನ್‌ಗಳನ್ನು ಬಳಸುತ್ತಿದ್ದಾರೆ. ಜನರ ಮನೆಗಳನ್ನು ಸುಟ್ಟುಹಾಕಲು ಹಳ್ಳಿಗಳಿಗೆ ನುಗ್ಗಿದ್ದರು. ನಾವು ಸೇನೆ ಮತ್ತು ಇತರ ಭದ್ರತಾ ಪಡೆಗಳ ಸಹಾಯದಿಂದ ಅವರ ವಿರುದ್ಧ ಅತ್ಯಂತ ಕಠಿಣ ಕ್ರಮ ತೆಗೆದುಕೊಳ್ಳಲು ಪ್ರಾರಂಭಿಸಿದ್ದೇವೆ. ಸುಮಾರು 40 ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿರುವ ವರದಿಗಳು ನಮಗೆ ಸಿಕ್ಕಿವೆ” ಎಂದು ತಿಳಿಸಿದರು.

ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಭಾನುವಾರ ಹೇಳಿಕೆ ನೀಡಿದ್ದು, ”ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ ಭದ್ರತಾ ಪಡೆಗಳು ಹಾಗೂ ಬಂಡುಕೋರ ಸಂಘಟನೆಗಳ ನಡುವೆ ನಡೆದ ಸರಣಿ ಎನ್‌ಕೌಂಟರ್‌ಗಳಲ್ಲಿ 33 ಬಂಡುಕೋರರನ್ನು ಹತರಾಗಿದ್ದಾರೆ ” ಎಂದು ಹೇಳಿದ್ದಾರೆ.

”ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರೊಂದಿಗೆ ಸಭೆ ನಡೆಸಿದ ಬಳಿಕ ಸಿಂಗ್, ಭದ್ರತಾ ಪಡೆಗಳು ಹಾಗೂ ಭಂಡುಕೋರರ ವಿರುದ್ಧ ಹಲವು ಜಿಲ್ಲೆಗಳಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆವು. ಬಂಡುಕೋರರು ನಾಗರಿಕರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ” ಎಂದು ಸಿಂಗ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...